Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಮರು ಹಿಂದೂಗಳಿಗೆ ನೀಡುವ ಆಹಾರದಲ್ಲಿ ಸಂತಾನಹೀನತೆಯ ರಾಸಾಯನಿಕ ಬೆರೆಸಿದ್ದಾರೆ ಎಂಬುವುದು ಸುಳ್ಳು

FACT CHECK : ಮುಸ್ಲಿಮರು ಹಿಂದೂಗಳಿಗೆ ನೀಡುವ ಆಹಾರದಲ್ಲಿ ಸಂತಾನಹೀನತೆಯ ರಾಸಾಯನಿಕ ಬೆರೆಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಹಿಂದೂಗಳಿಗೆ ನೀಡುವ ಆಹಾರದಲ್ಲಿ ಸಂತಾನಹೀನತೆಯ ರಾಸಾಯನಿಕ ಬೆರೆಸುತ್ತಿದ್ದ ಮುಸ್ಲಿಮರ ಸುಮಾರು 40 ಹೋಟೆಲ್‌ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

“ಜಾಗ್ರತೆ ಹಿಂದೂಗಳೇ ಜಾಗ್ರತೆ…ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರದ ಹೆದ್ದಾರಿಗಳಲ್ಲಿ 40ಕ್ಕೂ ಹೆಚ್ಚು ಮುಸ್ಲಿಂ ಡಾಬಾಗಳ ಮೇಲೆ ದಾಳಿ ನಡೆಸಿದ್ದು, ಈ ಎಲ್ಲಾ ಹೋಟೆಲ್‌ಗಳಲ್ಲಿ ಹಿಂದೂಗಳಿಗೆ ಆಹಾರದಲ್ಲಿ ಸಂತಾನಹೀನತೆಯ ರಾಸಾಯನಿಕ ಬೆರೆಸಲಾಗಿರುವುದು ಪತ್ತೆಯಾಗಿದೆ. ಆ ಹೋಟೆಲ್‌ಗಳ ಬಗ್ಗೆ ಎಚ್ಚರದಿಂದಿರಿ. ಹಿಂದೂಗಳ ಜನಸಂಖ್ಯೆಯನ್ನು ಕಡಿಮೆ ಮಾಡಲು ಮತ್ತು ಹಿಂದೂ ಧರ್ಮವನ್ನು ನಾಶಮಾಡಲು, ಇವರ ಯಾವುದೇ ಆಹಾರ ಮಳಿಗೆಗಳಲ್ಲಿ ನಮ್ಮ ಆರೋಗ್ಯಕ್ಕೆ ಹಾನಿ ಮಾಡುವ ಇಂತಹ ರಾಸಾಯನಿಕಗಳನ್ನು ಬಳಸುತ್ತಿರುವುದು ಪದೇಪದೇ ಬೆಳಕಿಗೆ ಬರುತ್ತಿವೆ. ಸಾಕಷ್ಟು ಕಡೆ ಸರ್ಕಾರಿ ಬಸ್ಸುಗಳನ್ನೂ ಇಂತಹದೇ ಹೋಟೆಲ್ ಗಳಲ್ಲಿ ನಿಲ್ಲಿಸುವ ವ್ಯವಸ್ಥೆ ಮಾಡಿಕೊಂಡಿರುತ್ತಾರೆ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಳ್ಳಲಾಗಿದೆ.

ಈ ಹಿಂದೆ ಇದೇ ಸುದ್ದಿಯನ್ನು “ತಮಿಳುನಾಡಿನ ಕೊಯಮತ್ತೂರಿನಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಹಿಂದೂಗಳಿಗೆ ಬಿರಿಯಾನಿಯಲ್ಲಿ ಪುರುಷತ್ವ ಹರಣ ಔಷಧವನ್ನು ಸೇರಿಸಿದ್ದಾನೆ. ಈ ಬಿರಿಯಾನಿ ತಿನ್ನುವ ಗಂಡಸು ಅಥವಾ ಹೆಂಗಸರಿಗೆ ಮಕ್ಕಳಾಗೋದಿಲ್ಲ. ಹೀಗಾಗಿ, ಮುಸ್ಲಿಮರಿಂದ ಯಾವುದೇ ವಸ್ತು ಖರೀದಿಸಬೇಡಿ” ಎಂದು ಪ್ರತಿಪಾದಿಸಿ ಹಂಚಿಕೊಳ್ಳಲಾಗಿತ್ತು.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳ ಪೋಸ್ಟ್ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಬೇರೆ ಬೇರೆ ಸಂದರ್ಭಗಳ ಫೋಟೋಗಳನ್ನು ಬಳಸಿ ಸುಳ್ಳು ಸುದ್ದಿ ಹಬ್ಬಿಸಿರುವುದು ನಮಗೆ ಗೊತ್ತಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾದ ಫೋಟೋಗಳ ಬಗ್ಗೆ ಮಾಹಿತಿ ಕೆಳಗಿದೆ.

ಫೋಟೋ -1 :

ಈ ಫೋಟೋ ಯೂಟ್ಯೂಬ್‌ ವಿಡಿಯೋ ಒಂದರಿಂದ ತೆಗೆದುಕೊಳ್ಳಲಾಗಿದೆ. ಸ್ಟ್ರೀಟ್‌ ಫುಡ್ ಅಫಿಷಿಯಲ್ ಎಂಬ ಯೂಟ್ಯೂಬ್‌ ಚಾನೆಲ್‌ನಲ್ಲಿ “Indian Muslim festival DUM BIRYANI Preparation for 30 People & STREET FOOD” ಎಂಬ ಶೀರ್ಷಿಕೆಯಲ್ಲಿ ಜುಲೈ 1, 2026ರಲ್ಲಿ ವಿಡಿಯೋ ಅಪ್ಲೋಡ್ ಮಾಡಲಾಗಿತ್ತು. ಅದಕ್ಕೆ ಕೊಡಲಾಗಿದ್ದ ತಂಬ್‌ನೈಲ್‌ ಫೋಟೋ ಇದಾಗಿದೆ. ಈ ಫೋಟೋವನ್ನು ತಪ್ಪಾದ ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗ್ತಿದೆ ಎಂದು ಜೂನ್ 10, 2020ರಂದು ಟೈಮ್ಸ್‌ ಆಫ್ ಇಂಡಿಯಾ ಸುದ್ದಿ ಮಾಡಿತ್ತು.

ಮುಸ್ಲಿಮರು ತಮ್ಮ ಕಾರ್ಯಕ್ರಮಗಳಿಗೆ ಮಾಡುವ ರುಚಿಯಾದ ದಮ್ ಬಿರಿಯಾನಿ ಹೇಗೆ ತಯಾರಿಸುವುದು ಎಂದು ವಿಡಿಯೋದಲ್ಲಿ ವಿವರಿಸಲಾಗಿದೆ.

ಫೋಟೋ -2 :

ಸಾಮಾಜಿಕ ಜಾಲತಾಣದ ಪೋಸ್ಟ್‌ನ ಎರಡನೇ ಫೋಟೋ ಉತ್ತರ ಪ್ರದೇಶದ ಬಿಜ್ನೂರ್‌ಗೆ ಸಂಬಂಧಿಸಿದ್ದಾಗಿದೆ. ಈ ಫೋಟೋವನ್ನು ಬಿಜ್ನೋರ್ ಪೊಲೀಸರು ಜುಲೈ 11, 2019ರಲ್ಲಿ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು. ಬಿಜ್ನೋರ್‌ನ ಶೆರ್ಕೋಟ್ ಠಾಣೆಯ ಪೊಲೀಸರು ಮದ್ರಸಾವೊಂದರ ಮೇಲೆ ದಾಳಿ ಮಾಡಿದ್ದು, ಶಸ್ತ್ರಾಸ್ತ್ರ ಮಾರಾಟ ದಂಧೆಯನ್ನು ಬೇಧಿಸಿದ್ದಾರೆ ಎಂದು ಪೋಸ್ಟ್‌ನಲ್ಲಿ ತಿಳಿಸಲಾಗಿತ್ತು.

ಫೋಟೋ-3 :

ಸಮವಸ್ತ್ರ ಧರಿಸಿದ ಸಿಬ್ಬಂದಿ ಮಾತ್ರೆಗಳಿರುವ ಬಾಕ್ಸ್‌ಗಳನ್ನು ಪರಿಶೀಲಿಸುತ್ತಿರುವ ಎರಡು ಫೋಟೋಗಳನ್ನು ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾಗಿದೆ. ಅವುಗಳ ಬಗ್ಗೆ ಮಾಹಿತಿ ಹುಡುಕಿದಾಗ, ಅದು “ಶ್ರೀಲಂಕಾದ ಕೊಲಂಬೋದಲ್ಲಿ ವಶಕ್ಕೆ ಪಡೆಯಲಾದ ಮಾದಕ ವಸ್ತುಗಳ ಫೋಟೋ ಎಂದು ತಿಳಿದು ಬಂದಿದೆ. ಈ ಫೋಟೋಗಳನ್ನು ಕಳೆದ ವರ್ಷ ತೆಗೆಯಲಾಗಿತ್ತು. ಡೈಲಿ ಮಿರರ್ ಆನ್‌ಲೈನ್ ಎಂಬ ಶ್ರೀಲಂಕಾ ಮಾಧ್ಯಮದ ಈ ಘಟನೆ ಕುರಿತು ವರದಿ ಮಾಡಿತ್ತು. ವರದಿಯಲ್ಲೂ ವೈರಲ್ ಆಗಿರುವ ಮಾತ್ರೆಗಳ ಫೋಟೋಗಳು ಇರುವುದನ್ನು ನೋಡಬಹುದು.

ನಾವು ನಡೆಸಿದ ಪರಿಶೀಲನೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾದ ಫೋಟೋ ಮತ್ತು ಮಾಹಿತಿ ಸಂಪೂರ್ಣ ಸುಳ್ಳು ಎಂಬುವುದು ತಿಳಿದು ಬಂದಿದೆ. ಮುಸ್ಲಿಮರ ವಿರುದ್ದ ದ್ವೇಷ ಹರಡುವ ಸಲುವಾಗಿ ಬೇರೆ ಬೇರೆ ಸಂದರ್ಭಗಳ ಫೋಟೋಗಳನ್ನು ಬಳಸಿ ಸುಳ್ಳು ಸುದ್ದಿ ಹಬ್ಬಲಾಗಿದೆ.

ಇದನ್ನೂ ಓದಿ : FACT CHECK : ಕೇರಳದ ಚರ್ಚ್‌ನಲ್ಲಿ ₹ 7 ಸಾವಿರ ಕೋಟಿ ಕಪ್ಪು ಹಣ ಪತ್ತೆಯಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...