Homeಫ್ಯಾಕ್ಟ್‌ಚೆಕ್FACT CHECK : ಸಂಸತ್‌ನಲ್ಲಿ ರಾಷ್ಟ್ರಗೀತೆ ನುಡಿಸುವ ವೇಳೆ ರಾಹುಲ್ ಗಾಂಧಿ ಹಾಜರಿರಲಿಲ್ಲ ಎಂಬುವುದು ಸುಳ್ಳು

FACT CHECK : ಸಂಸತ್‌ನಲ್ಲಿ ರಾಷ್ಟ್ರಗೀತೆ ನುಡಿಸುವ ವೇಳೆ ರಾಹುಲ್ ಗಾಂಧಿ ಹಾಜರಿರಲಿಲ್ಲ ಎಂಬುವುದು ಸುಳ್ಳು

- Advertisement -
- Advertisement -

ಹೊಸದಾಗಿ ಚುನಾಯಿತರಾದ ಸಂಸತ್ತಿನ ಸದಸ್ಯರು ಜೂನ್ 24 ಮತ್ತು 26 ರ ನಡುವೆ ದೆಹಲಿಯ ನೂತನ ಸಂಸತ್ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಂಸದರು ಪ್ರಮಾಣ ವಚನ ಸ್ವೀಕರಿಸುವ ಮುನ್ನ ಲೋಕಸಭೆಯಲ್ಲಿ ರಾಷ್ಟ್ರಗೀತೆಯನ್ನು ನುಡಿಸಲಾಗಿದೆ. ಈ ವೇಳೆ ಕಾಂಗ್ರೆಸ್ ಸಂಸದ ಹಾಗೂ ಪ್ರಸ್ತುತ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ ಸದನದಲ್ಲಿ ಹಾಜರಿರಲಿಲ್ಲ ಎಂದು 56 ಸೆಕೆಂಡುಗಳ ವಿಡಿಯೋ ಕ್ಲಿಪ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ.

ರಾಷ್ಟ್ರಗೀತೆ ಪೂರ್ಣಗೊಂಡ ಬಳಿಕ ರಾಹುಲ್ ಗಾಂಧಿ ತಡವಾಗಿ ಸದನ ಪ್ರವೇಶಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಬಿಜೆಪಿ ಆಂಧ್ರ ಪ್ರದೇಶದ ರಾಜ್ಯ ಉಪಾಧ್ಯಕ್ಷ ವಿಷ್ಣು ವರ್ಧನ್ ರೆಡ್ಡಿ (@SVishnuReddy) ಜೂನ್ 24 ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದು, “ಶೆಹಝಾದ (ರಾಜಕುಮಾರ) ರಾಹುಲ್ ಗಾಂಧಿಯವರು ತಾನು ರಾಷ್ಟ್ರಗೀತೆಗಿಂತ ದೊಡ್ಡವನು ಎಂದು ಭಾವಿಸಿದ್ದಾರೆ. ಅವರು ತಡವಾಗಿ ಬಂದು ರಾಷ್ಟ್ರಗೀತೆ ಮುಗಿಯುತ್ತಿದ್ದಂತೆ ಸಂಸತ್ತಿಗೆ ಪ್ರವೇಶಿಸಿದ್ದಾರೆ” ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್ 2.5 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ ಮತ್ತು 1,000 ಕ್ಕೂ ಹೆಚ್ಚು ಬಾರಿ ರೀಟ್ವೀಟ್ ಆಗಿದೆ.

ರಾಷ್ಟ್ರಗೀತೆ ಮುಗಿದ ನಂತರ ರಾಹುಲ್ ಗಾಂಧಿ ಸಂಸತ್ತಿಗೆ ಬಂದರು ಎಂದು ಬರೆದುಕೊಳ್ಳುವ ಮೂಲಕ ಎಕ್ಸ್‌ನಲ್ಲಿ ಹಲವಾರು ಇತರ ಬಳಕೆದಾರರು ಅದೇ ವಿಡಿಯೋ ಕ್ಲಿಪ್ ಅನ್ನು ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಇದಕ್ಕಾಗಿ 18ನೇ ಲೋಕಸಭೆಯ ಅಧಿವೇಶನ ಆರಂಭದ ಸಂಪೂರ್ಣ ವಿಡಿಯೋವನ್ನು ಸಂಸದ್ ಟಿವಿಯ ಯೂಟ್ಯೂಬ್ ಚಾನೆಲ್‌ನಲ್ಲಿ ವೀಕ್ಷಿಸಿದ್ದೇವೆ.

ಜೂನ್ 24ರಂದು ಅಪ್ಲೋಡ್ ಮಾಡಲಾದ 9 ನಿಮಿಷ 40 ಸೆಕೆಂಡ್‌ನ ವಿಡಿಯೋವೊಂದರಲ್ಲಿ 3 ನಿಮಿಷ 7 ಸೆಕೆಂಡ್‌ನಿಂದ ರಾಷ್ಟ್ರಗೀತೆ ಆರಂಭವಾಗುತ್ತದೆ. 3 ನಿಮಿಷ 18 ಸೆಕೆಂಡ್‌ನಲ್ಲಿ ಇಂಡಿಯಾ ಮೈತ್ರಿಕೂಟದ ಸಂಸದರು ಫ್ರೇಮ್‌ನಲ್ಲಿ ಗೋಚರಿಸುತ್ತಾರೆ. ಈ ವೇಳೆ ಹಿಂಭಾಗದ ಎಡ ಮೂಲೆಯಲ್ಲಿ, ಸಂಸದ್ ಟಿವಿ ಲೋಗೋದ ಹಿಂದೆ ರಾಹುಲ್ ಗಾಂಧಿಯಂತೆಯೇ ಬಿಳಿ ಟಿ-ಶರ್ಟ್ ಮತ್ತು ಕಪ್ಪು ಪ್ಯಾಂಟ್ ಧರಿಸಿರುವ ವ್ಯಕ್ತಿಯನ್ನು ಕಾಣಬಹುದು.

ವಿಡಿಯೋದಲ್ಲಿ 4 ನಿಮಿಷ 13 ಸೆಕೆಂಡ್‌ನಲ್ಲಿ ರಾಹುಲ್ ಗಾಂಧಿ ಸ್ಪೀಕರ್ ಪೀಠದ ಬಲ ಭಾಗದಲ್ಲಿ ಆಗಮಿಸುವುದು ಇದೆ. ಸಂಸದ್ ಟಿವಿಯ ಲೋಗೋ ಇರುವ ಬದಿಯಿಂದಲೇ ರಾಹುಲ್ ಮುಂಭಾಗಕ್ಕೆ ಬಂದಿರುವುದು ಸ್ಪಷ್ಟವಾಗಿ ವಿಡಿಯೋದಲ್ಲಿ ಗೊತ್ತಾಗುತ್ತದೆ.

ಅಂದರೆ, ರಾಹುಲ್ ಗಾಂಧಿ ರಾಷ್ಟ್ರಗೀತೆ ನುಡಿಸುವ ವೇಳೆ ಸ್ಪೀಕರ್ ಪೀಠದಿಂದ ನೋಡಿದರೆ ಎಡಭಾಗ ಮತ್ತು ಕೆಳಗಿನಿಂದ ನೋಡಿದರೆ ಬಲಭಾಗದಲ್ಲಿ ಹಿಂಬಂದಿ ನಿಂತಿದ್ದರು. ಸಂಸದ್ ಟಿವಿಯ ಲೋಗೋದ ಹಿಂದೆ ಬಿಳಿ ಟಿ-ಶರ್ಟ್ ಮತ್ತು ಕಪ್ಪು ಪ್ಯಾಂಟ್ ಧರಿಸಿ ನಿಂತಿದ್ದ ವ್ಯಕ್ತಿ ಅವರೇ. ರಾಷ್ಟ್ರಗೀತೆ ಮುಗಿದ ಬಳಿಕ ರಾಹುಲ್ ತನ್ನ ಆಸನಕ್ಕೆ ಆಗಮಿಸಿದ್ದಾರೆ.

ವಿಷ್ಣು ವರ್ಧನ್ ರೆಡ್ಡಿಯ ಪೋಸ್ಟ್‌ಗೆ ಪ್ರತಿಕ್ರಿಯೆ ಕೊಟ್ಟಿರುವ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿವಿ “ಸುಳ್ಳುಗಳನ್ನು ಹರಡುವುದನ್ನು ನಿಲ್ಲಿಸಿ. ರಾಹುಲ್ ಗಾಂಧಿಯವರು ರಾಷ್ಟ್ರಗೀತೆ ನುಡಿಸುವ ವೇಳೆ ಸಂಪೂರ್ಣವಾಗಿ ಹಾಜರಿದ್ದರು. ವಿಡಿಯೋದ ಆರಂಭದಲ್ಲಿ ಸದನದ ಕೊನೆಯಲ್ಲಿ ಎಡ ಮೂಲೆಯಲ್ಲಿ ಅವರು ನಿಂತಿರುವುದನ್ನು ಕಾಣಬಹುದು.” ಸ್ಪಷ್ಟಪಡಿಸಿದ್ದಾರೆ.

ನಾವು ನಡೆಸಿದ ಪರಿಶೀಲನೆಯಲ್ಲಿ ರಾಹುಲ್ ಗಾಂಧಿ ರಾಷ್ಟ್ರಗೀತೆ ನುಡಿಸುವ ವೇಳೆ ಸಂಸತ್‌ನಲ್ಲಿಯೇ ಇದ್ದರು. ಅವರು ತನ್ನ ಆಸನಕ್ಕೆ ರಾಷ್ಟ್ರಗೀತೆ ಮುಗಿದ ಬಳಿಕ ಆಗಮಿಸಿದ್ದಾರೆ. ಅದನ್ನೇ ತಪ್ಪಾಗಿ ತಿಳಿದುಕೊಂಡು ರಾಹುಲ್ ಗಾಂಧಿ ರಾಷ್ಟ್ರಗೀತೆ ನುಡಿಸುವ ವೇಳೆ ಸಂಸತ್‌ನಲ್ಲೇ ಇರಲಿಲ್ಲ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿದೆ ಎಂದು ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಕೇರಳದ ಮುಸ್ಲಿಂ ಮಹಿಳೆ ಮಗನನ್ನೇ ಮದುವೆಯಾಗಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...