Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಹತ್ಯೆಗೈದಿದ್ದಾನೆ ಎಂಬುವುದು ಸುಳ್ಳು

FACT CHECK : ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಹತ್ಯೆಗೈದಿದ್ದಾನೆ ಎಂಬುವುದು ಸುಳ್ಳು

- Advertisement -
- Advertisement -

ಜನನಿಬಿಡ ರಸ್ತೆಯ ಮಧ್ಯದಲ್ಲಿ ಯುವತಿಯ ಶವದ ಬಳಿ ಯುವಕನೊಬ್ಬ ನಿಂತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಅನೇಕರು, ಸಲೀಂ ಎಂಬ ಮುಸ್ಲಿಂ ಯುವಕ ಆರತಿ ಎಂಬ ಹಿಂದೂ ಹುಡುಗಿಯನ್ನು ಕೊಲೆ ಮಾಡಿದ್ದಾನೆ ಎಂದು ಬರೆದುಕೊಂಡಿದ್ದಾರೆ.

ಒಟ್ಟು 24 ಸೆಕೆಂಡ್‌ನ ವಿಡಿಯೋದಲ್ಲಿ ಯುವಕ ತನ್ನ ಎಡೆಗೈಯಲ್ಲಿ ಸ್ಪ್ಯಾನರ್ ಹಿಡಿದು ನಿಂತಿದ್ದರೆ, ಯುವತಿಯ ಶವ ರಸ್ತೆ ಮಧ್ಯ ಇದೆ. ಸುತ್ತಲು ಹಲವಾರು ಜನರು ಸುಮ್ಮನೆ ನಿಂತು ನೋಡುವ ದೃಶ್ಯವಿದೆ.

ವಿಡಿಯೋ ಹಂಚಿಕೊಂಡಿರುವ ಅನೇಕರು ” ಸಲೀಂ ಆರತಿಗೆ ಪ್ರೇಮ ನಿವೇದನೆ (ಪ್ರಪೋಸ್) ಮಾಡಿದ್ದ. ಆದರೆ, ಆರತಿ ಅದನ್ನು ತಿರಸ್ಕರಿಸಿದ್ದಳು.ಈ ಕಾರಣಕ್ಕೆ ಸಲೀಂ ಆರತಿಯನ್ನು ನಡು ರಸ್ತೆಯಲ್ಲಿ ಹತ್ಯೆ ಮಾಡಿ ಶವದ ಪಕ್ಕದಲ್ಲೇ ನಿಂತಿದ್ದಾನೆ. ಆತನಿಗೆ ಏನೂ ಹೇಳಲು ಯಾರಿಗೂ ಧೈರ್ಯವಿಲ್ಲ” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣದ ಪೋಸ್ಟ್‌ನ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಯುವತಿಯನ್ನು ಯುವಕನೋರ್ವ ಹತ್ಯೆ ಮಾಡಿರುವುದು ಹೌದು. ಆದರೆ, ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಹತ್ಯೆ ಮಾಡಿದ್ದಾನೆ ಎಂಬ ಪ್ರತಿಪಾದನೆ ಸುಳ್ಳು ಎಂದು ತಿಳಿದು ಬಂದಿದೆ.

ಜೂನ್ 18, 2024ರಂದು ಬೆಳಿಗ್ಗೆ 8:30ರ ಸುಮಾರಿಗೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಪೂರ್ವ ವಾಸಿ ಪ್ರದೇಶದ ಚಿಂಚ್‌ಪಾಡದಲ್ಲಿ ಯುವತಿಯ ಹತ್ಯೆ ಘಟನೆ ನಡೆದಿದೆ. ಆರೋಪಿ 29 ವರ್ಷದ ರೋಹಿತ್ ಯಾದವ್ ಮತ್ತು ಮೃತ ಯುವತಿ 22 ವರ್ಷದ ಆರತಿ ಯಾದವ್ ಎಂದು ತಿಳಿದು ಬಂದಿದೆ.

ದಿ ಇಂಡಿಯನ್ ಎಕ್ಸ್‌ ಪ್ರೆಸ್ ವರದಿಯ ಪ್ರಕಾರ, “ಮೃತ ಯುವತಿ ಆರತಿ ಆರೋಪಿ ರೋಹಿತ್‌ನ ಮಾಜಿ ಪ್ರೇಯಸಿಯಾಗಿದ್ದು, ಆಕೆ ಇತ್ತೀಚೆಗೆ ಇನ್ನೊಬ್ಬ ಯುವಕನ ಜೊತೆ ಸುತ್ತಾಡುತ್ತಿದ್ದಳು. ಅದನ್ನು ನೋಡಿ ಕುಪಿತಗೊಂಡ ರೋಹಿತ್ ಯಾದವ್ ಹಾಡಹಗಲೇ ರಸ್ತೆ ಮಧ್ಯೆ ಸ್ಫ್ಯಾನರ್‌ನಿಂದ ತಲೆಗೆ ಹೊಡೆದು ಆರತಿಯನ್ನು ಹತ್ಯೆ ಮಾಡಿದ್ದಾನೆ”.

ಹಿಂದುಸ್ತಾನ್ ಟೈಮ್ಸ್‌ ವರದಿಯ ಪ್ರಕಾರ, “ಆರತಿಯನ್ನು ಹಿಂಬಾಲಿಸಿಕೊಂಡು ಬಂದ ರೋಹಿತ್, ರಸ್ತೆ ಮಧ್ಯೆ ಹಿಂಬದಿಯಿಂದ ಆಕೆಯ ತಲೆಗೆ ಸ್ಪ್ಯಾನರ್ ಮೂಲಕ ಹೊಡೆದಿದ್ದಾನೆ. ಆಕೆ ನೆಲಕ್ಕೆ ಬಿದ್ದಾಗ ಆಕೆಯ ತಲೆಗೆ ಹೊಡೆಯುವುದನ್ನು ಮುಂದುವರೆಸಿದ್ದಾನೆ. ಸ್ವಲ್ಪ ಹೊತ್ತಿನಲ್ಲೇ ರಕ್ತದ ಮಡುವಿನಲ್ಲಿ ಆರತಿ ಪ್ರಾಣ ಬಿಟ್ಟಿದ್ದಾಳೆ. ಸುತ್ತಮುತ್ತಲಿದ್ದ ಜನ ಈ ಕೃತ್ಯವನ್ನು ಸುಮ್ಮನೆ ನಿಂತು ನೋಡಿದ್ದಾರೆ”.

“ಪೊಲೀಸರ ಪ್ರಕಾರ, ರೋಹಿತ್ ಮತ್ತು ಆರತಿ ಇಬ್ಬರೂ ನಲಸೊಪರ ಮೂಲದವರು. ಇಬ್ಬರು ಸುಮಾರು 6 ವರ್ಷಗಳ ಕಾಲ ಸಂಪರ್ಕದಲ್ಲಿದ್ದರು. ಪೂರ್ವ ವಾಸಿಯ ಫ್ಯಾಕ್ಟರಿಯೊಂದರಲ್ಲಿ ಆರತಿ ಕೆಲಸ ಮಾಡುತ್ತಿದ್ದಳು. ನಿರೋದ್ಯೋಗಿಯಾಗಿದ್ದ ರೋಹಿತ್, ಇತ್ತೀಚೆಗೆ ಆರತಿ ಪುರುಷ ಸಹೋದ್ಯೋಗಿಗಳ ಜೊತೆ ಸುತ್ತಾಡುವುದನ್ನು ನೋಡಿ ಕುಪಿತಗೊಂಡಿದ್ದ. ಇದು ಇಬ್ಬರ ನಡುವೆ ಗಲಾಟೆಗೆ ಕಾರಣವಾಗಿತ್ತು. ಇದೇ ಕೋಪದಲ್ಲಿ ಆತ ಆರತಿಯನ್ನು ಹತ್ಯೆ ಮಾಡಿದ್ದಾನೆ”.

ನಾವು ನಡೆಸಿದ ಪರಿಶೀಲನೆಯಲ್ಲಿ ಆರತಿ ಎಂಬ ಯುವತಿಯನ್ನು ಹತ್ಯೆ ಮಾಡಿದವನ ಹೆಸರು ರೋಹಿತ್ ಯಾದವ್, ಸಲೀಂ ಅಲ್ಲ ಎಂದು ತಿಳಿದು ಬಂದಿದೆ. ಆರೋಪಿ ಮುಸ್ಲಿಂ ಎಂದು ಬಿಂಬಿಸಿ ಘಟನೆಗೆ ಕೋಮು ಬಣ್ಣ ಹಚ್ಚುವ ಪ್ರಯತ್ನ ನಡೆದಿರುವ ಹಿನ್ನೆಲೆ ನಾವು ಸತ್ಯಾಸತ್ಯತೆ ತೆರೆದಿಟ್ಟಿದ್ದೇವೆ. ಅಲ್ಲದೆ, ಕೊಲೆ ಪ್ರಕರಣದಲ್ಲಿ ಕೋಮು ಹುಡುಕುವ ಪ್ರಯತ್ನ ಇದಲ್ಲ.

ಇದನ್ನೂ ಓದಿ : FACT CHECK : ನೀಟ್ ಅಕ್ರಮದ ಆರೋಪಿಗಳನ್ನು ಕಾಂಗ್ರೆಸ್ ಕಚೇರಿಯಿಂದ ಬಂಧಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...