Homeಕರ್ನಾಟಕದೊಡ್ಡಬಳ್ಳಾಪುರ| ಸಿಬ್ಬಂದಿ ತರಬೇತಿಗೆ ವಿದ್ಯಾರ್ಥಿಗಳಿಂದ ಶುಲ್ಕ ವಸೂಲಿ: ಆಕ್ರೋಶಕ್ಕೆ ಕಾರಣವಾದ ಪ್ರಾಂಶುಪಾಲರ ಆದೇಶ

ದೊಡ್ಡಬಳ್ಳಾಪುರ| ಸಿಬ್ಬಂದಿ ತರಬೇತಿಗೆ ವಿದ್ಯಾರ್ಥಿಗಳಿಂದ ಶುಲ್ಕ ವಸೂಲಿ: ಆಕ್ರೋಶಕ್ಕೆ ಕಾರಣವಾದ ಪ್ರಾಂಶುಪಾಲರ ಆದೇಶ

ಎರಡು ವರ್ಷದ ಹಿಂದಿನ ಕಾರ್ಯಕ್ರಮದ ಶುಲ್ಕ ಪಾವತಿಸುವಂತೆ ಈಗ ಸೂಚಿಸಿದ ಕಾಲೇಜು

- Advertisement -
- Advertisement -

ದೊಡ್ಡಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎರಡು ವರ್ಷದ ಹಿಂದೆ ಸಿಬ್ಬಂದಿಗೆ ತರಬೇತಿ ನಡೆಸಿದ್ದಕ್ಕೆ,ಈಗ ಶುಲ್ಕ ಪಾವತಿಸುವಂತೆ ಸೂಚಿಸಲಾಗಿದೆ. ಇದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

2022ರ ನವೆಂಬರ್ 4 ಮತ್ತು 5ರಂದು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು (ಕೆಎಸ್‌ಹೆಚ್‌ಇಸಿ) ಮತ್ತು ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯ ಜಂಟಿಯಾಗಿ ‘Financial Education and Investment Awareness Course’ವಿಷಯಕ್ಕೆ ಸಂಬಂಧಿಸಿದಂತೆ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮ ನಡೆಸಿತ್ತು. ಅದರ ಶುಲ್ಕ 150 ರೂಪಾಯಿಯನ್ನು ಪಾವತಿಸುವಂತೆ ಈಗ ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ.

2021-22ನೇ ಸಾಲಿನಲ್ಲಿ ಪ್ರವೇಶ ಪಡೆದು ಪ್ರಸ್ತುತ 6ನೇ ಸೆಮಿಸ್ಟರ್‌ ಬಿಎ, ಬಿಕಾಂ ಮತ್ತು ಬಿಎಸ್ಸಿ ತರಗತಿಗಳನ್ನು ವ್ಯಾಸಂಗ ಮಾಡುತ್ತಿರುವ (ಪರಿಶಿಷ್ಟ ಜಾತಿ ಮತ್ತು ವರ್ಗದ ವಿದ್ಯಾರ್ಥಿಗಳನ್ನು ಹೊರತುಪಡಿಸಿ) ವಿದ್ಯಾರ್ಥಿಗಳಿಗೆ 150 ರೂ. ಪಾವತಿಸುವಂತೆ ಪ್ರಾಂಶುಪಾಲರ ಕಚೇರಿಯಿಂದ 26 ಜೂನ್ 2024ರಂದು ಆದೇಶ ಹೊರಡಿಸಲಾಗಿದೆ.

ಪ್ರಸ್ತುತ ವಿದ್ಯಾರ್ಥಿಗಳು 6ನೇ ಸೆಮಿಸ್ಟರ್‌ ಪರೀಕ್ಷೆಗೆ ಅಣಿಯಾಗಿದ್ದು, ಪರೀಕ್ಷಾ ಶುಲ್ಕದ ಜೊತೆಗೆ ಹೆಚ್ಚುವರಿ 150 ರೂ. ಪಾವತಿಸುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಹಾಲ್‌ ಟಿಕೆಟ್ ತಡೆ ಹಿಡಿಯುವ ಎಚ್ಚರಿಕೆ ನೀಡಲಾಗಿದೆ. ಇದರಿಂದ ಬಡ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ಬಿಎಸ್ಸಿ ಕೊನೆಯ ಸೆಮಿಸ್ಟರ್ ವಿದ್ಯಾರ್ಥಿ ವಿನಾಯಕ್ ” ಖಾಸಗಿ ಕಾಲೇಜುಗಳಲ್ಲಿ ಶುಲ್ಕ ಪಾವತಿಸಲು ಸಾಧ್ಯವಿಲ್ಲ ಎಂದು ನಾವು ಸರ್ಕಾರಿ ಕಾಲೇಜಿಗೆ ಸೇರಿದ್ದೇವೆ. ಇಲ್ಲೂ ಈ ರೀತಿ ಹೆಚ್ಚುವರಿ ಹಣ ಪಾವತಿಸಲು ಸೂಚಿಸಿದರೆ ಬಡ ವಿದ್ಯಾರ್ಥಿಗಳಾದ ನಾವು ಏನು ಮಾಡುವುದು? ಎಂದು ಅಳಲು ತೋಡಿಕೊಂಡಿದ್ದಾರೆ.

“ಪ್ರಸ್ತುತ 6ನೇ ಸೆಮಿಸ್ಟರ್ ಪರೀಕ್ಷೆ ಹತ್ತಿರ ಬಂದಿದೆ. ಆದರೆ, ನಮಗೆ 5ನೇ ಸೆಮಿಸ್ಟರ್ ಫಲಿತಾಂಶವನ್ನೇ ತಿಳಿಸಿಲ್ಲ. 6ನೇ ಸೆಮಿಸ್ಟರ್ ಪರೀಕ್ಷೆ ಕೂಡ ತಡವಾಗಿ ನಡೆಸಲಾಗ್ತಿದೆ. ಇದರಿಂದ ಸ್ನಾತಕ್ಕೋತ್ತರ ತರಗತಿಗೆ ಪ್ರವೇಶ ಪಡೆಯಲು ನಮಗೆ ಸಮಸ್ಯೆಯಾಗ್ತಿದೆ” ಎಂದಿದ್ದಾರೆ.

ಬಿಎ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿ ಮನೋಜ್ ಮಾತನಾಡಿ “ವರ್ಷಕ್ಕೆ 2,700 ರೂಪಾಯಿ ಕಾಲೇಜು ಶುಲ್ಕ ಪಾವತಿಸಿದ್ದೇವೆ. 5ನೇ ಸೆಮಿಸ್ಟರ್ ಪರೀಕ್ಷೆಗೆ 750 ರೂ. ಶುಲ್ಕ ಪಾವತಿಸಿದ್ದೇವೆ. ಈಗ 6ನೇ ಸೆಮಿಸ್ಟರ್‌ಗೆ ಶುಲ್ಕ ಹೆಚ್ಚಿಸಿ 950 ರೂ. ಮಾಡಲಾಗಿದೆ. ಅದರ ಜೊತೆಗೆ ಹೆಚ್ಚುವರಿಯಾಗಿ 150 ರೂ. ಪಾವತಿಸುವಂತೆ ಸೂಚಿಸಲಾಗಿದೆ. ಇದು ನಮಗೆ ಬಹಳ ಹೊರೆಯಾಗ್ತಿದೆ. 150 ರೂ. ಪಾವತಿಸದಿದ್ದರೆ ಹಾಲ್ ಟಿಕೆಟ್ ನೀಡುವುದಿಲ್ಲ ಎಂದು ಹೆದರಿಸಿದ್ದಾರೆ. ಇದರಿಂದ ನಾವು ಇಕ್ಕಟ್ಟಿನ ಪರಿಸ್ಥಿಗೆ ಸಿಲುಕಿದ್ದೇವೆ” ಎಂದು ತಿಳಿಸಿದ್ದಾರೆ.

ಬಿಎ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿನಿ ಸ್ನೇಹಾ ಮಾತನಾಡಿ, “ಎರಡು ವರ್ಷದ ಹಿಂದೆ ಸಿಬ್ಬಂದಿಗೆ ತರಬೇತಿ ನಡೆಸಿದ್ದಕ್ಕೆ ಈಗ ನಮ್ಮಿಂದ ಶುಲ್ಕ ವಸೂಲಿ ಮಾಡಲಾಗ್ತಿದೆ. ಗ್ರಾಮೀಣ ಬಡ ವಿದ್ಯಾರ್ಥಿಗಳಾದ ನಮಗೆ ಪರೀಕ್ಷಾ ಶುಲ್ಕದ ಜೊತೆಗೆ ಹೆಚ್ಚುವರಿ ಹಣ ಪಾವತಿಸಲು ಸಾಧ್ಯವಿಲ್ಲ. ನಾವು ಹೆಚ್ಚುವರಿ ಹಣ ಪಾವತಿಸುವುದೂ ಇಲ್ಲ. ಯಾವುದೇ ವಿದ್ಯಾರ್ಥಿಯೂ ಹಣ ಪಾವತಿಸಿಲ್ಲ. ಮುಂದಿನ ನಡೆಯ ಬಗ್ಗೆ ನಾವು ಚರ್ಚಿಸುತಿದ್ದೇವೆ” ಎಂದಿದ್ದಾರೆ.

ದೂರವಾಣಿ ಮೂಲಕ ನಾನುಗೌರಿ.ಕಾಂ ಜೊತೆ ಮಾತನಾಡಿರುವ ಮೂವರೂ ಕೂಡ “ನಮ್ಮಂತೆ ನೂರಾರು ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ” ಎಂದು ಅಳಲು ತೋಡಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಲೇಜಿನ ಪ್ರಾಂಶುಪಾಲ ಡಾ.ಸದಾಶಿವ ರಾಮಚಂದ್ರಗೌಡ ಅವರು “ಇದರಲ್ಲಿ ನಮ್ಮ ಪಾತ್ರವೇನು ಇಲ್ಲ. ವಿಶ್ವವಿದ್ಯಾನಿಲಯದ ಆದೇಶವನ್ನು ನಾವು ಪಾಲಿಸಿದ್ದೇವೆ. ಕೆಎಸ್‌ಹೆಚ್‌ಇಸಿ ಮತ್ತು ವಿವಿ ತರಬೇತಿ ನಡೆಸಿತ್ತು. ಈಗ ಶುಲ್ಕ ವಸೂಲಿ ಮಾಡುವಂತೆ ನಮಗೆ ಸೂಚಿಸಿದೆ. ನಾವು ನಮ್ಮ ಕರ್ತವ್ಯ ನಿರ್ವಹಿಸಿದ್ದೇವೆ. ಈ ಬಗ್ಗೆ ವಿವಿಯನ್ನೇ ವಿಚಾರಿಸಬೇಕಿದೆ” ಎಂದು ಹೇಳಿದ್ದಾರೆ.

5ನೇ ಸೆಮಿಸ್ಟರ್ ಫಲಿತಾಂಶ ಪ್ರಕಟಿಸಿಲ್ಲ ಎಂಬ ವಿದ್ಯಾರ್ಥಿಗಳ ಆರೋಪದ ಬಗ್ಗೆ ಮಾತನಾಡಿದ ಅವರು ” ಕೋವಿಡ್ ಬಳಿಕ ಶೈಕ್ಷಣಿಕ ವರ್ಷ ಇನ್ನೂ ಹಳಿಗೆ ಬಂದಿಲ್ಲ. ಮುಂದಿನ ವರ್ಷದಿಂದ ಎಲ್ಲವೂ ಹಿಂದಿನ ರೀತಿಗೆ ಮರಳಲಿದೆ. ಜುಲೈ ತಿಂಗಳಲ್ಲಿ ಈ ಶೈಕ್ಷಣಿಕ ವರ್ಷ ಕೊನೆಗೊಳ್ಳಲಿದೆ. ಅದಕ್ಕೂ ಮುನ್ನ ವಿದ್ಯಾರ್ಥಿಗಳ ಎಲ್ಲಾ ಫಲಿತಾಂಶ ಪ್ರಕಟಗೊಳ್ಳಲಿದೆ. ಸ್ನಾತಕ್ಕೋತ್ತರ ಪದವಿ ಪ್ರವೇಶಕ್ಕೆ ಯಾವುದೇ ಅಡಚಣೆಯಾಗುವುದಿಲ್ಲ” ಎಂದಿದ್ದಾರೆ.

ಇದನ್ನೂ ಓದಿ : 7ನೇ ತರಗತಿ ಮಕ್ಕಳಿಗೆ ನಟಿ ತಮನ್ನಾ ಕುರಿತ ಪಾಠ : ಪೋಷಕರಿಂದ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...