HomeUncategorizedಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪ; ಪ್ರಕರಣದ ವಿಚಾರಣೆ ಹೊಣೆ ಸಿಐಡಿಗೆ ಹಸ್ತಾಂತರ

ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪ; ಪ್ರಕರಣದ ವಿಚಾರಣೆ ಹೊಣೆ ಸಿಐಡಿಗೆ ಹಸ್ತಾಂತರ

- Advertisement -
- Advertisement -

ಜೆಡಿಎಸ್ ಎಂಎಲ್‌ಸಿ ಸೂರಜ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವರ್ಗಾಯಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ.

ಪ್ರಕರಣದಲ್ಲಿ ಪಕ್ಷದ ಕಾರ್ಯಕರ್ತನಿಂದ ಆರೋಪ ಹೊರಿಸಲಾಗಿದ್ದು, ಅಸ್ವಾಭಾವಿಕ ಅಪರಾಧ ಸೇರಿದಂತೆ ಆರೋಪದ ಮೇಲೆ ರೇವಣ್ಣ ಬಂಧನವಾಗಿದೆ. ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಸಹೋದರ ಸೂರಜ್ ರೇವಣ್ಣ ಅವರನ್ನು ಹಾಸನದಲ್ಲಿ ಬಂಧಿಸಲಾಗಿದೆ.

ಪಕ್ಷದ ಕಾರ್ಯಕರ್ತನ ಮೇಲಿನ ಲೈಂಗಿಕ ದೌರ್ಜನ್ಯ ಸೇರಿದಂತೆ ಐಪಿಸಿಯ ಹಲವಾರು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. 377, 342, 506, 34 ಐಪಿಸಿ ಕಲಂಗಳ ಅಡಿಯಲ್ಲಿ ಹಾಸನ ಜಿಲ್ಲೆ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಕಡತವನ್ನು ಹೆಚ್ಚಿನ ತನಿಖೆಗಾಗಿ ಸಿಐಡಿಗೆ ವರ್ಗಾಯಿಸಲಾಗಿದೆ, ತಕ್ಷಣವೇ ಹೆಚ್ಚಿನ ತನಿಖೆಗಾಗಿ ಸಿಐಡಿಗೆ ಹಸ್ತಾಂತರಿಸಬೇಕು ಎಂದು ಅಧಿಕೃತ ಸಂದೇಶದಲ್ಲಿ ಪೊಲೀಸ್ ಮಹಾನಿರ್ದೇಶಕರಿಂದ ಸಿಐಡಿ ಮತ್ತು ಹಾಸನದ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಿಳಿಸಲಾಗಿದೆ ಎಮದು ತಿಳಿದುಬಂದಿದೆ.

ಈ ನಿರ್ದೇಶನವು ಪ್ರಕರಣದ ಕಡತವನ್ನು ಕಳುಹಿಸಲು ಹಾಸನ ಜಿಲ್ಲೆಯ ಪೊಲೀಸ್ ಅಧೀಕ್ಷಕರಿಗೆ ಮತ್ತು ಸಂಬಂಧಪಟ್ಟ ತನಿಖಾ ಅಧಿಕಾರಿಗೆ ಖುದ್ದಾಗಿ ಹಸ್ತಾಂತರಿಸುವಂತೆ ಸೂಚನೆ ನೀಡಿದೆ.  ಹೆಚ್ಚಿನ ತನಿಖೆಗೆ ವ್ಯವಸ್ಥೆ ಮಾಡಲು ಮತ್ತು ವಿವರವಾದ ವರದಿಯನ್ನು ಸಲ್ಲಿಸಲು ಕೇಳಲಾಗಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ ಅವರು, “ಯುವಕನ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಿಸಿಕೊಂಡಿರುವ ಪೊಲೀಸರು ಸೂರಜ್‌ ರೇವಣ್ಣ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ” ಎಂದು ವಿವರಿಸಿದರು.

“ಇದೇ ರೀತಿಯ ಪ್ರಕರಣಗಳ ಸರಣಿಯನ್ನು ಸಿಐಡಿಗೆ ನೀಡಲಾಯಿತು; ಇದನ್ನು ಸಿಐಡಿಗೂ ನೀಡಲಾಗುತ್ತಿದೆ, ಆ ಬಗ್ಗೆ ಏನು ಕ್ರಮ ಕೈಗೊಳ್ಳಬೇಕೋ, ಅದನ್ನು ತೆಗೆದುಕೊಳ್ಳಲಾಗುವುದು” ಎಂದು ಹೇಳಿದರು.

ಆದರೆ, ಆರೋಪಿ ಸೂರಜ್ ರೇವಣ್ಣ ತಮ್ಮ ಕುಟುಂಬದ ವಿರುದ್ಧ ಷಡ್ಯಂತ್ರ ಎಂದು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪರಮೇಶ್ವರ್, ‘ದೂರು ಬಂದಿದೆ, ಅದರ ಆಧಾರದ ಮೇಲೆ ಕಾನೂನು ಪ್ರಕಾರ ಏನೇನು ಕ್ರಮ ಕೈಗೊಳ್ಳಬೇಕೋ ಅದನ್ನು ಕೈಗೊಳ್ಳಲಾಗುತ್ತಿದೆ. ಅದಲ್ಲದೆ, ಅವರು ಆರೋಪಿಸಿರುವ ಯಾವುದೇ ರಾಜಕೀಯ ಷಡ್ಯಂತ್ರದ ಬಗ್ಗೆ ನನಗೆ ಗೊತ್ತಿಲ್ಲ” ಎಂದರು.

ಸೂರಜ್ ಅವರನ್ನು ಬಂಧಿಸುವ ಮೊದಲು ಹಾಸನದ ಸೈಬರ್ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ (ಸಿಇಎನ್) ಅಪರಾಧ ಪೊಲೀಸ್ ಠಾಣೆಯಲ್ಲಿ ರಾತ್ರೋರಾತ್ರಿ ವಿಚಾರಣೆ ನಡೆಸಲಾಯಿತು. ನಂತರ ಅವರನ್ನು ಹಾಸನ ವೈದ್ಯಕೀಯ ಸಂಸ್ಥೆಗೆ ಕರೆದೊಯ್ಯಲಾಯಿತು. ವೈದ್ಯಕೀಯ ಪರೀಕ್ಷೆ ನಂತರ ನಂತರ ಜೆಡಿ(ಎಸ್) ಎಂಎಲ್‌ಸಿ ವಿರುದ್ಧ ಐಪಿಸಿ ಸೆಕ್ಷನ್ 377 (ಬಲವಂತದ ಲೈಂಗಿಕ ಕಿರುಕುಳ), 342 (ತಪ್ಪಾದ ಬಂಧನ), ಮತ್ತು 506 (ಅಪರಾಧ ಬೆದರಿಕೆ) ಅಡಿಯಲ್ಲಿ ಶನಿವಾರ ಸಂಜೆ ಪ್ರಕರಣ ದಾಖಲಿಸಲಾಗಿದೆ.

ಆದರೆ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ ಸೂರಜ್ ರೇವಣ್ಣ ಮೇಲಿನ ಆರೋಪವನ್ನು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸಾರಾಸಗಟಾಗಿ ತಳ್ಳಿಹಾಕಿದ್ದಾರೆ. “ವ್ಯಕ್ತಿ ನಮ್ಮಿಂದ 5 ಕೋಟಿ ರೂಪಾಯಿ ಸುಲಿಗೆ ಮಾಡಲು ಸುಳ್ಳು ದೂರು ದಾಖಲಿಸಿದ್ದಾರೆ” ಎಂದು ಆರೋಪಿಸಿದರು.

ಶುಕ್ರವಾರ, ಪೊಲೀಸರು ಜೆಡಿ (ಎಸ್) ಕಾರ್ಯಕರ್ತನ ವಿರುದ್ಧ ಸುಲಿಗೆ ಪ್ರಕರಣ ದಾಖಲಿಸಿದ್ದಾರೆ. ಸೂರಜ್ ರೇವಣ್ಣ ಅವರ ಆಪ್ತ ಶಿವಕುಮಾರ್ ದೂರು ನೀಡಿದ್ದಾರೆ. ಪಕ್ಷದ ಕಾರ್ಯಕರ್ತ ಸೂರಜ್ ವಿರುದ್ಧ ಲೈಂಗಿಕ ದೌರ್ಜನ್ಯದ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ಹಣ ವಸೂಲಿ ಮಾಡಲು ಯತ್ನಿಸುತ್ತಿದ್ದಾರೆ ಎಂದು ಶಿವಕುಮಾರ್ ದೂರಿದ್ದಾರೆ. ಈ ವ್ಯಕ್ತಿ ಆರಂಭದಲ್ಲಿ 5 ಕೋಟಿಗೆ ಬೇಡಿಕೆಯಿಟ್ಟಿದ್ದು, ನಂತರ ಅದನ್ನು 2 ಕೋಟಿಗೆ ಇಳಿಸಲಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸೂರಜ್ ಅವರ ಸಹೋದರ, ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪ್ರಸ್ತುತ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಕಳೆದ ತಿಂಗಳು ಜರ್ಮನಿಯಿಂದ ಹಿಂದಿರುಗಿದ ನಂತರ ಅವರನ್ನು ಬಂಧಿಸಲಾಯಿತು. ಹಾಸನ ಲೋಕಸಭಾ ಕ್ಷೇತ್ರದಿಂದ ಸೋತಿದ್ದ ಪ್ರಜ್ವಲ್, ಜರ್ಮನಿಯಿಂದ ಮರಳಿದ ನಂತರ ಮೇ 31 ರಂದು ಬಂಧನಕ್ಕೊಳಗಾದರು. ಅವರ ಪೋಷಕರಾದ ಎಚ್ ಡಿ ರೇವಣ್ಣ ಮತ್ತು ಭವಾನಿ ಅವರು ಅಪಹರಣ ಆರೋಪದ ಮೇಲೆ ಜಾಮೀನಿನ ಮೇಲೆ ಹೊರಗಿದ್ದಾರೆ.

ಇದನ್ನೂ ಓದಿ; ಜೆಡಿಎಸ್ ಕಾರ್ಯಕರ್ತನ ಮೇಲೆ ‘ಲೈಂಗಿಕ ದೌರ್ಜನ್ಯ’ ಆರೋಪ: ಜೆಡಿಎಸ್ ಎಂಎಲ್‌ಸಿ ಸೂರಜ್ ರೇವಣ್ಣ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...