Homeಮುಖಪುಟಮುಂಬೈ ಕಾಲೇಜಿನ ಹಿಜಾಬ್ ನಿಷೇಧ ನಿರ್ಧಾರ ಎತ್ತಿ ಹಿಡಿದ ಬಾಂಬೆ ಹೈಕೋರ್ಟ್: ವಿದ್ಯಾರ್ಥಿನಿಯರ ಅರ್ಜಿ ವಜಾ

ಮುಂಬೈ ಕಾಲೇಜಿನ ಹಿಜಾಬ್ ನಿಷೇಧ ನಿರ್ಧಾರ ಎತ್ತಿ ಹಿಡಿದ ಬಾಂಬೆ ಹೈಕೋರ್ಟ್: ವಿದ್ಯಾರ್ಥಿನಿಯರ ಅರ್ಜಿ ವಜಾ

- Advertisement -
- Advertisement -

ಕ್ಯಾಂಪಸ್‌ನೊಳಗೆ ಹಿಜಾಬ್, ನಕಾಬ್, ಬುರ್ಖಾ, ಶಾಲು, ಟೋಪಿ ಇತ್ಯಾದಿಗಳನ್ನು ಧರಿಸುವುದನ್ನು ನಿಷೇಧಿಸಿದ್ದ ಮುಂಬೈ ಕಾಲೇಜಿನ ನಿರ್ಧಾರ ಪ್ರಶ್ನಿಸಿ ಒಂಬತ್ತು ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಬುಧವಾರ (ಜೂನ್ 26) ವಜಾಗೊಳಿಸಿದೆ.

ನ್ಯಾಯಮೂರ್ತಿ ಎ.ಎಸ್.ಚಂದೂರ್ಕರ್ ಮತ್ತು ನ್ಯಾಯಮೂರ್ತಿ ರಾಜೇಶ್ ಪಾಟೀಲ್ ಅವರ ವಿಭಾಗೀಯ ಪೀಠ,’ಕಾಲೇಜಿನ ಡ್ರೆಸ್‌ಕೋಡ್‌ ನಿರ್ಧಾರದಲ್ಲಿ ನಾವು ಮಧ್ಯ ಪ್ರವೇಶಿಸುವುದಿಲ್ಲ’ ಎಂದಿದೆ.

ಮುಂಬೈನ ಚೆಂಬೂರ್ ಟ್ರಾಂಬೆ ಎಜುಕೇಶನ್ ಸೊಸೈಟಿಯ ಎನ್‌ಜಿ ಆಚಾರ್ಯ ಮತ್ತು ಡಿಕೆ ಮರಾಠೆ ಕಾಲೇಜಿನ ಎರಡು ಮತ್ತು ಮೂರನೇ ವರ್ಷದ ವಿಜ್ಞಾನ ಪದವಿ ಕೋರ್ಸ್‌ನ ವಿದ್ಯಾರ್ಥಿನಿಯರು ಕಾಲೇಜಿನ ಡ್ರೆಸ್‌ಕೋಡ್‌ ನಿಯಮಗಳಲ್ಲಿ ಹಿಜಾಬ್ ಧಾರಣೆ ನಿಷೇಧಿಸಿರುವುದನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಿದ್ದರು.

ಡ್ರೆಸ್ ಕೋಡ್ ನಮ್ಮ ಮೂಲಭೂತ ಹಕ್ಕುಗಳನ್ನು, ನಿರ್ದಿಷ್ಟವಾಗಿ ಧರ್ಮ, ಗೌಪ್ಯತೆ ಮತ್ತು ವೈಯಕ್ತಿಕ ಆಯ್ಕೆಯನ್ನು ಅಭ್ಯಾಸ ಮಾಡುವ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿದಾರರು ವಾದಿಸಿದ್ದರು.

ಕಳೆದ ವಾರ ವಿಚಾರಣೆಯ ಸಂದರ್ಭದಲ್ಲಿ ಕಾಲೇಜನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಅನಿಲ್ ಅಂತೂರಕರ್ ” ಶಿಕ್ಷಣ ಸಂಸ್ಥೆಯಲ್ಲಿ ಧಾರ್ಮಿಕ ಚಿಹ್ನೆಗಳ ಪ್ರದರ್ಶನ ತಪ್ಪಿಸುವ ಸಲುವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಿಖ್ಖರ ಪೇಟದಂತಹ ಧರ್ಮದ ಮೂಲಭೂತ ಹಕ್ಕಿನ ಭಾಗವೆಂದು ಪರಿಗಣಿಸಲಾದ ವಸ್ತುಗಳಿಗೆ ಅವಕಾಶ ನೀಡಲಾಗಿದೆ” ಎಂದಿದ್ದರು.

“ಕಾಲೇಜಿನ ನಿರ್ಧಾರ ಎಲ್ಲಾ ಧರ್ಮದ ವಿದ್ಯಾರ್ಥಿಗಳಿಗೂ ಅನ್ವಯಿಸುತ್ತದೆ. ಮುಸ್ಲಿಮರನ್ನು ಗುರಿಯಾಗಿಸಿ ನಿಯಮ ರೂಪಿಸಿಲ್ಲ. ಧರ್ಮದ ಮೂಲಭೂತ ಹಕ್ಕುಗಳ ಅಡಿಯಲ್ಲಿ ಬರುವ ಧಾರ್ಮಿಕ ಚಿಹ್ನೆಗಳನ್ನು ಹೊರತು ಇತರ ವಸ್ತುಗಳ ಬಹಿರಂಗ ಪ್ರದರ್ಶನವನ್ನು ತಡೆಯುವುದು ಕಾಲೇಜಿನ ಉದ್ದೇಶವಾಗಿದೆ” ಎಂದು ಹೇಳಿದ್ದರು.

ಅರ್ಜಿದಾರರಾದ ವಿದ್ಯಾರ್ಥಿನಿಯರನ್ನು ಪ್ರತಿನಿಧಿಸಿದ್ದ ವಕೀಲ ಅಲ್ತಾಫ್ ಖಾನ್, “ಜೂನಿಯರ್ ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಮಾಡಿರುವ ಕರ್ನಾಟಕ ಹೈಕೋರ್ಟ್‌ನ ತೀರ್ಪು ಮತ್ತು ಈ ಪ್ರಕರಣ ವ್ಯತ್ಯಸ್ಥವಾಗಿದೆ. ಈ ಪ್ರಕರಣ ಸಮವಸ್ತ್ರ ಅಲ್ಲದ ಡ್ರೆಸ್‌ ಕೋಡ್‌ ಹೊಂದಿರುವ ಹಿರಿಯ ಕಾಲೇಜು ವಿದ್ಯಾರ್ಥಿಗಳಿಗೆ ಸಂಬಂಧಿಸಿದೆ. ಯಾವುದೇ ಕಾನೂನು ಅಧಿಕಾರವಿಲ್ಲದೆ ವಾಟ್ಸಾಪ್ ಸಂದೇಶದ ಮೂಲಕ ಡ್ರೆಸ್‌ ಕೋಡ್ ಹೇರಲಾಗಿದೆ. ಇದು ಅರ್ಜಿದಾರರ ಆಯ್ಕೆಯ ಹಕ್ಕು, ದೈಹಿಕ ಸಮಗ್ರತೆ ಮತ್ತು ಸ್ವಾಯತ್ತತೆಯನ್ನು ಉಲ್ಲಂಘಿಸುತ್ತದೆ” ಎಂದಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಕಾಲೇಜು ಪರ ವಕೀಲ ಅನಿಲ್ ಅಂತೂರಕರ್ “ಡ್ರೆಸ್ ಕೋಡ್ ಮುಸ್ಲಿಮರಿಗೆ ಮಾತ್ರವಲ್ಲದೆ ಎಲ್ಲಾ ವಿದ್ಯಾರ್ಥಿಗಳಿಗೆ ಅನ್ವಯಿಸುತ್ತದೆ ಎಂದು ಸಮರ್ಥಿಸಿಕೊಂಡಿದ್ದರು. ಹಿಜಾಬ್ ಧರಿಸುವುದು ಇಸ್ಲಾಂನಲ್ಲಿ ಅತ್ಯಗತ್ಯ ಧಾರ್ಮಿಕ ಆಚರಣೆಯಾಗಿದೆ ಎಂದು ಸಾಬೀತುಪಡಿಸಲು ಅರ್ಜಿದಾರರಿಗೆ ಸವಾಲು ಹಾಕಿದ್ದರು. ವಿದ್ಯಾರ್ಥಿಗಳು ಅಧ್ಯಯನದತ್ತ ಗಮನಹರಿಸಬೇಕು. ಧಾರ್ಮಿಕ ಸಂಕೇತಗಳನ್ನು ಪ್ರದರ್ಶಿಸಬಾರದು” ಎಂದು ಅವರು ವಾದಿಸಿದ್ದರು.

“ಅರ್ಜಿದಾರರು ಕಾಲೇಜಿಗೆ ಪ್ರವೇಶ ಪಡೆಯುವಾಗಲೇ ಡ್ರೆಸ್ ಕೋಡ್ ಬಗ್ಗೆ ತಿಳಿದಿದ್ದರು ಎಂದು ಅಂತೂರಕರ್ ಒತ್ತಿ ಹೇಳಿದ್ದರು. ಭವಿಷ್ಯದಲ್ಲಿ ಯಾರಾದರೂ ಇತರ ಧಾರ್ಮಿಕ ಚಿಹ್ನೆಗಳಾದ ಗದಾ (ಮಚ್ಚು) ಅಥವಾ ಭಗವಾ (ಕೇಸರಿ) ಬಟ್ಟೆಗಳನ್ನು ಧರಿಸಿದರೆ, ಅದನ್ನೂ ಕೂಡ ಕಾಲೇಜು ಆಕ್ಷೇಪಿಸುತ್ತದೆ” ಎಂದು ತಿಳಿಸಿದ್ದರು.

ಇದನ್ನೂ ಓದಿ : “ಪ್ರತಿ ಪಕ್ಷಗಳ ಧ್ವನಿಯನ್ನು ಹತ್ತಿಕ್ಕುವುದಿಲ್ಲ ಎಂಬ ನಿರೀಕ್ಷೆಯಿದೆ”: ನೂತನ ಸ್ಪೀಕರ್‌ಗೆ ರಾಹುಲ್ ಗಾಂಧಿ, ಅಖಿಲೇಶ್ ಯಾದವ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...