Homeಮುಖಪುಟಸಂಸತ್ ಅಧಿವೇಶನ : ರಾಹುಲ್ ಗಾಂಧಿಯ ಹೇಳಿಕೆಯನ್ನು ತಿರುಚಿ ಹಂಚಿಕೊಂಡ ಬಿಜೆಪಿಗರು

ಸಂಸತ್ ಅಧಿವೇಶನ : ರಾಹುಲ್ ಗಾಂಧಿಯ ಹೇಳಿಕೆಯನ್ನು ತಿರುಚಿ ಹಂಚಿಕೊಂಡ ಬಿಜೆಪಿಗರು

- Advertisement -
- Advertisement -

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಇಂದು (ಜುಲೈ 1) ಸಂಸತ್‌ನಲ್ಲಿ ಮಾಡಿದ ಭಾಷಣ ದೇಶದ ಗಮನ ಸೆಳೆದಿದೆ.

ಮಣಿಪುರ ಹಿಂಸಾಚಾರ, ರೈತರ ಹೋರಾಟದ ದಮನ, ನೀಟ್ ಹಗರಣ, ಚುನಾವಣಾ ಪ್ರಚಾರದ ವೇಳೆ ದ್ವೇಷ ಭಾಷಣ ಹೀಗೆ ಎಲ್ಲಾ ವಿಷಯಗಳನ್ನು ಉಲ್ಲೇಖಿಸಿ ರಾಹುಲ್ ಗಾಂಧಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಭಾಷಣದಲ್ಲಿ ರಾಹುಲ್ ಗಾಂಧಿ “ತಮ್ಮನ್ನು ತಾವು ಹಿಂದೂ ಎಂದು ಕರೆದುಕೊಳ್ಳುವವರು ಹಿಂಸೆ, ದ್ವೇಷ, ಅಸತ್ಯದ ಬಗ್ಗೆ ಮಾತನಾಡುತ್ತಿದ್ದಾರೆ. ನೀವು ಯಾವುದೇ ರೀತಿಯಲ್ಲೂ ಹಿಂದೂ ಅಲ್ಲ” ಎಂದು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಅನ್ನು ಗುರಿಯಾಗಿಸಿ ಹೇಳಿದ್ದರು. ಈ ಹೇಳಿಕೆಯ ತುಣುಕನ್ನು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಹುಲ್ ಗಾಂಧಿಯ ಹೇಳಿಕೆಯ ಅರ್ಧ ವಿಡಿಯೋವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, “ತನ್ನನ್ನು ತಾನು ಹಿಂದೂ ಎಂದು ಕರೆದುಕೊಳ್ಳುವ ಪ್ರತಿಯೊಬ್ಬರನ್ನು ‘ಹಿಂಸಾತ್ಮಕ’ ಎಂದು ಕರೆಯುವ ಮೂಲಕ ರಾಹುಲ್ ಗಾಂಧಿ ಕಾಂಗ್ರೆಸ್‌ಗೆ ಹಿಂದೂಗಳ ಮೇಲಿರುವ ದ್ವೇಷ ಮತ್ತು ತಿರಸ್ಕಾರ ಭಾವನೆಯನ್ನು ತೋರಿಸಿದ್ದಾರೆ. ಇದು ಅವರ ಇಂಡಿಯಾ ಒಕ್ಕೂಟದ ಪಾಲುದಾರರ ಹಿಂದೂ ದ್ವೇಷವನ್ನೂ ತೋರಿಸಿದೆ. “ಮೊಹಬ್ಬತ್ ಕಿ ದುಕಾನ್” ಎಂದು ಹೇಳಿಕೊಳ್ಳುವವರ ಬೂಟಾಟಿಕೆ ಬಹಿರಂಗವಾಗಿದೆ” ಎಂದು ಬರೆದುಕೊಂಡಿದ್ದಾರೆ.

ಬಿಜೆಪಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಹಾಲಿ ಆರೋಗ್ಯ ಸಚಿವರ ಜೆಪಿ ನಡ್ಡಾ “ರಾಹುಲ್ ಗಾಂಧಿ ಅವರು ಹಿಂದೂಗಳನ್ನು ಹಿಂಸಾತ್ಮಕ ಎಂದಿದ್ದಕ್ಕಾಗಿ ತಕ್ಷಣವೇ ಎಲ್ಲಾ ಹಿಂದೂಗಳ ಕ್ಷಮೆಯಾಚಿಸಬೇಕು. ಹಿಂದೂಗಳು ಭಯೋತ್ಪಾದಕರು ಎಂದು ವಿದೇಶಿ ರಾಜತಾಂತ್ರಿಕರಿಗೆ ಹೇಳುತ್ತಿದ್ದವರು ಇವರೇ. ಹಿಂದೂಗಳ ಮೇಲಿನ ಈ ಆಂತರಿಕ ದ್ವೇಷ ನಿಲ್ಲಬೇಕು” ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಕೂಡ ರಾಹುಲ್ ಗಾಂಧಿ ಹೇಳಿಕೆಯ ಅರ್ಧ ವಿಡಿಯೋವನ್ನು ಹಂಚಿಕೊಂಡು ‘ರಾಹುಲ್ ಗಾಂಧಿ ಎಲ್ಲಾ ಹಿಂದೂಗಳನ್ನು ಹಿಂಸಾತ್ಮಕ ಎಂದಿದ್ದಾರೆ ಎಂಬಂತೆ’ ಬಿಂಬಿಸಿದ್ದಾರೆ.

ಅಸಲಿಗೆ ರಾಹುಲ್ ಗಾಂಧಿ ಎಲ್ಲಾ ಹಿಂದೂಗಳನ್ನು ಹಿಂಸಾತ್ಮಕ, ದ್ವೇಷ ಕಾರುವವರು ಎಂದು ಕರೆದಿಲ್ಲ. “ಹಿಂದೂ ಎಂದು ಹೇಳಿಕೊಂಡು ಬಿಜೆಪಿ ಮತ್ತು ಆರ್‌ಎಸ್‌ಎಸ್‌ನವರು ದ್ವೇಷ, ಹಿಂಸೆಯನ್ನು ಪ್ರಚೋದಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿಯ ಹೇಳಿಕೆಗೆ ಪ್ರಧಾನಿ ಮೋದಿ ಆಕ್ಷೇಪ ವ್ಯಕ್ತಪಡಿಸಿದಾಗ, ರಾಹುಲ್ ಗಾಂಧಿ ಪ್ರತಿಕ್ರಿಯೆ ಕೊಟ್ಟಿದ್ದು, “ನಿಮಗೆ… ಬಿಜೆಪಿಯವರಿಗೆ ನಾನು ಹೇಳಿದ್ದು. ಹಿಂದೂ ಅಂದ್ರೆ ನರೇಂದ್ರ ಮೋದಿಯಲ್ಲ. ಹಿಂದು ಅಂದ್ರೆ ಆರ್‌ಎಸ್‌ಎಸ್‌ ಅಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. ಪೂರ್ಣ ವಿಡಿಯೋದಲ್ಲಿ ಅದನ್ನು ಗಮನಿಸಬಹುದು.

ಇದನ್ನೂ ಓದಿ : ‘ಹಿಂದೂ ಎಂದು ಕರೆದುಕೊಳ್ಳುವವರು ಹಿಂಸೆ, ದ್ವೇಷ, ಅಸತ್ಯದ ಬಗ್ಗೆ ಮಾತ್ರ ಮಾತನಾಡುತ್ತಿದ್ದಾರೆ..’; ಸದನದಲ್ಲಿ ಕಿಚ್ಚುಹಚ್ಚಿದ ರಾಹುಲ್ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...