Homeಮುಖಪುಟ'ಕಾರುಗಳ ಮೇಲೆ ಕಬ್ಬಿಣದ ಸರಳುಗಳು ಬಿದ್ದಾಗ ದೊಡ್ಡ ಶಬ್ದವಿರಲಿಲ್ಲ..'; ದೆಹಲಿ ವಿಮಾನ ನಿಲ್ದಾಣದ ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

‘ಕಾರುಗಳ ಮೇಲೆ ಕಬ್ಬಿಣದ ಸರಳುಗಳು ಬಿದ್ದಾಗ ದೊಡ್ಡ ಶಬ್ದವಿರಲಿಲ್ಲ..’; ದೆಹಲಿ ವಿಮಾನ ನಿಲ್ದಾಣದ ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

- Advertisement -
- Advertisement -

ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ -1 ನಲ್ಲಿ ಛಾವಣಿಯ ಒಂದು ಭಾಗದ ರಾಡ್‌ಗಳು ಕುಸಿದು ಬಿದ್ದಾಗ ಏನೂ ಮುರಿಯುವ ದೊಡ್ಡ ಶಬ್ದವಿರಲಿಲ್ಲ ಎಂದು ಘಟನೆಯ ಸ್ಥಳದಲ್ಲಿದ್ದ ಕ್ಯಾಬ್ ಚಾಲಕ ಶುಕ್ರವಾರ ತಿಳಿಸಿದ್ದಾರೆ.

ಸ್ಥಳದಲ್ಲಿ ನಿಲ್ಲಿಸಿದ್ದ ಕಾರುಗಳ ಮೇಲೆ ರಾಡ್‌ಗಳು ಬಿದ್ದ ನಂತರವೆ ಘಟನೆ ನಡೆದಿರುವ ಬಗ್ಗೆ ಜನರಿಗೆ ತಿಳಿಯಿತು. ಸ್ಥಳದಲ್ಲಿದ್ದವರು ಸಹಾಯಕ್ಕಾಗಿ ಕೂಗಿಕೊಂಡಿದ್ದರಿಂದ ಗೊಂದಲ ಉಂಟಾಯಿತು ಎಂದು ಅವರು ಹೇಳಿದರು.

ಶುಕ್ರವಾರ ದೆಹಲಿಯಲ್ಲಿ ಭಾರೀ ಮಳೆಯ ನಡುವೆ, ಟರ್ಮಿನಲ್-1 ನಿರ್ಗಮನ ಪ್ರದೇಶದಲ್ಲಿನ ಮೇಲ್ಛಾಣವಣಿಯು ಮುಂಜಾನೆ 5 ಗಂಟೆಯ ಸುಮಾರಿಗೆ ಕುಸಿದು, ಆರು ಮಂದಿ ಗಾಯಗೊಂಡಿದ್ದು; ಅವರ ಗುರುತು ಇನ್ನೂ ಪತ್ತೆಯಾಗಿಲ್ಲ. ಮೇಲ್ಛಾವಣಿ ಕುಸಿದಿದ್ದರಿಂದ ಟರ್ಮಿನಲ್‌ನ ಪಿಕ್-ಅಪ್ ಮತ್ತು ಡ್ರಾಪ್ ಪ್ರದೇಶದಲ್ಲಿ ನಿಲ್ಲಿಸಿದ ಕಾರುಗಳಿಗೆ ಹಾನಿಯಾಗಿದೆ.

ಘಟನೆ ನಡೆದಾಗ ಕಡಿಮೆ ಜನರು ಮತ್ತು ಕಡಿಮೆ ದಟ್ಟಣೆಯಿದ್ದರು ಎಂದು ಸ್ಥಳದಲ್ಲಿದ್ದ ಇನ್ನೊಬ್ಬ ಕ್ಯಾಬ್ ಚಾಲಕ ಹೇಳಿದರು.

ಕರ್ತವ್ಯದಲ್ಲಿದ್ದ ಹಲವಾರು ಸಿಆರ್‌ಪಿಎಫ್ ಸಿಬ್ಬಂದಿ ಕೂಡಲೇ ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ ನಿಯೋಜಿಸಲಾಗಿದ್ದ ಸ್ಥಳೀಯ ಪೊಲೀಸರಿಗೆ ಮತ್ತು ಅಗ್ನಿಶಾಮಕ ಇಲಾಖೆಗೆ ಎಚ್ಚರಿಕೆ ನೀಡಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಬೀಮ್‌ಗಳು ತುಂಬಾ ಭಾರವಾಗಿರುವುದರಿಂದ, ನಾವು ಅಗ್ನಿಶಾಮಕ ಇಲಾಖೆಯನ್ನು ತಕ್ಷಣವೇ ‘ಅರ್ಥ್‌ ಮೂವರ್ಸ್‌’ ಕಳುಹಿಸಲು ಹೇಳಿದೆವು. ಅಗ್ನಿಶಾಮಕ ಟೆಂಡರ್‌ಗಳು ಮತ್ತು ಅವರ ಅಧಿಕಾರಿಗಳು ಸಹ 5.30 ರ ಸುಮಾರಿಗೆ ಯಂತ್ರಗಳೊಂದಿಗೆ ಸ್ಥಳಕ್ಕೆ ತಲುಪಿದರು” ಎಂದು ಘಟನೆಯ ಸಮಯದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಹೇಳಿದರು.

ಉಪ ಪೊಲೀಸ್ ಕಮಿಷನರ್ (ಐಜಿಐ) ಉಷಾ ರಂಗಣ್ಣಿ ಮಾತನಾಡಿ, ಛಾವಣಿ ಕುಸಿದ ಪ್ರದೇಶವನ್ನು ಸುತ್ತುವರಿಯಲಾಗಿದೆ ಮತ್ತು ಘಟನಾ ಸ್ಥಳದ ಬಳಿ ಯಾರೂ ನಿಲ್ಲದಂತೆ ಖಚಿತಪಡಿಸಿಕೊಳ್ಳಲು ತಂಡಗಳನ್ನು ನಿಯೋಜಿಸಲಾಗಿದೆ.

“ಪೊಲೀಸ್ ಮತ್ತು ಸರ್ಕಾರದ ವಿವಿಧ ತಂಡಗಳು ತನಿಖೆಗಾಗಿ ಈ ಸ್ಥಳಕ್ಕೆ ಭೇಟಿ ನೀಡುತ್ತವೆ. ನಾವು ಉದ್ದೇಶಕ್ಕಾಗಿ ಪ್ರದೇಶವನ್ನು ಸುತ್ತುವರೆದಿದ್ದೇವೆ. ನಮ್ಮ ಪೊಲೀಸ್ ಸಿಬ್ಬಂದಿ, ಭದ್ರತಾ ಪಡೆಗಳು ಮತ್ತು ಡಿಎಫ್‌ಎಸ್‌ಗಳು ತಕ್ಷಣವೇ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು” ಎಂದು ಡಿಸಿಪಿ ಹೇಳಿದರು.

ಪ್ರಸ್ತುತ, ಎಲ್ಲ ಎಲಿವೇಟರ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಪ್ರಯಾಣಿಕರಿಗೆ ಮೆಟ್ಟಿಲುಗಳನ್ನು ಬಳಸಲು ಸೂಚಿಸಲಾಗಿದೆ ಎಂದು ಡಿಸಿಪಿ ರಂಗಾನಿ ತಿಳಿಸಿದ್ದಾರೆ.

ಗಾಯಗೊಂಡವರನ್ನು ಆರಂಭದಲ್ಲಿ ಹರಿಯಾಣದ ಗುರುಗ್ರಾಮ್‌ನಲ್ಲಿರುವ ಮೇದಾಂತ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿಂದ ಅವರನ್ನು ಇಲ್ಲಿನ ಸಫ್ದರ್‌ಜಂಗ್ ಆಸ್ಪತ್ರೆಗೆ ವರ್ಗಾಯಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ; ‘ಕಳಪೆ ಮೂಲಸೌಕರ್ಯಕ್ಕೆ ಕ್ರಿಮಿನಲ್ ನಿರ್ಲಕ್ಷ್ಯ ಕಾರಣ..’; ದೆಹಲಿ ವಿಮಾನ ನಿಲ್ದಾಣದ ಮೇಲ್ಛಾವಣಿ ಕುಸಿತಕ್ಕೆ ಖರ್ಗೆ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...