Homeಮುಖಪುಟವೈಎಸ್‌ಆರ್‌ ಕಾಂಗ್ರೆಸ್‌ನ ನಿರ್ಮಾಣ ಹಂತದ ಕೇಂದ್ರ ಕಚೇರಿ ಕೆಡವಿದ ಆಂಧ್ರ ಸರ್ಕಾರ

ವೈಎಸ್‌ಆರ್‌ ಕಾಂಗ್ರೆಸ್‌ನ ನಿರ್ಮಾಣ ಹಂತದ ಕೇಂದ್ರ ಕಚೇರಿ ಕೆಡವಿದ ಆಂಧ್ರ ಸರ್ಕಾರ

- Advertisement -
- Advertisement -

ಗುಂಟೂರು ಜಿಲ್ಲೆಯ ಸೀತಾನಗರಂನಲ್ಲಿ ನಿರ್ಮಾಣ ಹಂತದಲ್ಲಿದ್ದ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಕಚೇರಿಯನ್ನು ಆಂಧ್ರ ಪ್ರದೇಶ ರಾಜಧಾನಿ ಪ್ರದೇಶಾಭಿವೃದ್ದಿ ಪ್ರಾಧಿಕಾರ (ಎಪಿಸಿಆರ್‌ಡಿಎ) ಹಾಗೂ ಮಂಗಳಗಿರಿ ತಾಡೆಪಲ್ಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಟಿಎಂಸಿ) ಅಧಿಕಾರಿಗಳು ಶನಿವಾರ ಮುಂಜಾನೆ ಬುಲ್ಡೋಝರ್‌ಗಳ ಮೂಲಕ ಕೆಡವಿದ್ದಾರೆ.

ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ನಿವಾಸದಿಂದ ತೆಲುಗು ದೇಶಂ ಪಕ್ಷದ (ಟಿಡಿಪಿ) ಕಚೇರಿಗೆ ಹೋಗುವ ಮಾರ್ಗ ಮಧ್ಯದಲ್ಲಿತ್ತು. ಕಟ್ಟಡ ಧ್ವಂಸವನ್ನು ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ತೀವ್ರವಾಗಿ ಖಂಡಿಸಿದ್ದು, “ಇದು ಚಂದ್ರಬಾಬು ನಾಯ್ಡು ಅವರ ಸರ್ವಾಧಿಕಾರ, ಆಡಳಿತಾರೂಢ ಟಿಡಿಪಿಯ ವಿನಾಶಕಾರಿ ಸೇಡಿನ ರಾಜಕಾರಣ” ಎಂದಿದ್ದಾರೆ.

ಇಂದು (ಜೂನ್ 22) ಮುಂಜಾನೆ ಐದು ಗಂಟೆ ಸುಮಾರಿಗೆ ಪುರಸಭೆ ಅಧಿಕಾರಿಗಳು ಬುಲ್ಡೋಝರ್‌ಗಳ ಮೂಲಕ ಕಟ್ಟಡ ಕೆಡವಿದ್ದಾರೆ. ಕೇವಲ ಎರಡು ಗಂಟೆಗಳಲ್ಲಿ ಧ್ವಂಸ ಕಾರ್ಯಾಚರಣೆ ಪೂರ್ಣಗೊಂಡಿದೆ. ಈ ವೇಳೆ ವೈಎಸ್‌ಆರ್ ಕಾಂಗ್ರೆಸ್‌ ಕಾರ್ಯಕರ್ತರು ಸ್ಥಳಕ್ಕೆ ಬಾರದಂತೆ ತಡೆಯಲು ಬ್ಯಾರಿಕೇಡ್‌ ಹಾಕಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಕಟ್ಟಡ ಧ್ವಂಸದಿಂದ ತಾಡೇಪಲ್ಲಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಕಟ್ಟಡ ಕೆಡವುದನ್ನು ಪ್ರಶ್ನಿಸಿ ಇತ್ತೀಚೆಗೆ ವೈಎಸ್‌ಆರ್‌ ಕಾಂಗ್ರೆಸ್‌ ಹೈಕೋರ್ಟ್‌ ಮೆಟ್ಟಿಲೇರಿತ್ತು. ಕಾನೂನನ್ನು ಮೀರದಂತೆ ಅಧಿಕಾರಿಗಳಿಗೆ ಕೋರ್ಟ್‌ ಸೂಚನೆ ನೀಡಿತ್ತು. ಕೋರ್ಟ್‌ ಸೂಚನೆಯನ್ನು ವೈಎಸ್‌ಆರ್‌ ಕಾಂಗ್ರೆಸ್‌ ಪರ ವಕೀಲರು, ಪಾಲಿಕೆ ಆಯುಕ್ತರ ಗಮನಕ್ಕೆ ತಂದಿದ್ದರು.

ಆದರೆ, ಈ ನಡುವೆ ಕಟ್ಟಡವನ್ನು ಕೆಡವಲಾಗಿದ್ದು, ಪಾಲಿಕೆ ಅಧಿಕಾರಿಗಳು ಹೈಕೋರ್ಟ್‌ ನಿರ್ದೇಶನವನ್ನು ನಿರ್ಲಕ್ಷಿಸಿದ್ದಾರೆ ಎಂದು ವೈಎಸ್‌ಆರ್‌ ಕಾಂಗ್ರೆಸ್‌ ಆರೋಪಿಸಿದೆ. ಯಾವುದೇ ನೋಟಿಸ್‌ಗಳನ್ನು ನೀಡಿಲ್ಲ. ಈ ಕ್ರಮಗಳು ನ್ಯಾಯಾಂಗ ನಿಂದನೆಯಾಗಿದೆ ಎಂದು ಪಕ್ಷವು ಹೇಳಿದೆ. ಅಧಿಕಾರಿಗಳ ನಡೆಯನ್ನು ಕೋರ್ಟ್‌ ಗಮನಕ್ಕೆ ತರುವುದಾಗಿ ತಿಳಿಸಿದೆ.

ಅಧಿಕಾರಿಗಳು ವೈಎಸ್‌ಆರ್‌ ಕಾಂಗ್ರೆಸ್‌ ಆರೋಪಗಳನ್ನು ತಿರಸ್ಕರಿಸಿದ್ದು, “ನೀರಾವರಿ ಇಲಾಖೆಗೆ ಸೇರಿದ ಜಾಗದಲ್ಲಿ ಪಕ್ಷದ ಕಚೇರಿ ನಿರ್ಮಾಣವಾಗುತ್ತಿದೆ. ಹಿಂದಿನ ಜಗನ್ ಸರ್ಕಾರವು ಬೋಟ್ ಯಾರ್ಡ್ ಆಗಿ ಬಳಸಲಾಗಿದ್ದ ಭೂಮಿಯನ್ನು ವೈಎಸ್‌ಆರ್‌ ಕಾಂಗ್ರೆಸ್‌ನ ಕಚೇರಿಗೆ ಕಡಿಮೆ ವೆಚ್ಚದಲ್ಲಿ ಗುತ್ತಿಗೆಗೆ ಮಂಜೂರು ಮಾಡಿತ್ತು. ಇದು ಅಕ್ರಮ ನಿರ್ಮಾಣವಾಗಿದ್ದು, ಪಾಲಿಕೆ ನೋಟಿಸ್ ಜಾರಿ ಮಾಡಿದೆ. ಬಳಿಕ, ಕಟ್ಟಡವನ್ನು ಕೆಡವಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ : ಒಡಿಶಾ ಕಾಂಗ್ರೆಸ್ ಕಚೇರಿಗೆ ದಾಳಿ: ರಾಜ್ಯಾಧ್ಯಕ್ಷರ ಮೇಲೆ ಮಸಿ ಎರಚಿದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...