Homeಮುಖಪುಟಮಸೀದಿ ಧ್ವಂಸಕ್ಕೆ ಪ್ರತಿರೋಧ: ಜಮ್ಮುವಿನ ಕಥುವಾ ಜಿಲ್ಲೆಯಲ್ಲಿ ಸ್ಥಳೀಯಯರೊಂದಿಗೆ ಪೊಲೀಸರ ಘರ್ಷಣೆ

ಮಸೀದಿ ಧ್ವಂಸಕ್ಕೆ ಪ್ರತಿರೋಧ: ಜಮ್ಮುವಿನ ಕಥುವಾ ಜಿಲ್ಲೆಯಲ್ಲಿ ಸ್ಥಳೀಯಯರೊಂದಿಗೆ ಪೊಲೀಸರ ಘರ್ಷಣೆ

- Advertisement -
- Advertisement -

ಜಮ್ಮುವಿನ ಕಥುವಾ ಜಿಲ್ಲೆಯಲ್ಲಿ ಸರ್ಕಾರಿ ಭೂಮಿಯಲ್ಲಿ ನಿರ್ಮಿಸಲಾಗಿದೆ ಎನ್ನಲಾದ ಮಸೀದಿಯನ್ನು ಕೆಡವಲು ಅಧಿಕಾರಿಗಳು ಯತ್ನಿಸಿದ ನಂತರ ಉದ್ವಿಗ್ನತೆ ಉಂಟಾಯಿತು, ಇದು ಘರ್ಷಣೆಗೆ ಕಾರಣವಾಗಿದ್ದು, ಸುಮಾರು ಅರ್ಧ ಡಜನ್ ಪೊಲೀಸರು ಮತ್ತು ಸ್ಥಳೀಯರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

52 ದಿನಗಳ ವಾರ್ಷಿಕ ಅಮರನಾಥ ಯಾತ್ರೆಯು ಕಣಿವೆಯಲ್ಲಿ ಪ್ರಾರಂಭವಾಗಿದ್ದು, ಯಾತ್ರಾರ್ಥಿಗಳ ಮೊದಲ ತಂಡವು ಅವಳಿ ಮೂಲ ಶಿಬಿರಗಳಾದ ಸೋನಾಮಾರ್ಗ್‌ನ ಬಾಲ್ಟಾಲ್ ಮತ್ತು ಪಹಲ್ಗಾಮ್‌ನ ನುನ್ವಾನ್‌ನಿಂದ ಗುಹೆಗೆ ಪ್ರಯಾಣಿಸಲು ಹೊರಟಾಗ ಘರ್ಷಣೆಗಳು ಪ್ರಾರಂಭವಾದವು.

ಕಥುವಾ ಜಿಲ್ಲೆಯ ನಗ್ರಿಯಲ್ಲಿನ ಸ್ಥಳೀಯರು, ಭದ್ರತಾ ಪಡೆಗಳ ಬಲವಾದ ತುಕಡಿಯ ನೆರವಿನೊಂದಿಗೆ ಅಧಿಕಾರಿಗಳ ಗುಂಪು ಮಸೀದಿಯನ್ನು ಕೆಡವಲು ಪದ್ದರಿಗೆ ಶನಿವಾರ ಮುಂಜಾನೆ ಬಂದರು.

“ಅವರು ಮಸೀದಿಯನ್ನು ಕೆಡವಲು ಬುಲ್ಡೋಜರ್‌ಗಳನ್ನು ತಂದಿದ್ದರು. ಆದರೆ ಸ್ಥಳೀಯರು ಈ ಕ್ರಮವನ್ನು ವಿರೋಧಿಸಿ ಹೆಚ್ಚಿನ ಸಂಖ್ಯೆಯಲ್ಲಿ ಬಂದರು. ಮಸೀದಿಯ ನಿರ್ಮಾಣವು ಸುಮಾರು ಒಂದು ದಶಕದ ಹಿಂದೆ ಪ್ರಾರಂಭವಾಯಿತು. ಆದರೆ, ಅದನ್ನು ತುಂಡುಗಳಾಗಿ ನಿರ್ಮಿಸಲಾಯಿತು. ಇಷ್ಟು ವರ್ಷಗಳಲ್ಲಿ ಯಾರೂ ಇದನ್ನು ವಿರೋಧಿಸಲಿಲ್ಲ” ಎಂದು ಬುಡಕಟ್ಟು ಗುಜ್ಜರ್ ಸಮುದಾಯದ ಲಾಲ್ ಹುಸೇನ್ ಹೇಳಿದರು.

“ಜನರು ಈ ಕ್ರಮವನ್ನು ವಿರೋಧಿಸಿದರು ಮತ್ತು ಮಸೀದಿಯನ್ನು ಕೆಡವಲು ಅವರಿಗೆ ಅವಕಾಶ ನೀಡಲಿಲ್ಲ” ಎಂದು ಅವರು ಹೇಳಿದರು.

ಸ್ಥಳೀಯರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ಕೆಡವುವ ಕಾರ್ಯವನ್ನು ಕೈಬಿಡುವಂತೆ ಒತ್ತಾಯಿಸಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಓರ್ವ ಅಧಿಕಾರಿ ಸೇರಿದಂತೆ ಐವರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಕೃಷಿ ಭೂಮಿಯಲ್ಲಿ ಜನರ ಗುಂಪು ಪೊಲೀಸರನ್ನು ಹಿಂಬಾಲಿಸಿ ಕಲ್ಲುಗಳಿಂದ ದಾಳಿ ಮಾಡುವುದು ವಿಡಿಯೊಗಳಲ್ಲಿ ಸೆರೆಯಾಗಿದೆ. ಹೆಚ್ಚುವರಿ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಅವರು ಅಲ್ಲಿಯೇ ಠಿಕಾಣಿ ಹೂಡಿದ್ದಾರೆ. ಸರ್ಕಾರ ಮತ್ತೆ ಧ್ವಂಸ ಕಾರ್ಯ ಆರಂಭಿಸಬಹುದು ಎಂಬ ಆತಂಕ ಸ್ಥಳೀಯರಲ್ಲಿದೆ.

ದೋಧಿ (ಹಾಲುಗಾರರ) ಗುಜ್ಜರ್ ಅಸೋಸಿಯೇಶನ್‌ನ ನಾಯಕ ಜಮೀಲ್ ಚೌಧರಿ, ಘಟನೆಯ ಬಗ್ಗೆ ಜಮ್ಮು ವಿಭಾಗೀಯ ಆಯುಕ್ತ ರಾಕೇಶ್ ಕುಮಾರ್ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಧಾರ್ಮಿಕ ಸ್ಥಳವನ್ನು ಗುರಿಯಾಗಿಸದಂತೆ ಕೇಳಿಕೊಂಡಿದ್ದೇನೆ ಎಂದು ಹೇಳಿದರು.

“ಮಸೀದಿಯನ್ನು ಅಕ್ರಮವಾಗಿ (ಸರ್ಕಾರಿ ಭೂಮಿಯಲ್ಲಿ) ನಿರ್ಮಿಸಲಾಗಿದೆ ಎಂದು ಅವರು ನನಗೆ ಹೇಳಿದರು. ನಾನು ಹೇಳಿದ್ದು ಸರಿಯಾಗಿರಬಹುದು. ಆದರೆ, ಒಂದೇ ಒಂದು ಸಮುದಾಯವನ್ನು ಏಕೆ ಗುರಿಪಡಿಸಬೇಕು? ಈ ಪ್ರದೇಶದಲ್ಲಿ ಸರ್ಕಾರಿ ಭೂಮಿಯಲ್ಲಿ ಹಲವಾರು ದೇವಾಲಯಗಳನ್ನು ನಿರ್ಮಿಸಲಾಗಿದೆ ಮತ್ತು ಅವುಗಳಲ್ಲಿ ಒಂದನ್ನು ಕೆಡವಿದರೆ, ನಾವು ಸ್ವಯಂಪ್ರೇರಣೆಯಿಂದ ಮಸೀದಿಯನ್ನು ನೆಲಸಮ ಮಾಡುತ್ತೇವೆ ಎಂದು ನಾನು ಅವರಿಗೆ ಹೇಳಿದೆ” ಎಂದು ಚೌಧರಿ ತಿಳಿಸಿದ್ದಾರೆ ಎಂದು ‘ದಿ ಟೆಲಿಗ್ರಾಫ್‌’ ವರದಿ ಮಾಡಿದೆ.

ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಗುಜ್ಜಾರ್‌ಗಳು ಬಿಜೆಪಿ ವಿರುದ್ಧವಾಗಿ ಮತ ಚಲಾಯಿಸಿದ್ದರಿಂದ ಈ ಕಾರ್ಯಾಚರಣೆಯು ರಾಜಕೀಯ ಪ್ರೇರಿತವಾಗಿದೆ ಎಂದು ಅವರು ಆರೋಪಿಸದರು.

ಗಾಯಗೊಂಡ ಪೊಲೀಸರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಥುವಾ ಜಿಲ್ಲೆ ಇತ್ತೀಚೆಗೆ ಉಗ್ರರ ದಾಳಿಯಿಂದ ತತ್ತರಿಸಿದ್ದು, ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಮತ್ತು ಒಬ್ಬ ಸಿಆರ್‌ಪಿಎಫ್‌ ಯೋಧರು ಹತರಾಗಿದ್ದರು. ಘಟನೆಯಲ್ಲಿ ಓರ್ವ ನಾಗರಿಕ ಕೂಡ ಗಾಯಗೊಂಡಿದ್ದಾರೆ. ಕಥುವಾದಲ್ಲಿ ಭದ್ರತಾ ಪಡೆಗಳು ಹಲವು ಬಾರಿ ಶೋಧ ಕಾರ್ಯಾಚರಣೆ ನಡೆಸಿವೆ.

ಇದನ್ನೂ ಓದಿ; ನಾಗಾಲ್ಯಾಂಡ್: ಎರಡು ದಶಕಗಳ ನಂತರ ನಡೆದ ನಾಗರಿಕ ಸಂಸ್ಥೆ ಚುನಾವಣೆಯಲ್ಲಿ 102 ಮಹಿಳೆಯರು ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...