Homeಫ್ಯಾಕ್ಟ್‌ಚೆಕ್FACT CHECK : ಸಂಸತ್‌ನಲ್ಲಿ ರಾಷ್ಟ್ರಗೀತೆ ನುಡಿಸುವ ವೇಳೆ ರಾಹುಲ್ ಗಾಂಧಿ ಹಾಜರಿರಲಿಲ್ಲ ಎಂಬುವುದು ಸುಳ್ಳು

FACT CHECK : ಸಂಸತ್‌ನಲ್ಲಿ ರಾಷ್ಟ್ರಗೀತೆ ನುಡಿಸುವ ವೇಳೆ ರಾಹುಲ್ ಗಾಂಧಿ ಹಾಜರಿರಲಿಲ್ಲ ಎಂಬುವುದು ಸುಳ್ಳು

- Advertisement -
- Advertisement -

ಹೊಸದಾಗಿ ಚುನಾಯಿತರಾದ ಸಂಸತ್ತಿನ ಸದಸ್ಯರು ಜೂನ್ 24 ಮತ್ತು 26 ರ ನಡುವೆ ದೆಹಲಿಯ ನೂತನ ಸಂಸತ್ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಂಸದರು ಪ್ರಮಾಣ ವಚನ ಸ್ವೀಕರಿಸುವ ಮುನ್ನ ಲೋಕಸಭೆಯಲ್ಲಿ ರಾಷ್ಟ್ರಗೀತೆಯನ್ನು ನುಡಿಸಲಾಗಿದೆ. ಈ ವೇಳೆ ಕಾಂಗ್ರೆಸ್ ಸಂಸದ ಹಾಗೂ ಪ್ರಸ್ತುತ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ ಸದನದಲ್ಲಿ ಹಾಜರಿರಲಿಲ್ಲ ಎಂದು 56 ಸೆಕೆಂಡುಗಳ ವಿಡಿಯೋ ಕ್ಲಿಪ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ.

ರಾಷ್ಟ್ರಗೀತೆ ಪೂರ್ಣಗೊಂಡ ಬಳಿಕ ರಾಹುಲ್ ಗಾಂಧಿ ತಡವಾಗಿ ಸದನ ಪ್ರವೇಶಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಬಿಜೆಪಿ ಆಂಧ್ರ ಪ್ರದೇಶದ ರಾಜ್ಯ ಉಪಾಧ್ಯಕ್ಷ ವಿಷ್ಣು ವರ್ಧನ್ ರೆಡ್ಡಿ (@SVishnuReddy) ಜೂನ್ 24 ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದು, “ಶೆಹಝಾದ (ರಾಜಕುಮಾರ) ರಾಹುಲ್ ಗಾಂಧಿಯವರು ತಾನು ರಾಷ್ಟ್ರಗೀತೆಗಿಂತ ದೊಡ್ಡವನು ಎಂದು ಭಾವಿಸಿದ್ದಾರೆ. ಅವರು ತಡವಾಗಿ ಬಂದು ರಾಷ್ಟ್ರಗೀತೆ ಮುಗಿಯುತ್ತಿದ್ದಂತೆ ಸಂಸತ್ತಿಗೆ ಪ್ರವೇಶಿಸಿದ್ದಾರೆ” ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್ 2.5 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ ಮತ್ತು 1,000 ಕ್ಕೂ ಹೆಚ್ಚು ಬಾರಿ ರೀಟ್ವೀಟ್ ಆಗಿದೆ.

ರಾಷ್ಟ್ರಗೀತೆ ಮುಗಿದ ನಂತರ ರಾಹುಲ್ ಗಾಂಧಿ ಸಂಸತ್ತಿಗೆ ಬಂದರು ಎಂದು ಬರೆದುಕೊಳ್ಳುವ ಮೂಲಕ ಎಕ್ಸ್‌ನಲ್ಲಿ ಹಲವಾರು ಇತರ ಬಳಕೆದಾರರು ಅದೇ ವಿಡಿಯೋ ಕ್ಲಿಪ್ ಅನ್ನು ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಇದಕ್ಕಾಗಿ 18ನೇ ಲೋಕಸಭೆಯ ಅಧಿವೇಶನ ಆರಂಭದ ಸಂಪೂರ್ಣ ವಿಡಿಯೋವನ್ನು ಸಂಸದ್ ಟಿವಿಯ ಯೂಟ್ಯೂಬ್ ಚಾನೆಲ್‌ನಲ್ಲಿ ವೀಕ್ಷಿಸಿದ್ದೇವೆ.

ಜೂನ್ 24ರಂದು ಅಪ್ಲೋಡ್ ಮಾಡಲಾದ 9 ನಿಮಿಷ 40 ಸೆಕೆಂಡ್‌ನ ವಿಡಿಯೋವೊಂದರಲ್ಲಿ 3 ನಿಮಿಷ 7 ಸೆಕೆಂಡ್‌ನಿಂದ ರಾಷ್ಟ್ರಗೀತೆ ಆರಂಭವಾಗುತ್ತದೆ. 3 ನಿಮಿಷ 18 ಸೆಕೆಂಡ್‌ನಲ್ಲಿ ಇಂಡಿಯಾ ಮೈತ್ರಿಕೂಟದ ಸಂಸದರು ಫ್ರೇಮ್‌ನಲ್ಲಿ ಗೋಚರಿಸುತ್ತಾರೆ. ಈ ವೇಳೆ ಹಿಂಭಾಗದ ಎಡ ಮೂಲೆಯಲ್ಲಿ, ಸಂಸದ್ ಟಿವಿ ಲೋಗೋದ ಹಿಂದೆ ರಾಹುಲ್ ಗಾಂಧಿಯಂತೆಯೇ ಬಿಳಿ ಟಿ-ಶರ್ಟ್ ಮತ್ತು ಕಪ್ಪು ಪ್ಯಾಂಟ್ ಧರಿಸಿರುವ ವ್ಯಕ್ತಿಯನ್ನು ಕಾಣಬಹುದು.

ವಿಡಿಯೋದಲ್ಲಿ 4 ನಿಮಿಷ 13 ಸೆಕೆಂಡ್‌ನಲ್ಲಿ ರಾಹುಲ್ ಗಾಂಧಿ ಸ್ಪೀಕರ್ ಪೀಠದ ಬಲ ಭಾಗದಲ್ಲಿ ಆಗಮಿಸುವುದು ಇದೆ. ಸಂಸದ್ ಟಿವಿಯ ಲೋಗೋ ಇರುವ ಬದಿಯಿಂದಲೇ ರಾಹುಲ್ ಮುಂಭಾಗಕ್ಕೆ ಬಂದಿರುವುದು ಸ್ಪಷ್ಟವಾಗಿ ವಿಡಿಯೋದಲ್ಲಿ ಗೊತ್ತಾಗುತ್ತದೆ.

ಅಂದರೆ, ರಾಹುಲ್ ಗಾಂಧಿ ರಾಷ್ಟ್ರಗೀತೆ ನುಡಿಸುವ ವೇಳೆ ಸ್ಪೀಕರ್ ಪೀಠದಿಂದ ನೋಡಿದರೆ ಎಡಭಾಗ ಮತ್ತು ಕೆಳಗಿನಿಂದ ನೋಡಿದರೆ ಬಲಭಾಗದಲ್ಲಿ ಹಿಂಬಂದಿ ನಿಂತಿದ್ದರು. ಸಂಸದ್ ಟಿವಿಯ ಲೋಗೋದ ಹಿಂದೆ ಬಿಳಿ ಟಿ-ಶರ್ಟ್ ಮತ್ತು ಕಪ್ಪು ಪ್ಯಾಂಟ್ ಧರಿಸಿ ನಿಂತಿದ್ದ ವ್ಯಕ್ತಿ ಅವರೇ. ರಾಷ್ಟ್ರಗೀತೆ ಮುಗಿದ ಬಳಿಕ ರಾಹುಲ್ ತನ್ನ ಆಸನಕ್ಕೆ ಆಗಮಿಸಿದ್ದಾರೆ.

ವಿಷ್ಣು ವರ್ಧನ್ ರೆಡ್ಡಿಯ ಪೋಸ್ಟ್‌ಗೆ ಪ್ರತಿಕ್ರಿಯೆ ಕೊಟ್ಟಿರುವ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿವಿ “ಸುಳ್ಳುಗಳನ್ನು ಹರಡುವುದನ್ನು ನಿಲ್ಲಿಸಿ. ರಾಹುಲ್ ಗಾಂಧಿಯವರು ರಾಷ್ಟ್ರಗೀತೆ ನುಡಿಸುವ ವೇಳೆ ಸಂಪೂರ್ಣವಾಗಿ ಹಾಜರಿದ್ದರು. ವಿಡಿಯೋದ ಆರಂಭದಲ್ಲಿ ಸದನದ ಕೊನೆಯಲ್ಲಿ ಎಡ ಮೂಲೆಯಲ್ಲಿ ಅವರು ನಿಂತಿರುವುದನ್ನು ಕಾಣಬಹುದು.” ಸ್ಪಷ್ಟಪಡಿಸಿದ್ದಾರೆ.

ನಾವು ನಡೆಸಿದ ಪರಿಶೀಲನೆಯಲ್ಲಿ ರಾಹುಲ್ ಗಾಂಧಿ ರಾಷ್ಟ್ರಗೀತೆ ನುಡಿಸುವ ವೇಳೆ ಸಂಸತ್‌ನಲ್ಲಿಯೇ ಇದ್ದರು. ಅವರು ತನ್ನ ಆಸನಕ್ಕೆ ರಾಷ್ಟ್ರಗೀತೆ ಮುಗಿದ ಬಳಿಕ ಆಗಮಿಸಿದ್ದಾರೆ. ಅದನ್ನೇ ತಪ್ಪಾಗಿ ತಿಳಿದುಕೊಂಡು ರಾಹುಲ್ ಗಾಂಧಿ ರಾಷ್ಟ್ರಗೀತೆ ನುಡಿಸುವ ವೇಳೆ ಸಂಸತ್‌ನಲ್ಲೇ ಇರಲಿಲ್ಲ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿದೆ ಎಂದು ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಕೇರಳದ ಮುಸ್ಲಿಂ ಮಹಿಳೆ ಮಗನನ್ನೇ ಮದುವೆಯಾಗಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...