Homeಮುಖಪುಟಭೀಮಾ ಕೋರೆಗಾಂವ್ ಪ್ರಕರಣ : ಹೋರಾಟಗಾರ ಮಹೇಶ್ ರಾವುತ್‌ಗೆ ಮಧ್ಯಂತರ ಜಾಮೀನು

ಭೀಮಾ ಕೋರೆಗಾಂವ್ ಪ್ರಕರಣ : ಹೋರಾಟಗಾರ ಮಹೇಶ್ ರಾವುತ್‌ಗೆ ಮಧ್ಯಂತರ ಜಾಮೀನು

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿ ಮಹೇಶ್ ರಾವುತ್‌ ಅವರಿಗೆ ತನ್ನ ಅಜ್ಜಿಯ ಅಂತಿಮ ಸಂಸ್ಕಾರಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಸುಪ್ರೀಂ ಕೋರ್ಟ್ ಎರಡು ವಾರಗಳ ಮಧ್ಯಂತರ ಜಾಮೀನು ನೀಡಿದೆ.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಎಸ್‌ವಿಎನ್ ಭಟ್ಟಿ ಅವರ ರಜಾಕಾಲದ ಪೀಠವು, ಮಹೇಶ್ ರಾವುತ್‌ ಅವರಿಗೆ ಜೂನ್ 26 ರಿಂದ ಜುಲೈ 10 ರವರೆಗೆ ಮಧ್ಯಂತರ ಜಾಮೀನು ನೀಡಿದೆ. ಮಧ್ಯಂತರ ಜಾಮೀನು ವಿಚಾರಣಾ ನ್ಯಾಯಾಲಯವು ನಿಗದಿಪಡಿಸಿದ ನಿಯಮಗಳು ಮತ್ತು ಷರತ್ತುಗಳಿಗೆ ಒಳಪಟ್ಟಿರುತ್ತದೆ. ಆರೋಪಿಯು ಜುಲೈ 10 ರಂದು ತಪ್ಪದೇ ಶರಣಾಗಬೇಕು ಎಂದು ನ್ಯಾಯಾಲಯ ಸೂಚಿಸಿದೆ.

ರಾವುತ್ ಪರ ವಾದ ಮಂಡಿಸಿದ ವಕೀಲೆ ಅಪರ್ಣಾ ಭಟ್ ಅವರು, ರಾವುತ್ ಅವರಿಗೆ ಬಾಂಬೆ ಹೈಕೋರ್ಟ್ ಈಗಾಗಲೇ ಜಾಮೀನು ನೀಡಿದ್ದರೂ, ಆದೇಶಕ್ಕೆ ತಡೆ ನೀಡಲಾಗಿದೆ. ಅವರ ಅಜ್ಜಿ ಮೇ ಕೊನೆಯ ವಾರದಲ್ಲಿ ನಿಧನರಾಗಿದ್ದು, ಕೆಲವು ಅಂತಿಮ ವಿಧಿವಿಧಾನಗಳನ್ನು ನಡೆಸಬೇಕಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಎನ್‌ಐಎ ಪರ ವಾದ ಮಂಡಿಸಿದ ವಕೀಲರು ಎನ್‌ಐಎ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಲು ಆದ್ಯತೆ ನೀಡಬೇಕು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಅಪರ್ಣಾ ಭಟ್, ಜಾಮೀನು ಆದೇಶವನ್ನು ಪ್ರಶ್ನಿಸಿ ಎನ್‌ಐಎ ಸಲ್ಲಿಸಿರುವ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ಕಾರಣ ವಿಶೇಷ ನ್ಯಾಯಾಲಯವು ಅರ್ಜಿ ಪರಿಗಣಿಸುವುದಿಲ್ಲ ಎಂದು ಉತ್ತರಿಸಿದರು.

2018ರ ಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 1967ರ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ ಸೆಕ್ಷನ್ 15 ರ ಅಡಿಯಲ್ಲಿ ಬುಡಕಟ್ಟು ಹಕ್ಕುಗಳ ಕಾರ್ಯಕರ್ತ ರಾವುತ್ ವಿರುದ್ಧ ಆರೋಪ ಹೊರಿಸಲಾಗಿದೆ. ಅವರು ನಿಷೇಧಿತ ಸಿಪಿಐ (ಮಾವೋವಾದಿ) ಯೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ದೇಶದ ವಿರುದ್ಧ ಯುದ್ಧ ಸಾರಿದ್ದಾರೆ ಎಂದು ಆರೋಪಿಸಲಾಗಿದೆ.

ರಾವುತ್ ಅವರನ್ನು ಜೂನ್, 2018ರಲ್ಲಿ ಬಂಧಿಸಲಾಗಿತ್ತು. 5 ವರ್ಷಗಳ ನಂತರ ಬಾಂಬೆ ಹೈಕೋರ್ಟ್ ಭೀಮಾ ಕೋರೆಗಾಂವ್-ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಅವರಿಗೆ ಜಾಮೀನು ನೀಡಿತ್ತು. ಅವರ ವಿರುದ್ದದ ಆರೋಪಗಳಿಗೆ ಪುರಾವೆಗಳಿಲ್ಲದಿರುವುದು ಪ್ರಾಥಮಿಕವಾಗಿ ಕಂಡು ಬಂದಿದೆ. ಅಲ್ಲದೆ, ಅವರು ವಿಚಾರಣೆಯಿಲ್ಲದೆ 5 ವರ್ಷ ಮತ್ತು 3 ತಿಂಗಳು ಜೈಲಿನಲ್ಲಿ ಕಳೆದಿದ್ದಾರೆ ಎಂದು ನ್ಯಾಯಾಲಯ ಹೇಳಿತ್ತು.

ಆದರೆ, ಬಳಿಕ ಜಾಮೀನು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಅಂತಿಮವಾಗಿ ಸುಪ್ರೀಂ ಕೋರ್ಟ್ ತಡೆಯಾಜ್ಞೆಯನ್ನು ವಿಸ್ತರಿಸಿದೆ.

ರಾವುತ್‌ ಅವರ ಅಜ್ಜಿಯ ಅಂತಿಮ ಸಂಸ್ಕಾರ ಮೇ 26ರಂದು ನಡೆದಿದ್ದು, ಉಳಿದ ಕಾರ್ಯಗಳನ್ನು ಜೂನ್ 27ಕ್ಕೆ ನಿಗದಿಪಡಿಸಿಲಾಗಿದೆ. ಈ ಹಿನ್ನೆಲೆ ಸುಪ್ರೀಂ ಕೋರ್ಟ್ ಮುಂದೆ ಅವರ ಜಾಮೀನು ಅರ್ಜಿಯನ್ನು ಜೂನ್‌ 14ರಂದು ವಿಚಾರಣೆಗೆ ಪಟ್ಟಿ ಮಾಡಲಾಗಿತ್ತು. ಆದರೆ, ಸೂಚನೆಗಳನ್ನು ಪಡೆಯಲು ಮತ್ತು ಉತ್ತರವನ್ನು ಸಲ್ಲಿಸಲು ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ವಕೀಲರು ಸಮಯ ಕೋರಿದ್ದ ಹಿನ್ನೆಲೆ ಮುಂದೂಡಲಾಗಿತ್ತು.

ಇದನ್ನೂ ಓದಿ : ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪ: ಸಂತ್ರಸ್ತನ ವಿರುದ್ದವೇ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...