Homeಮುಖಪುಟಪ್ರಶ್ನೆ ಪತ್ರಿಕೆ ಸೋರಿಕೆ, ನೇಮಕಾತಿ ಹಗರಣದಲ್ಲಿ ಭಾಗಿಯಾದ ಕಂಪನಿಗೆ ಹಲವು ಗುತ್ತಿಗೆಗಳನ್ನು ನೀಡುತ್ತಿರುವ ಬಿಜೆಪಿ ಸರ್ಕಾರಗಳು:...

ಪ್ರಶ್ನೆ ಪತ್ರಿಕೆ ಸೋರಿಕೆ, ನೇಮಕಾತಿ ಹಗರಣದಲ್ಲಿ ಭಾಗಿಯಾದ ಕಂಪನಿಗೆ ಹಲವು ಗುತ್ತಿಗೆಗಳನ್ನು ನೀಡುತ್ತಿರುವ ಬಿಜೆಪಿ ಸರ್ಕಾರಗಳು: ವರದಿ

- Advertisement -
- Advertisement -

ಹಲವು ರಾಜ್ಯಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ನೇಮಕಾತಿ ಹಗರಣದಲ್ಲಿ ಭಾಗಿಯಾಗಿ ಕಪ್ಪು ಪಟ್ಟಿಗೆ ಸೇರ್ಪಡೆಗೊಂಡಿರುವ ಗುಜರಾತ್‌ನ ಅಹಮದಾಬಾದ್‌ ಮೂಲದ ಎಜುಟೆಸ್ಟ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಎಂಬ ಕಂಪನಿಯೊಂದಕ್ಕೆ ಬಿಜೆಪಿ ಸರ್ಕಾರಗಳು ಹಲವು ಗುತ್ತಿಗೆಗಳನ್ನು ನೀಡುತ್ತಿರುವುದನ್ನು ಮುಂದುವರಿಸುತ್ತಿವೆ. ದಿ ವೈರ್ ಈ ಕುರಿತು ತನಿಖಾ ವರದಿ ಪ್ರಕಟಿಸಿದೆ.

ಎಜುಟೆಸ್ಟ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸಂಸ್ಥಾಪಕ-ನಿರ್ದೇಶಕ, ಸುರೇಶ್‌ಚಂದ್ರ ಆರ್ಯ ‘ಸರ್ವದೇಶಿಕ್ ಆರ್ಯ ಪ್ರತಿನಿಧಿ ಸಭಾ’ ಎಂಬ ಪ್ರಮುಖ ಹಿಂದೂ ಸಂಘಟನೆಯ ಅಧ್ಯಕ್ಷನಾಗಿದ್ದಾನೆ. ಈ ಸಂಸ್ಥೆ ಆಯೋಜಿಸುವ ಹಲವು ಕಾರ್ಯಕ್ರಮಗಳಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಬಿಜೆಪಿ ನಾಯಕರು ಪಾಲ್ಗೊಂಡಿದ್ದಾರೆ.

ಹಲವು ರಾಜ್ಯ ಸರ್ಕಾರಗಳು ಈಗಾಗಲೇ ಈ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿವೆ. ಮುಖ್ಯವಾಗಿ, ಸುರೇಶ್‌ಚಂದ್ರ ಅವರ ಪುತ್ರ, ಎಜುಟೆಸ್ಟ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿನೀತ್ ಆರ್ಯ 2017ರಲ್ಲಿ ಬಿಹಾರದ ನೇಮಕಾತಿ ಅಕ್ರಮ ಪ್ರಕರಣವೊಂದರಲ್ಲಿ ಜೈಲು ಸೇರಿದ್ದ. ಇಷ್ಟಾದರೂ, ಪ್ರಧಾನಿ ನೇತೃತ್ವದ ಕೇಂದ್ರ ಸರ್ಕಾರದ ಸಂಸ್ಥೆಗಳು ಮತ್ತು ಹಲವು ರಾಜ್ಯಗಳ ಬಿಜೆಪಿ ಸರ್ಕಾರಗಳು ಈ ಕಂಪನಿಗೆ ಪರೀಕ್ಷೆಗಳನ್ನು ನಡೆಸಲು ಗುತ್ತಿಗೆ ನೀಡುವುದನ್ನು ಮುಂದುವರಿಸಿವೆ.

ಉತ್ತರ ಪ್ರದೇಶ ಸರ್ಕಾರದಿಂದ ಕಪ್ಪು ಪಟ್ಟಿಗೆ

ಕಳೆದ ವಾರ ಉತ್ತರ ಪ್ರದೇಶ ಸರ್ಕಾರ ಯುಪಿ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆ, ಎಜುಟೆಸ್ಟ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಅನ್ನು ಕಪ್ಪುಪಟ್ಟಿಗೆ ಸೇರಿಸಿದೆ.

ಜೂನ್ 20 ರಂದು, ಉತ್ತರ ಪ್ರದೇಶ ಸರ್ಕಾರವು ಎಜುಟೆಸ್ಟ್ ಅನ್ನು ಕಪ್ಪುಪಟ್ಟಿಗೆ ಸೇರಿಸಿದೆ. ಫೆಬ್ರವರಿ 17 ಮತ್ತು 18 ರಂದು 63,244 ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಪರೀಕ್ಷೆಯನ್ನು ನಡೆಸುವ ಜವಾಬ್ದಾರಿಯನ್ನು ಈ ಕಂಪನಿಗೆ ನೀಡಲಾಗಿತ್ತು. 43 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಆದರೆ, ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಆದಿತ್ಯನಾಥ್ ಸರ್ಕಾರವು ಅಂತಿಮವಾಗಿ ಪರೀಕ್ಷೆಯನ್ನು ರದ್ದುಗೊಳಿಸಿದೆ.

ಗುಜರಾತ್ ಮೂಲದ ಈ ಕಂಪನಿ ವಿವಾದಕ್ಕೆ ಸಿಲುಕಿರುವುದು ಇದೇ ಮೊದಲಲ್ಲ. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಹಲವು ಅಕ್ರಮಗಳಿಂದಾಗಿ ಈ ಹಿಂದೆಯೂ ಕಪ್ಪು ಪಟ್ಟಿಗೆ ಸೇರಿಸಲಾಗಿತ್ತು. ಆದರೂ, ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ಮುದ್ರಿಸುವ ಮತ್ತು ಪರೀಕ್ಷೆಗಳನ್ನು ನಡೆಸುವ ಒಪ್ಪಂದಗಳನ್ನು ಪಡೆಯುತ್ತಲೇ ಇದೆ.

ನಿಷೇಧಕ್ಕೆ ಒಂದು ದಿನ ಮುಂಚಿತವಾಗಿ, ಅಂದರೆ ಅಕ್ಟೋಬರ್ 19 2023 ರಂದು, ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿನ ಕೌನ್ಸಿಲ್ ಆಫ್ ಸೈಂಟಿಫಿಕ್ ಮತ್ತು ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್‌ಐಆರ್‌) ಸೆಕ್ಷನ್ ಆಫೀಸರ್ ಹುದ್ದೆಗಳಿಗೆ(ಎಎಸ್‌ಒ) ನೇಮಕಾತಿ ಪರೀಕ್ಷೆಯನ್ನು ನಡೆಸಲು ಎಜುಟೆಸ್ಟ್ 8 ಕೋಟಿ ರೂಗಳ ಒಪ್ಪಂದವನ್ನು ಮಾಡಿಕೊಳ್ಳಲಾಗಿತ್ತು. ಸಿಎಸ್‌ಐಆರ್‌ ಈ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿತ್ತು. ಇನ್ನೊಂದು ಪ್ರಮುಖ ವಿಷಯವೆಂದರೆ ಸಿಎಸ್‌ಐಆರ್‌ನ ಅಧ್ಯಕ್ಷರು ಸ್ವತಃ ಪ್ರಧಾನಿ ನರೇಂದ್ರ ಮೋದಿ ಆಗಿದ್ದಾರೆ.

ಬಿಹಾರದಿಂದ ಕಪ್ಪು ಪಟ್ಟಿಗೆ ಸೇರ್ಪಡೆ

ಅಕ್ಟೋಬರ್ 20, 2023 ರಂದು, ಬಿಹಾರದ ಶಾಲಾ ಪರೀಕ್ಷಾ ಮಂಡಳಿಯ (ಪಾಟ್ನಾ) ಪರೀಕ್ಷಾ ನಿಯಂತ್ರಕರು ಎಜುಟೆಸ್ಟ್ ಸೊಲ್ಯೂಷನ್ಸ್‌ಗೆ ಪತ್ರ ಬರೆದ್ದರು. ಕಂಪನಿಯ ಯೋಜನಾ ವ್ಯವಸ್ಥಾಪಕನ “ತೀವ್ರ ನಿರ್ಲಕ್ಷ್ಯ ಧೋರಣೆ” ಮತ್ತು “ವೃತ್ತಿಪರವಲ್ಲದ ನಡವಳಿಕೆ” ಯ ಕಾರಣ ಬಿಹಾರ ಶಾಲಾ ಪರೀಕ್ಷಾ ಮಂಡಳಿಯ ಸಮಿತಿಯು ನಿಮ್ಮ ಏಜೆನ್ಸಿಯನ್ನು ಕಪ್ಪುಪಟ್ಟಿಗೆ ಸೇರಿಸುತ್ತಿದೆ ಎಂದು ತಿಳಿಸಿದ್ದರು.

ಬಿಹಾರದ ಮಾಧ್ಯಮಿಕ ಶಿಕ್ಷಕರ ಅರ್ಹತಾ ಪರೀಕ್ಷೆ ಸೇರಿದಂತೆ ಹಲವು ಪ್ರವೇಶ ಪರೀಕ್ಷೆಯಲ್ಲಿ ಎಜುಟೆಸ್ಟ್ ಸೊಲ್ಯೂಷನ್ಸ್‌ ಅಕ್ರಮವೆಸಗಿತ್ತು. ಕಡಿಮೆ ಅಂಕ ಗಳಿಸಿದ್ದರೂ ಉತ್ತೀರ್ಣ ಎಂದು ಘೋಷಿಸಲಾಗಿತ್ತು. ಈ ಕಾರಣದಿಂದ ಎಜುಟೆಸ್ಟ್ ಅನ್ನು ಮೂರು ವರ್ಷಗಳ ಕಾಲ ನಿಷೇಧಿಸಿ ಕಪ್ಪುಪಟ್ಟಿಗೆ ಸೇರಿಸಲಾಗಿದೆ.

ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದಿಂದ ಒಪ್ಪಂದ

ಬಿಹಾರ ಕಪ್ಪು ಪಟ್ಟಿಗೆ ಸೇರಿಸುವ ಒಂದು ದಿನ ಮುಂಚಿತವಾಗಿ, ಅಂದರೆ ಅಕ್ಟೋಬರ್ 19, 2023 ರಂದು, ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿನ ಕೌನ್ಸಿಲ್ ಆಫ್ ಸೈಂಟಿಫಿಕ್ ಮತ್ತು ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್‌ಐಆರ್‌) ಸೆಕ್ಷನ್ ಆಫೀಸರ್ ಹುದ್ದೆಗಳಿಗೆ (ಎಎಸ್‌ಒ) ನೇಮಕಾತಿ ಪರೀಕ್ಷೆಯನ್ನು ನಡೆಸಲು ಎಜುಟೆಸ್ಟ್ 8 ಕೋಟಿ ರೂ.ಗಳ ಒಪ್ಪಂದ ಮಾಡಿಕೊಂಡಿತ್ತು. ಸಿಎಸ್‌ಐಆರ್‌ ಈ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿತ್ತು. ಇನ್ನೊಂದು ಪ್ರಮುಖ ವಿಷಯವೆಂದರೆ ಸಿಎಸ್‌ಐಆರ್‌ನ ಅಧ್ಯಕ್ಷರು ಸ್ವತಃ ಪ್ರಧಾನಿ ನರೇಂದ್ರ ಮೋದಿ ಆಗಿದ್ದಾರೆ.

ಈ ಪರೀಕ್ಷೆಯಲ್ಲಿಯೂ ಅಕ್ರಮ ನಡೆದ ಹಿನ್ನೆಲೆ, ಉತ್ತರಾಖಂಡದ ಪೊಲೀಸರು ಪ್ರಮುಖ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಪರೀಕ್ಷೆಯಲ್ಲಿ ಹಲವು ಅಕ್ರಮಗಳು ನಡೆದರೂ, ಸಿಎಸ್‌ಐಆರ್‌ ಆರೋಪಗಳನ್ನು ನಿರಾಕರಿಸಿದೆ.

ಅಕ್ರಮಗಳ ಹಿನ್ನೆಲೆ ಹೆಸರು ಬದಲಿಸಿರುವ ಕಂಪನಿ

ಎಜುಟೆಸ್ಟ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ತಾನು 1981 ರಿಂದ ವಿವಿಧ ರೀತಿಯ ಪರೀಕ್ಷೆಗಳನ್ನು ನಡೆಸುತ್ತಿದೆ ಎಂದು ಹೇಳಿಕೊಂಡಿದೆ. ಕಂಪನಿಯ ವೆಬ್‌ಸೈಟ್ ಪ್ರಕಾರ, ಇದು ಕಳೆದ 40 ವರ್ಷಗಳಲ್ಲಿ ಸಾವಿರಾರು ಪರೀಕ್ಷೆಗಳನ್ನು ನಡೆಸಿದೆ ಮತ್ತು ಇವೆಲ್ಲವೂ ದೋಷ ರಹಿತವಾಗಿವೆ.

ಎಜುಟೆಸ್ಟ್ ಕಂಪನಿಯು ಉತ್ತರ ಪ್ರದೇಶ ಅಧೀನ ಸೇವೆಗಳ ಆಯ್ಕೆ ಆಯೋಗ, ಗುಜರಾತ್ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯ, ಭಾರತ್ ಎಲೆಕ್ಟ್ರಾನಿಕ್ಸ್, ಛತ್ತೀಸ್‌ಗಢ ಸರ್ಕಾರ, ಹರಿಯಾಣ ಎಸ್‌ಎಸ್‌ಸಿ, ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ತಿರುಚಿರಾಪಳ್ಳಿ), ಪವರ್ ಸಿಸ್ಟಮ್ ಆಪರೇಷನ್, ರಾಜಸ್ಥಾನ ಕೇಂದ್ರ ವಿಶ್ವವಿದ್ಯಾಲಯ, ಆಯಿಲ್ ಇಂಡಿಯಾ ಲಿಮಿಟೆಡ್‌ನಂತಹ ಪ್ರತಿಷ್ಠಿತ ಸರ್ಕಾರಿ ಸಂಸ್ಥೆಗಳು ಸೇರಿದಂತೆ ಹಲವು ಸಂಸ್ಥೆಗಳಿಗೆ ಕೆಲಸ ಮಾಡಿದೆ.

ಈ ಮೊದಲು ಎಜುಟೆಸ್ಟ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಅನ್ನು ಕಾನ್ಫಿಸೆಕ್ ಪ್ರೈವೇಟ್ ಲಿಮಿಟೆಡ್‌ ಎಂದು ಎಂದು ಕರೆಯಲಾಗುತ್ತಿತ್ತು. ಆದರೆ, ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ತೊಡಗಿಸಿಕೊಂಡ ನಂತರ, ಅದು ತನ್ನ ಹೆಸರನ್ನು ಬದಲಿಸಿಕೊಂಡಿದೆ.

2017ರಲ್ಲಿ ಕಂಪನಿಯ ನಿರ್ದೇಶಕನ ಬಂಧನ

2017ರಲ್ಲಿ ಬಿಹಾರ ಸ್ಟಾಫ್ ಸೆಲೆಕ್ಷನ್ ಕಮಿಷನ್ (ಬಿಎಸ್‌ಎಸ್‌ಸಿ) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಬಿಹಾರ ಪೊಲೀಸರು ಬಿಎಸ್‌ಎಸ್‌ಸಿ ಅಧ್ಯಕ್ಷ ಮತ್ತು ಐಎಎಸ್ ಅಧಿಕಾರಿ ಸುಧೀರ್ ಕುಮಾರ್ ಜೊತೆಗೆ ಪ್ರಶ್ನೆ ಪತ್ರಿಕೆಯನ್ನು ಮುದ್ರಿಸಿದ ಹಳೆಯ ಮೂಲ ಹೆಸರಿನ ಕಂಪನಿ ಕಾನ್ಫಿಸೆಕ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕ ವಿನೀತ್ ಆರ್ಯನನ್ನು ಫೆಬ್ರವರಿ 2017 ರಲ್ಲಿ ಬಂಧಿಸಿದ್ದರು. ನಂತರ ಆತ ಸ್ವಲ್ಪ ಸಮಯದ ನಂತರ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ. ಈಗಲೂ ಹಲವು ಆರೋಗ್ಯದ ಸುಳ್ಳುಗಳನ್ನು ಹೇಳಿ ಜಾಮೀನಿನ ಮೇಲೆ ಇದ್ದಾನೆ.

ಬಿಎಸ್‌ಎಸ್‌ಸಿ ಪೇಪರ್ ಸೋರಿಕೆ ಹಗರಣವು ಕಾನ್ಫಿಸೆಕ್ ಪ್ರೈವೇಟ್ ಲಿಮಿಟೆಡ್‌ಗೆ ಬಹಳಷ್ಟು ಅಪಖ್ಯಾತಿ ತಂದಿತು. ವಿನೀತ್ ಪಾತ್ರದ ಬಗ್ಗೆ ದೇಶದ ಪ್ರಮುಖ ನಗರಗಳಲ್ಲಿ ಹಲವು ಸುದ್ದಿಗಳು ಪ್ರಕಟವಾಗಿದ್ದವು. ಇದಾದ ನಂತರದಲ್ಲಿ ಆಗಸ್ಟ್ 23,2018 ರಂದು ನೀಡಲಾದ ಜಿಎಸ್‌ಟಿ ದಾಖಲೆಯಲ್ಲಿ, ಕಂಪನಿಯ ಹೆಸರನ್ನು ಎಜುಟೆಸ್ಟ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಎಂದು ಬದಲಾಯಿಸಲಾಗಿದೆ.

ಎಜುಟೆಸ್ಟ್ ಸೊಲ್ಯೂಷನ್ಸ್ ಕಂಪನಿಯ ಸಂಸ್ಥಾಪಕರು ಹಮ್ಮಿಕೊಳ್ಳುತ್ತಿರುವ ಹಲವು ಕಾರ್ಯಕ್ರಮಗಳಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್‌, ಕಿಶನ್‌ ರೆಡ್ಡಿ, ರಾಜ್ಯಪಾಲರಾದ ಆನಂದಿಬೆನ್‌ ಪಟೇಲ್‌ ಸೇರಿದಂತೆ ಹಲವು ನಾಯಕರು ಪಾಲ್ಗೊಳ್ಳುತ್ತಿರುವುದು ಅಕ್ರಮಗಳಲ್ಲಿ ಬಿಜೆಪಿ ಸರ್ಕಾರಗಳ ಪರೋಕ್ಷ ಸಹಕಾರವಿದೆ ಎಂದು ಹೇಳಲಾಗುತ್ತಿದೆ.

ಕೃಪೆ : ದಿ ವೈರ್ 

ಇದನ್ನೂ ಓದಿ : ಕೋಟಾದಲ್ಲಿ ಮತ್ತೋರ್ವ ನೀಟ್ ಆಕಾಂಕ್ಷಿ ಆತ್ಮಹತ್ಯೆಗೆ ಶರಣು; ಜನವರಿ ನಂತರ 12ನೇ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...