Homeಮುಖಪುಟಹೊಸ ಕ್ರಿಮಿನಲ್ ಕಾನೂನುಗಳಿಗೆ ತಡೆ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಹೊಸ ಕ್ರಿಮಿನಲ್ ಕಾನೂನುಗಳಿಗೆ ತಡೆ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

- Advertisement -
- Advertisement -

ಜುಲೈ 1, 2024 ರಿಂದ ಜಾರಿಗೆ ಬರಲಿರುವ ಹೊಸ ಕ್ರಿಮಿನಲ್ ಕಾನೂನುಗಳನ್ನು ತಡೆಹಿಡಿಯಲು ಮತ್ತು ವಿವಿಧ ದೋಷಗಳಿರುವ ಕಾರಣ ಅವುಗಳ ಕಾರ್ಯಸಾಧ್ಯತೆಯನ್ನು ನಿರ್ಣಯಿಸಲು ತಜ್ಞರ ಸಮಿತಿ ರಚಿಸುವಂತೆ ನಿರ್ದೇಶನ ನೀಡಲು ಕೋರಿ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಹೊಸ ಕ್ರಿಮಿನಲ್ ಕಾನೂನುಗಳು ಹಿಂದಿನ ಕಾನೂನುಗಳಿಂತ ದೊಡ್ಡ ಬದಲಾವಣೆಗಳನ್ನು ತರುವುದಿಲ್ಲ. ಬದಲಾಗಿ, ಇದು ನಾಗರಿಕರಲ್ಲಿ ಗೊಂದಲವನ್ನು ಉಂಟು ಮಾಡುತ್ತದೆ. ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡುತ್ತದೆ ಮತ್ತು ಜನರ ಮೂಲಭೂತ ಹಕ್ಕುಗಳನ್ನು ತಡೆಯುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಭಾರತೀಯ ಕಾನೂನುಗಳನ್ನು ವಸಾಹತುಶಾಹಿಗೊಳಿಸುವುದು ಹೊಸ ಕ್ರಿಮಿನಲ್ ಕಾನೂನುಗಳ ಮುಖ್ಯ ಉದ್ದೇಶವಾಗಿದೆ. ಹಳೆಯ ಕಾನೂನುಗಳನ್ನೇ ಪುನಾರವರ್ತನೆ ಮಾಡಿ ಹೆಸರು ಮಾತ್ರ ಬದಲಿಸಲಾಗಿದೆ. ಇದು ವಿವರಣೆಗಳಿಲ್ಲದೆ ಪೊಲೀಸರಿಗೆ ಹೆಚ್ಚುವರಿ ಅಧಿಕಾರವನ್ನು ನೀಡುತ್ತದೆ. ಭಯದಿಂದ ಜನರನ್ನು ಆಳಲು ಮತ್ತು ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳಲು ಸಹಾಯ ಮಾಡುತ್ತದೆ ಎಂದು ವಿವರಿಸಲಾಗಿದೆ.

ಭಾರತೀಯ ನ್ಯಾಯ ಸಂಹಿತೆ-2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ಮತ್ತು ಭಾರತೀಯ ಸಾಕ್ಷಿ ಅಧಿನಿಯ-2023 ಎಂದು ಹೆಸರಿಸಲಾದ ಮೂರು ಹೊಸ ತಿದ್ದುಪಡಿ ಕ್ರಿಮಿನಲ್ ಕಾನೂನುಗಳನ್ನು ಡಿಸೆಂಬರ್ 2023 ರಲ್ಲಿ ಸಂಸತ್ತು ಅಂಗೀಕರಿಸಿದೆ.

ಕಾನೂನುಗಳ ಶೀರ್ಷಿಕೆಯು ನಿಖರವಾಗಿಲ್ಲ. ಶಾಸನ ಮತ್ತು ಅದರ ಉದ್ದೇಶಗಳ ಬಗ್ಗೆ ಮಾತನಾಡುವುದಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಹಲವಾರು ಸದಸ್ಯರನ್ನು ಅಮಾನತುಗೊಳಿಸಿ, ಅವರ ಅಭಿಪ್ರಾಯಗಳಿಗೆ ಮನ್ನಣೆ ನೀಡದೆ, ಯಾವುದೇ ಚರ್ಚೆಗೆ ಒಳಪಡಿಸದೆ ಸಂಸತ್ತಿನಲ್ಲಿ ತಿದ್ದುಪಡಿ ಮಸೂದೆಗಳನ್ನು ಅಂಗೀಕರಿಸಲಾಗಿದೆ. ಈ ಮೂಲಕ ಅಕ್ರಮವೆಸಗಲಾಗಿದೆ ಎಂದು ಅರ್ಜಿದಾರರು ಉಲ್ಲೇಖಿಸಿದ್ದಾರೆ.

ಹೊಸ ಕಾನೂನುಗಳು ವಕೀಲರ ಮೇಲೆ ಪ್ರಭಾವ ಬೀರುತ್ತದೆ. ಅವರಿಗೆ ಹಲವು ಸವಾಲುಗಳನ್ನು ಒಡ್ಡುತ್ತದೆ ಎಂದೂ ಅರ್ಜಿಯಲ್ಲಿ ಹೇಳಲಾಗಿದೆ.

ವಕೀಲರಾದ ಸಂಜೀವ್ ಮಲ್ಹೋತ್ರಾ ಮತ್ತು ಕುನ್ವರ್ ಸಿದ್ಧಾರ್ಥ ಅವರ ಮೂಲಕ ಅಂಜಲಿ ಪಟೇಲ್ ಮತ್ತು ಛಾಯಾ ಅವರು ಪಿಐಎಲ್ ಸಲ್ಲಿಸಿದ್ದಾರೆ. ಅರ್ಜಿಯು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ರ ಅಂಶಗಳನ್ನು ಎತ್ತಿ ತೋರಿಸಿದೆ. ಸುರಕ್ಷಾ ಸಂಹಿತೆ 15 ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ಅವಕಾಶ ನೀಡುತ್ತದೆ. ಪೊಲೀಸರು 15 ದಿನಗಳ ಕಸ್ಟಡಿಯನ್ನು ಮುಗಿಸದಿದ್ದರೆ, ಇಡೀ ಅವಧಿಗೆ ಜಾಮೀನು ನಿರಾಕರಣೆಗೆ ಕಾರಣವಾಗಬಹುದು ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಸುರಕ್ಷಾ ಸಂಹಿತೆ ಬಂಧನದ ಸಮಯದಲ್ಲಿ ಕೈ ಕೋಳಗಳ ಬಳಕೆಗೆ ಅವಕಾಶ ನೀಡುತ್ತದೆ. ಕೈ ಕೋಳಗಳನ್ನು ಬಳಸುವ ಅಧಿಕಾರವು ಆರೋಪಿಯ ವೈಯಕ್ತಿಕ ಸ್ವಾತಂತ್ರ್ಯವನ್ನು ಉಲ್ಲಂಘಿಸಬಹುದು. ಕಸ್ಟಡಿಯಿಂದ ತಪ್ಪಿಸಿಕೊಂಡ ಅಭ್ಯಾಸ ಇರುವ ಅಥವಾ ಪುನರಾವರ್ತಿತ ಅಪರಾಧಿ ಮತ್ತು ಅತ್ಯಾಚಾರ, ಆಸಿಡ್ ದಾಳಿ, ಸಂಘಟಿತ ಅಪರಾಧ, ಆರ್ಥಿಕ ಅಪರಾಧಗಳು, ಸಾರ್ವಭೌಮತ್ವ, ಏಕತೆ ಹಾಗೂ ಭಾರತದ ಸಮಗ್ರತೆಗೆ ಅಪಾಯವನ್ನುಂಟುಮಾಡುವ ಕೃತ್ಯಗಳಂತಹ ಅಪರಾಧಗಳ ಆರೋಪಿಗಳನ್ನು ಬಂಧಿಸಲು ಮಾತ್ರ ಕೈ ಕೋಳವನ್ನು ಬಳಸಬಹುದು. ಸುರಕ್ಷಾ ಸಂಹಿತೆ ಸುಪ್ರೀಂ ಕೋರ್ಟ್‌ನ ತೀರ್ಪುಗಳು ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತದೆ” ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ : ಪ್ರಶ್ನೆ ಪತ್ರಿಕೆ ಸೋರಿಕೆ, ನೇಮಕಾತಿ ಹಗರಣದಲ್ಲಿ ಭಾಗಿಯಾದ ಕಂಪನಿಗೆ ಹಲವು ಗುತ್ತಿಗೆಗಳನ್ನು ನೀಡುತ್ತಿರುವ ಬಿಜೆಪಿ ಸರ್ಕಾರಗಳು: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...