Homeಫ್ಯಾಕ್ಟ್‌ಚೆಕ್FACT CHECK : ಎರಡು ಸಿಮ್ ಕಾರ್ಡ್ ಹೊಂದಿರುವವರಿಗೆ ಸರ್ಕಾರ ದಂಡ ವಿಧಿಸಲಿದೆ ಎಂಬುವುದು ಸುಳ್ಳು

FACT CHECK : ಎರಡು ಸಿಮ್ ಕಾರ್ಡ್ ಹೊಂದಿರುವವರಿಗೆ ಸರ್ಕಾರ ದಂಡ ವಿಧಿಸಲಿದೆ ಎಂಬುವುದು ಸುಳ್ಳು

- Advertisement -
- Advertisement -

ಒಂದೇ ಮೊಬೈಲ್‌ನಲ್ಲಿ ಎರಡು ಸಿಮ್ ಕಾರ್ಡ್ ಹೊಂದಿರುವವರಿಗೆ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ದಂಡ ವಿಧಿಸಲು ಯೋಜಿಸುತ್ತಿದೆ ಎಂದು ಸುದ್ದಿಯೊಂದು ಹಬ್ಬಿದೆ.

ನೆಟ್‌ವರ್ಕ್ ಸೇವಾ ಪೂರೈಕೆದಾರರು ದಂಡದ ಹಣವನ್ನು ಒಂದು ದೊಡ್ಡ ಮೊತ್ತವಾಗಿ ಅಥವಾ ವಾರ್ಷಿಕ ಆಧಾರದ ಮೇಲೆ ಪಡೆದುಕೊಳ್ಳಬಹುದು ಎಂದು ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿರುವ ಸುದ್ದಿಯ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ಗೂಗಲ್‌ನಲ್ಲಿ ಕೀ ವರ್ಡ್ಸ್ ಬಳಸಿ ಮಾಹಿತಿ ಹುಡುಕಿದಾಗ ಜೂನ್ 13,2024ರಂದು ಎಕಾನಾಮಿಕ್ಸ್ ಟೈಮ್ಸ್ ಪ್ರಕಟಿಸಿರುವ ಸುದ್ದಿಯೊಂದು ದೊರೆತಿದೆ.

ಸುದ್ದಿಯಲ್ಲಿ ಟ್ರಾಯ್ ‘ಸಂಖ್ಯಾ ಸಂಪನ್ಮೂಲ ನಿಯಂತ್ರಣ'(regulate numbering resources) ಪ್ರಸ್ತಾಪವನ್ನು ಕೇಂದ್ರ ದೂರ ಸಂಪರ್ಕ ಸಚಿವಾಲಯದ ಮುಂದಿಟ್ಟಿದೆ ಎಂದು ಹೇಳಲಾಗಿದೆ.

ಟ್ರಾಯ್ ಫೋನ್ ನಂಬರ್‌ಗಳನ್ನು ‘ಪರಿಮಿತವಲ್ಲದ ಹೆಚ್ಚು ಮೌಲ್ಯಯುತವಾದ ಸಾರ್ವಜನಿಕ ಸಂಪನ್ಮೂಲ’ ಎಂದು ಪರಿಗಣಿಸುತ್ತದೆ ಎಂದು ವರದಿ ಉಲ್ಲೇಖಿಸಿದೆ. ಆದ್ದರಿಂದ, ಕಡಿಮೆ ಬಳಕೆಯೊಂದಿಗೆ ಸಂಖ್ಯೆಗಳನ್ನು ಹೊಂದಿರುವ ಮೊಬೈಲ್ ಆಪರೇಟರ್‌ಗಳ ಮೇಲೆ ಶುಲ್ಕಗಳನ್ನು ವಿಧಿಸಲು ಯೋಜಿಸುತ್ತಿದೆ’ ಎಂದಿದೆ.

ದೀರ್ಘಾವಧಿಯವರೆಗೆ ಬಳಸದೆ ಇರುವ ಸಂಖ್ಯೆಗಳ ಮೇಲೆ ಗ್ರಾಹಕರಿಗೆ ಏಕರೂಪವಾಗಿ ಅಥವಾ ವಾರ್ಷಿಕ ಶುಲ್ಕದ ರೂಪದಲ್ಲಿ ದಂಡ ವಿಧಿಸಬಹುದು ಎಂದು ವರದಿ ಹೇಳಿದೆ.

ಒಂದು ಹೆಸರಿನಲ್ಲಿ ಎರಡು ಫೋನ್ ನಂಬರ್‌ಗಳಿದ್ದು, ಅವುಗಳಲ್ಲಿ ಒಂದನ್ನು ಮಾತ್ರ ಬಳಸಿ, ಇನ್ನೊಂದು ಬಳಸದೇ ಇದ್ದರೆ ಅಂಥವರ ಮೇಲೆ ಮಾತ್ರ ದಂಡ ವಿಧಿಸುವುದು ಪ್ರಸ್ತಾವಣೆಯಲ್ಲಿದೆ ಎಂದು ತಿಳಿಸಿದೆ.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ‘ರಾಷ್ಟ್ರೀಯ ಸಂಖ್ಯಾ ಯೋಜನೆಯ ಪರಿಷ್ಕರಣೆ‘ ಎಂಬ ಶೀರ್ಷಿಕೆಯಲ್ಲಿ ಜೂನ್ 6, 2024ರಂದು ಟ್ರಾಯ್ ಹೊರಡಿಸಿದ ಪ್ರಕಟನೆ ಅದರ ವೆಬ್‌ಸೈಟ್‌ನಲ್ಲಿ ಲಭ್ಯವಾಗಿದೆ.

ಪ್ರಕಟಣೆಯಲ್ಲಿ, ಎರಡು ಸಿಮ್‌ ಕಾರ್ಡ್‌ಗಳನ್ನು ಹೊಂದಿರುವ ಕಾರಣಕ್ಕೆ ದಂಡ ವಿಧಿಸಲಾಗುತ್ತದೆ ಎಂದು ಎಲ್ಲೂ ಹೇಳಿಲ್ಲ.

ಆದರೆ, ಪ್ರಕಟಣೆಯ ಒಂದು ವಿಭಾಗದಲ್ಲಿ ವ್ಯಾನಿಟಿ ಸಂಖ್ಯೆಗಳ ಕುರಿತು ಚರ್ಚಿಸಲಾಗಿದೆ. ಟೆಲಿಕಾಂ ಸೇವಾ ಪೂರೈಕೆದಾರರು (ಟಿಎಸ್‌ಪಿಗಳು) ಹಂಚಿಕೆ ಮಾಡಿದ ಸಂಖ್ಯೆಗಳನ್ನು ಗ್ರಾಹಕರು ಬಳಸಬಹುದು, ಬಳಸದೇ ಇರಬಹುದು ಅಥವಾ ಅವುಗಳನ್ನು ಸಂಗ್ರಹಿಸಿಡಬಹುದು. ಈ ಸಂಖ್ಯೆಗಳಿಗೆ ವ್ಯಾನಿಟಿ ಸಂಖ್ಯೆಗಳು ಎನ್ನಲಾಗುತ್ತದೆ. ಇಂತಹ ‘ಸಂಖ್ಯೆಗಳು ಸಂಪನ್ಮೂಲಗಳ ಅಸಮರ್ಥ ಬಳಕೆಗೆ’ ಕಾರಣವಾಗುತ್ತದೆ ಎಂದು ಹೇಳಲಾಗಿದೆ.

ಟಿಎಸ್‌ಪಿಯಲ್ಲಿ ಬಳಕೆಯಾಗದ ಸಂಖ್ಯೆಗಳಿಗೆ ಒಂದು ಬಾರಿ ಅಥವಾ ಪ್ರತಿ ವರ್ಷ ಶುಲ್ಕಗಳನ್ನು ವಿಧಿಸುವುದು ನಿಷ್ಕ್ರಿಯಗೊಳಿಸಿದ ಫೋನ್ ನಂಬರ್‌ಗಳನ್ನು ಮರುಹಂಚಿಕೆ ಮಾಡದೆಯೇ ಹಿಡಿದಿಟ್ಟುಕೊಳ್ಳುವ ಟಿಎಸ್‌ಪಿಗಳ ಮೇಲೆ ಆರ್ಥಿಕ ನಿರಾಕರಣೆ ವಿಧಿಸುವುದನ್ನು ಟ್ರಾಯ್ ವಿವರಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಯ ಕುರಿತು ಜೂನ್ 14ರಂದು ಟ್ರಾಯ್‌ ತನ್ನ ಎಕ್ಸ್‌ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದು, “ಒಂದಕ್ಕಿಂತ ಹೆಚ್ಚು ಸಿಮ್‌ಗಳು ಅಥವಾ ಸಂಖ್ಯೆಗಳು ಹೊಂದಿರುವ ಗ್ರಾಹಕರ ಮೇಲೆ ಶುಲ್ಕ ವಿಧಿಸಲು ಟ್ರಾಯ್ ಉದ್ದೇಶಿಸಿದೆ ಎಂಬುವುದು ಸುಳ್ಳು, ಆಧಾರ ರಹಿತ ಮತ್ತು  ಸಾರ್ವಜನಿಕರನ್ನು ತಪ್ಪು ದಾರಿಗೆಳೆಯುವ ಸುದ್ದಿಯಾಗಿದೆ ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ : FACT CHECK : ವಸತಿ ಸಂಕೀರ್ಣದ ಮುಂದೆ ಜಾನುವಾರು ಹತ್ಯೆ ಮಾಡಿರುವ ವಿಡಿಯೋ ಭಾರತದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...