Homeಮುಖಪುಟಪ್ರಶ್ನೆ ಪತ್ರಿಕೆ ಸೋರಿಕೆ, ನೇಮಕಾತಿ ಹಗರಣದಲ್ಲಿ ಭಾಗಿಯಾದ ಕಂಪನಿಗೆ ಹಲವು ಗುತ್ತಿಗೆಗಳನ್ನು ನೀಡುತ್ತಿರುವ ಬಿಜೆಪಿ ಸರ್ಕಾರಗಳು:...

ಪ್ರಶ್ನೆ ಪತ್ರಿಕೆ ಸೋರಿಕೆ, ನೇಮಕಾತಿ ಹಗರಣದಲ್ಲಿ ಭಾಗಿಯಾದ ಕಂಪನಿಗೆ ಹಲವು ಗುತ್ತಿಗೆಗಳನ್ನು ನೀಡುತ್ತಿರುವ ಬಿಜೆಪಿ ಸರ್ಕಾರಗಳು: ವರದಿ

- Advertisement -
- Advertisement -

ಹಲವು ರಾಜ್ಯಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ನೇಮಕಾತಿ ಹಗರಣದಲ್ಲಿ ಭಾಗಿಯಾಗಿ ಕಪ್ಪು ಪಟ್ಟಿಗೆ ಸೇರ್ಪಡೆಗೊಂಡಿರುವ ಗುಜರಾತ್‌ನ ಅಹಮದಾಬಾದ್‌ ಮೂಲದ ಎಜುಟೆಸ್ಟ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಎಂಬ ಕಂಪನಿಯೊಂದಕ್ಕೆ ಬಿಜೆಪಿ ಸರ್ಕಾರಗಳು ಹಲವು ಗುತ್ತಿಗೆಗಳನ್ನು ನೀಡುತ್ತಿರುವುದನ್ನು ಮುಂದುವರಿಸುತ್ತಿವೆ. ದಿ ವೈರ್ ಈ ಕುರಿತು ತನಿಖಾ ವರದಿ ಪ್ರಕಟಿಸಿದೆ.

ಎಜುಟೆಸ್ಟ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸಂಸ್ಥಾಪಕ-ನಿರ್ದೇಶಕ, ಸುರೇಶ್‌ಚಂದ್ರ ಆರ್ಯ ‘ಸರ್ವದೇಶಿಕ್ ಆರ್ಯ ಪ್ರತಿನಿಧಿ ಸಭಾ’ ಎಂಬ ಪ್ರಮುಖ ಹಿಂದೂ ಸಂಘಟನೆಯ ಅಧ್ಯಕ್ಷನಾಗಿದ್ದಾನೆ. ಈ ಸಂಸ್ಥೆ ಆಯೋಜಿಸುವ ಹಲವು ಕಾರ್ಯಕ್ರಮಗಳಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಬಿಜೆಪಿ ನಾಯಕರು ಪಾಲ್ಗೊಂಡಿದ್ದಾರೆ.

ಹಲವು ರಾಜ್ಯ ಸರ್ಕಾರಗಳು ಈಗಾಗಲೇ ಈ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿವೆ. ಮುಖ್ಯವಾಗಿ, ಸುರೇಶ್‌ಚಂದ್ರ ಅವರ ಪುತ್ರ, ಎಜುಟೆಸ್ಟ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿನೀತ್ ಆರ್ಯ 2017ರಲ್ಲಿ ಬಿಹಾರದ ನೇಮಕಾತಿ ಅಕ್ರಮ ಪ್ರಕರಣವೊಂದರಲ್ಲಿ ಜೈಲು ಸೇರಿದ್ದ. ಇಷ್ಟಾದರೂ, ಪ್ರಧಾನಿ ನೇತೃತ್ವದ ಕೇಂದ್ರ ಸರ್ಕಾರದ ಸಂಸ್ಥೆಗಳು ಮತ್ತು ಹಲವು ರಾಜ್ಯಗಳ ಬಿಜೆಪಿ ಸರ್ಕಾರಗಳು ಈ ಕಂಪನಿಗೆ ಪರೀಕ್ಷೆಗಳನ್ನು ನಡೆಸಲು ಗುತ್ತಿಗೆ ನೀಡುವುದನ್ನು ಮುಂದುವರಿಸಿವೆ.

ಉತ್ತರ ಪ್ರದೇಶ ಸರ್ಕಾರದಿಂದ ಕಪ್ಪು ಪಟ್ಟಿಗೆ

ಕಳೆದ ವಾರ ಉತ್ತರ ಪ್ರದೇಶ ಸರ್ಕಾರ ಯುಪಿ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆ, ಎಜುಟೆಸ್ಟ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಅನ್ನು ಕಪ್ಪುಪಟ್ಟಿಗೆ ಸೇರಿಸಿದೆ.

ಜೂನ್ 20 ರಂದು, ಉತ್ತರ ಪ್ರದೇಶ ಸರ್ಕಾರವು ಎಜುಟೆಸ್ಟ್ ಅನ್ನು ಕಪ್ಪುಪಟ್ಟಿಗೆ ಸೇರಿಸಿದೆ. ಫೆಬ್ರವರಿ 17 ಮತ್ತು 18 ರಂದು 63,244 ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಪರೀಕ್ಷೆಯನ್ನು ನಡೆಸುವ ಜವಾಬ್ದಾರಿಯನ್ನು ಈ ಕಂಪನಿಗೆ ನೀಡಲಾಗಿತ್ತು. 43 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಆದರೆ, ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಆದಿತ್ಯನಾಥ್ ಸರ್ಕಾರವು ಅಂತಿಮವಾಗಿ ಪರೀಕ್ಷೆಯನ್ನು ರದ್ದುಗೊಳಿಸಿದೆ.

ಗುಜರಾತ್ ಮೂಲದ ಈ ಕಂಪನಿ ವಿವಾದಕ್ಕೆ ಸಿಲುಕಿರುವುದು ಇದೇ ಮೊದಲಲ್ಲ. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಹಲವು ಅಕ್ರಮಗಳಿಂದಾಗಿ ಈ ಹಿಂದೆಯೂ ಕಪ್ಪು ಪಟ್ಟಿಗೆ ಸೇರಿಸಲಾಗಿತ್ತು. ಆದರೂ, ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ಮುದ್ರಿಸುವ ಮತ್ತು ಪರೀಕ್ಷೆಗಳನ್ನು ನಡೆಸುವ ಒಪ್ಪಂದಗಳನ್ನು ಪಡೆಯುತ್ತಲೇ ಇದೆ.

ನಿಷೇಧಕ್ಕೆ ಒಂದು ದಿನ ಮುಂಚಿತವಾಗಿ, ಅಂದರೆ ಅಕ್ಟೋಬರ್ 19 2023 ರಂದು, ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿನ ಕೌನ್ಸಿಲ್ ಆಫ್ ಸೈಂಟಿಫಿಕ್ ಮತ್ತು ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್‌ಐಆರ್‌) ಸೆಕ್ಷನ್ ಆಫೀಸರ್ ಹುದ್ದೆಗಳಿಗೆ(ಎಎಸ್‌ಒ) ನೇಮಕಾತಿ ಪರೀಕ್ಷೆಯನ್ನು ನಡೆಸಲು ಎಜುಟೆಸ್ಟ್ 8 ಕೋಟಿ ರೂಗಳ ಒಪ್ಪಂದವನ್ನು ಮಾಡಿಕೊಳ್ಳಲಾಗಿತ್ತು. ಸಿಎಸ್‌ಐಆರ್‌ ಈ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿತ್ತು. ಇನ್ನೊಂದು ಪ್ರಮುಖ ವಿಷಯವೆಂದರೆ ಸಿಎಸ್‌ಐಆರ್‌ನ ಅಧ್ಯಕ್ಷರು ಸ್ವತಃ ಪ್ರಧಾನಿ ನರೇಂದ್ರ ಮೋದಿ ಆಗಿದ್ದಾರೆ.

ಬಿಹಾರದಿಂದ ಕಪ್ಪು ಪಟ್ಟಿಗೆ ಸೇರ್ಪಡೆ

ಅಕ್ಟೋಬರ್ 20, 2023 ರಂದು, ಬಿಹಾರದ ಶಾಲಾ ಪರೀಕ್ಷಾ ಮಂಡಳಿಯ (ಪಾಟ್ನಾ) ಪರೀಕ್ಷಾ ನಿಯಂತ್ರಕರು ಎಜುಟೆಸ್ಟ್ ಸೊಲ್ಯೂಷನ್ಸ್‌ಗೆ ಪತ್ರ ಬರೆದ್ದರು. ಕಂಪನಿಯ ಯೋಜನಾ ವ್ಯವಸ್ಥಾಪಕನ “ತೀವ್ರ ನಿರ್ಲಕ್ಷ್ಯ ಧೋರಣೆ” ಮತ್ತು “ವೃತ್ತಿಪರವಲ್ಲದ ನಡವಳಿಕೆ” ಯ ಕಾರಣ ಬಿಹಾರ ಶಾಲಾ ಪರೀಕ್ಷಾ ಮಂಡಳಿಯ ಸಮಿತಿಯು ನಿಮ್ಮ ಏಜೆನ್ಸಿಯನ್ನು ಕಪ್ಪುಪಟ್ಟಿಗೆ ಸೇರಿಸುತ್ತಿದೆ ಎಂದು ತಿಳಿಸಿದ್ದರು.

ಬಿಹಾರದ ಮಾಧ್ಯಮಿಕ ಶಿಕ್ಷಕರ ಅರ್ಹತಾ ಪರೀಕ್ಷೆ ಸೇರಿದಂತೆ ಹಲವು ಪ್ರವೇಶ ಪರೀಕ್ಷೆಯಲ್ಲಿ ಎಜುಟೆಸ್ಟ್ ಸೊಲ್ಯೂಷನ್ಸ್‌ ಅಕ್ರಮವೆಸಗಿತ್ತು. ಕಡಿಮೆ ಅಂಕ ಗಳಿಸಿದ್ದರೂ ಉತ್ತೀರ್ಣ ಎಂದು ಘೋಷಿಸಲಾಗಿತ್ತು. ಈ ಕಾರಣದಿಂದ ಎಜುಟೆಸ್ಟ್ ಅನ್ನು ಮೂರು ವರ್ಷಗಳ ಕಾಲ ನಿಷೇಧಿಸಿ ಕಪ್ಪುಪಟ್ಟಿಗೆ ಸೇರಿಸಲಾಗಿದೆ.

ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದಿಂದ ಒಪ್ಪಂದ

ಬಿಹಾರ ಕಪ್ಪು ಪಟ್ಟಿಗೆ ಸೇರಿಸುವ ಒಂದು ದಿನ ಮುಂಚಿತವಾಗಿ, ಅಂದರೆ ಅಕ್ಟೋಬರ್ 19, 2023 ರಂದು, ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿನ ಕೌನ್ಸಿಲ್ ಆಫ್ ಸೈಂಟಿಫಿಕ್ ಮತ್ತು ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್‌ಐಆರ್‌) ಸೆಕ್ಷನ್ ಆಫೀಸರ್ ಹುದ್ದೆಗಳಿಗೆ (ಎಎಸ್‌ಒ) ನೇಮಕಾತಿ ಪರೀಕ್ಷೆಯನ್ನು ನಡೆಸಲು ಎಜುಟೆಸ್ಟ್ 8 ಕೋಟಿ ರೂ.ಗಳ ಒಪ್ಪಂದ ಮಾಡಿಕೊಂಡಿತ್ತು. ಸಿಎಸ್‌ಐಆರ್‌ ಈ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿತ್ತು. ಇನ್ನೊಂದು ಪ್ರಮುಖ ವಿಷಯವೆಂದರೆ ಸಿಎಸ್‌ಐಆರ್‌ನ ಅಧ್ಯಕ್ಷರು ಸ್ವತಃ ಪ್ರಧಾನಿ ನರೇಂದ್ರ ಮೋದಿ ಆಗಿದ್ದಾರೆ.

ಈ ಪರೀಕ್ಷೆಯಲ್ಲಿಯೂ ಅಕ್ರಮ ನಡೆದ ಹಿನ್ನೆಲೆ, ಉತ್ತರಾಖಂಡದ ಪೊಲೀಸರು ಪ್ರಮುಖ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಪರೀಕ್ಷೆಯಲ್ಲಿ ಹಲವು ಅಕ್ರಮಗಳು ನಡೆದರೂ, ಸಿಎಸ್‌ಐಆರ್‌ ಆರೋಪಗಳನ್ನು ನಿರಾಕರಿಸಿದೆ.

ಅಕ್ರಮಗಳ ಹಿನ್ನೆಲೆ ಹೆಸರು ಬದಲಿಸಿರುವ ಕಂಪನಿ

ಎಜುಟೆಸ್ಟ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ತಾನು 1981 ರಿಂದ ವಿವಿಧ ರೀತಿಯ ಪರೀಕ್ಷೆಗಳನ್ನು ನಡೆಸುತ್ತಿದೆ ಎಂದು ಹೇಳಿಕೊಂಡಿದೆ. ಕಂಪನಿಯ ವೆಬ್‌ಸೈಟ್ ಪ್ರಕಾರ, ಇದು ಕಳೆದ 40 ವರ್ಷಗಳಲ್ಲಿ ಸಾವಿರಾರು ಪರೀಕ್ಷೆಗಳನ್ನು ನಡೆಸಿದೆ ಮತ್ತು ಇವೆಲ್ಲವೂ ದೋಷ ರಹಿತವಾಗಿವೆ.

ಎಜುಟೆಸ್ಟ್ ಕಂಪನಿಯು ಉತ್ತರ ಪ್ರದೇಶ ಅಧೀನ ಸೇವೆಗಳ ಆಯ್ಕೆ ಆಯೋಗ, ಗುಜರಾತ್ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯ, ಭಾರತ್ ಎಲೆಕ್ಟ್ರಾನಿಕ್ಸ್, ಛತ್ತೀಸ್‌ಗಢ ಸರ್ಕಾರ, ಹರಿಯಾಣ ಎಸ್‌ಎಸ್‌ಸಿ, ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ತಿರುಚಿರಾಪಳ್ಳಿ), ಪವರ್ ಸಿಸ್ಟಮ್ ಆಪರೇಷನ್, ರಾಜಸ್ಥಾನ ಕೇಂದ್ರ ವಿಶ್ವವಿದ್ಯಾಲಯ, ಆಯಿಲ್ ಇಂಡಿಯಾ ಲಿಮಿಟೆಡ್‌ನಂತಹ ಪ್ರತಿಷ್ಠಿತ ಸರ್ಕಾರಿ ಸಂಸ್ಥೆಗಳು ಸೇರಿದಂತೆ ಹಲವು ಸಂಸ್ಥೆಗಳಿಗೆ ಕೆಲಸ ಮಾಡಿದೆ.

ಈ ಮೊದಲು ಎಜುಟೆಸ್ಟ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಅನ್ನು ಕಾನ್ಫಿಸೆಕ್ ಪ್ರೈವೇಟ್ ಲಿಮಿಟೆಡ್‌ ಎಂದು ಎಂದು ಕರೆಯಲಾಗುತ್ತಿತ್ತು. ಆದರೆ, ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ತೊಡಗಿಸಿಕೊಂಡ ನಂತರ, ಅದು ತನ್ನ ಹೆಸರನ್ನು ಬದಲಿಸಿಕೊಂಡಿದೆ.

2017ರಲ್ಲಿ ಕಂಪನಿಯ ನಿರ್ದೇಶಕನ ಬಂಧನ

2017ರಲ್ಲಿ ಬಿಹಾರ ಸ್ಟಾಫ್ ಸೆಲೆಕ್ಷನ್ ಕಮಿಷನ್ (ಬಿಎಸ್‌ಎಸ್‌ಸಿ) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಬಿಹಾರ ಪೊಲೀಸರು ಬಿಎಸ್‌ಎಸ್‌ಸಿ ಅಧ್ಯಕ್ಷ ಮತ್ತು ಐಎಎಸ್ ಅಧಿಕಾರಿ ಸುಧೀರ್ ಕುಮಾರ್ ಜೊತೆಗೆ ಪ್ರಶ್ನೆ ಪತ್ರಿಕೆಯನ್ನು ಮುದ್ರಿಸಿದ ಹಳೆಯ ಮೂಲ ಹೆಸರಿನ ಕಂಪನಿ ಕಾನ್ಫಿಸೆಕ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕ ವಿನೀತ್ ಆರ್ಯನನ್ನು ಫೆಬ್ರವರಿ 2017 ರಲ್ಲಿ ಬಂಧಿಸಿದ್ದರು. ನಂತರ ಆತ ಸ್ವಲ್ಪ ಸಮಯದ ನಂತರ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ. ಈಗಲೂ ಹಲವು ಆರೋಗ್ಯದ ಸುಳ್ಳುಗಳನ್ನು ಹೇಳಿ ಜಾಮೀನಿನ ಮೇಲೆ ಇದ್ದಾನೆ.

ಬಿಎಸ್‌ಎಸ್‌ಸಿ ಪೇಪರ್ ಸೋರಿಕೆ ಹಗರಣವು ಕಾನ್ಫಿಸೆಕ್ ಪ್ರೈವೇಟ್ ಲಿಮಿಟೆಡ್‌ಗೆ ಬಹಳಷ್ಟು ಅಪಖ್ಯಾತಿ ತಂದಿತು. ವಿನೀತ್ ಪಾತ್ರದ ಬಗ್ಗೆ ದೇಶದ ಪ್ರಮುಖ ನಗರಗಳಲ್ಲಿ ಹಲವು ಸುದ್ದಿಗಳು ಪ್ರಕಟವಾಗಿದ್ದವು. ಇದಾದ ನಂತರದಲ್ಲಿ ಆಗಸ್ಟ್ 23,2018 ರಂದು ನೀಡಲಾದ ಜಿಎಸ್‌ಟಿ ದಾಖಲೆಯಲ್ಲಿ, ಕಂಪನಿಯ ಹೆಸರನ್ನು ಎಜುಟೆಸ್ಟ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಎಂದು ಬದಲಾಯಿಸಲಾಗಿದೆ.

ಎಜುಟೆಸ್ಟ್ ಸೊಲ್ಯೂಷನ್ಸ್ ಕಂಪನಿಯ ಸಂಸ್ಥಾಪಕರು ಹಮ್ಮಿಕೊಳ್ಳುತ್ತಿರುವ ಹಲವು ಕಾರ್ಯಕ್ರಮಗಳಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್‌, ಕಿಶನ್‌ ರೆಡ್ಡಿ, ರಾಜ್ಯಪಾಲರಾದ ಆನಂದಿಬೆನ್‌ ಪಟೇಲ್‌ ಸೇರಿದಂತೆ ಹಲವು ನಾಯಕರು ಪಾಲ್ಗೊಳ್ಳುತ್ತಿರುವುದು ಅಕ್ರಮಗಳಲ್ಲಿ ಬಿಜೆಪಿ ಸರ್ಕಾರಗಳ ಪರೋಕ್ಷ ಸಹಕಾರವಿದೆ ಎಂದು ಹೇಳಲಾಗುತ್ತಿದೆ.

ಕೃಪೆ : ದಿ ವೈರ್ 

ಇದನ್ನೂ ಓದಿ : ಕೋಟಾದಲ್ಲಿ ಮತ್ತೋರ್ವ ನೀಟ್ ಆಕಾಂಕ್ಷಿ ಆತ್ಮಹತ್ಯೆಗೆ ಶರಣು; ಜನವರಿ ನಂತರ 12ನೇ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...