Homeಫ್ಯಾಕ್ಟ್‌ಚೆಕ್FACT CHECK : ಕೇರಳದ ಚರ್ಚ್‌ನಲ್ಲಿ ₹ 7 ಸಾವಿರ ಕೋಟಿ ಕಪ್ಪು ಹಣ ಪತ್ತೆಯಾಗಿದೆ...

FACT CHECK : ಕೇರಳದ ಚರ್ಚ್‌ನಲ್ಲಿ ₹ 7 ಸಾವಿರ ಕೋಟಿ ಕಪ್ಪು ಹಣ ಪತ್ತೆಯಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಕೇರಳದ ಚರ್ಚ್ ಒಂದರ ಮೇಲೆ ಇತ್ತೀಚೆಗೆ ಇಡಿ ದಾಳಿ ನಡೆಸಿದ ವೇಳೆ 7,000 ಕೋಟಿ ರೂಪಾಯಿ ಮೌಲ್ಯದ ಕಪ್ಪುಹಣ ಪತ್ತೆಯಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹಬ್ಬಿದ್ದು, 500 ರೂಪಾಯಿ ನೋಟುಗಳ ದೊಡ್ಡ ರಾಶಿ ಮತ್ತು ಪಾದ್ರಿಯೊಬ್ಬರ ಫೋಟೋವನ್ನು ಹಂಚಿಕೊಳ್ಳಲಾಗ್ತಿದೆ.

“ಇಡಿ ಕೇರಳದ ಲಿನಿ ಬೆಲರೂಸಿಯನ್ ಎಂಬ ಚರ್ಚ್‌ನಿಂದ 7000 ಕೋಟಿ ರೂಪಾಯಿ ಮೌಲ್ಯದ ಕಪ್ಪು ಹಣವನ್ನು ವಶಪಡಿಸಿಕೊಂಡಿದೆ. ಇದನ್ನು ಯೋಹಾನನ್ ಎಂಬ ಬಿಷಪ್ ನಡೆಸುತ್ತಾರೆ. ಇದುವರೆ ಈ ವಿಷಯ ಎಲ್ಲಿಯೂ ಸುದ್ದಿಯಾಗಿಲ್ಲ. ಯಾವುದಾದರು ಹಿಂದೂ ಸ್ವಾಮಿ ಬಳಿ 700 ಕೋಟಿಯ ಬಿಡಿ, 7 ಕೋಟಿ ರೂ. ಸಿಕ್ಕಿದ್ದರೆ ಸುದ್ದಿ ವಾಹಿನಿಗಳು 48 ಗಂಟೆಗಳ ಕಾಲ ಬೆತ್ತಲೆಯಾಗಿ ಕುಣಿಯಲು ಪ್ರಾರಂಭಿಸುತ್ತಿದ್ದವು” ಎಂದು ಸಾಮಾಜಿಕ ಜಾಲತಾಣದ ಪೋಸ್ಟ್‌ಗಳಲ್ಲಿ ಬರೆದುಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಪೋಟೋ ಮತ್ತು ಬರಹದ ಸತ್ಯಾಸತ್ಯತೆಯನ್ನು ನಾವು ಪರಿಶೀಲನೆ ನಡೆಸಿದ್ದೇವೆ. ಗೂಗಲ್‌ನಲ್ಲಿ ಕೀ ವರ್ಡ್ಸ್ ಬಳಸಿ ಈ ಕುರಿತು ಮಾಹಿತಿ ಹುಡುಕಿದಾಗ ನವೆಂಬರ್ 7, 2020ರಂದು ಲೈವ್ ಹಿಂದುಸ್ತಾನ್ ಸುದ್ದಿ ವೆಬ್‌ಸೈಟ್‌ ಪ್ರಕಟಿಸಿದ ಸುದ್ದಿ ಲಭ್ಯವಾಗಿದೆ.

ಈ ಸುದ್ದಿಯಲ್ಲಿ ನವೆಂಬರ್ 5, 2020 ರಂದು ಆದಾಯ ತೆರಿಗೆ ಇಲಾಖೆ ಕೇರಳದ ತಿರುವಲ್ಲಾದಲ್ಲಿರುವ ಬಿಲೀವರ್ಸ್ ಈಸ್ಟರ್ನ್ ಚರ್ಚ್‌ಗೆ ಸಂಬಂಧಿಸಿದ ಕಚೇರಿಗಳ ಮೇಲೆ ದಾಳಿ ನಡೆಸಿದೆ. ಕೇರಳ ಈ ಚರ್ಚ್ ಮೆಟ್ರೋಪಾಲಿಟನ್ ಬಿಷಪ್ ಕೆ.ಪಿ ಯೋಹಾನನ್ ಅವರ ನೇತೃತ್ವದಲ್ಲಿ ನಡೆಯುತ್ತದೆ. ಐಟಿ ಇಲಾಖೆಯು ಚರ್ಚ್‌ನಿಂದ 5 ಕೋಟಿ ರೂಪಾಯಿ ಮೌಲ್ಯದ ಕರೆನ್ಸಿ ನೋಟುಗಳು ಮತ್ತು ಬೆಲೆ ಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದೆ” ಎಂದು ತಿಳಿಸಲಾಗಿತ್ತು.

ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ ನವೆಂಬರ್ 6, 2020ರಂದು ಹಣಕಾಸು ಇಲಾಖೆಯ ಪರವಾಗಿ ಪ್ರೆಸ್ ಇನ್ಫರ್‌ಮೇಶನ್ ಬ್ಯೂರೋ (ಪಿಐಬಿ) ಪ್ರಕಟಿಸಿದ್ದ ಮಾಹಿತಿ ಲಭ್ಯವಾಗಿದೆ.

ಪ್ರಕಟಣೆಯಲ್ಲಿ “ಆದಾಯ ತೆರಿಗೆ ಇಲಾಖೆಯು ನವೆಂಬರ್ 5, 2020ರಂದು ಕೇರಳದ ತಿರುವಲ್ಲಾದ ಪ್ರಸಿದ್ಧ ಸುವಾರ್ತಾಬೋಧಕ ಟ್ರಸ್ಟ್ ಮತ್ತು ಅದರ ಸಂಸ್ಥೆಗಳಲ್ಲಿ ಆದಾಯ ತೆರಿಗೆ ಕಾಯ್ದೆ, 1961ರ ಅಡಿ ಶೋಧ ನಡೆಸಿದೆ. ಇ ಧಾರ್ಮಿಕ ಟ್ರಸ್ಟ್ ಶಾಲಾ, ಕಾಲೇಜುಗಳು, ವೈದ್ಯಕೀಯ ಶಿಕ್ಷಣ ಸಂಸ್ಥೆಗಳು ಮತ್ತು ಮತ್ತು ಕೇರಳದಲ್ಲಿ ಆಸ್ಪತ್ರೆಗಳನ್ನು ನಡೆಸುತ್ತಿವೆ. ಐಟಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ, ಕರ್ನಾಟಕ, ಚಂಡೀಗಢ, ಪಂಜಾಬ್ ಮತ್ತು ತೆಲಂಗಾಣದಲ್ಲಿರುವ ಸಂಸ್ಥೆಯ 66 ಸ್ಥಳಗಳಲ್ಲಿ ಪರಿಶೀಲನೆ ನಡೆಸಿದೆ. ಈ ವೇಳೆ ದೆಹಲಿಯ ಪ್ರಾರ್ಥನಾ ಸ್ಥಳದಲ್ಲಿ 3.85 ಕೋಟಿ ರೂ. ಸೇರಿದಂತೆ ಅಂದಾಜು 6 ಕೋಟಿಯಷ್ಟು ದಾಖಲೆಯಿಲ್ಲದ ಹಣ ಪತ್ತೆಯಾಗಿದೆ ಎಂದು ತಿಳಿಸಿತ್ತು.

ನಾವು ನಡೆಸಿದ ಪರಿಶೀಲನೆಯಲ್ಲಿ ಇತ್ತೀಚೆಗೆ ಕೇರಳದ ಚರ್ಚ್‌ ಮೇಲೆ ಇಡಿ ದಾಳಿ ನಡೆಸಿರುವುದು ಮತ್ತು ಬರೋಬ್ಬರಿ 7 ಸಾವಿರ ಕೋಟಿ ರೂಪಾಯಿ ಪತ್ತೆಯಾಗಿರುವ ಕುರಿತು ಮಾಹಿತಿ ಲಭ್ಯವಾಗಿಲ್ಲ. ಹಾಗಾಗಿ, ಸಾಮಾಜಿಕ ಜಾಲತಾಣದ ಪೋಸ್ಟ್‌ಗಳು ಸುಳ್ಳು ಎಂಬುವುದು ಖಚಿತವಾಗಿದೆ.

ಇದನ್ನೂ ಓದಿ : FACT CHECK : ಎರಡು ಸಿಮ್ ಕಾರ್ಡ್ ಹೊಂದಿರುವವರಿಗೆ ಸರ್ಕಾರ ದಂಡ ವಿಧಿಸಲಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...