Homeಮುಖಪುಟಮುಂಬೈ ಕಾಲೇಜಿನ ಹಿಜಾಬ್ ನಿಷೇಧ ನಿರ್ಧಾರ ಎತ್ತಿ ಹಿಡಿದ ಬಾಂಬೆ ಹೈಕೋರ್ಟ್: ವಿದ್ಯಾರ್ಥಿನಿಯರ ಅರ್ಜಿ ವಜಾ

ಮುಂಬೈ ಕಾಲೇಜಿನ ಹಿಜಾಬ್ ನಿಷೇಧ ನಿರ್ಧಾರ ಎತ್ತಿ ಹಿಡಿದ ಬಾಂಬೆ ಹೈಕೋರ್ಟ್: ವಿದ್ಯಾರ್ಥಿನಿಯರ ಅರ್ಜಿ ವಜಾ

- Advertisement -
- Advertisement -

ಕ್ಯಾಂಪಸ್‌ನೊಳಗೆ ಹಿಜಾಬ್, ನಕಾಬ್, ಬುರ್ಖಾ, ಶಾಲು, ಟೋಪಿ ಇತ್ಯಾದಿಗಳನ್ನು ಧರಿಸುವುದನ್ನು ನಿಷೇಧಿಸಿದ್ದ ಮುಂಬೈ ಕಾಲೇಜಿನ ನಿರ್ಧಾರ ಪ್ರಶ್ನಿಸಿ ಒಂಬತ್ತು ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಬುಧವಾರ (ಜೂನ್ 26) ವಜಾಗೊಳಿಸಿದೆ.

ನ್ಯಾಯಮೂರ್ತಿ ಎ.ಎಸ್.ಚಂದೂರ್ಕರ್ ಮತ್ತು ನ್ಯಾಯಮೂರ್ತಿ ರಾಜೇಶ್ ಪಾಟೀಲ್ ಅವರ ವಿಭಾಗೀಯ ಪೀಠ,’ಕಾಲೇಜಿನ ಡ್ರೆಸ್‌ಕೋಡ್‌ ನಿರ್ಧಾರದಲ್ಲಿ ನಾವು ಮಧ್ಯ ಪ್ರವೇಶಿಸುವುದಿಲ್ಲ’ ಎಂದಿದೆ.

ಮುಂಬೈನ ಚೆಂಬೂರ್ ಟ್ರಾಂಬೆ ಎಜುಕೇಶನ್ ಸೊಸೈಟಿಯ ಎನ್‌ಜಿ ಆಚಾರ್ಯ ಮತ್ತು ಡಿಕೆ ಮರಾಠೆ ಕಾಲೇಜಿನ ಎರಡು ಮತ್ತು ಮೂರನೇ ವರ್ಷದ ವಿಜ್ಞಾನ ಪದವಿ ಕೋರ್ಸ್‌ನ ವಿದ್ಯಾರ್ಥಿನಿಯರು ಕಾಲೇಜಿನ ಡ್ರೆಸ್‌ಕೋಡ್‌ ನಿಯಮಗಳಲ್ಲಿ ಹಿಜಾಬ್ ಧಾರಣೆ ನಿಷೇಧಿಸಿರುವುದನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಿದ್ದರು.

ಡ್ರೆಸ್ ಕೋಡ್ ನಮ್ಮ ಮೂಲಭೂತ ಹಕ್ಕುಗಳನ್ನು, ನಿರ್ದಿಷ್ಟವಾಗಿ ಧರ್ಮ, ಗೌಪ್ಯತೆ ಮತ್ತು ವೈಯಕ್ತಿಕ ಆಯ್ಕೆಯನ್ನು ಅಭ್ಯಾಸ ಮಾಡುವ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿದಾರರು ವಾದಿಸಿದ್ದರು.

ಕಳೆದ ವಾರ ವಿಚಾರಣೆಯ ಸಂದರ್ಭದಲ್ಲಿ ಕಾಲೇಜನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಅನಿಲ್ ಅಂತೂರಕರ್ ” ಶಿಕ್ಷಣ ಸಂಸ್ಥೆಯಲ್ಲಿ ಧಾರ್ಮಿಕ ಚಿಹ್ನೆಗಳ ಪ್ರದರ್ಶನ ತಪ್ಪಿಸುವ ಸಲುವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಿಖ್ಖರ ಪೇಟದಂತಹ ಧರ್ಮದ ಮೂಲಭೂತ ಹಕ್ಕಿನ ಭಾಗವೆಂದು ಪರಿಗಣಿಸಲಾದ ವಸ್ತುಗಳಿಗೆ ಅವಕಾಶ ನೀಡಲಾಗಿದೆ” ಎಂದಿದ್ದರು.

“ಕಾಲೇಜಿನ ನಿರ್ಧಾರ ಎಲ್ಲಾ ಧರ್ಮದ ವಿದ್ಯಾರ್ಥಿಗಳಿಗೂ ಅನ್ವಯಿಸುತ್ತದೆ. ಮುಸ್ಲಿಮರನ್ನು ಗುರಿಯಾಗಿಸಿ ನಿಯಮ ರೂಪಿಸಿಲ್ಲ. ಧರ್ಮದ ಮೂಲಭೂತ ಹಕ್ಕುಗಳ ಅಡಿಯಲ್ಲಿ ಬರುವ ಧಾರ್ಮಿಕ ಚಿಹ್ನೆಗಳನ್ನು ಹೊರತು ಇತರ ವಸ್ತುಗಳ ಬಹಿರಂಗ ಪ್ರದರ್ಶನವನ್ನು ತಡೆಯುವುದು ಕಾಲೇಜಿನ ಉದ್ದೇಶವಾಗಿದೆ” ಎಂದು ಹೇಳಿದ್ದರು.

ಅರ್ಜಿದಾರರಾದ ವಿದ್ಯಾರ್ಥಿನಿಯರನ್ನು ಪ್ರತಿನಿಧಿಸಿದ್ದ ವಕೀಲ ಅಲ್ತಾಫ್ ಖಾನ್, “ಜೂನಿಯರ್ ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಮಾಡಿರುವ ಕರ್ನಾಟಕ ಹೈಕೋರ್ಟ್‌ನ ತೀರ್ಪು ಮತ್ತು ಈ ಪ್ರಕರಣ ವ್ಯತ್ಯಸ್ಥವಾಗಿದೆ. ಈ ಪ್ರಕರಣ ಸಮವಸ್ತ್ರ ಅಲ್ಲದ ಡ್ರೆಸ್‌ ಕೋಡ್‌ ಹೊಂದಿರುವ ಹಿರಿಯ ಕಾಲೇಜು ವಿದ್ಯಾರ್ಥಿಗಳಿಗೆ ಸಂಬಂಧಿಸಿದೆ. ಯಾವುದೇ ಕಾನೂನು ಅಧಿಕಾರವಿಲ್ಲದೆ ವಾಟ್ಸಾಪ್ ಸಂದೇಶದ ಮೂಲಕ ಡ್ರೆಸ್‌ ಕೋಡ್ ಹೇರಲಾಗಿದೆ. ಇದು ಅರ್ಜಿದಾರರ ಆಯ್ಕೆಯ ಹಕ್ಕು, ದೈಹಿಕ ಸಮಗ್ರತೆ ಮತ್ತು ಸ್ವಾಯತ್ತತೆಯನ್ನು ಉಲ್ಲಂಘಿಸುತ್ತದೆ” ಎಂದಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಕಾಲೇಜು ಪರ ವಕೀಲ ಅನಿಲ್ ಅಂತೂರಕರ್ “ಡ್ರೆಸ್ ಕೋಡ್ ಮುಸ್ಲಿಮರಿಗೆ ಮಾತ್ರವಲ್ಲದೆ ಎಲ್ಲಾ ವಿದ್ಯಾರ್ಥಿಗಳಿಗೆ ಅನ್ವಯಿಸುತ್ತದೆ ಎಂದು ಸಮರ್ಥಿಸಿಕೊಂಡಿದ್ದರು. ಹಿಜಾಬ್ ಧರಿಸುವುದು ಇಸ್ಲಾಂನಲ್ಲಿ ಅತ್ಯಗತ್ಯ ಧಾರ್ಮಿಕ ಆಚರಣೆಯಾಗಿದೆ ಎಂದು ಸಾಬೀತುಪಡಿಸಲು ಅರ್ಜಿದಾರರಿಗೆ ಸವಾಲು ಹಾಕಿದ್ದರು. ವಿದ್ಯಾರ್ಥಿಗಳು ಅಧ್ಯಯನದತ್ತ ಗಮನಹರಿಸಬೇಕು. ಧಾರ್ಮಿಕ ಸಂಕೇತಗಳನ್ನು ಪ್ರದರ್ಶಿಸಬಾರದು” ಎಂದು ಅವರು ವಾದಿಸಿದ್ದರು.

“ಅರ್ಜಿದಾರರು ಕಾಲೇಜಿಗೆ ಪ್ರವೇಶ ಪಡೆಯುವಾಗಲೇ ಡ್ರೆಸ್ ಕೋಡ್ ಬಗ್ಗೆ ತಿಳಿದಿದ್ದರು ಎಂದು ಅಂತೂರಕರ್ ಒತ್ತಿ ಹೇಳಿದ್ದರು. ಭವಿಷ್ಯದಲ್ಲಿ ಯಾರಾದರೂ ಇತರ ಧಾರ್ಮಿಕ ಚಿಹ್ನೆಗಳಾದ ಗದಾ (ಮಚ್ಚು) ಅಥವಾ ಭಗವಾ (ಕೇಸರಿ) ಬಟ್ಟೆಗಳನ್ನು ಧರಿಸಿದರೆ, ಅದನ್ನೂ ಕೂಡ ಕಾಲೇಜು ಆಕ್ಷೇಪಿಸುತ್ತದೆ” ಎಂದು ತಿಳಿಸಿದ್ದರು.

ಇದನ್ನೂ ಓದಿ : “ಪ್ರತಿ ಪಕ್ಷಗಳ ಧ್ವನಿಯನ್ನು ಹತ್ತಿಕ್ಕುವುದಿಲ್ಲ ಎಂಬ ನಿರೀಕ್ಷೆಯಿದೆ”: ನೂತನ ಸ್ಪೀಕರ್‌ಗೆ ರಾಹುಲ್ ಗಾಂಧಿ, ಅಖಿಲೇಶ್ ಯಾದವ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...