Homeಮುಖಪುಟಪ್ಯಾರಸಿಟಮಲ್ ಸೇರಿದಂತೆ 52 ಔಷಧಿಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ

ಪ್ಯಾರಸಿಟಮಲ್ ಸೇರಿದಂತೆ 52 ಔಷಧಿಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ

- Advertisement -
- Advertisement -

ಭಾರತದ ಉನ್ನತ ಔಷಧ ನಿಯಂತ್ರಣ ಸಂಸ್ಥೆ, ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (ಸಿಡಿಎಸ್‌ಸಿಒ) ನಡೆಸಿದ ಪರೀಕ್ಷೆಯಲ್ಲಿ ಜನಪ್ರಿಯ ಔಷಧಿಗಳಾದ ಪ್ಯಾರಸಿಟಮಲ್, ಪ್ಯಾಂಟೊಪ್ರಜೋಲ್
ಮತ್ತು ಹಲವಾರು ಆಂಟಿ ಬಯೋಟಿಕ್‌ಗಳು ಒಳಗೊಂಡಂತೆ ಸುಮಾರು 50 ಔಷಧಿಗಳು ಗುಣಮಟ್ಟದ ಮಾನದಂಡಗಳನ್ನು ಪೂರೈಸಲು ವಿಫಲವಾಗಿವೆ.

ಇವುಗಳಲ್ಲಿ ಸುಮಾರು 22 ಔಷಧಿಗಳನ್ನು ಹಿಮಾಚಲ ಪ್ರದೇಶದಲ್ಲಿ ಉತ್ಪಾದಿಸಲಾಗಿದೆ ಎಂದು ಸಿಡಿಎಸ್‌ಸಿಒ ಮೇ 2024ರಲ್ಲಿ ನಡೆಸಿದ ಪರೀಕ್ಷೆಯನ್ನು ಉಲ್ಲೇಖಿಸಿ ಎಚ್ಚರಿಕೆ ನೀಡಿದೆ.

ಜೈಪುರ, ಹೈದರಾಬಾದ್, ವಘೋಡಿಯಾ, ವಡೋದರಾ, ಆಂಧ್ರ ಪ್ರದೇಶ ಮತ್ತು ಇಂದೋರ್‌ನಂತಹ ಇತರ ಸ್ಥಳಗಳಿಂದ ಸಂಗ್ರಹಿಸಿದ ಔ‍ಷಧಗಳ ಮಾದರಿಯಲ್ಲೂ ಗುಣಮಟ್ಟದ ಕೊರತೆ ಕಂಡು ಬಂದಿದೆ. ಜೂನ್ 20 ರಂದು ಬಿಡುಗಡೆಯಾದ ಡ್ರಗ್ ಅಲರ್ಟ್ ಪ್ರಕಾರ, ಒಟ್ಟು 52 ಔಷಧ ಮಾದರಿಗಳು ಸಿಡಿಎಸ್‌ಸಿಒ ನಡೆಸಿದ ಗುಣಮಟ್ಟದ ಪರೀಕ್ಷೆಗಳಲ್ಲಿ ಉತ್ತೀರ್ಣಗೊಂಡಿಲ್ಲ.

ಸಾಮಾನ್ಯ ಜ್ವರ, ಮೈಕೈ ನೋವಿಗೆ ಜನರು ಬಳಸುವ ಪ್ಯಾರಸಿಟಮಲ್ ಮಾತ್ರೆಗಳು ಗುಣಮಟ್ಟದ ಮಾನದಂಡಗಳನ್ನು ಪೂರೈಸಲು ವಿಫಲವಾಗಿದೆ. ಇದರಂತೆ ಜನರು ವೈದ್ಯರ ನಿರ್ದೇಶನಗಳಿಲ್ಲದೆ ಮೆಡಿಕಲ್‌ನಿಂದ ಪಡೆದು ಬಳಸುವ ಅನೇಕ ಔಷಧಿಗಳು ಕೂಡ ಗುಣಮಟ್ಟದಿಂದ ಕೂಡಿಲ್ಲ ಎಂಬುವುದು ತಿಳಿದು ಬಂದಿದೆ. ವೈದ್ಯಕೀಯ ಸಮುದಾಯ ಮತ್ತು ಜನರಿಗೆ ಈ ಬಗ್ಗೆ ಸಿಡಿಎಸ್‌ಸಿಒ ಎಚ್ಚರಿಕೆ ನೀಡಿದೆ.

ಮಧ್ಯ ಪ್ರದೇಶದ ಉಜ್ಜಯಿನಿ ಮೂಲದ ಆಸ್ಕೋನ್ ಹೆಲ್ತ್‌ಕೇರ್‌ನಲ್ಲಿ ಕೆಳದರ್ಜೆಯ 500 ಎಂಜಿ ಪ್ಯಾರಸಿಟಮಲ್ ಮಾತ್ರೆಗಳನ್ನು ತಯಾರಿಸಲಾಗಿದೆ. ಆಸ್ಕೋನ್ ಹೆಲ್ತ್‌ಕೇರ್‌ನ ಅಧಿಕೃತ ವೆಬ್‌ಸೈಟ್ ಕಂಪನಿಯು ಅಂತಿಮ ಔಷಧೀಯ ಡೋಸೇಜ್ ಫಾರ್ಮ್‌ಗಳನ್ನು ತಯಾರಿಸುತ್ತದೆ ಎಂದು ಹೇಳುತ್ತದೆ.

ಗುಣಮಟ್ಟವಿಲ್ಲದ ಔಷಧಗಳ ಬಗ್ಗೆ ಹೆಚ್ಚುತ್ತಿರುವ ಆತಂಕ

ರೋಗ ಗ್ರಸ್ತವಾಗುವಿಕೆಗಳು ಮತ್ತು ಆತಂಕದ ಅಸ್ವಸ್ಥತೆಗಳಿಗೆ ಬಳಸುವ ಕ್ಲೋನಾಜೆಪಮ್ ಮಾತ್ರೆಗಳು, ನೋವು ನಿವಾರಕ ಡಿಕ್ಲೋಫೆನಾಕ್, ಆಂಟಿ-ಹೈಪರ್ಟೆನ್ಷನ್ ಡ್ರಗ್ ಟೆಲ್ಮಿಸಾರ್ಟನ್, ಉಸಿರಾಟದ ಕಾಯಿಲೆಗಳಿಗೆ ಬಳಸುವ ಆಂಬ್ರೋಕ್ಸೋಲ್, ಆಂಟಿಫಂಗಲ್ ಫ್ಲುಕೋನಜೋಲ್ ಮತ್ತು ವಿವಿಧ ಮಲ್ಟಿವಿಟಮಿನ್ ಮತ್ತು ಕ್ಯಾಲ್ಸಿಯಂ ಮಾತ್ರೆಗಳು ಕಳಪೆ ಗುಣಮಟ್ಟದ ಔಷಧಿಗಳ ಪಟ್ಟಿಯಲ್ಲಿ ಸೇರಿವೆ.

ಭಾರತದಲ್ಲಿ ಉತ್ಪಾದಿಸಲ್ಪಟ್ಟ ಕೆಮ್ಮಿನ ಸಿರಪ್‌ಗಳು ಸಾಗರೋತ್ತರ ಮಕ್ಕಳ ಸಾವಿಗೆ ಕಾರಣವಾಗಿರುವ ನಡುವೆ ಅನೇಕ ಔಷಧಿಗಳು ಗುಟಮಟ್ಟದಿಂದ ಕೂಡಿಲ್ಲ ಎಂಬುವುದು ಬಹಿರಂಗವಾಗಿದೆ. ಅಂಬಾಲಾದಲ್ಲಿ ಉತ್ಪಾದಿಸಲಾದ ಟೆರ್ಬುಟಲಿನ್ ಸಲ್ಫೇಟ್, ಬ್ರೋಮ್ಹೆಕ್ಸಿನ್ ಹೈಡ್ರೋಕ್ಲೋರೈಡ್, ಗ್ವೈಫೆನೆಸಿನ್ ಮತ್ತು ಮೆಂಥಾಲ್ ಸಿರಪ್ ಅನ್ನು ಒಳಗೊಂಡಿರುವ ಕೆಮ್ಮಿನ ಸಿರಪ್‌ಗಳೂ ಕೂಡ ಗುಣಮಟ್ಟದ ಕೊರತೆಯ ಔಷಧಿಗಳ ಪಟ್ಟಿಯಲ್ಲಿ ಸೇರಿವೆ. ಇದು ಆತಂಕ ಹೆಚ್ಚಿಸಿದೆ.

ಮೆಹಂದಿ ಬಗ್ಗೆಯೂ ಎಚ್ಚರಿಕೆ ನೀಡಿದ ಸಿಡಿಎಸ್‌ಸಿಒ

ಹೆಣ್ಣು ಮಕ್ಕಳು ಬಳಸುವ ಮೆಹಂದಿಯ ಕುರಿತು ಕೂಡ ಸಿಡಿಎಸ್‌ಸಿಒ ಎಚ್ಚರಿಕೆ ನೀಡಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಲಭ್ಯವಿರುವ ಬಹುತೇಕ ಮೆಹಂದಿ ಟ್ಯೂಬ್‌ಗಳು ಸೌಂದರ್ಯವರ್ಧಕಗಳ ವರ್ಗಕ್ಕೆ ನಿಗದಿಪಡಿಸಿದ ಮಾನದಂಡಗಳನ್ನು ಪೂರೈಸುತ್ತಿಲ್ಲ. ಅವುಗಳು ಕಳಪೆ ಗುಣಮಟ್ಟದ್ದಾಗಿದ್ದು, ಹಾನಿಕಾರಕ ರಾಸಾಯನಿಕಗಳಿಂದ ಕೂಡಿದೆ. ಅಂತಹ ಮೆಹಂದಿಗಳ ಬಳಕೆ ಚರ್ಮ ಮತ್ತು ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಂದು ಸಿಡಿಎಸ್‌ಸಿಒ ಹೇಳಿದೆ.

ಇದನ್ನೂ ಓದಿ : ವಿವಾಹಿತ ಮಹಿಳೆಯರ ನೇಮಕಕ್ಕೆ ನಿರಾಕರಿಸುತ್ತಿರುವ ‘ಫಾಕ್ಸ್‌ಕಾನ್’: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...