Homeಚಳವಳಿನೀಲಿ ಸಮುದ್ರದ ಜೈಭೀಮ್ ಘೋಷಣೆಗೆ ಬೆದರಿದ ಕೇಂದ್ರ; ದೆಹಲಿಯ ರವಿದಾಸ್ ದೇವಸ್ಥಾನ ನಿರ್ಮಾಣಕ್ಕೆ ಅದೇ ಜಾಗ...

ನೀಲಿ ಸಮುದ್ರದ ಜೈಭೀಮ್ ಘೋಷಣೆಗೆ ಬೆದರಿದ ಕೇಂದ್ರ; ದೆಹಲಿಯ ರವಿದಾಸ್ ದೇವಸ್ಥಾನ ನಿರ್ಮಾಣಕ್ಕೆ ಅದೇ ಜಾಗ ನೀಡಲು ಒಪ್ಪಿಗೆ, ದಲಿತರ ಹೋರಾಟಕ್ಕೆ ಸಂದ ಜಯ..

- Advertisement -
- Advertisement -

ದಲಿತರಿಗೆ ಸೇರಿದ ದೆಹಲಿಯ ರವಿದಾಸ ದೇವಾಲಯವನ್ನು ಆಗಸ್ಟ್ 10 ರಂದು ನೆಲಸಮಗೊಳಿಸಿದ್ದು ಎಲ್ಲರಿಗೂ ಗೊತ್ತಿದೆ. ಈಗ ಎರಡು ತಿಂಗಳ ನಂತರ ರವಿದಾಸ ಭಕ್ತರಿಗೆ ಅದೇ ಸ್ಥಳವನ್ನು ನೀಡಲು ಕೇಂದ್ರವು ಅಕ್ಟೋಬರ್ 18 ಶುಕ್ರವಾರ ಒಪ್ಪಿಗೆ ನೀಡಿದೆ ಎಂದು ವರದಿಗಳು ತಿಳಿಸಿವೆ. ಈ ಸಂಬಂಧ ಸುಪ್ರೀಂ ಕೋರ್ಟ್ ಅಕ್ಟೋಬರ್ 23 ರಂದು ಆದೇಶ ಹೊರಡಿಸಲಿದೆ.

ಈ ವಿಷಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಖಚಿತಪಡಿಸಿಕೊಳ್ಳಲು ಶಿಫಾರಸು ಮಾಡಲಾಗುತ್ತಿದೆ ಎಂದು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ತಿಳಿಸಿದ್ದಾರೆ.

ಅಕ್ಟೋಬರ್ 4 ರಂದು ನಡೆದ ಹಿಂದಿನ ವಿಚಾರಣೆಯಲ್ಲಿ, ಗುರು ರವಿದಾಸ್ ದೇವಸ್ಥಾನವನ್ನು ನವದೆಹಲಿಯ ತುಘಲಕಾಬಾದ್ ಪ್ರದೇಶದಲ್ಲಿ ನೆಲಸಮಗೊಳಿಸಿದ ನಂತರ ಉತ್ತಮ ಸ್ಥಳದಲ್ಲಿ ಪುನರ್ನಿರ್ಮಾಣ ಮಾಡಲು “ಸೌಹಾರ್ದಯುತ ಪರಿಹಾರ” ವನ್ನು ಸುಪ್ರೀಂ ಕೋರ್ಟ್ ಶಿಫಾರಸು ಮಾಡಿತ್ತು, ಇದು ಎಲ್ಲರ “ಭಾವನೆಗಳನ್ನು” ಗೌರವಿಸುತ್ತಾದರೂ ಕಾನೂನನ್ನು ಎಲ್ಲರೂ ಅನುಸರಿಸಬೇಕಾಗಿದೆ ಎಂದು ಹೇಳಿತ್ತು.

ಉನ್ನತ ನ್ಯಾಯಾಲಯದ ನಿರ್ದೇಶನವನ್ನು ಉಲ್ಲೇಖಿಸಿ ಈ ದೇವಾಲಯವನ್ನು ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) ನೆಲಸಮ ಮಾಡಿದೆ. ಇದು ದೆಹಲಿ, ಪಂಜಾಬ್ ಮತ್ತು ಹರಿಯಾಣದಲ್ಲಿ ಸರಣಿ ಪ್ರತಿಭಟನೆಗಳಿಗೆ ಕಾರಣವಾಗಿತ್ತು.

ಇದನ್ನೂ ಓದಿ: ದೆಹಲಿಯಲ್ಲಿ ದಲಿತರ ಪ್ರತಿಭಟನೆ: ನೀಲಿ ಸಮುದ್ರದ ಅಲೆಯಲ್ಲಿ ಮುಗಿಲು ಮುಟ್ಟಿದ ಜೈಭೀಮ್ ಘೋಷಣೆ…

ಆಗಸ್ಟ್ 27 ರಂದು, ಅರ್ಜಿದಾರರು ದೇವಾಲಯವನ್ನು ಪುನರ್ನಿರ್ಮಿಸಲು ಅನುಮತಿಗಾಗಿ ಉನ್ನತ ನ್ಯಾಯಾಲಯವನ್ನು ಕೋರಿದ್ದರು. ತಾವು ಗುರು ರವಿದಾಸ್ ಅವರ ಧರ್ಮನಿಷ್ಠ ಅನುಯಾಯಿಗಳಾಗಿದ್ದು, ಇದು ನಮಗೆ ಪುಣ್ಯ ಸ್ಥಳವಾಗಿದೆ, ಕಳೆದ 500-600 ವರ್ಷಗಳಿಂದ ನಿಯಮಿತವಾಗಿ ಪ್ರಾರ್ಥನೆಗಳನ್ನು ಅಲ್ಲಿ ನಡೆಸಲಾಗುತ್ತಿದೆ ಎಂದು ವಾದಿಸಿದ್ದರು.

ದೇವಾಲಯ ಉರುಳಿಸುವುದನ್ನು ವಿರೋಧಿಸಿ ಆಗಸ್ಟ್ 21ರಂದು ನವದೆಹಲಿಯಲ್ಲಿ ಬೃಹತ್ ಹೋರಾಟ ನಡೆಸಲಾಗಿತ್ತು. ಅವರು ದೇವಾಲಯವನ್ನು ಪರ್ಯಾಯ ಸ್ಥಳದಲ್ಲಿ ನಿರ್ಮಿಸುತ್ತೀವೆ ಎನ್ನುತ್ತಿದ್ದಾರೆ. ಆದರೆ ಅವರು ರಾಮ ಮಂದಿರವನ್ನೇಕೆ ಬೇರೆ ಸ್ಥಳಕ್ಕೆ ಸ್ಥಳಾಂತರಿಸುವುದಿಲ್ಲ? ಎಲ್ಲವೂ ಕಣ್ಣು ಮಿಟುಕಿಸುವುದರಲ್ಲಿ ಸಂಭವಿಸಿದೆ. ನಾವು ಭಾರತದ ಪ್ರಜೆಗಳಲ್ಲವೇ?” ಎಂದು ಪ್ರತಿಭಟನಾಕಾರರು ಪ್ರಶ್ನಿಸಿದ್ದರು.

ಇದನ್ನೂ ಓದಿ: ಅಂಬೇಡ್ಕರ್ ರವರು ರವಿದಾಸರ ಮತ್ತೊಂದು ರೂಪ ಎಂದು ಭಾವಿಸಿರುವ ಈ ಚಮ್ಮಾರರ ಮಂದಿರದ ಕುರಿತು

ದಲಿತ ಸಂಘಟನೆಗಳಿಂದ ನಡೆದ ಪ್ರತಿಭಟನೆಯಲ್ಲಿ ಸಾವಿರ ಸಾವಿರ ನೀಲಿ ಟೋಪಿಗಳು ಮತ್ತು ನೀಲಿ ಬಾವುಟಗಳು ಹಾರಾಡುವ ಮೂಲಕ ನೀಲಿ ಸಮುದ್ರದ ಅಲೆಯನ್ನು ಸೃಷ್ಠಿಸಿದ್ದವು. ಜೈಭೀಮ್ ಘೋಷಣೆ ಮುಗಿಲು ಮುಟ್ಟಿತ್ತು. ಭೀಮ್‌ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್‌ ರಾವಣ್, ದೆಹಲಿಯ ಸಾಮಾಜಿಕ ನ್ಯಾಯ ಸಚಿವ ರಾಜೇಂದ್ರ ಪಾಲ್ ಗೌತಮ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಆ ಪ್ರತಿಭಟನೆಯು ಕೊನೆಗೆ ಹಿಂಸಾಚಾರಕ್ಕೆ ತಿರುಗಿ ಕೆಲವರ ಬಂಧನ ಸಹ ಆಗಿತ್ತು. ಆದರೆ ಪಟ್ಟು ಬಿಡದ ದಲಿತರ ಹೋರಾಟ ಮುಂದುವರೆಸಿದ್ದರು. ಈಗ ಕೊನೆಗೆ ದಲಿತರ ಭಾವನೆಗಳ ವಿಚಾರದಲ್ಲಿ ಚೆಲ್ಲಾಟವಾಡಬಾರದು ಎಂಬ ತೀರ್ಮಾನಕ್ಕೆ ಬಂದಿದೆ. ಹಾಗಾಗಿ ಅದೇ ಜಾಗದಲ್ಲಿ ದೇವಾಲಯ ನಿರ್ಮಾಣಕ್ಕೆ ಒಪ್ಪಿಗೆ ನೀಡಿದೆ. ಇದು ದಲಿತರಿಗೆ ಸಿಕ್ಕ ಜಯ ಎಂದೇ ಹೇಳಲಾಗುತ್ತಿದೆ. ಕೇಂದ್ರ ಸರ್ಕಾರದ ಈ ಒಪ್ಪಿಗೆಯ ಹಿಂದೆ ಸದ್ಯದಲ್ಲೇ ನಡೆಯಲಿರುವ ಹರಿಯಾಣ ಚುನಾವಣೆ ಮತ್ತು ಇನ್ನು ಕೆಲವೇ ತಿಂಗಳುಗಳಲ್ಲಿ ಬರಲಿರುವ ದೆಹಲಿ ವಿಧಾನಸಭಾ ಚುನಾವಣೆಯ ಭಯ ಕಾರಣವೆಂಬ ಆರೋಪ ಕೇಳಿಬಂದಿದೆ.

ನಾವು ಕೇವಲ ವೀಕ್ಷಕರಲ್ಲ. ಚಳವಳಿಯನ್ನು ಮುನ್ನಡೆಸುವ ನಾಯಕರುಗಳಾಗಲು ಬಯಸುತ್ತೇವೆ: ಚಂದ್ರಶೇಖರ್ ರಾವಣ್ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...