Homeಮುಖಪುಟಪಶ್ಚಿಮ ಬಂಗಾಳ : ಮಹಿಳೆಗೆ ಅಮಾನುಷವಾಗಿ ಥಳಿಸಿದ ಟಿಎಂಸಿ ಮುಖಂಡ

ಪಶ್ಚಿಮ ಬಂಗಾಳ : ಮಹಿಳೆಗೆ ಅಮಾನುಷವಾಗಿ ಥಳಿಸಿದ ಟಿಎಂಸಿ ಮುಖಂಡ

- Advertisement -
- Advertisement -

ಪಶ್ಚಿಮ ಬಂಗಾಳದ ಆಡಳಿತರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮುಖಂಡ ಎನ್ನಲಾದ ವ್ಯಕ್ತಿ ಮಹಿಳೆಯೊಬ್ಬರಿಗೆ ಸಾರ್ವಜನಿಕವಾಗಿ ಥಳಿಸಿರುವ ಘಟನೆ ನಡೆದಿದೆ.

ಉತ್ತರ ದಿನಾಜ್‌ಪುರ ಜಿಲ್ಲೆಯ ಲಖೀಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಘೆಮ್ಟಗಚ್ ಗ್ರಾಮದ ರಸ್ತೆಯಲ್ಲಿ ಹಲ್ಲೆ ನಡೆದಿದೆ ಎನ್ನಲಾಗಿದ್ದು, ಈ ಕುರಿತ ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿ ಮಹಿಳೆಗೆ ಭೀಕರವಾಗಿ ಥಳಿಸುವಾಗ ನೂರಾರು ಜನರು ಸುತ್ತುವರಿದು ನೋಡುವ ದೃಶ್ಯವಿದೆ.

ಜೂನ್ 28ರಂದು ಘಟನೆ ನಡೆದರೂ ಬೆಳಕಿಗೆ ಬಂದಿರಲಿಲ್ಲ. ಜನರ ಮೊಬೈಲ್‌ನಲ್ಲಿ ವಿಡಿಯೋ ಹರಿದಾಡುತ್ತಿತ್ತು. ಆದರೆ, ಅವರು ಭಯದಿಂದ ಪೊಲೀಸರು ಮತ್ತು ಮಾಧ್ಯಮಗಳಿಗೆ ತಿಳಿಸಿರಲಿಲ್ಲ ಎಂದು ವರದಿಗಳು ಹೇಳಿವೆ.

ಘಟನೆ ಸಂಬಂಧ ಇಸ್ಲಾಂಪುರ ಪೊಲೀಸ್ ಜಿಲ್ಲೆಯ ಪೊಲೀಸ್ ಅಧೀಕ್ಷಕ ಡಾ. ಜೋಬಿ ಥಾಮಸ್ ಕೆ ಅವರನ್ನು ನಾವು ಸಂಪರ್ಕಿಸಿದ್ದು, “ಚೋಪ್ರಾ ಪ್ರದೇಶದ ಘಟನೆಯೊಂದು ನಮ್ಮ ಗಮನಕ್ಕೆ ಬಂದಿದೆ. ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಪೊಲೀಸ್ ತನಿಖೆ ಮುಂದುವರಿಯುತ್ತದೆ.” ಎಂದು ತಿಳಿಸಿದ್ದಾರೆ ಎಂಬುವುದಾಗಿ ದಿ ವೈರ್ ವರದಿ ಮಾಡಿದೆ.

ಜೂನ್ 30ರಂದು ಸಂಜೆ ಘಟನೆಯ ಬಗ್ಗೆ ತಪ್ಪು ಮಾಹಿತಿ ಹರಡಲು ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸರು ಎಕ್ಸ್‌ನಲ್ಲಿ ಬರೆದಿದ್ದಾರೆ. ಆದರೆ, ಆರೋಪಿಗಳ ಪಕ್ಷದ ಬಗ್ಗೆ ಪೊಲೀಸರು ಮಾಹಿತಿ ನೀಡಿಲ್ಲ.

ಹಲ್ಲೆಗೊಳಗಾದ ಮಹಿಳೆಯನ್ನು ಸುಲ್ತಾನಾ ಎಂದು ಗುರುತಿಸಲಾಗಿದ್ದು, ಈಕೆ ವಾರದ ಹಿಂದೆ ತನ್ನ ಪತಿ ಮತ್ತು ಇಬ್ಬರು ಮಕ್ಕಳನ್ನು ತೊರೆದು ರಾಜೀವ್ ಎಂಬ ವ್ಯಕ್ತಿಯೊಂದಿಗೆ ಸಿಲಿಗುರಿ ಬಳಿಯ ಮಟಿಗಾರ ಪ್ರದೇಶಕ್ಕೆ ತೆರಳಿದ್ದರು. ಜೂನ್ 28 ರಂದು ರಾಜೀವ್ ಮತ್ತು ಸುಲ್ತಾನಾ ಗ್ರಾಮಕ್ಕೆ ಮರಳಿದಾಗ ಥಳಿಸಲಾಗಿದೆ ಎಂದು ದಿ ವೈರ್ ಹೇಳಿದೆ.

ಟಿಎಂಸಿಯ ಸ್ಥಳೀಯ ಮುಖಂಡ ತಾಜಿಮುಲ್ ಅಲಿಯಾಸ್ ‘ಜೆಸಿಬಿ’ ಮಹಿಳೆಗೆ ಥಳಿಸಿದ್ದು, ಆಕೆ ತನ್ನ ಪತಿಯನ್ನು ಎರಡನೇ ಬಾರಿ ಮದುವೆಯಾಗಬೇಕಾದರೆ 3 ಲಕ್ಷ ರೂ. ಮತ್ತು ತಾಜಿಮುಲ್‌ಗೆ 2 ಲಕ್ಷ ರೂ. ಪಾವತಿಸಬೇಕೆಂದು ಷರತ್ತು ವಿಧಿಸಲಾಗಿತ್ತು. ಆದರೆ, ಸುಲ್ತಾನಾ ಹಣ ಪಾವತಿಸಲು ನಿರಾಕರಿಸಿದ್ದರು.

ಇದರಿಂದ ಕುಪಿತಗೊಂಡ ತಾಜಿಮುಲ್, ಮೊದಲು ಮಹಿಳೆಗೆ ಅವಮಾನಿಸಿ ಬಳಿಕ ಸುಮಾರು ಒಂದು ಗಂಟೆಗಳ ಕಾಲ ಭೀಕರವಾಗಿ ಥಳಿಸಿದ್ದಾನೆ. ಕೆಲ ಪ್ರತ್ಯಕ್ಷದರ್ಶಿಗಳ ಪ್ರಕಾರ, ರಾಜೀವ್‌ಗೂ ಥಳಿಸಲಾಗಿದೆ ಎನ್ನಲಾಗಿದೆ.

ಘಟನೆ ನಡೆದ ನಾಲ್ಕೈದು ಗಂಟೆಗಳ ನಂತರ ಚೋಪ್ರಾ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಜ್ಞಾಹೀನರಾಗಿದ್ದ ಇಬ್ಬರನ್ನೂ ಆಸ್ಪತ್ರೆಗೆ ಕರೆದೊಯ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಅವರು ಈಗ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಂಧನಕ್ಕೊಳಗಾದ ವ್ಯಕ್ತಿ ತಾಜಿಮುಲ್ ಜಾಮೀನು ಕೂಡ ಪಡೆದಿದ್ದಾನೆ ಎಂದು ದಿ ವೈರ್ ಖಚಿತಪಡಿಸಿದೆ.

ತಾಜಿಮುಲ್ ಚೋಪ್ರಾ ಶಾಸಕ ಹಮೀದುರ್ ರೆಹಮಾನ್ ಅವರ ಬಲಗೈ ಬಂಟ ಎಂದು ತಿಳಿದು ಬಂದಿದೆ. ಈತ ಹಲವು ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ ಎಂದು ವರದಿಯಾಗಿದೆ. ಕಳೆದ ವರ್ಷ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಗುಂಡಿನ ದಾಳಿಯಿಂದ ಹತ್ಯೆಗೀಡಾದ ಯುವ ಸಿಪಿಐ(ಎಂ) ಕಾರ್ಯಕರ್ತ ಮನ್ಸೂರ್ ಹತ್ಯೆ ಪ್ರಕರಣದ ಪ್ರಮುಖ ಶಂಕಿತ ಆರೋಪಿ ಈತನಾಗಿದ್ದಾನೆ.

ಮಾಜಿ ಸಂಸದ ಮತ್ತು ಸಿಪಿಐ (ಎಂ) ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಸಲೀಂ ಅವರು ಎಕ್ಸ್‌ ಪೋಸ್ಟ್‌ನಲ್ಲಿ ಹಲ್ಲೆಯ ವಿಡಿಯೋವನ್ನು ಚಿತ್ರೀಕರಿಸಿದ ವ್ಯಕ್ತಿಯನ್ನು ಈಗಾಗಲೇ ಗ್ರಾಮದಿಂದ ಹೊರಹಾಕಲಾಗಿದೆ ಎಂದು ಹೇಳಿದ್ದಾರೆ. ದಿ ವೈರ್‌ ಇದನ್ನು ದೃಢಪಡಿಸಿವೆ. ವಿಡಿಯೋ ಹಂಚಿಕೆಯಲ್ಲಿ ಪಾತ್ರವಹಿಸಿದ ಇನ್ನೊಬ್ಬ ವ್ಯಕ್ತಿಗೆ 50,000 ರೂ “ದಂಡ” ವಿಧಿಸಲಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ : ನೀಟ್-ಯುಜಿ ಮರು ಪರೀಕ್ಷೆ: ಪರಿಷ್ಕೃತ ಶ್ರೇಣಿಯ ಪಟ್ಟಿ ಪ್ರಕಟಿಸಿದ ಎನ್‌ಟಿಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...