Homeಕರ್ನಾಟಕಭೂ ಕಬಳಿಕೆ ಆರೋಪ : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಗಾಯಕ ಲಕ್ಕಿ ಅಲಿ...

ಭೂ ಕಬಳಿಕೆ ಆರೋಪ : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಗಾಯಕ ಲಕ್ಕಿ ಅಲಿ ದೂರು

- Advertisement -
- Advertisement -

‘ಲಕ್ಕಿ ಅಲಿ’ ಎಂದೇ ಪ್ರಸಿದ್ದಿ ಪಡೆದಿರುವ ಖ್ಯಾತ ಗಾಯಕ ಮಕ್ಸೂದ್ ಮಹಮೂದ್ ಅಲಿ ಅವರು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಅವರ ಪತಿ ಸುಧೀರ್ ರೆಡ್ಡಿ, ಸಹಾಯಕ ಪೊಲೀಸ್ ಕಮಿಷನರ್ ಮಂಜುನಾಥ್ ಯಲಹಂಕ ಮತ್ತಿತರರ ವಿರುದ್ಧ ಭೂಕಬಳಿಕೆ ಆರೋಪದ ಮೇಲೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.

ಅಲಿ ಅವರು ಗುರುವಾರ ತಮ್ಮ ಎಕ್ಸ್ ಖಾತೆಯಲ್ಲಿ ದೂರಿನ ಪ್ರತಿಯನ್ನು ಹಂಚಿಕೊಂಡಿದ್ದಾರೆ.

“ಐಎಎಸ್ ಅಧಿಕಾರಿ, ಅವರ ಪತಿ ಮತ್ತು ಸೋದರ ಮಾವ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡು ಸಾಕಷ್ಟು ಹಣ ವಿನಿಮಯದ ಮೂಲಕ ಭೂ ಕಬಳಿಕೆ ಮಾಡಿದ್ದಾರೆ” ಎಂದು ಅಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ದೂರಿನಲ್ಲಿ ಸಿಂಧೂರಿ ಅವರ ಸೋದರ ಮಾವ ಮಧುಸೂಧನ್ ರೆಡ್ಡಿ ಮತ್ತು ಯಲಹಂಕ ತಾಲೂಕು ಸರ್ವೆ ಅಧಿಕಾರಿ ಮನೋಹರ್ ಅವರ ಹೆಸರೂ ಇದೆ. ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯ ಹೆಸರು ಹೇಳಲಿಚ್ಛಿಸದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಬಗ್ಗೆಯೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ವಿವಾದ 2022ರಲ್ಲಿ ಮೊದಲು ಪ್ರಾರಂಭಗೊಂಡಿತ್ತು. ಡಿಸೆಂಬರ್ 4,2022 ರಂದು ಲಕ್ಕಿ ಅಲಿ ಎಕ್ಸ್‌ನಲ್ಲಿ ವಿವಾದದ ಕುರಿತು ಪೋಸ್ಟ್ ಮಾಡಿದ್ದರು. ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಟ್ಯಾಗ್ ಮಾಡಿದ್ದರು.

“ಕೆಂಚೇನಹಳ್ಳಿ ಯಲಹಂಕದಲ್ಲಿರುವ ಟ್ರಸ್ಟ್ ಆಸ್ತಿಯಾಗಿರುವ ನನ್ನ ಜಮೀನನ್ನು ಬೆಂಗಳೂರು ಭೂ ಮಾಫಿಯಾದ ಸುಧೀರ್ ರೆಡ್ಡಿ, ಅವರ ಪತ್ನಿ ರೋಹಿಣಿ ಸಿಂಧೂರಿ ಎಂಬ ಐಎಎಸ್ ಅಧಿಕಾರಿಯ ಸಹಾಯದಿಂದ ಅತಿಕ್ರಮಿಸುತ್ತಿದ್ದಾರೆ. ಅವರು ತಮ್ಮ ವೈಯಕ್ತಿಕ ಲಾಭಕ್ಕಾಗಿ ರಾಜ್ಯದ ಸಂಪನ್ಮೂಲಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಬಲವಂತವಾಗಿ ಮತ್ತು ಕಾನೂನುಬಾಹಿರವಾಗಿ ನನ್ನ ಜಮೀನಿನೊಳಗೆ ಬರುತ್ತಿದ್ದಾರೆ. ಸಂಬಂಧಿತ ದಾಖಲೆಗಳನ್ನು ತೋರಿಸಲು ನಿರಾಕರಿಸುತ್ತಿದ್ದಾರೆ” ಎಂದು ಅಲಿ ಬರೆದುಕೊಂಡಿದ್ದರು.

“ಇದು ಸಂಪೂರ್ಣವಾಗಿ ಕಾನೂನುಬಾಹಿರ ಎಂದು ನನ್ನ ಕಾನೂನು ಸಲಹೆಗಾರರು ತಿಳಿಸಿದ್ದಾರೆ. ನಮ್ಮ ಜಮೀನಿಗೆ ಪ್ರವೇಶಿಸಲು ಅವರು ನ್ಯಾಯಾಲಯದ ಅನುಮತಿ ಹೊಂದಿಲ್ಲ. ಕಳೆದ 50 ವರ್ಷಗಳಿಂದ ಜಮೀನು ನಮ್ಮ ಸ್ವಾಧೀನದಲ್ಲಿದೆ, ನಾವು ಅಲ್ಲಿ ವಾಸಿಸುತ್ತಿದ್ದೇವೆ. ಈ ಕುರಿತು ಎಸಿಪಿಗೆ ದೂರು ನೀಡಿದ್ದರೂ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ” ಎಂದಿದ್ದರು.

“ನಮಗೆ ಸ್ಥಳೀಯ ಪೊಲೀಸರಿಂದ ಯಾವುದೇ ಸಹಾಯ ಸಿಗುತ್ತಿಲ್ಲ. ಅವರು ಅತಿಕ್ರಮಣ ಮಾಡಿದವರನ್ನು ಬೆಂಬಲಿಸುತ್ತಿದ್ದಾರೆ. ನಮ್ಮ ಪರಿಸ್ಥಿತಿ ಮತ್ತು ನಮ್ಮ ಭೂಮಿಯ ಕಾನೂನು ಸ್ಥಿತಿಯ ಬಗ್ಗೆ ಅಸಡ್ಡೆ ಹೊಂದಿದ್ದಾರೆ. ಆತ್ಮೀಯ ಸರ್, ಡಿಸೆಂಬರ್ 7 ರಂದು ನ್ಯಾಯಾಲಯದ ಅಂತಿಮ ವಿಚಾರಣೆಗೂ ಮುನ್ನ ಸುಳ್ಳು ಆಸ್ತಿಯನ್ನು ಸಾಬೀತುಪಡಿಸಲು ಪ್ರಯತ್ನಿಸುತ್ತಿರುವ ಅವರ ಈ ಕಾನೂನುಬಾಹಿರ ಚಟುವಟಿಕೆಯನ್ನು ನಿಲ್ಲಿಸಲು ನಾನು ನಿಮ್ಮ ಸಹಾಯವನ್ನು ಕೋರುತ್ತೇನೆ” ಎಂದು ಹೇಳಿದ್ದರು.

ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, “ಈ ಪ್ರಕರಣದಲ್ಲಿ ನನ್ನದೇನು ಪಾತ್ರವಿಲ್ಲ. ದುರುದ್ದೇಶದಿಂದ ನನ್ನನ್ನು ಇದಕ್ಕೆ ಎಳೆದು ತರಲಾಗಿದೆ. ನನಗೆ ತಿಳಿದಿರುವ ಹಾಗೆ OSNO5592/2016ರಲ್ಲಿ ಲಕ್ಕಿ ಅಲಿ ವಿರುದ್ಧ ತಾತ್ಕಾಲಿಕ ತಡೆಯಾಜ್ಞೆ ಇದೆ ಎಂದು ಗೊತ್ತಾಗಿದೆ” ಎಂದಿದ್ದರು.

“ಅಲಿ ಅವರ ಪ್ರತಿಭೆಯನ್ನು ನಾನು ಗೌರವಿಸುತ್ತೇನೆ. ಈ ಪ್ರಕರಣ ನ್ಯಾಯಾಲಯದಲ್ಲಿರುವಾಗ ಈ ಚರ್ಚೆ ಅನಗತ್ಯ ಎಂದು ತೋರುತ್ತದೆ. ನನಗೆ ಅಪಖ್ಯಾತಿ ತರಲು ಮತ್ತು ಸಾರ್ವಜನಿಕ ಸಹಾನುಭೂತಿ ಗಳಿಸುವ ಉದ್ದೇಶದಿಂದ ಇದನ್ನು ಮಾಡಲಾಗಿದೆ. ನಾನು ಕಾನೂನು ಕ್ರಮದ ಮೊರೆ ಹೋಗಲು ಯೋಚಿಸುತ್ತಿದ್ದೇನೆ” ಎಂದು ಹೇಳಿದ್ದರು.

ಮೂಲತಃ ಬೆಂಗಳೂರಿನವರಾದ ಲಕ್ಕಿ ಅಲಿ ಅವರು ಭಾರತದ ಪ್ರಸಿದ್ಧ ಗಾಯಕರಲ್ಲಿ ಒಬ್ಬರು. ಹಿಂದಿ ಸಿನಿಮಾ ಸೇರಿದಂತೆ ಹಲವು ಭಾಷೆಯ ಸಿನಿಮಾಗಳಲ್ಲಿ ಅವರು ಹಾಡಿದ್ದಾರೆ. ಸಿನಿಮಾಕ್ಕಿಂತ ಹೆಚ್ಚಾಗಿ ಅವರು ತಮ್ಮದೇ ಸಂಗೀತ ಸಂಯೋಜನೆಯ ಪ್ರೈವೇಟ್ ಆಲ್ಬಂಗಳಿಂದ ಹೆಚ್ಚು ಜನಪ್ರಿಯರಾದವರು.

ಇದನ್ನೂ ಓದಿ : ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪ: ಸಂತ್ರಸ್ತನ ವಿರುದ್ದವೇ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...