Homeಮುಖಪುಟ'ಬಾಂಗ್ಲಾ ಮೂಲದ ಅಲ್ಪಸಂಖ್ಯಾತ ಸಮುದಾಯದಿಂದ ಕಾಂಗ್ರೆಸ್‌ಗೆ ಹೆಚ್ಚಿನ ಮತ..'; ಅಸ್ಸಾಂ ಸಿಎಂ ದ್ವೇಷ ಭಾಷಣ

‘ಬಾಂಗ್ಲಾ ಮೂಲದ ಅಲ್ಪಸಂಖ್ಯಾತ ಸಮುದಾಯದಿಂದ ಕಾಂಗ್ರೆಸ್‌ಗೆ ಹೆಚ್ಚಿನ ಮತ..’; ಅಸ್ಸಾಂ ಸಿಎಂ ದ್ವೇಷ ಭಾಷಣ

- Advertisement -
- Advertisement -

ಲೋಕಸಭಾ ಚುನಾವಣೆ ನಂತರವೂ ಬಿಜೆಪಿ ನಾಯಕರ ದ್ಷೇಷ ಭಾಷಣ ಮುಂದುವರಿದಿದ್ದು, “ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಗಳು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸದೆ ಬಾಂಗ್ಲಾದೇಶ ಮೂಲದ ಅಲ್ಪಸಂಖ್ಯಾತ ಸಮುದಾಯದ ಸದಸ್ಯರು ಈ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹೆಚ್ಚಿನ ಮತ ನೀಡಿದ್ದಾರೆ” ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ವಿವಾದಾತ್ಮಕ ಹೇಳಿಕೆ ಹೇಳಿದ್ದಾರೆ. “ಅಸ್ಸಾಂನಲ್ಲಿ ಕೋಮುವಾದದಲ್ಲಿ ತೊಡಗಿರುವ ಏಕೈಕ ಸಮುದಾಯ ಇದಾಗಿದೆ” ಎಂದು ಅವರು ಕೋಮು ಪ್ರಚೋದಕ ಹೇಳಿಕೆ ನೀಡಿದ್ದಾರೆ.

ಪಕ್ಷದ ರಾಜ್ಯ ಕೇಂದ್ರ ಕಚೇರಿಯಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ವಿಜೇತ ಅಭ್ಯರ್ಥಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಡಳಿತಾರೂಢ ಮೈತ್ರಿಕೂಟವು ಸುಮಾರು ಶೇಕಡಾ 47 ರಷ್ಟು ಮತಗಳನ್ನು ಗಳಿಸಿದೆ. ಆದರೆ, ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಶೇಕಡಾ 39 ರಷ್ಟು ಮತಗಳನ್ನು ಗಳಿಸಿವೆ.

ಬಿಜೆಪಿ-ಎಜಿಪಿ-ಯುಪಿಪಿಎಲ್ ಸಮ್ಮಿಶ್ರವು ರಾಜ್ಯದ 14 ಲೋಕಸಭಾ ಸ್ಥಾನಗಳಲ್ಲಿ 11 ಸ್ಥಾನಗಳನ್ನು ಗೆದ್ದುಕೊಂಡಿದೆ, ಉಳಿದ ಮೂರನ್ನು ಕಾಂಗ್ರೆಸ್ ಗೆದ್ದುಕೊಂಡಿದೆ.

”ಕಾಂಗ್ರೆಸ್‌ನ ಶೇಕಡಾ 39 ಮತಗಳನ್ನು ವಿಶ್ಲೇಷಿಸಿದರೆ, ಅದು ರಾಜ್ಯಾದ್ಯಂತ ಹರಡಿಲ್ಲ; ಅದರಲ್ಲಿ ಶೇಕಡಾ 50 ರಷ್ಟು ಅಲ್ಪಸಂಖ್ಯಾತರ ಪ್ರಾಬಲ್ಯವಿರುವ 21 ವಿಧಾನಸಭಾ ಕ್ಷೇತ್ರಗಳಲ್ಲಿ ಕೇಂದ್ರೀಕೃತವಾಗಿದೆ. ಅಲ್ಪಸಂಖ್ಯಾತರ ಪ್ರಾಬಲ್ಯವಿರುವ ಈ ಕ್ಷೇತ್ರಗಳಲ್ಲಿ ಬಿಜೆಪಿ ಶೇಕಡಾ 3 ರಷ್ಟು ಮತಗಳನ್ನು ಪಡೆದುಕೊಂಡಿದೆ” ಅವರು ಸಮರ್ಥಿಸಿಕೊಂಡರು.

“ಹಿಂದೂಗಳು ಕೋಮುವಾದಕ್ಕೆ ಒಳಗಾಗುವುದಿಲ್ಲ ಎಂಬುದನ್ನು ಇದು ಸಾಬೀತುಪಡಿಸುತ್ತದೆ. ಅಸ್ಸಾಂನಲ್ಲಿ ಯಾರಾದರೂ ಕೋಮುವಾದವನ್ನು ನಡೆಸಿದರೆ ಅದು ಒಂದೇ ಸಮುದಾಯ, ಒಂದು ಧರ್ಮ, ಬೇರೆ ಯಾವುದೇ ಧರ್ಮದವರು ಅದನ್ನು ಮಾಡುವುದಿಲ್ಲ” ಎಂದು ಮುಖ್ಯಮಂತ್ರಿ ಯಾವುದೇ ಧರ್ಮವನ್ನು ಹೆಸರಿಸದೆ ದ್ವೇಷ ಭಾಷಣ ಮಾಡಿದ್ದಾರೆ.

ಅಲ್ಪಸಂಖ್ಯಾತರ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ರಸ್ತೆಯಿಲ್ಲದಿರಬಹುದು, ವಿದ್ಯುತ್ ಇಲ್ಲದಿರಬಹುದು. ಆದರೆ, ಅವರು ಕಾಂಗ್ರೆಸ್‌ಗೆ ಹೆಚ್ಚಿನ ಮತ ನೀಡಿದ್ದಾರೆ ಎಂದು ಹೇಳಿದರು.

ಇದಕ್ಕೆ ವ್ಯತಿರಿಕ್ತವಾಗಿ, ಬಿಜೆಪಿ ಅಸ್ಸಾಮಿ ಜನರು ಮತ್ತು ಬುಡಕಟ್ಟು ಜನಾಂಗದವರಿಗಾಗಿ ಕೆಲಸ ಮಾಡುತ್ತಿದ್ದರೂ, ಈ ಸಮುದಾಯಗಳು ಕೇಸರಿ ಪಕ್ಷಕ್ಕೆ 100 ಪ್ರತಿಶತ ಮತ ನೀಡಿಲ್ಲ ಎಂದು ಅವರು ಹೇಳಿದರು.

“ಕರೀಂಗಂಜ್ ಹೊರತುಪಡಿಸಿ, ಬಾಂಗ್ಲಾದೇಶ ಮೂಲದ ಬಹುಸಂಖ್ಯಾತರನ್ನು ಹೊಂದಿರುವ ಕೇಂದ್ರಗಳನ್ನು ನಾವು ಪರಿಗಣಿಸಿದರೆ, ಶೇಕಡಾ 99 ರಷ್ಟು ಮತಗಳು ಕಾಂಗ್ರೆಸ್‌ಗೆ ಬಂದಿವೆ” ಎಂದು ಅವರು ಹೇಳಿದರು.

“ಅವರು (ಅಲ್ಪಸಂಖ್ಯಾತ ಜನರು) (ಪ್ರಧಾನಿ ನರೇಂದ್ರ) ಮೋದಿಯವರು ನೀಡಿದ ಮನೆಗಳಲ್ಲಿ ವಾಸಿಸುತ್ತಿರಬಹುದು, ಮೋದಿ ಅವರು ಒದಗಿಸಿದ ವಿದ್ಯುತ್ ಮತ್ತು ನೈರ್ಮಲ್ಯ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಾರೆ. ಆದರೆ ಅವರು ಮತ ಚಲಾಯಿಸಲು ಹೋದಾಗ ಅವರು ಕಾಂಗ್ರೆಸ್‌ಗೆ ಮತ ಹಾಕುತ್ತಾರೆ” ಎಂದು ಶರ್ಮಾ ಹೇಳಿದ್ದಾರೆ.

ಬಾಂಗ್ಲಾದೇಶ ಮೂಲದ ಸಮುದಾಯವು ಕಾಂಗ್ರೆಸ್‌ಗೆ ಮತ ಹಾಕುತ್ತದೆ. ಏಕೆಂದರೆ, ಅವರು “ಮುಂದಿನ 10 ವರ್ಷಗಳಲ್ಲಿ ರಾಜ್ಯವನ್ನು ನಿಯಂತ್ರಿಸಲು” ಬಯಸುತ್ತಾರೆ ಎಂದು ಅವರು ಸಮರ್ಥಿಸಿಕೊಂಡರು.

ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಲ್ಲಿರುವಾಗಿನಿಂದ ಬಿಜೆಪಿ ಸರ್ಕಾರ ನಿಷ್ಕ್ರಿಯವಾಗಿದ್ದಾಗ ಸಮುದಾಯದ ಸದಸ್ಯರು ಬಾರ್ಪೇಟಾದ ಹಳ್ಳಿಯಾದ ಲಖಿಂಪುರದ ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಿದರು; ಕೊಕ್ರಜಾರ್‌ನಲ್ಲಿ ಭೂಮಿಯನ್ನು ಅತಿಕ್ರಮಿಸಲು ಪ್ರಯತ್ನಿಸಿದರು ಎಂದು ಶರ್ಮಾ ಆರೋಪಿಸಿದರು.

‘ಬಿಜೆಪಿ ಸರ್ಕಾರ ಇಲ್ಲದಿರುವಾಗ ಇಂತಹ ದಾಳಿಗಳು ಎಷ್ಟು ನಡೆಯುತ್ತವೆ ಎಂಬುದನ್ನು ಊಹಿಸಬಹುದು’ ಎಂದು ಅವರು ಹೇಳಿದರು.

ಈ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು 126 ವಿಧಾನಸಭಾ ಕ್ಷೇತ್ರಗಳ ಪೈಕಿ 92 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ. ಇದು ರಾಜ್ಯದಲ್ಲಿ ಯಾವುದೇ ಆಡಳಿತಾರೂಢ ಮೈತ್ರಿಕೂಟಕ್ಕೆ ಇದುವರೆಗೆ ಅತ್ಯಧಿಕವಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

“ಈ ಬಾರಿ, ನಾವು ಶೇಕಡಾ 47 ರಷ್ಟು ಮತಗಳನ್ನು ಪಡೆದಿದ್ದೇವೆ. 2026ರ ರಾಜ್ಯ ಚುನಾವಣೆಯಲ್ಲಿ ಶೇಕಡಾ 50 ರಷ್ಟು ಮತಗಳನ್ನು ಪಡೆಯುವುದು ನಮ್ಮ ಗುರಿಯಾಗಿದೆ” ಎಂದು ಬಿಜೆಪಿ ನಾಯಕ ಹೇಳಿದರು.

ಬಿಜೆಪಿಯು ರಾಷ್ಟ್ರ ನಿರ್ಮಾಣಕ್ಕಾಗಿ ರಾಜಕೀಯದಲ್ಲಿದೆ; ಆ ಕ್ಷೇತ್ರಗಳಿಂದ ತನ್ನ ಅಭ್ಯರ್ಥಿ ಗೆದ್ದಿರಲಿ ಅಥವಾ ಗೆಲ್ಲದಿರಲಿ, ಎಲ್ಲ ಭಾಗಗಳ ಅಭಿವೃದ್ಧಿಗಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತದೆ ಎಂದರು.

ಇದನ್ನೂ ಓದಿ; ‘ದಯವಿಟ್ಟು ನ್ಯಾಯ ಕೊಡಿಸಿ, ನೀವೇ ನಮ್ಮ ಕೊನೆಯ ಭರವಸೆ..’; ಪ್ರಧಾನಿ ಮೋದಿಗೆ ಮನವಿ ಮಾಡಿದ ನೀಟ್ ಆಕಾಂಕ್ಷಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...