Homeಕರ್ನಾಟಕಕರ್ನಾಟಕದಲ್ಲಿ 34 ಜಿಲ್ಲೆ ಮಾಡಿದ ನಳೀನ್‌ಕುಮಾರ್ ಕಟೀಲ್: 36ಕ್ಕೆ ಏರಿಸಿದ ರಾಜ್ಯ ಬಿಜೆಪಿ...

ಕರ್ನಾಟಕದಲ್ಲಿ 34 ಜಿಲ್ಲೆ ಮಾಡಿದ ನಳೀನ್‌ಕುಮಾರ್ ಕಟೀಲ್: 36ಕ್ಕೆ ಏರಿಸಿದ ರಾಜ್ಯ ಬಿಜೆಪಿ…

ಅಸಲಿಗೆ ಪ್ರವಾಹ ಸಂಭವಿಸಿರುವುದು 17 ಜಿಲ್ಲೆಗಳಲ್ಲಿ ಮಾತ್ರ. ಅಷ್ಟು ಜಿಲ್ಲೆಗಳಿಗೆ ಸಮರ್ಪಕ ಪರಿಹಾರ ಕೊಟ್ಟರೆ ಸಾಕು, ಈ 32, 34, 36 ಜಿಲ್ಲೆಗಳ ನಾಟಕ ನಿಲ್ಲಿಸಿ ಎಂಬ ಕೂಗು ಜೋರಾಗಿ ಕೇಳಿಬಂದಿದೆ

- Advertisement -
- Advertisement -

’ಬಿದ್ದರೂ ಮೀಸೆ ಮಣ್ಣಾಗಲಿಲ್ಲ’ ಎನ್ನುವವರನ್ನು ನೋಡಿರುತ್ತೀರಿ. ಆದರೆ ಇಡೀ ಮಣ್ಣಿನಲ್ಲಿ ಹೂತು ಹಾಕಿದರೂ ಕೂಡ ಮೀಸೆ ಮಣ್ಣಾಗಲ್ಲಿಲ್ಲ ಎಂಬುವವರನ್ನು ನೀವು ನೋಡಿದ್ದೀರಾ? ಇಲ್ಲವಾದರೆ ಬನ್ನಿ ತೋರಿಸುತ್ತೇವೆ ಅವರೆ ಕರ್ನಾಟಕ ರಾಜ್ಯ ಬಿಜಿಪಿ ಘಟಕ…

ನಿನ್ನೆ ಮಾಧ್ಯಮಗಳ ಜೊತೆ ಮಾತನಾಡುವ ಭರದಲ್ಲಿ ಮೊದಲಿಗೆ 31 ಜಿಲ್ಲೆಗಳಲ್ಲಿ ಪ್ರವಾಹ ಪರಿಹಾರ ವೀಕ್ಷಣೆ ಮುಗಿದಿದೆ ಈಗ 32ನೇ ಜಿಲ್ಲೆಗೆ ಬಂದಿದ್ದೀವಿ ಎಂದು ಬಿಜೆಪಿ ರಾಜ್ಯಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಹೇಳಿದ್ದನ್ನು ಇಡೀ ರಾಜ್ಯವೇ ನೋಡಿ ನಕ್ಕಿದೆ. ಇನ್ನು ಮುಂದುವರೆದು ಮಧ್ಯಾಹ್ನದ ವೇಳೆಗೆ ಕರ್ನಾಟಕದ 34 ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದೇನೆ ಎಂದು ಹೇಳಿ ಮತ್ತೆ ನಗೆಪಾಟಿಲೀಗಿದ್ದಾರು ಮಾನ್ಯ ಅಧ್ಯಕ್ಷರು..

ಮೂರು ಬಾರಿ ಸಂಸದರು, ದೊಡ್ಡ ಪಕ್ಷವೊಂದರ ರಾಜ್ಯಧ್ಯಕ್ಷರು ಆದ ನಳಿನ್‌ ಕುಮಾರ್‌ ಕಟೀಲ್ ಪ್ರಚಾರದ ಹಪಾಹಪಿಗೆ ಬಿದ್ದು ಬಾಯಿಗೆ ಬಂದ ಸುಳ್ಳು ಹೇಳಿ ಸಿಕ್ಕಿಬಿದ್ದಿರೂ ಮೀಸೆ ಮಣ್ಣಗಲಿಲ್ಲ ಎಂದುಕೊಂಡು ಸುಮ್ಮನಿದ್ದಾರೆ. ಆದರೆ ರಾಜ್ಯ ಬಿಜೆಪಿ ಘಟಕ ಮಾತ್ರ ಸುಮ್ಮನಿರಲು ಸಿದ್ದರಿಲ್ಲ. ಘಟನೆಗೆ ತೇಪೆ ಹಚ್ಚಲು ಮತ್ತಷ್ಟು ನಗೆಪಾಟಿಲಿಗೀಡಾಗಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ ಕರ್ನಾಟಕವೂ “ಪಕ್ಷ ಎಂದರೆ ನಕಲಿ ಗಾಂಧಿ ಪರಿವಾರ, ಸಂಘಟನೆ ಎಂದರೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರುಗಳ ಆರಾಧನೆ ಹಾಗೂ ದೆಹಲಿಗೆ ಹೋಗುವುದೇ ಸಂಘಟನಾತ್ಮಕ ಪ್ರವಾಸ ಎಂದು ತಿಳಿದಿರುವ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಿಗೆ ಬಿಜೆಪಿಯ 36 ಸಂಘಟನಾತ್ಮಕ ಜಿಲ್ಲೆಗಳ ವಿಚಾರ ಹೇಗೆ ಅರ್ಥವಾದೀತು? ಅಪಪ್ರಚಾರ ಮಾಡುವುದನ್ನು ಬಿಟ್ಟು ಪಕ್ಷದ ಸಂಘಟನೆ ಕಡೆ ಗಮನ ಹರಿಸಲಿ.” ಎಂದು ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್‌ ಮೇಲೆ ಗೂಬೆ ಕೂರಿಸಲು ಮುಂದಾಗಿದೆ.

ಅಂದರೆ ಈ ಬಿಜೆಪಿಯವರಷ್ಟು ಸುಳ್ಳು ಹೇಳುವವರು ಈ ದೇಶದಲ್ಲಿ ಯಾರೂ ಇಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಪ್ರವಾಹ ಸಂಭವಿಸಿ 2 ತಿಂಗಳು ಕಳೆದಿದ್ದರೂ ಸಮರ್ಪಕ ಪರಿಹಾರ, ಪುನರ್ವಸತಿ ನೀಡದೇ ಜನ ಬೀದಿಗೆ ಬಿದ್ದಿದ್ದರೂ ಸಹ ಮಾಡಬೇಕಾದ ಕೆಲಸ ಬಿಟ್ಟು ಪ್ರಚಾರ ಮುಂದಾಗಿರುವ ಬಿಜೆಪಿ ಅಲ್ಲಿಯೂ ಕಾಂಗ್ರೆಸ್‌ ಅನ್ನು ಟೀಕಿಸುವ ಮೂಲಕ ತಮ್ಮ ನೀಚ ಬುದ್ಧಿ ಪ್ರದರ್ಶಿಸಿದೆ ಎಂದು ಹಲವಾರು ಜನ ಸಾಮಾಜಿಕ ಜಾಲತಾಣದಲ್ಲಿ ಕಿಡಿ ಕಾರಿದ್ದಾರೆ.

ಅಸಲಿಗೆ ಬಿಜೆಪಿಗೆ ಇಬ್ಬರು ಉಪಮುಖ್ಯಮಂತ್ರಿಗಳು ಮಹರಾಷ್ಟ್ರ ಚುನಾವಣಾ ಪ್ರಚಾರಕ್ಕೆ ತೆರಳಿದ್ದಾರೆ. ಇನ್ನು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಮಹಾರಾಷ್ಟ್ರದಲ್ಲಿ ಬಿಜೆಪಿ ಗೆಲ್ಲಿಸಿದರೆ ಆಲಮಟ್ಟಿಯಿಂದ ನಿಮಗೆ ನೀರು ಬಿಡುತ್ತೇವೆಂದು ಕರ್ನಾಟಕ ದ್ರೋಹಿ ಕೆಲಸ ಮಾಡುತ್ತಿದ್ದಾರೆ. ಸಾಲದು ಎಂಬಂತೆ 36 ಸಂಘಟನಾತ್ಮಕ ಜಿಲ್ಲೆಗಳೆಂದು ನಾಟಕ ಆಡುತ್ತಿದ್ದಾರೆ. ಅಸಲಿಗೆ ಪ್ರವಾಹ ಸಂಭವಿಸಿರುವುದು 17 ಜಿಲ್ಲೆಗಳಲ್ಲಿ ಮಾತ್ರ. ಅಷ್ಟು ಜಿಲ್ಲೆಗಳಿಗೆ ಸಮರ್ಪಕ ಪರಿಹಾರ ಕೊಟ್ಟರೆ ಸಾಕು, ಈ 32, 34, 36 ಜಿಲ್ಲೆಗಳ ನಾಟಕ ನಿಲ್ಲಿಸಿ ಎಂಬ ಕೂಗು ಜೋರಾಗಿ ಕೇಳಿಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...