Homeಕರ್ನಾಟಕದೊಡ್ಡಬಳ್ಳಾಪುರ| ಸಿಬ್ಬಂದಿ ತರಬೇತಿಗೆ ವಿದ್ಯಾರ್ಥಿಗಳಿಂದ ಶುಲ್ಕ ವಸೂಲಿ: ಆಕ್ರೋಶಕ್ಕೆ ಕಾರಣವಾದ ಪ್ರಾಂಶುಪಾಲರ ಆದೇಶ

ದೊಡ್ಡಬಳ್ಳಾಪುರ| ಸಿಬ್ಬಂದಿ ತರಬೇತಿಗೆ ವಿದ್ಯಾರ್ಥಿಗಳಿಂದ ಶುಲ್ಕ ವಸೂಲಿ: ಆಕ್ರೋಶಕ್ಕೆ ಕಾರಣವಾದ ಪ್ರಾಂಶುಪಾಲರ ಆದೇಶ

ಎರಡು ವರ್ಷದ ಹಿಂದಿನ ಕಾರ್ಯಕ್ರಮದ ಶುಲ್ಕ ಪಾವತಿಸುವಂತೆ ಈಗ ಸೂಚಿಸಿದ ಕಾಲೇಜು

- Advertisement -
- Advertisement -

ದೊಡ್ಡಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎರಡು ವರ್ಷದ ಹಿಂದೆ ಸಿಬ್ಬಂದಿಗೆ ತರಬೇತಿ ನಡೆಸಿದ್ದಕ್ಕೆ,ಈಗ ಶುಲ್ಕ ಪಾವತಿಸುವಂತೆ ಸೂಚಿಸಲಾಗಿದೆ. ಇದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

2022ರ ನವೆಂಬರ್ 4 ಮತ್ತು 5ರಂದು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು (ಕೆಎಸ್‌ಹೆಚ್‌ಇಸಿ) ಮತ್ತು ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯ ಜಂಟಿಯಾಗಿ ‘Financial Education and Investment Awareness Course’ವಿಷಯಕ್ಕೆ ಸಂಬಂಧಿಸಿದಂತೆ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮ ನಡೆಸಿತ್ತು. ಅದರ ಶುಲ್ಕ 150 ರೂಪಾಯಿಯನ್ನು ಪಾವತಿಸುವಂತೆ ಈಗ ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ.

2021-22ನೇ ಸಾಲಿನಲ್ಲಿ ಪ್ರವೇಶ ಪಡೆದು ಪ್ರಸ್ತುತ 6ನೇ ಸೆಮಿಸ್ಟರ್‌ ಬಿಎ, ಬಿಕಾಂ ಮತ್ತು ಬಿಎಸ್ಸಿ ತರಗತಿಗಳನ್ನು ವ್ಯಾಸಂಗ ಮಾಡುತ್ತಿರುವ (ಪರಿಶಿಷ್ಟ ಜಾತಿ ಮತ್ತು ವರ್ಗದ ವಿದ್ಯಾರ್ಥಿಗಳನ್ನು ಹೊರತುಪಡಿಸಿ) ವಿದ್ಯಾರ್ಥಿಗಳಿಗೆ 150 ರೂ. ಪಾವತಿಸುವಂತೆ ಪ್ರಾಂಶುಪಾಲರ ಕಚೇರಿಯಿಂದ 26 ಜೂನ್ 2024ರಂದು ಆದೇಶ ಹೊರಡಿಸಲಾಗಿದೆ.

ಪ್ರಸ್ತುತ ವಿದ್ಯಾರ್ಥಿಗಳು 6ನೇ ಸೆಮಿಸ್ಟರ್‌ ಪರೀಕ್ಷೆಗೆ ಅಣಿಯಾಗಿದ್ದು, ಪರೀಕ್ಷಾ ಶುಲ್ಕದ ಜೊತೆಗೆ ಹೆಚ್ಚುವರಿ 150 ರೂ. ಪಾವತಿಸುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಹಾಲ್‌ ಟಿಕೆಟ್ ತಡೆ ಹಿಡಿಯುವ ಎಚ್ಚರಿಕೆ ನೀಡಲಾಗಿದೆ. ಇದರಿಂದ ಬಡ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ಬಿಎಸ್ಸಿ ಕೊನೆಯ ಸೆಮಿಸ್ಟರ್ ವಿದ್ಯಾರ್ಥಿ ವಿನಾಯಕ್ ” ಖಾಸಗಿ ಕಾಲೇಜುಗಳಲ್ಲಿ ಶುಲ್ಕ ಪಾವತಿಸಲು ಸಾಧ್ಯವಿಲ್ಲ ಎಂದು ನಾವು ಸರ್ಕಾರಿ ಕಾಲೇಜಿಗೆ ಸೇರಿದ್ದೇವೆ. ಇಲ್ಲೂ ಈ ರೀತಿ ಹೆಚ್ಚುವರಿ ಹಣ ಪಾವತಿಸಲು ಸೂಚಿಸಿದರೆ ಬಡ ವಿದ್ಯಾರ್ಥಿಗಳಾದ ನಾವು ಏನು ಮಾಡುವುದು? ಎಂದು ಅಳಲು ತೋಡಿಕೊಂಡಿದ್ದಾರೆ.

“ಪ್ರಸ್ತುತ 6ನೇ ಸೆಮಿಸ್ಟರ್ ಪರೀಕ್ಷೆ ಹತ್ತಿರ ಬಂದಿದೆ. ಆದರೆ, ನಮಗೆ 5ನೇ ಸೆಮಿಸ್ಟರ್ ಫಲಿತಾಂಶವನ್ನೇ ತಿಳಿಸಿಲ್ಲ. 6ನೇ ಸೆಮಿಸ್ಟರ್ ಪರೀಕ್ಷೆ ಕೂಡ ತಡವಾಗಿ ನಡೆಸಲಾಗ್ತಿದೆ. ಇದರಿಂದ ಸ್ನಾತಕ್ಕೋತ್ತರ ತರಗತಿಗೆ ಪ್ರವೇಶ ಪಡೆಯಲು ನಮಗೆ ಸಮಸ್ಯೆಯಾಗ್ತಿದೆ” ಎಂದಿದ್ದಾರೆ.

ಬಿಎ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿ ಮನೋಜ್ ಮಾತನಾಡಿ “ವರ್ಷಕ್ಕೆ 2,700 ರೂಪಾಯಿ ಕಾಲೇಜು ಶುಲ್ಕ ಪಾವತಿಸಿದ್ದೇವೆ. 5ನೇ ಸೆಮಿಸ್ಟರ್ ಪರೀಕ್ಷೆಗೆ 750 ರೂ. ಶುಲ್ಕ ಪಾವತಿಸಿದ್ದೇವೆ. ಈಗ 6ನೇ ಸೆಮಿಸ್ಟರ್‌ಗೆ ಶುಲ್ಕ ಹೆಚ್ಚಿಸಿ 950 ರೂ. ಮಾಡಲಾಗಿದೆ. ಅದರ ಜೊತೆಗೆ ಹೆಚ್ಚುವರಿಯಾಗಿ 150 ರೂ. ಪಾವತಿಸುವಂತೆ ಸೂಚಿಸಲಾಗಿದೆ. ಇದು ನಮಗೆ ಬಹಳ ಹೊರೆಯಾಗ್ತಿದೆ. 150 ರೂ. ಪಾವತಿಸದಿದ್ದರೆ ಹಾಲ್ ಟಿಕೆಟ್ ನೀಡುವುದಿಲ್ಲ ಎಂದು ಹೆದರಿಸಿದ್ದಾರೆ. ಇದರಿಂದ ನಾವು ಇಕ್ಕಟ್ಟಿನ ಪರಿಸ್ಥಿಗೆ ಸಿಲುಕಿದ್ದೇವೆ” ಎಂದು ತಿಳಿಸಿದ್ದಾರೆ.

ಬಿಎ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿನಿ ಸ್ನೇಹಾ ಮಾತನಾಡಿ, “ಎರಡು ವರ್ಷದ ಹಿಂದೆ ಸಿಬ್ಬಂದಿಗೆ ತರಬೇತಿ ನಡೆಸಿದ್ದಕ್ಕೆ ಈಗ ನಮ್ಮಿಂದ ಶುಲ್ಕ ವಸೂಲಿ ಮಾಡಲಾಗ್ತಿದೆ. ಗ್ರಾಮೀಣ ಬಡ ವಿದ್ಯಾರ್ಥಿಗಳಾದ ನಮಗೆ ಪರೀಕ್ಷಾ ಶುಲ್ಕದ ಜೊತೆಗೆ ಹೆಚ್ಚುವರಿ ಹಣ ಪಾವತಿಸಲು ಸಾಧ್ಯವಿಲ್ಲ. ನಾವು ಹೆಚ್ಚುವರಿ ಹಣ ಪಾವತಿಸುವುದೂ ಇಲ್ಲ. ಯಾವುದೇ ವಿದ್ಯಾರ್ಥಿಯೂ ಹಣ ಪಾವತಿಸಿಲ್ಲ. ಮುಂದಿನ ನಡೆಯ ಬಗ್ಗೆ ನಾವು ಚರ್ಚಿಸುತಿದ್ದೇವೆ” ಎಂದಿದ್ದಾರೆ.

ದೂರವಾಣಿ ಮೂಲಕ ನಾನುಗೌರಿ.ಕಾಂ ಜೊತೆ ಮಾತನಾಡಿರುವ ಮೂವರೂ ಕೂಡ “ನಮ್ಮಂತೆ ನೂರಾರು ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ” ಎಂದು ಅಳಲು ತೋಡಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಲೇಜಿನ ಪ್ರಾಂಶುಪಾಲ ಡಾ.ಸದಾಶಿವ ರಾಮಚಂದ್ರಗೌಡ ಅವರು “ಇದರಲ್ಲಿ ನಮ್ಮ ಪಾತ್ರವೇನು ಇಲ್ಲ. ವಿಶ್ವವಿದ್ಯಾನಿಲಯದ ಆದೇಶವನ್ನು ನಾವು ಪಾಲಿಸಿದ್ದೇವೆ. ಕೆಎಸ್‌ಹೆಚ್‌ಇಸಿ ಮತ್ತು ವಿವಿ ತರಬೇತಿ ನಡೆಸಿತ್ತು. ಈಗ ಶುಲ್ಕ ವಸೂಲಿ ಮಾಡುವಂತೆ ನಮಗೆ ಸೂಚಿಸಿದೆ. ನಾವು ನಮ್ಮ ಕರ್ತವ್ಯ ನಿರ್ವಹಿಸಿದ್ದೇವೆ. ಈ ಬಗ್ಗೆ ವಿವಿಯನ್ನೇ ವಿಚಾರಿಸಬೇಕಿದೆ” ಎಂದು ಹೇಳಿದ್ದಾರೆ.

5ನೇ ಸೆಮಿಸ್ಟರ್ ಫಲಿತಾಂಶ ಪ್ರಕಟಿಸಿಲ್ಲ ಎಂಬ ವಿದ್ಯಾರ್ಥಿಗಳ ಆರೋಪದ ಬಗ್ಗೆ ಮಾತನಾಡಿದ ಅವರು ” ಕೋವಿಡ್ ಬಳಿಕ ಶೈಕ್ಷಣಿಕ ವರ್ಷ ಇನ್ನೂ ಹಳಿಗೆ ಬಂದಿಲ್ಲ. ಮುಂದಿನ ವರ್ಷದಿಂದ ಎಲ್ಲವೂ ಹಿಂದಿನ ರೀತಿಗೆ ಮರಳಲಿದೆ. ಜುಲೈ ತಿಂಗಳಲ್ಲಿ ಈ ಶೈಕ್ಷಣಿಕ ವರ್ಷ ಕೊನೆಗೊಳ್ಳಲಿದೆ. ಅದಕ್ಕೂ ಮುನ್ನ ವಿದ್ಯಾರ್ಥಿಗಳ ಎಲ್ಲಾ ಫಲಿತಾಂಶ ಪ್ರಕಟಗೊಳ್ಳಲಿದೆ. ಸ್ನಾತಕ್ಕೋತ್ತರ ಪದವಿ ಪ್ರವೇಶಕ್ಕೆ ಯಾವುದೇ ಅಡಚಣೆಯಾಗುವುದಿಲ್ಲ” ಎಂದಿದ್ದಾರೆ.

ಇದನ್ನೂ ಓದಿ : 7ನೇ ತರಗತಿ ಮಕ್ಕಳಿಗೆ ನಟಿ ತಮನ್ನಾ ಕುರಿತ ಪಾಠ : ಪೋಷಕರಿಂದ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...