Homeಮುಖಪುಟಮೀಸಲಾತಿ ಹೆಚ್ಚಳ ರದ್ದು: ಪಾಟ್ನಾ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಬಿಹಾರ ಸರ್ಕಾರ

ಮೀಸಲಾತಿ ಹೆಚ್ಚಳ ರದ್ದು: ಪಾಟ್ನಾ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಬಿಹಾರ ಸರ್ಕಾರ

- Advertisement -
- Advertisement -

ಹಿಂದುಳಿದ ವರ್ಗಗಳು, ಅತ್ಯಂತ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಾತಿ ಹೆಚ್ಚಿಸಲು ಅವಕಾಶ ಕಲ್ಪಿಸುವ ಮೀಸಲಾತಿ (ತಿದ್ದುಪಡಿ) ಕಾಯ್ದೆ-2023 ರದ್ದುಗೊಳಿಸಿರುವ ಪಾಟ್ನಾ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಬಿಹಾರದ ನಿತೀಶ್‌ ಕುಮಾರ್‌ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಮೀಸಲಾತಿ ವರ್ಗಗಳ ಒಟ್ಟು ಮೀಸಲಾತಿ ಹೆಚ್ಚಿಸುವ ಸಲುವಾಗಿ ಶೇಖಡ 50ರಷ್ಟಿದ ಮೀಸಲಾತಿ ಮಿತಿಯನ್ನು ಶೇ.65ಕ್ಕೆ ಹೆಚ್ಚಿಸಲು 2023ರಲ್ಲಿ ಬಿಹಾರ ವಿಧಾನಸಭೆ ಕಾಯ್ದೆಗೆ ತಿದ್ದುಪಡಿ ತಂದಿತ್ತು.

ತಿದ್ದುಪಡಿ ಮಾಡಲಾದ ಕಾಯ್ದೆ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಮಾನ ಅವಕಾಶಗಳನ್ನು ವಂಚಿಸುತ್ತದೆ ಎಂದು ಆಕ್ಷೇಪಿಸಿ ಸಲ್ಲಿಸಿದ್ದ ಅರ್ಜಿಗಳಿಗೆ ಸಂಬಂಧಿಸಿದಂತೆ ನೀಡಲಾಗಿದ್ದ ತೀರ್ಪಿಗೆ ರಾಜ್ಯ ಸರ್ಕಾರ ವಿರೋಧ ವ್ಯಕ್ತಪಡಿಸಿದೆ.

ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಮತ್ತು ಸಂವಿಧಾನದ 14, 15 ಮತ್ತು 16ನೇ ವಿಧಿಯಡಿ ಒದಗಿಸಲಾದ ಸಮಾನತೆಯ ಹಕ್ಕನ್ನು ಉಲ್ಲಂಘಿಸುತ್ತವೆ ಎಂದು ಮುಖ್ಯ ನ್ಯಾಯಮೂರ್ತಿ ಕೆ ವಿನೋದ್ ಚಂದ್ರನ್ ಮತ್ತು ನ್ಯಾಯಮೂರ್ತಿ ಹರೀಶ್ ಕುಮಾರ್ ಅವರಿದ್ದ ಪಾಟ್ನಾ ಹೈಕೋರ್ಟ್ ವಿಭಾಗೀಯ ಪೀಠವು ಬಿಹಾರ ಮೀಸಲಾತಿ (ತಿದ್ದುಪಡಿ) ಕಾಯ್ದೆ-2023 ಮತ್ತು ಬಿಹಾರ (ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶಾತಿ) ಮೀಸಲಾತಿ (ತಿದ್ದುಪಡಿ) ಕಾಯ್ದೆ-2023 ಅನ್ನು ಬದಿಗೆ ಸರಿಸಿತ್ತು.

ಸರ್ಕಾರಿ ಸೇವೆಯಲ್ಲಿ ತುಲನಾತ್ಮಕವಾಗಿ ಎಸ್‌ಸಿ, ಎಸ್‌ ಟಿ ಮತ್ತು ಹಿಂದುಳಿದ ವರ್ಗಗಳ ಸದಸ್ಯರ ಸಂಖ್ಯೆ ಕಡಿಮೆ ಇದೆ ಎಂಬ ದತ್ತಾಂಶ ಆಧರಿಸಿ ಶಾಸಕಾಂಗ 1991ರ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತಂದಿತ್ತು.

ಅದರಂತೆ ಮೀಸಲಾತಿ ವರ್ಗಗಳ ಒಟ್ಟು ಮೀಸಲಾತಿಯನ್ನು 2023ರಲ್ಲಿ ಶೇ 65ಕ್ಕೆ ಹೆಚ್ಚಿಸಲಾಗಿತ್ತು. ಈ ನಿರ್ಧಾರದಿಂದಾಗಿ ಸಾಮಾನ್ಯ ಅರ್ಹತೆಯ ವರ್ಗದವರಿಗೆ ಇದ್ದ ಅವಕಾಶ ಶೇ. 35ಕ್ಕೆ ಇಳಿದಿತ್ತು.

ಇದನ್ನೂ ಓದಿ : ಉತ್ತರ ಪ್ರದೇಶ| ಧಾರ್ಮಿಕ ಕಾರ್ಯಕ್ರಮದಲ್ಲಿ ಕಾಲ್ತುಳಿತ: 100ಕ್ಕೂ ಅಧಿಕ ಜನರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...