Homeಕರ್ನಾಟಕಗಿಗ್‌ ಕಾರ್ಮಿಕರ ಕಲ್ಯಾಣ ಮಂಡಳಿ : ಕರಡು ಮಸೂದೆ ಪ್ರಕಟಿಸಿದ ರಾಜ್ಯ ಸರ್ಕಾರ

ಗಿಗ್‌ ಕಾರ್ಮಿಕರ ಕಲ್ಯಾಣ ಮಂಡಳಿ : ಕರಡು ಮಸೂದೆ ಪ್ರಕಟಿಸಿದ ರಾಜ್ಯ ಸರ್ಕಾರ

- Advertisement -
- Advertisement -

ಗಿಗ್‌ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಮತ್ತು ಆರ್ಥಿಕ ನೆರವು ಒದಗಿಸಲು ಪ್ರತ್ಯೇಕ ಗಿಗ್‌ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಮುಂದಾಗಿರುವ ಕಾರ್ಮಿಕ ಇಲಾಖೆ, ಅದಕ್ಕೆ ಪೂರಕವಾಗಿ ಗಿಗ್‌ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) ಮಸೂದೆಯನ್ನು ರೂಪಿಸಿದೆ.

ಗಿಗ್‌ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) ಮಸೂದೆ–2024ರ ಕರಡನ್ನು ಕಾರ್ಮಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ ಶನಿವಾರ ಪ್ರಕಟಿಸಿದ್ದು, ಸಲಹೆ ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಹತ್ತು ದಿನಗಳ ಕಾಲಾವಕಾಶ ನೀಡಲಾಗಿದೆ. ವಿಧಾನಮಂಡಲದ ಮುಂಗಾರು ಅಧಿವೇಶನದಲ್ಲಿ ಮಸೂದೆಗೆ ಅಂಗೀಕಾರ ಪಡೆಯುವ ಸಾಧ್ಯತೆ ಇದೆ.

ವಿಧಾನಸಭೆ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕಲ್ಯಾಣಕ್ಕಾಗಿ ಕಾನೂನು ಜಾರಿಗೊಳಿಸುವ ಭರವಸೆ ನೀಡಿತ್ತು. ಅದರಂತೆ ಕರಡು ಮಸೂದೆ ಪ್ರಕಟಿಸಿದೆ. ಕಳೆದ ವರ್ಷ ಜುಲೈನಲ್ಲಿ ರಾಜಸ್ಥಾನ ಇದೇ ರೀತಿಯ ಕಾನೂನನ್ನು ಅಂಗೀಕರಿಸಿತ್ತು. ಈ ಮೂಲಕ ಗಿಗ್ ಕಾರ್ಮಿಕರ ಕಲ್ಯಾಣಕ್ಕೆ ಕಾನೂನು ರೂಪಿಸಿದ ದೇಶದ ಮೊದಲ ರಾಜ್ಯ ಎನಿಸಿಕೊಂಡಿತ್ತು.

ಗಿಗ್‌ ಕಾರ್ಮಿಕರನ್ನು ಮಂಡಳಿಯಲ್ಲಿ ನೋಂದಾಯಿಸಿ ಅವರಿಗೆ ಪ್ರತ್ಯೇಕ ನಿಧಿ ಸ್ಥಾಪಿಸುವ ಪ್ರಸ್ತಾವ ಮಸೂದೆಯಲ್ಲಿದೆ. ಇದಕ್ಕಾಗಿ ಗಿಗ್‌ ಕಾರ್ಮಿಕರ ಕೆಲಸಕ್ಕೆ ವಿಧಿಸುವ ಶುಲ್ಕಕ್ಕೆ ಅನುಸಾರವಾಗಿ ಪ್ರತ್ಯೇಕ ಸೆಸ್‌ ಸಂಗ್ರಹಿಸುವ ಪ್ರಸ್ತಾವವೂ ಇದೆ. ನೋಂದಣಿ ಶುಲ್ಕವೂ ಸೇರಿದಂತೆ ಸಂಗ್ರಹವಾಗುವ ಎಲ್ಲ ಮೊತ್ತವನ್ನು ಗಿಗ್‌ ಕಾರ್ಮಿಕರ ಕಲ್ಯಾಣ ನಿಧಿಯಲ್ಲಿ ಬಳಸಲಾಗುತ್ತದೆ.

ಗಿಗ್‌ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳುವ ಕಂಪನಿಯು ಎಲ್ಲಾ ಕಾರ್ಮಿಕರ ಮಾಹಿತಿಯನ್ನು ಮಂಡಳಿ ಜೊತೆ ಹಂಚಿಕೊಳ್ಳಬೇಕು. ಸೇವಾದಾರ ಕಂಪನಿಯೂ ಮಂಡಳಿಯಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕಾಗುತ್ತದೆ. ಈ ಮಸೂದೆಯ ಪ್ರಕಾರ, ನಿರ್ದಿಷ್ಟ ಕಾರಣಗಳಲ್ಲದೇ ಗಿಗ್‌ ಕಾರ್ಮಿಕರನ್ನು ಕೆಲಸದಿಂದ ಕೈಬಿಡುವಂತಿಲ್ಲ. ಅವರಿಗೆ ಪಾವತಿಸಬೇಕಾದ ಮೊತ್ತದಲ್ಲಿ ಕಡಿತ ಮಾಡುವಂತಿಲ್ಲ.

ಕಾರ್ಮಿಕರ ಕುಂದು ಕೊರತೆಗಳನ್ನು ಪರಿಹರಿಸುವ ಅಧಿಕಾರವೂ ಮಂಡಳಿಗೆ ಇರುತ್ತದೆ. ಕಾಯ್ದೆಯನ್ನು ಉಲ್ಲಂಘಿಸುವವರಿಗೆ 1 ಲಕ್ಷ ರೂಪಾಯಿವರೆಗೆ ದಂಡ ವಿಧಿಸುವುದಕ್ಕೂ ಅವಕಾಶ ಇರಲಿದೆ. ಗಿಗ್‌ ಕಾರ್ಮಿಕರ ಸೇವೆ ಬಳಸಿಕೊಳ್ಳುವ ಕಂಪನಿಗಳಲ್ಲಿ ತಪಾಸಣೆ ನಡೆಸುವ ಅಧಿಕಾರವನ್ನೂ ಮಸೂದೆಯು ಕಾರ್ಮಿಕ ಇಲಾಖೆಗೆ ನೀಡಲಿದೆ.

ಉದ್ಯೋಗದಾತ ಮತ್ತು ಉದ್ಯೋಗಿ ಎಂಬ ನಿಯಮಗಳ ಹೊರತಾಗಿರುವ ಕೆಲಸಗಳನ್ನು ಮಾಡಿ ಸಂಪಾದನೆ ಮಾಡುವ ವ್ಯಕ್ತಿಗಳನ್ನು ಗಿಗ್ ಕಾರ್ಮಿಕರು ಎನ್ನಲಾಗುತ್ತದೆ. ಜೊಮ್ಯಾಟೋ, ಸ್ವಿಗ್ಗಿಯಂತಹ ಡೆಲಿವರಿ ಬಾಯ್‌ಗಳು ಈ ಕಾರ್ಮಿಕರ ವರ್ಗಕ್ಕೆ ಸೇರುತ್ತಾರೆ.

ದೇಶದಲ್ಲಿ ಗಿಗ್ ಕಾರ್ಮಿಕರ ನಿಖರ ಸಂಖ್ಯೆಯ ಬಗ್ಗೆ ಯಾವುದೇ ಸರ್ಕಾರಿ ಮಾಹಿತಿ ಇಲ್ಲ. ಆದಾಗ್ಯೂ, ಕರ್ನಾಟಕದ ಬೆಂಗಳೂರಿನಲ್ಲಿ ಮಾತ್ರ ಸುಮಾರು ಎರಡು ಲಕ್ಷ ಗಿಗ್ ಕಾರ್ಮಿಕರು ಜೊಮ್ಯಾಟೋ, ಪೋರ್ಟರ್, ಸ್ವಿಗ್ಗಿ ಮತ್ತು ಡೆಂಝೋದಂತಹ ವಿವಿಧ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ದುಡಿಯುತ್ತಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ತಿಳಿಸಿದೆ.

ಇದನ್ನೂ ಓದಿ : ಸಂಸತ್ ಅಧಿವೇಶನ : ರಾಹುಲ್ ಗಾಂಧಿಯ ಹೇಳಿಕೆಯನ್ನು ತಿರುಚಿ ಹಂಚಿಕೊಂಡ ಬಿಜೆಪಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...