Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಮರು ಹಿಂದೂಗಳಿಗೆ ನೀಡುವ ಆಹಾರದಲ್ಲಿ ಸಂತಾನಹೀನತೆಯ ರಾಸಾಯನಿಕ ಬೆರೆಸಿದ್ದಾರೆ ಎಂಬುವುದು ಸುಳ್ಳು

FACT CHECK : ಮುಸ್ಲಿಮರು ಹಿಂದೂಗಳಿಗೆ ನೀಡುವ ಆಹಾರದಲ್ಲಿ ಸಂತಾನಹೀನತೆಯ ರಾಸಾಯನಿಕ ಬೆರೆಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಹಿಂದೂಗಳಿಗೆ ನೀಡುವ ಆಹಾರದಲ್ಲಿ ಸಂತಾನಹೀನತೆಯ ರಾಸಾಯನಿಕ ಬೆರೆಸುತ್ತಿದ್ದ ಮುಸ್ಲಿಮರ ಸುಮಾರು 40 ಹೋಟೆಲ್‌ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

“ಜಾಗ್ರತೆ ಹಿಂದೂಗಳೇ ಜಾಗ್ರತೆ…ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರದ ಹೆದ್ದಾರಿಗಳಲ್ಲಿ 40ಕ್ಕೂ ಹೆಚ್ಚು ಮುಸ್ಲಿಂ ಡಾಬಾಗಳ ಮೇಲೆ ದಾಳಿ ನಡೆಸಿದ್ದು, ಈ ಎಲ್ಲಾ ಹೋಟೆಲ್‌ಗಳಲ್ಲಿ ಹಿಂದೂಗಳಿಗೆ ಆಹಾರದಲ್ಲಿ ಸಂತಾನಹೀನತೆಯ ರಾಸಾಯನಿಕ ಬೆರೆಸಲಾಗಿರುವುದು ಪತ್ತೆಯಾಗಿದೆ. ಆ ಹೋಟೆಲ್‌ಗಳ ಬಗ್ಗೆ ಎಚ್ಚರದಿಂದಿರಿ. ಹಿಂದೂಗಳ ಜನಸಂಖ್ಯೆಯನ್ನು ಕಡಿಮೆ ಮಾಡಲು ಮತ್ತು ಹಿಂದೂ ಧರ್ಮವನ್ನು ನಾಶಮಾಡಲು, ಇವರ ಯಾವುದೇ ಆಹಾರ ಮಳಿಗೆಗಳಲ್ಲಿ ನಮ್ಮ ಆರೋಗ್ಯಕ್ಕೆ ಹಾನಿ ಮಾಡುವ ಇಂತಹ ರಾಸಾಯನಿಕಗಳನ್ನು ಬಳಸುತ್ತಿರುವುದು ಪದೇಪದೇ ಬೆಳಕಿಗೆ ಬರುತ್ತಿವೆ. ಸಾಕಷ್ಟು ಕಡೆ ಸರ್ಕಾರಿ ಬಸ್ಸುಗಳನ್ನೂ ಇಂತಹದೇ ಹೋಟೆಲ್ ಗಳಲ್ಲಿ ನಿಲ್ಲಿಸುವ ವ್ಯವಸ್ಥೆ ಮಾಡಿಕೊಂಡಿರುತ್ತಾರೆ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಳ್ಳಲಾಗಿದೆ.

ಈ ಹಿಂದೆ ಇದೇ ಸುದ್ದಿಯನ್ನು “ತಮಿಳುನಾಡಿನ ಕೊಯಮತ್ತೂರಿನಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಹಿಂದೂಗಳಿಗೆ ಬಿರಿಯಾನಿಯಲ್ಲಿ ಪುರುಷತ್ವ ಹರಣ ಔಷಧವನ್ನು ಸೇರಿಸಿದ್ದಾನೆ. ಈ ಬಿರಿಯಾನಿ ತಿನ್ನುವ ಗಂಡಸು ಅಥವಾ ಹೆಂಗಸರಿಗೆ ಮಕ್ಕಳಾಗೋದಿಲ್ಲ. ಹೀಗಾಗಿ, ಮುಸ್ಲಿಮರಿಂದ ಯಾವುದೇ ವಸ್ತು ಖರೀದಿಸಬೇಡಿ” ಎಂದು ಪ್ರತಿಪಾದಿಸಿ ಹಂಚಿಕೊಳ್ಳಲಾಗಿತ್ತು.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳ ಪೋಸ್ಟ್ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಬೇರೆ ಬೇರೆ ಸಂದರ್ಭಗಳ ಫೋಟೋಗಳನ್ನು ಬಳಸಿ ಸುಳ್ಳು ಸುದ್ದಿ ಹಬ್ಬಿಸಿರುವುದು ನಮಗೆ ಗೊತ್ತಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾದ ಫೋಟೋಗಳ ಬಗ್ಗೆ ಮಾಹಿತಿ ಕೆಳಗಿದೆ.

ಫೋಟೋ -1 :

ಈ ಫೋಟೋ ಯೂಟ್ಯೂಬ್‌ ವಿಡಿಯೋ ಒಂದರಿಂದ ತೆಗೆದುಕೊಳ್ಳಲಾಗಿದೆ. ಸ್ಟ್ರೀಟ್‌ ಫುಡ್ ಅಫಿಷಿಯಲ್ ಎಂಬ ಯೂಟ್ಯೂಬ್‌ ಚಾನೆಲ್‌ನಲ್ಲಿ “Indian Muslim festival DUM BIRYANI Preparation for 30 People & STREET FOOD” ಎಂಬ ಶೀರ್ಷಿಕೆಯಲ್ಲಿ ಜುಲೈ 1, 2026ರಲ್ಲಿ ವಿಡಿಯೋ ಅಪ್ಲೋಡ್ ಮಾಡಲಾಗಿತ್ತು. ಅದಕ್ಕೆ ಕೊಡಲಾಗಿದ್ದ ತಂಬ್‌ನೈಲ್‌ ಫೋಟೋ ಇದಾಗಿದೆ. ಈ ಫೋಟೋವನ್ನು ತಪ್ಪಾದ ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗ್ತಿದೆ ಎಂದು ಜೂನ್ 10, 2020ರಂದು ಟೈಮ್ಸ್‌ ಆಫ್ ಇಂಡಿಯಾ ಸುದ್ದಿ ಮಾಡಿತ್ತು.

ಮುಸ್ಲಿಮರು ತಮ್ಮ ಕಾರ್ಯಕ್ರಮಗಳಿಗೆ ಮಾಡುವ ರುಚಿಯಾದ ದಮ್ ಬಿರಿಯಾನಿ ಹೇಗೆ ತಯಾರಿಸುವುದು ಎಂದು ವಿಡಿಯೋದಲ್ಲಿ ವಿವರಿಸಲಾಗಿದೆ.

ಫೋಟೋ -2 :

ಸಾಮಾಜಿಕ ಜಾಲತಾಣದ ಪೋಸ್ಟ್‌ನ ಎರಡನೇ ಫೋಟೋ ಉತ್ತರ ಪ್ರದೇಶದ ಬಿಜ್ನೂರ್‌ಗೆ ಸಂಬಂಧಿಸಿದ್ದಾಗಿದೆ. ಈ ಫೋಟೋವನ್ನು ಬಿಜ್ನೋರ್ ಪೊಲೀಸರು ಜುಲೈ 11, 2019ರಲ್ಲಿ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು. ಬಿಜ್ನೋರ್‌ನ ಶೆರ್ಕೋಟ್ ಠಾಣೆಯ ಪೊಲೀಸರು ಮದ್ರಸಾವೊಂದರ ಮೇಲೆ ದಾಳಿ ಮಾಡಿದ್ದು, ಶಸ್ತ್ರಾಸ್ತ್ರ ಮಾರಾಟ ದಂಧೆಯನ್ನು ಬೇಧಿಸಿದ್ದಾರೆ ಎಂದು ಪೋಸ್ಟ್‌ನಲ್ಲಿ ತಿಳಿಸಲಾಗಿತ್ತು.

ಫೋಟೋ-3 :

ಸಮವಸ್ತ್ರ ಧರಿಸಿದ ಸಿಬ್ಬಂದಿ ಮಾತ್ರೆಗಳಿರುವ ಬಾಕ್ಸ್‌ಗಳನ್ನು ಪರಿಶೀಲಿಸುತ್ತಿರುವ ಎರಡು ಫೋಟೋಗಳನ್ನು ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾಗಿದೆ. ಅವುಗಳ ಬಗ್ಗೆ ಮಾಹಿತಿ ಹುಡುಕಿದಾಗ, ಅದು “ಶ್ರೀಲಂಕಾದ ಕೊಲಂಬೋದಲ್ಲಿ ವಶಕ್ಕೆ ಪಡೆಯಲಾದ ಮಾದಕ ವಸ್ತುಗಳ ಫೋಟೋ ಎಂದು ತಿಳಿದು ಬಂದಿದೆ. ಈ ಫೋಟೋಗಳನ್ನು ಕಳೆದ ವರ್ಷ ತೆಗೆಯಲಾಗಿತ್ತು. ಡೈಲಿ ಮಿರರ್ ಆನ್‌ಲೈನ್ ಎಂಬ ಶ್ರೀಲಂಕಾ ಮಾಧ್ಯಮದ ಈ ಘಟನೆ ಕುರಿತು ವರದಿ ಮಾಡಿತ್ತು. ವರದಿಯಲ್ಲೂ ವೈರಲ್ ಆಗಿರುವ ಮಾತ್ರೆಗಳ ಫೋಟೋಗಳು ಇರುವುದನ್ನು ನೋಡಬಹುದು.

ನಾವು ನಡೆಸಿದ ಪರಿಶೀಲನೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾದ ಫೋಟೋ ಮತ್ತು ಮಾಹಿತಿ ಸಂಪೂರ್ಣ ಸುಳ್ಳು ಎಂಬುವುದು ತಿಳಿದು ಬಂದಿದೆ. ಮುಸ್ಲಿಮರ ವಿರುದ್ದ ದ್ವೇಷ ಹರಡುವ ಸಲುವಾಗಿ ಬೇರೆ ಬೇರೆ ಸಂದರ್ಭಗಳ ಫೋಟೋಗಳನ್ನು ಬಳಸಿ ಸುಳ್ಳು ಸುದ್ದಿ ಹಬ್ಬಲಾಗಿದೆ.

ಇದನ್ನೂ ಓದಿ : FACT CHECK : ಕೇರಳದ ಚರ್ಚ್‌ನಲ್ಲಿ ₹ 7 ಸಾವಿರ ಕೋಟಿ ಕಪ್ಪು ಹಣ ಪತ್ತೆಯಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...