Homeಕರ್ನಾಟಕತುಮಕೂರಿನಲ್ಲಿ ಮಕ್ಕಳ ಕಳ್ಳಸಾಗಾಣೆ ಸಕ್ರಿಯ ಜಾಲ ಪತ್ತೆ; ಅಲೆಮಾರಿಗಳ ಮಗು ಕದ್ದು ಸಿಕ್ಕಿಬಿದ್ದ ಖದೀಮರು

ತುಮಕೂರಿನಲ್ಲಿ ಮಕ್ಕಳ ಕಳ್ಳಸಾಗಾಣೆ ಸಕ್ರಿಯ ಜಾಲ ಪತ್ತೆ; ಅಲೆಮಾರಿಗಳ ಮಗು ಕದ್ದು ಸಿಕ್ಕಿಬಿದ್ದ ಖದೀಮರು

- Advertisement -
- Advertisement -

ಊರೂರು ತಿರುಗಿ ವ್ಯಾಪಾರ ಮಾಡುತ್ತಾ ಜೀವನ ನಡೆಸುತ್ತಿದ್ದ ಅಲೆಮಾರಿ ಕುಟುಂಬದ ದಂಪತಿಯ 11 ತಿಂಗಳ ಮಗು ಕಳವು ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು, ಇಡೀ ಜಿಲ್ಲೆಯಲ್ಲಿ ನಡೆಯುತ್ತಿದ್ದ ಮಕ್ಕಳ ಕಳ್ಳಸಾಗಾಣೆ ಜಾಲವನ್ನೆ ಪತ್ತೆ ಮಾಡಿದ್ದಾರೆ. ಈ ಪ್ರಕರಣದಿಂದ ತುಮಕೂರು ಜನತೆ ಬೆಚ್ಚಿಬಿದ್ದಿದ್ದು, ಈವರೆಗೆ ಐದು ಮಕ್ಕಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.

ಅಲೆಮಾರಿ ಕುಟುಂಬದ ಮಗು ಕಳ್ಳತನ ಪ್ರಕರಣದ ತನಿಖೆಯು ತಿರುವು ಪಡೆದುಕೊಂಡಿದ್ದು, ಹಲವು ತಿಂಗಳುಗಳಿಂದ ಸಕ್ರಿಯವಾಗಿದ್ದ ಒಂದೇ ಗುಂಪು, ಬರೊಬ್ಬರಿ 9 ಮಕ್ಕಳನ್ನು ಕಿಡ್ನಾಪ್ ಮಾಡಿದ್ದಾರೆ. ಕದ್ದ ಮಕ್ಕಳನ್ನ 2 ರಿಂದ 3 ಲಕ್ಷ ರೂಪಾಯಿಗೆ ಮಕ್ಕಳಿಲ್ಲದ ದಂಪತಿಗೆ ಮಾರಾಟ ಮಾಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಕಳುವಾಗಿದ್ದ 9 ಮಕ್ಕಳ ಪೈಕಿ 5 ಮಕ್ಕಳನ್ನ ಪೊಲೀಸರು ರಕ್ಷಿಸಿದ್ದು, ಅದರಲ್ಲಿ 1 ಮಗು ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ. ಇನ್ನುಳಿದ 3 ಮಕ್ಕಳಿಗಾಗಿ ತನಿಖಾ ತಂಡ ಶೋಧಕಾರ್ಯ ಮುಂದುವರಿಸಿದೆ.

ಜಾಲ ಪತ್ತೆಯಾಗಿದ್ದು ಹೇಗೆ..?

ತುಮಕೂರು ಜಿಲ್ಲೆ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಜುಲೈ ಒಂಬತ್ತರಂದು ಮಗು ಕಳ್ಳತನ ಪ್ರಕರಣ ದಾಖಲಾಗಿತ್ತು. ತಾಲೂಕಿನ ಚೇಳೂರು ಮೂಲದ ಅಲೆಮಾರಿ ಕುಟುಂಬದ ದಂಪತಿಗಳು ಸುತ್ತಮುತ್ತಲಿನ ಹಳ್ಳಿಗಳಲ್ಲಿ ತಲೆಕೂದಲು ಸಂಗ್ರಹಿಸಿ, ಪಾತ್ರೆ-ಪಡಗ ವ್ಯಾಪಾರ ನಡೆಸುತ್ತಾ ಜೀವನ ಸಾಗಿಸುತ್ತಿದ್ರು. ಅದೇ ರೀತಿ ವ್ಯಾಪಾರ ಮುಗಿಸಿ ಇದೇ ಜೂನ್ 9 ರ ರಾತ್ರಿ ಗುಬ್ಬಿ ಪಟ್ಟಣದ ಚನ್ನಬಸವೇಶ್ವರ ದೇವಸ್ಥಾನದ ಬಳಿ ಮಲಗಿದ್ದಾಗ, ಬೆಳಗಾಗುವಷ್ಟರಲ್ಲಿ ದಂಪತಿಗಳ 11 ತಿಂಗಳ ರಾಕಿ ಎಂಬ ಮಗು ನಾಪತ್ತೆಯಾಗಿದ್ದ. ಈ ಘಟನೆ ಸಂಬಂಧ ಗುಬ್ಬಿ ಪೊಲೀಸ್ ಠಾಣೆಗೆ ಮಗುವಿನ ಪೋಷಕರು ದೂರು ನೀಡಿದ್ದರು.

ಮಕ್ಕಳಿಲ್ಲದ ದಂಪತಿಗಳನ್ನ ಟಾರ್ಗೆಟ್ ಮಾಡುತ್ತಿದ್ದ ಈ ಮಕ್ಕಳ ಕಳ್ಳರ ಗ್ಯಾಂಗ್, ಗರ್ಭ ಧರಿಸಿದ ಅವಿವಾಹಿತ ಯುವತಿಯರಿಂದ ಮಕ್ಕಳನ್ನ ಖರೀದಿ ಮಾಡುತ್ತಿದ್ದರು ಎನ್ನಲಾಗಿದೆ. ಜತೆಗೆ, ಮಕ್ಕಳ ಕಳ್ಳತನಕ್ಕೂ ಇಳಿದಿದ್ದರು. ಸದ್ಯ ಪ್ರಕರಣ ಸಂಬಂಧ 7 ಜನ ಆರೋಪಿಗಳ ಗುಬ್ಬಿ ಪೊಲೀಸರು ಬಂಧಿಸಿದ್ದಾರೆ. ಮಹೇಶ್ ಯು.ಡಿ, ಮಹಬೂಬ್ ಶರೀಫ್, ಕೆ.ಎನ್.ರಾಮಕೃಷ್ಣ, ಹನುನಂತರಾಜು, ಮುಬಾರಕ್ ಪಾಷಾ, ಪೂರ್ಣಿಮಾ ಎನ್. ಹಾಗೂ ಸೌಜನ್ಯ ಬಂಧಿತ ಆರೋಪಿಗಳು.

ಬಂಧಿತ ಆರೋಪಿಗಳು

ಮಕ್ಕಳಿಲ್ಲದ ದಂಪತಿಗಳನ್ನ ಟಾರ್ಗೆಟ್ ಮಾಡುತ್ತಿದ್ದ ಒಂದನೆ ಆರೋಪಿ ಮಹೇಶ್, ಈ ಹಿಂದೆ ಕುಣಿಗಲ್ ಸರ್ಕಾರಿ ಆಸ್ಪತ್ರೆಯಲ್ಲಿ ಸ್ಟಾಪ್ ನರ್ಸ್ ಆಗಿ ಕೆಲಸ ಮಾಡಿದ್ದ ಎನ್ನಲಾಗಿದೆ. ಸದ್ಯ ತುಮಕೂರಿನ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡ್ತಿದ್ದಾನೆ‌.

ಗುಬ್ಬಿಯಲ್ಲಿ ಮಗುವನ್ನ ಕಳವು ಮಾಡಿದ್ದ ಮೂರನೇ ಆರೋಪಿ ರಾಮಕೃಷ್ಣ ಹಾಗೂ ನಾಲ್ಕನೇ ಆರೋಪಿ ಹನುಮಂತರಾಜು, ಮಹೇಶ್ ಮೂಲಕ ಮಂಡ್ಯ ಜಿಲ್ಲೆ ಬೆಳ್ಳೂರು ಕ್ರಾಸ್ ಮೂಲದ ದಂಪತಿಗೆ ಮಗು ಮಾರಾಟ ಮಾಡಿದ್ದ. ಕಿಡ್ನಾಪ್ ಆಗಿದ್ದ 11 ತಿಂಗಳ ರಾಕಿಯನ್ನ ಪೊಲೀಸರು ರಕ್ಷಿಸಿ, ಪೋಷಕರಿಗೆ ಒಪ್ಪಿಸಿದ್ದಾರೆ.

ಜಾತ್ರೆಗಳಲ್ಲಿ ಟ್ಯಾಟು ಹಾಕುವ ಕೆಲಸ ಮಾಡ್ತಿದ್ದ ರಾಮಕೃಷ್ಣ ಹಾಗೂ ಹನುಮಂತರಾಜು ಇಬ್ಬರನ್ನೂ ಹಿಡಿದು ತನಿಖೆ ನಡೆಸಿದಾಗ ಮಕ್ಕಳ ಮಾರಾಟ ಜಾಲ ಪ್ರಕರಣ ಬೆಳಕಿಗೆ ಬಂದಿದೆ. ಎರಡನೇ ಆರೋಪಿ ಮಹಬೂಬ್ ಶರೀಫ್ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರಿನಲ್ಲಿ ತನ್ನ ಪತ್ನಿ ಹೆಸರಲ್ಲಿ ಖಾಸಗಿ ಕ್ಲಿನಿಕ್ ನಡೆಸುತ್ತಿದ್ದ. ಜೊತೆಗೆ, ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ವಿತರಣಾ ವಿಭಾಗದಲ್ಲಿ ಕೆಲಸ ಮಾಡ್ತಿದ್ದ. ತಮ್ಮ ಕ್ಲಿನಿಕ್ ಮತ್ತು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು, ನರ್ಸ್ ಗಳ ಸಹಾಯದಿಂದ ಮಕ್ಕಳನ್ನ ಖರೀದಿ ಮಾಡುವ ಪೋಷಕರನ್ನು ಗರ್ಭಿಣಿಯರೆಂದು ದಾಖಲಿಸಿಕೊಂಡು, ಮಗು ಅವರಿಗೆ ಹುಟ್ಟಿದೆ ಎಂದು ನಕಲಿ ದಾಖಲೆಪತ್ರಗಳನ್ನು ನೀಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಸರ್ಕಾರಿ ಆಸ್ಪತ್ರೆ ಡಾಕ್ಟರ್, ನರ್ಸ್ ಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದ್ದು ತನಿಖೆ ಚುರುಕುಗೊಳಿಸಲಾಗಿದೆ. ಬಂಧಿತ ಪೂರ್ಣಿಮಾ ಮಧುಗಿರಿ ತಾಲೂಕಿನ ದೊಡ್ಡೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸ್ಟಾಫ್ ನರ್ಸ್ ಆಗಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ಮತ್ತೋರ್ವ ಆರೋಪಿ ಸೌಜನ್ಯ ಶಿರಾ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇವರ ಮೇಲೆ ಈ ಹಿಂದೆ ಭ್ರೂಣ ಹತ್ಯೆ ಕೇಸ್ ಕೂಡ ದಾಖಲಾಗಿತ್ತು.

ಬಂಧಿತ ಆರೋಪಿಗಳು

ಪೂರ್ಣಿಮಾ ಹಾಗೂ ಸೌಜನ್ಯ ಆಸ್ಪತ್ರೆಯಲ್ಲಿ ಗರ್ಭಧರಿಸಿದ ಅವಿವಾಹಿತ ಮಹಿಳೆಯರು, ಮಗು ಬೇಡ ಎನ್ನುತ್ತಿದ್ದ ವಿವಾಹಿತ ಮಹಿಳೆಯರ ಬಗ್ಗೆ ಪ್ರಕರಣದ ಪ್ರಮುಖ ಕಿಂಗ್‌ಪಿನ್ ಮಹೇಶ್ ಗೆ ಮಾಹಿತಿ ನೀಡುತ್ತಿದ್ದರು. ಅಂತವರನ್ನು ಸಂಪರ್ಕ ಮಾಡುತ್ತಿದ್ದ ಈ ತಂಡ, ಮಕ್ಕಳನ್ನ ಪಡೆದು ಮಾರಾಟ ಮಾಡ್ತಿದ್ದರು.

ಪ್ರಕರಣ ಸಂಬಂಧ 9 ಜನರ ವಿರುದ್ಧ ಕೇಸ್ ದಾಖಲಿಸಲಾಗಿದ್ದು, 7 ಜನರನ್ನು ಬಂಧಿಸಲಾಗಿದೆ. ಅವರಿಂದ ಮಾರುತಿ 800 ಕಾರು, 50 ಸಾವಿರ ನಗದು ಹಾಗೂ 4 ಮೊಬೈಲ್ ವಶಕ್ಕೆ ಪಡೆಯಲಾಗಿದ್ದು, ಗುಬ್ಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ; ‘ತುರ್ತು ಪರಿಸ್ಥಿತಿ ಉಲ್ಲೇಖವನ್ನು ತಪ್ಪಿಸಬಹುದಿತ್ತು..’; ಸ್ಪೀಕರ್ ಬಳಿ ಅಸಮಾಧಾನ ವ್ಯಕ್ತಪಡಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...