Homeಚಳವಳಿದಲಿತ ಚಳವಳಿಯ ಬಕಾಲ ಕವಿ ಕೆ.ಬಿ.ಸಿದ್ದಯ್ಯ ಇನ್ನಿಲ್ಲ..

ದಲಿತ ಚಳವಳಿಯ ಬಕಾಲ ಕವಿ ಕೆ.ಬಿ.ಸಿದ್ದಯ್ಯ ಇನ್ನಿಲ್ಲ..

- Advertisement -
- Advertisement -

ಬಕಾಲ ಕವಿಯೆಂದೇ ಪ್ರಸಿದ್ದಿಯಾಗಿದ್ದ ಕೆ.ಬಿ.ಸಿದ್ದಯ್ಯ ಶುಕ್ರವಾರ ಮುಂಜಾನೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 64 ವರ್ಷ ವಯಸ್ಸಾಗಿತ್ತು. ವಿಶಿಷ್ಟ ಬರಹಗಳಿಂದಲೇ ಅವರು ಸಾಹಿತ್ಯ ವಲಯದಲ್ಲಿ ಗಮನ ಸೆಳೆದಿದ್ದರು. ಅವರು ಕಡಿಮೆ ಬರೆದರೂ ಹೆಚ್ಚು ಚರ್ಚೆಗೆ ಗ್ರಾಸವಾಗಿತ್ತು.

ಖಂಡಕಾವ್ಯವನ್ನೇ ವಿಶಿಷ್ಟವಾಗಿ ಆಯ್ಕೆ ಮಾಡಿಕೊಂಡು ದೇಶೀಯತೆಯ ಮೂಲಕ ವಿಶ್ವವನ್ನು ಕಾಣಲು ಬಯಸಿದ್ದರು. ಮೊದಲಿಗೆ ಕಾವ್ಯದಲ್ಲಿ ಆಧ್ಯಾತ್ಮವನ್ನು ತಂದ ಹೆಗ್ಗಳಿಕೆ ಕಬಿ ಅವರದ್ದು.

ಇತ್ತೀಚೆಗೆ ನಡೆದ ಅಪಘಾತದಿಂದ ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅಕ್ಟೋಬರ್ 18ರಂದು ಬೆಳಗಿನಜಾವ 4 ಗಂಟೆಗೆ ನಿಧನರಾದರೆಂಬ ಸುದ್ಧಿ ಸಾಹಿತ್ಯ ಮತ್ತು ಹೋರಾಟದ ವಲಯದಲ್ಲಿ ದಿಗ್ಬ್ರಮೆ ಮತ್ತು ದುಃಖವನ್ನು ಮೂಡಿಸಿದೆ.

ಕೆ.ಬಿ.ಸಿದ್ದಯ್ಯ ಭಾಷಣಕ್ಕೆ ನಿಂತರೆ ಅಲ್ಲೇನಾದರೂ ಹೊಸ ವಿಷಯ ಪ್ರಸ್ತಾಪವಾಗುತ್ತಿತ್ತು. ಅದು ಗಂಭೀರ ವಾಗ್ವಾದಕ್ಕೂ ಕಾರಣವಾಗುತ್ತಿತ್ತು. ಹಾಗಿದ್ದರು ಕೆಬಿ.

ದಕ್ಲಕಥಾದೇವಿ, ಬಕಾಲ, ಅನಾತ್ಮ ಗಲ್ಲೇಬಾನೆ ಈ ನಾಲ್ಕು ಖಂಡಕಾವ್ಯಗಳಾದರೆ, ಕತ್ತಲೊಡನೆ ಮಾತುಕತೆ, ಬುದ್ದನ ನಾಲ್ಕು ಸತ್ಯಗಳು ಗದ್ಯಬರಹಗಳು. ದಲಿತ ಚಳವಳಿಯೊಂದಿಗೆ ಮುನ್ನಡೆದು ಬಂದಿದ್ದ ಕೆಬಿ ರಾಜ್ಯದ ಉದ್ದಕ್ಕೂ ಸಾಹಿತ್ಯ ವಲಯದಲ್ಲಿ ಪ್ರಭಾವ ಬೀರಿದ್ದರು. ಕಿರಿದರೊಳ್ ಪಿರಿದರ್ಥ ಎಂಬಂತೆ ಕಡಿಮೆ ಕೃತಿಗಳನ್ನು ಬರೆದರೂ ಅವೆಲ್ಲವೂ ಗಮನ ಸೆಳೆದವು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಗಡಿ ತಾಲೂಕಿನ ಕೆಂಕೆಯಲ್ಲಿ ಬೈಲಪ್ಪ ಮತ್ತು ಅಂತೂರಮ್ಮನವರ ಪುತ್ರರಾಗಿ 1954 ಮಾರ್ಚ್ 2 ರಂದು ಜನಿಸಿದ ಕೆ.ಬಿ.ಸಿದ್ದಯ್ಯ ಅಲ್ಲಿಂದ ತುಮಕೂರಿಗೆ ಬಂದು ನೆಲೆಸಿದರು. ಮೈಸೂರು ವಿಶ್ವವಿದ್ಯಾಲಯಲ್ಲಿ ಇಂಗ್ಲೀಷ್ ಎಂ.ಎ. ಪದವಿ ಪಡೆದ ಅವರು ನಂತರ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ತುಮಕೂರಿನ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭವೇ ಕಾಂಗ್ರೆಸ್ ನಾಯಕ ಡಾ.ಜಿ. ಪರಮೇಶ್ವರ್ ಅವರು ಒಳಮೀಸಲಾತಿ ಪರ ಇಲ್ಲ ಎಂಬ ಕಾರಣಕ್ಕೆ ಚುನಾವಣೆಯಲ್ಲಿ ಪರಮೇಶ್ವರ್ ವಿರುದ್ಧ ಮತ ಚಲಾಯಿಸುವಂತೆ ಹೇಳಿಕೆ ನೀಡಿ ವಿವಾದ ಮೇಲೆಳೆದುಕೊಂಡಿದ್ದರು.

ಸಾಹಿತಿ ಕೆ.ಬಿ.ಸಿದ್ದಯ್ಯ ಅವರು ತಮ್ಮ ಮನೆಗೆ ಉಡುಪಿಯ ಪೇಜಾವರ ಮಠದ ವಿಶ್ವೇಶ್ವರತೀರ್ಥ ಸ್ವಾಮೀಜಿಯನ್ನು ಕರೆಸಿಕೊಂಡು ಟೀಕೆಗೂ ಗುರಿಯಾಗಿದ್ದರು. ತುಮಕೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದೇವನೂರು ಮಹಾದೇವ ಅವರನ್ನು ತೀವ್ರ ಟೀಕೆಗೆ ಗುರಿಮಾಡಿದ್ದ ಕೆಬಿ ಸಂಘರ್ಷಕ್ಕೆ ಕಾರಣರಾಗಿದ್ದರು. ರಾಜ್ಯೋತ್ಸವ ಪ್ರಶಸ್ತಿ ಸಮಿತಿಯಲ್ಲಿ ಸದಸ್ಯರಾಗಿದ್ದ ಕೆಬಿ ಪಟ್ಟಿ ಬಿಡುಗಡೆಯಾಗುವ ಮೊದಲೇ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದರು. ಬಳಿಕ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಬಂದಿತ್ತು. ಇದು ಕೂಡ ಚರ್ಚೆಗೆ ಅನುವು ಮಾಡಿಕೊಟ್ಟಿತ್ತು.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಯು.ಆರ್. ಅನಂತಮೂರ್ತಿ ಶಿಷ್ಯರಾಗಿದ್ದ ಕೆ.ಬಿ.ಸಿದ್ದಯ್ಯ ಜಿಲ್ಲಾ ಮಟ್ಟದ, ರಾಜ್ಯ ಮಟ್ಟದ ವಿಚಾರ ಸಂಕಿರಣಗಳಲ್ಲಿ ಭಾಗವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾಗಿದ್ದರು. ಕೆಬಿ ಮಣಿಪಾಲ್ ಆಸ್ಪತ್ರೆ ಸೇರಿದಾಗ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಸಿದ್ದರಾಮಯ್ಯ ಅವರ ಮೇಲೆ ಗಾಢವಾದ ಪ್ರೀತಿ ಇಟ್ಟುಕೊಂಡಿದ್ದ ಕೆಬಿ ಮೊದಲ ಬಾರಿಗೆ ದರೈಸ್ತ್ರೀ(ದಲಿತ, ರೈತ, ಸ್ತ್ರೀ) ಪ್ರಶಸ್ತಿ ನೀಡಿ ಗೌರವಿಸಿದರು. ಆ ಮೂಲಕ ಕನ್ನಡ ಶಬ್ದಕೋಶಕ್ಕೆ ದರೈಸ್ತ್ರೀ ಎಂಬ ಹೊಸ ಪದವನ್ನು ನೀಡಿದರು.

ಕೇಂದ್ರ ಸಾಹಿತ್ಯ ಅಕಾಡೆಮಿ ಕಾರ್ಯದರ್ಶಿಯಾಗಿದ್ದ ಅಗ್ರಹಾರ ಕೃಷ್ಣಮೂರ್ತಿ ಅವರನ್ನು ತುಮಕೂರಿಗೆ ಕರೆಸಿ ಉಪನ್ಯಾಸ ಕೊಡಿಸಿದ್ದರು. ತಮ್ಮದೇ ಪುಸ್ತಕ ಬಿಡುಗಡೆಗೂ ಅವರನ್ನು ಕರೆಸಿದ್ದರು. ದಿವಂಗತ ಕಿ.ರಂ. ನಾಗರಾಜ್ ಅವರು ಕೂಡ ಅನಾತ್ಮ ಕೃತಿ ಬಿಡುಗಡೆ ಕಾರ್ಯಕ್ರಮಕ್ಕೆ ಬಂದಿದ್ದರು. ಕೆಬಿ ಕಾವ್ಯದ ಆಳಅಗಲವನ್ನು ವಿಮರ್ಶಿಸಿದ್ದರು. ಬುದ್ಧ ಮತ್ತು ಅಲ್ಲಮನ ಕುರಿತು ಗಂಭೀರವಾಗಿ ಓದಿಕೊಂಡಿದ್ದರು. ಅಲ್ಲಮನ ವಚನಗಳನ್ನು ಸಭಿಕರಿಗೆ ಮನವರಿಕೆಯಾಗುವಂತೆ ವಿವರಿಸುತ್ತಿದ್ದರು. ಒಳಮೀಸಲಾತಿಯ ಹೋರಾಟದಲ್ಲೂ ಗುರುತಿಸಿಕೊಂಡಿದ್ದರು. ಎಲ್ಲರೊಂದಿಗೆ ಆಪ್ತವಾಗಿದ್ದ ಕೆಬಿ ಇಲ್ಲ ಎಂಬ ಸುದ್ಧಿ ಅರಗಿಸಿಕೊಳ್ಳಲು ಸಾಧ್ಯವಿಲ್ಲ. ಅವರಿಲ್ಲದೆ ಸಾಹಿತ್ಯ ಲೋಕಕ್ಕೆ ನಷ್ಟವಂತೂ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...