Homeಮುಖಪುಟತೆಲಂಗಾಣ: ಕೃಷಿ ಕೆಲಸಕ್ಕೆ ಬಾರದ ಬುಡಕಟ್ಟು ಮಹಿಳೆಗೆ ಸಾರ್ವಜನಿಕವಾಗಿ ಥಳಿತ; ಕಾರದ ಪುಡಿ ಹಚ್ಚಿ ಚಿತ್ರಹಿಂಸೆ

ತೆಲಂಗಾಣ: ಕೃಷಿ ಕೆಲಸಕ್ಕೆ ಬಾರದ ಬುಡಕಟ್ಟು ಮಹಿಳೆಗೆ ಸಾರ್ವಜನಿಕವಾಗಿ ಥಳಿತ; ಕಾರದ ಪುಡಿ ಹಚ್ಚಿ ಚಿತ್ರಹಿಂಸೆ

- Advertisement -
- Advertisement -

ಹಣಕಾಸು ವಿಚಾರಕ್ಕೆ ಸಬಂಧಿಸಿದಂತೆ ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ 26 ವರ್ಷದ ಬುಡಕಟ್ಟು ಮಹಿಳೆಗೆ ಸಾರ್ವಜನಿಕವಾಗಿ ಅಮಾನವೀಯವಾಗಿ ಥಳಿಸಿದ್ದು, ಆಕೆಯ ಕಣ್ಣುಗಳು ಮತ್ತು ಜನನಾಂಗಗಳಿಗೆ ಕಾರದ ಪುಡಿ ಹಾಕಿ ಚಿತ್ರಹಿಂಸೆ ನೀಡಿರುವ ಪ್ರಕರಣ ಒಂದು ವಾರದ ನಂತರ ತಡವಾಗಿ ಬೆಳಕಿಗೆ ಬಂದಿದೆ.

ಸಂತ್ರಸ್ತ ಮಹಿಳೆಯು ಮೂರು ಮಕ್ಕಳ ತಾಯಿ ಎಂದು ಗೊತ್ತಾಗಿದ್ದು, ಹಲ್ಲೆಯ ವಿಡಿಯೊಗಳು ಜಾಲತಾಣಗಳಲ್ಲಿ ಹರಿದಾಡುತ್ತಿವೆ. ವೀಡಿಯೊದಲ್ಲಿ ಗುಲಾಬಿ ಬಣ್ಣದ ಸೀರೆ ಧರಿಸಿರುವ ಮಹಿಳೆಯನ್ನು ಗ್ರಾಮಸ್ಥರು ಸುತ್ತುವರಿದಿದ್ದು, ಆಕೆ ನೆಲದ ಮೇಲೆ ನರಳಾಡುತ್ತಿರುವುದನ್ನು ಕಾಣಬಹುದಾಗಿದೆ.

ಒಬ್ಬ ವ್ಯಕ್ತಿ ಇದ್ದಕ್ಕಿದ್ದಂತೆ ಹಿಂಸೆಗೆ ಮುಂದಾಗಿದ್ದು, ಪರಿಸ್ಥಿತಿ ಭಯಾನಕ ತಿರುವು ಪಡೆಯುತ್ತದೆ; ಅವನು ಮಹಿಳೆಯನ್ನು ಕುತ್ತಿಗೆ ಹಿಡಿದು ಆಕೆಯನ್ನು ನೆಲಕ್ಕೆ ಬಲವಂತವಾಗಿ ತಳ್ಳಿ ಕಾಲಿನಿಂದ ತುಳಿದಿದ್ದಾನೆ. ಅವನನ್ನು ಇತರರು ದೂರ ತಳ್ಳುತ್ತಾರೆ ಮತ್ತು ಯುವತಿ ಎದ್ದು ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಾಳೆ, ಎರಡನೆಯ ವ್ಯಕ್ತಿ ಮತ್ತೆ ನೆಲಕ್ಕೆ ತಳ್ಳಿದ್ದು, ಅವನು ಅವಳ ಸೀರೆಯನ್ನು ಹರಿದು ಹಾಕಲು ಪ್ರಯತ್ನಿಸಿದ್ದಾನೆ. ಕೆಲವು ಜನರು ಮರದ ಕೋಲಿನಿಂದ ಆಕೆಗೆ ಕೋಪೋದ್ರಿಕ್ತರಾಗಿ ಹೊಡೆದಿದ್ದಾರೆ.

ಮತ್ತೊಂದು ಆಘಾತಕಾರಿ ವಿಡಿಯೋದಲ್ಲಿ ಎರಡನೇ ಮಹಿಳೆಯು ಗುಲಾಬಿ ಸೀರೆಯುಟ್ಟ ಮಹಿಳೆಯ ಕೂದಲು ಹಿಡಿದು ನೆಲಕ್ಕೆ ಕುಸ್ತಿಯಾಡುತ್ತಾಳೆ ಮತ್ತು ಅವಳನ್ನು ಜೋರಾಗಿ ಒದ್ದು, ಪದೇಪದೆ ಹೊಡೆಯುತ್ತಾಳೆ.

ಇನ್ನೂ ಆಘಾತಕಾರಿ ಘಟನೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಾಯಕ್ವಾಡ್ ವೈಭವ್ ರಘುನಾಥ್ ಅವರು ಪ್ರತಿಕ್ರಿಯಿಸಿದ್ದು, ಈ ವೀಡಿಯೊಗಳು ಕನಿಷ್ಠ ಎರಡು ದಿನಗಳ ಮೊದಲು ಮಹಿಳೆಯ ಮೇಲೆ ಹಲ್ಲೆ ಮತ್ತು ಎರಡನೇ ಬಾರಿಗೆ ಚಿತ್ರಹಿಂಸೆಗೊಳಗಾಗಿದ್ದಾರೆ ಎಂದು ಹೇಳಿದ್ದಾರೆ.

ಆರಂಭದಲ್ಲಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಿಳೆಯನ್ನು ನಂತರ ಉತ್ತಮ ಚಿಕಿತ್ಸೆಗಾಗಿ ರಾಜ್ಯ ರಾಜಧಾನಿ ಹೈದರಾಬಾದ್‌ನಲ್ಲಿರುವ ನಿಜಾಮ್ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸ್ಥಳಾಂತರಿಸಲಾಯಿತು.

ಹಲ್ಲೆಗೆ ಸಂಬಂಧಿಸಿದಂತೆ ಬಂಡಿ ವೆಂಕಟೇಶ್ ಮತ್ತು ಅವರ ಪತ್ನಿ, ಹಾಗೂ ಸಂತ್ರಸ್ತೆಯ ಸಹೋದರಿ ಮತ್ತು ಪತಿ ಎಂದು ಗುರುತಿಸಲಾಗಿರುವ ನಾಲ್ವರನ್ನು ಬಂಧಿಸಲಾಗಿದೆ. ವರದಿಗಳ ಪ್ರಕಾರ, ಮಹಿಳೆ ಬಂಡಿ ವೆಂಕಟೇಶ್ ಅವರಿಂದ ಸಾಲ ಪಡೆದ ಹಣಕ್ಕೆ ವಿವಾದ ಉಂಟಾಗಿದೆ.

ಪ್ರತಿಯಾಗಿ, ಆಕೆ ಹಣ ನೀಡಿದ ವೆಂಕಟೇಶ್ ಜಮೀನಿನಲ್ಲಿ ಕೆಲಸ ಮಾಡಬೇಕಾಗಿತ್ತು. ಆದರೆ, ಮಹಿಳೆ ತನ್ನ ಸಹೋದರಿಯೊಂದಿಗೆ ಜಗಳವಾಡಿದ ನಂತರ ಕೆಲವು ದಿನಗಳ ನಂತರ ಹೊರನಡೆದಳು. ಇದರಿಂದ ಕುಪಿತಗೊಂಡ ವೆಂಕಟೇಶ್ ಆಕೆಯನ್ನು ಹುಡುಕಿ ಕರೆತಂದು ತನ್ನ ಹೊಲಕ್ಕೆ ಎಳೆದೊಯ್ದಿದ್ದಾನೆ.

ಸೋಮವಾರ ತೆಲಂಗಾಣ ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಅವರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿರುವ ಯುವತಿಯನ್ನು ಭೇಟಿಯಾಗಿ ಕಾಂಗ್ರೆಸ್ ಸರ್ಕಾರ ಎಲ್ಲ ವಿಕಿತ್ಸಾ ವೆಚ್ಚ ಪಾವತಿಸಲಿದೆ ಎಂದು ಹೇಳಿದರು.

ಮಹಿಳೆಯು ಸ್ವಂತ ಮನೆಯನ್ನು ಹೊಂದಿಲ್ಲದಿದ್ದರೆ ರಾಜ್ಯ ಸರ್ಕಾರವು ನೀಡಲಿದೆ. ಅವರ ಮಕ್ಕಳಿಗೆ ಶಿಕ್ಷಣ ಮತ್ತು ಕೃಷಿ ಮಾಡಲು ಭೂಮಿಯನ್ನು ಒದಗಿಸುತ್ತದೆ ಎಂದು ವಿಕ್ರಮಾರ್ಕ ಹೇಳಿದರು. ಶನಿವಾರ ಅಬಕಾರಿ ಸಚಿವ ಜೂಪಲ್ಲಿ ಕೃಷ್ಣರಾವ್ ಮಹಿಳೆಯೊಂದಿಗೆ ಮಾತನಾಡಿ ₹2 ಲಕ್ಷ ಆರ್ಥಿಕ ನೆರವು ನೀಡುವುದಾಗಿ ತಿಳಿಸಿದರು.

ಮಲ್ಲು ಭಟ್ಟಿ ವಿಕ್ರಮಾರ್ಕ ಅವರು ಸೋಮವಾರ ನಾಗರ್‌ಕರ್ನೂಲ್ ಜಿಲ್ಲೆಯಲ್ಲಿ ಆಕೆಯ ಸಹೋದರಿ ಸೇರಿದಂತೆ ಕೆಲವು ವ್ಯಕ್ತಿಗಳಿಂದ ಚಿತ್ರಹಿಂಸೆಗೊಳಗಾದ ಬುಡಕಟ್ಟು ಮಹಿಳೆಯನ್ನು ಭೇಟಿ ಮಾಡಿ, ಆಕೆಯ ವೈದ್ಯಕೀಯ ಚಿಕಿತ್ಸೆಯನ್ನು ಸರ್ಕಾರ ನೋಡಿಕೊಳ್ಳುತ್ತದೆ ಮತ್ತು ಇತರ ಸಹಾಯವನ್ನು ನೀಡಲಿದೆ ಎಂದು ಭರವಸೆ ನೀಡಿದರು.

27ರ ಹರೆಯದ ಮಹಿಳೆಯ ಮೇಲಿನ ದಾಳಿಯ ಬಗ್ಗೆ ದುಃಖ ವ್ಯಕ್ತಪಡಿಸಿದ ವಿಕ್ರಮಾರ್ಕ, ಅವರು ಚೇತರಿಸಿಕೊಳ್ಳುವವರೆಗೆ ಸರ್ಕಾರವು ಅವಳ ಚಿಕಿತ್ಸೆಯನ್ನು ನೋಡಿಕೊಳ್ಳುತ್ತದೆ. ಇಂದಿರಮ್ಮ ಬಡವರ ವಸತಿಯಡಿಯಲ್ಲಿ ಅವರಿಗೆ ಸ್ವಂತ ಮನೆ, ಮಕ್ಕಳಿಗೆ ಸರ್ಕಾರಿ ಸಮಾಜ ಕಲ್ಯಾಣ ಶಾಲೆಯಲ್ಲಿ ಶಿಕ್ಷಣ ಮತ್ತು ಸಾಗುವಳಿ ಮಾಡಲು ಭೂಮಿ ಇಲ್ಲದಿದ್ದರೆ ಸರ್ಕಾರವು ಅವರಿಗೆ ಮನೆಯನ್ನು ನೀಡುತ್ತದೆ ಎಂದು ಅವರು ಹೇಳಿದರು.

ಆರೋಪಿಗಳನ್ನು ಈಗಾಗಲೇ ಜೈಲಿಗೆ ಕಳುಹಿಸಿರುವುದನ್ನು ಗಮನಿಸಿದ ಉಪಮುಖ್ಯಮಂತ್ರಿ ಅವರು, ಘಟನೆಯ ಸಂಪೂರ್ಣ ಮಾಹಿತಿ ಪಡೆದ ನಂತರ ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ಇದನ್ನೂ ಓದಿ; 4 ಹಂತದ ತನಿಖೆ, 1,000 ಫೋನ್ ಸಂಖ್ಯೆಗಳ ಪರಿಶೀಲನೆ; ಪೇಪರ್ ಸೋರಿಕೆ ಪ್ರಕರಣಗಳನ್ನು ಭೇದಿಸಲು ಸಿಬಿಐ ಯೋಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...