Homeಫ್ಯಾಕ್ಟ್‌ಚೆಕ್FACT CHECK : ಸಂಬಂಧಿಕರಲ್ಲದ ಹೊರಗಿನವರಿಗೆ ರೈಲು ಟಿಕೆಟ್ ಬುಕ್ ಮಾಡಿದ್ರೆ ಜೈಲು ಸೇರಬೇಕಾಗುತ್ತದೆ ಎನ್ನುವುದು...

FACT CHECK : ಸಂಬಂಧಿಕರಲ್ಲದ ಹೊರಗಿನವರಿಗೆ ರೈಲು ಟಿಕೆಟ್ ಬುಕ್ ಮಾಡಿದ್ರೆ ಜೈಲು ಸೇರಬೇಕಾಗುತ್ತದೆ ಎನ್ನುವುದು ಸುಳ್ಳು

- Advertisement -
- Advertisement -

“ಐಆರ್‌ಸಿಟಿಸಿಯ ಹೊಸ ನಿಯಮದ ಪ್ರಕಾರ ವ್ಯಕ್ತಿಯೊಬ್ಬರು ತನ್ನ ವೈಯುಕ್ತಿಕ ಐಡಿ ಬಳಸಿ ರಕ್ತ ಸಂಬಂಧಿಗಳಿಗೆ ಅಥವಾ ಒಂದೇ ರೀತಿಯ ಉಪನಾಮೆ ಇರುವವರಿಗೆ ಮಾತ್ರ ರೈಲು ಟಿಕೆಟ್ ಕಾಯ್ದಿರಿಸಬಹುದು. ಸ್ನೇಹಿತರು ಅಥವಾ ಇತರರಿಗೆ ಟಿಕೆಟ್‌ಗಳನ್ನು ಕಾಯ್ದಿರಿಸಿದರೆ 10 ಸಾವಿರ ರೂಪಾಯಿ ದಂಡ ಮತ್ತು 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು” ಎಂಬ ಸಂದೇಶವೊಂದು ಹರಿದಾಡುತ್ತಿದೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣದ ಸುದ್ದಿಯ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಗೂಗಲ್‌ನಲ್ಲಿ ಸಂಬಂಧಿತ ಕೀ ವರ್ಡ್ ಬಳಸಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ ಐಆರ್‌ಸಿಟಿಸಿ ವೆಬ್‌ಸೈಟ್‌ನಲ್ಲಿ ನಮಗೆ ಈ ಕುರಿತು ಮಾಹಿತಿ ದೊರೆತಿದೆ. ವೆಬ್‌ಸೈಟ್‌ನ ಬುಕ್‌ಮೈ ಟ್ರೈನ್ ಎಂಬ ವಿಭಾಗದಲ್ಲಿ ಪದೇ ಪದೇ ಕೇಳುವ ಪ್ರಶ್ನೆಗಳ (FAQ) ಪಟ್ಟಿಯ ಕ್ರ.ಸಂ 12ರಲ್ಲಿ “ವಿಮಾನದಂತೆ ನೀವು ಸ್ನೇಹಿತರು ಮತ್ತು ಕುಟುಂಬಸ್ಥರಿಗೆ ಟಿಕೆಟ್‌ಗಳನ್ನು ಬುಕ್ ಮಾಡಬಹುದು. ನೆನಪಿಡಿ, ಪ್ರಯಾಣಿಸುವಾಗ ಪ್ರಯಾಣಿಕರು ಮಾನ್ಯವಾದ ಫೋಟೋ ಗುರುತಿನ ಪುರಾವೆಯನ್ನು ಹೊಂದಿರಬೇಕು” ಎಂದು ತಿಳಿಸಲಾಗಿದೆ.

ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ ಜೂನ್ 27ರಂದು ಲೈವ್‌ ಮಿಂಟ್ ಈ ಕುರಿತು ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ. ವರದಿಯಲ್ಲಿ “ಐಆರ್‌ಸಿಟಿಸಿ ತನ್ನ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ವ್ಯಕ್ತಿಯೊಬ್ಬರು ಸ್ನೇಹಿತರು, ಕುಟುಂಬಸ್ಥರು ಮತ್ತು ಸಂಬಂಧಿಕರಿಗೆ ಆನ್‌ಲೈನ್‌ನಲ್ಲಿ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಸ್ಪಷ್ಟಪಡಿಸಿರುವುದಾಗಿ ಹೇಳಿದೆ” ಎನ್ನಲಾಗಿದೆ.

ಜೂನ್ 25, 2024ರಂದು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದ ಐಆರ್‌ಸಿಟಿಸಿ, ವಿವಿಧ ಉಪನಾಮಗಳ ಕಾರಣ ಇ-ಟಿಕೆಟ್‌ಗಳ ಬುಕ್ಕಿಂಗ್‌ಗೆ ನಿರ್ಬಂಧ ವಿಧಿಸಿರುವ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು ಮತ್ತು ತಪ್ಪುದಾರಿಗೆಳೆಯುವಂತಿದೆ. ಸಂಬಂಧಪಟ್ಟವರು ಇಂತಹ ಸುಳ್ಳು ಸುದ್ದಿ ಹರಡುವುದನ್ನು ನಿಲ್ಲಿಸಬೇಕಿದೆ. ರೈಲ್ವೆ ಮಂಡಳಿಯ ಮಾರ್ಗಸೂಚಿಗಳ ಪ್ರಕಾರ ಐಆರ್‌ಸಿಟಿಸಿ ಸೈಟ್‌ನಲ್ಲಿ ಟಿಕೆಟ್‌ಗಳನ್ನು ಬುಕ್ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದೆ”.

ರೈಲ್ವೆ ಸಚಿವಾಲಯದ ವಕ್ತಾರರು ಕೂಡ ಈ ವಿಷಯವನ್ನು ದೃಢಪಡಿಸಿದ್ದು “ಒಬ್ಬರು ವ್ಯಕ್ತಿ ಸ್ನೇಹಿತರು, ಕುಟುಂಬಸ್ಥರು ಮತ್ತು ಸಂಬಂಧಿಕರಿಗೆ ವೈಯಕ್ತಿಕ ಐಡಿ ಬಳಸಿ ಟಿಕೆಟ್‌ಗಳನ್ನು ಬುಕ್ ಮಾಡಬಹುದು. ತಿಂಗಳಿಗೆ 12 ಟಿಕೆಟ್‌ಗಳವರೆಗೆ ಬುಕ್ಕಿಂಗ್ ಮಾಡಬಹುದು. ಆಧಾರ್-ದೃಢೀಕೃತ ಬಳಕೆದಾರರಾದರೆ ತಿಂಗಳಿಗೆ 24 ಟಿಕೆಟ್‌ಗಳನ್ನು ಕಾಯ್ದಿರಿಸಬಹುದು. ಟಿಕೆಟ್‌ನಲ್ಲಿರುವ ಪ್ರಯಾಣಿಕರಲ್ಲಿ ಪೈಕಿ ಒಬ್ಬರ ಆಧಾರ್ ದೃಢೀಕರಿಸಿದ್ದರೆ ಸಾಕು” ಎಂದು ತಿಳಿಸಿದ್ದಾರೆ.

“ವೈಯಕ್ತಿಕ ಐಡಿ ಬಳಸಿ ಬುಕ್ ಮಾಡಲಾದ ಟಿಕೆಟ್‌ಗಳು ವಾಣಿಜ್ಯ ಉದ್ದೇಶಕ್ಕೆ ಮಾರಾಟ ಮಾಡುವಂತಿಲ್ಲ. ಅಂತಹ ಕೃತ್ಯವು ರೈಲ್ವೆ ಕಾಯ್ದೆ 1989ರ ಸೆಕ್ಷನ್ 143 ರ ಅಡಿಯಲ್ಲಿ ಅಪರಾಧವಾಗಿದೆ” ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಆದ್ದರಿಂದ, ಒಬ್ಬರು ವ್ಯಕ್ತಿ ತನ್ನ ವೈಯಕ್ತಿಕ ಐಡಿ ಬಳಸಿಕೊಂಡು ರಕ್ತ ಸಂಬಂಧಗಳಿಗೆ ಅಥವಾ ಅದೇ ಉಪನಾಮ ಹೊಂದಿರುವವರಿಗೆ ಮಾತ್ರ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂಬ ವೈರಲ್ ಸುದ್ದಿ ಸುಳ್ಳಾಗಿದೆ. ಇ-ಟಿಕೆಟ್ ಬುಕ್ಕಿಂಗ್‌ಗೆ ಅಂತಹ ಯಾವುದೇ ನಿಯಮ ಜಾರಿಗೊಳಿಸಿಲ್ಲ ಎಂದು ಐಆರ್‌ಸಿಟಿಸಿ ಮತ್ತು ರೈಲ್ವೆ ಸ್ಪಷ್ಟಪಡಿಸಿದೆ.

ಇದನ್ನೂ ಓದಿ : FACT CHECK : ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಹತ್ಯೆಗೈದಿದ್ದಾನೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...