Homeಮುಖಪುಟ'ಖರ್ಗೆ ಬದಲಿಗೆ ಜೈರಾಮ್ ನಾಯಕರಾಗಲಿ' ಎಂದ ಧನಖರ್; 'ನಿಮ್ಮ ತಲೆಯಿಂದ ವರ್ಣ ವ್ಯವಸ್ಥೆ ಹೋಗಿಲ್ಲ' ಎಂದು...

‘ಖರ್ಗೆ ಬದಲಿಗೆ ಜೈರಾಮ್ ನಾಯಕರಾಗಲಿ’ ಎಂದ ಧನಖರ್; ‘ನಿಮ್ಮ ತಲೆಯಿಂದ ವರ್ಣ ವ್ಯವಸ್ಥೆ ಹೋಗಿಲ್ಲ’ ಎಂದು ಕಿಡಿಕಾರಿದ ಕಾಂಗ್ರೆಸ್ ಅಧ್ಯಕ್ಷ

- Advertisement -
- Advertisement -

‘ಕಾಂಗ್ರೆಸ್ ಸಂಸದರನ್ನು ಶಿಸ್ತುಬದ್ಧಗೊಳಿಸಲು ಸದನದಲ್ಲಿ ಖರ್ಗೆ ಸ್ಥಾನವನ್ನು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ತೆಗೆದುಕೊಳ್ಳಬೇಕು” ಎಂದು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಹೇಳಿದಾಗ, ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಹೊರಹಾಕಿದರು. “ನಿಮ್ಮ ತಲೆಯಿಂದ ವರ್ಣ ವ್ಯವಸ್ಥೆ ಇನ್ನೂ ಹೋಗಿಲ್ಲ” ಎಂದು ತಿರುಗೇಟು ನೀಡಿದರು.

ಸಭಾಪತಿಯವರು “ವರ್ಣ” (ಜಾತಿ) ವ್ಯವಸ್ಥೆಯನ್ನು ತರಲು ಪ್ರಯತ್ನಿಸುತ್ತಿದ್ದಾರೆ ಎಂದು ಖರ್ಗೆ ತಿರುಗೇಟು ನೀಡಿದರು. ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯ ವೇಳೆ ಧನಖರ್ ಅವರು ಕಾಂಗ್ರೆಸ್‌ನ ಪ್ರಮೋದ್ ತಿವಾರಿ ಅವರಿಗೆ ಪರಿಶೀಲಿಸದ ಸಂಗತಿಗಳನ್ನು ಹೇಳಬೇಡಿ ಎಂದು ಕೇಳಿದಾಗ ವಾಗ್ವಾದ ಪ್ರಾರಂಭವಾಯಿತು.

ಇದನ್ನು ದೃಢೀಕರಿಸಲಾಗುವುದು ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದರು. ಸದನದಲ್ಲಿ ಯಾವುದೇ ಸದಸ್ಯರು ಮಾತನಾಡುವಾಗ ಅಡ್ಡಿಪಡಿಸಬೇಡಿ ಎಂದು ರಮೇಶ್‌ಗೆ ಸಭಾಪತಿ ಸಲಹೆ ನೀಡಿದರು. ಪೀಠದ ಸಲಹೆಯನ್ನು ರಮೇಶ್ ಕಡೆಗಣಿಸಿದ್ದರಿಂದ ಬೇಸರಗೊಂಡ ಧನಖರ್, “ಹಿರಿಯ ನಾಯಕತ್ವ (ಖರ್ಗೆ) ಇಲ್ಲಿದ್ದಾರೆ. ನೀವು (ರಮೇಶ್) ಅವರ (ಖರ್ಗೆ) ಬದಲಿಗೆ ವಿಪಕ್ಷ ನಾಯಕರಾಗಬೇಕು; ಅವರ ಕೆಲಸ ನೀವು ಮಾಡುತ್ತಿದ್ದೀರಿ ಎಂದು ನಾನು ಭಾವಿಸುತ್ತೇನೆ… ನೀವು ತುಂಬಾ ಬುದ್ಧಿವಂತರು, ತುಂಬಾ ಪ್ರತಿಭಾವಂತರು, ನೀವು ತಕ್ಷಣ ಬಂದು ಆಸನದಲ್ಲಿ ಕುಳಿತುಕೊಳ್ಳಬೇಕು” ಎಂದರು.

ಸಿಟ್ಟಾದ ಖರ್ಗೆ, ಸಭಾಪತಿಗಳ ವಿರುದ್ಧ ಕೆಂಡಾಮಂಡಲರಾದರು’ “ವರ್ಣ ವ್ಯವಸ್ಥೆ ತರಬೇಡಿ…ಅದಕ್ಕಾಗಿಯೇ ರಮೇಶ್ ಅವರನ್ನು ಬುದ್ದಿವಂತ ಎಂದು ಕರೆಯುತ್ತಿದ್ದೀರಿ… ನಾನು ದಡ್ಡ ಎನ್ನುತ್ತಿದ್ದೀರಿ” ಎಂದು ಖರ್ಗೆ ತಿರುಗೇಟು ನೀಡಿದರು. ಅವರು ತಮ್ಮ ರಾಜಕೀಯ ಸ್ಥಾನವನ್ನು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಮತದಾರರಿಗೆ ಕಾರಣವೆಂದು ಹೇಳುವ ಮೂಲಕ ತಮ್ಮ ಸ್ಥಾನವನ್ನು ಸಮರ್ಥಿಸಿಕೊಂಡರು, ಸಾರ್ವಜನಿಕ ಸೇವೆಯಲ್ಲಿ ಅವರ ಸಾಧನೆಗಳನ್ನು ಒತ್ತಿಹೇಳಿದರು. “ನನ್ನನ್ನು ಈ ಸ್ಥಾನಕ್ಕೆ ಏರಿಸಿದ ಜನರು ಇಲ್ಲಿ ಕುಳಿತಿದ್ದಾರೆ” ಎಂದು ಖರ್ಗೆ ಅವರು ಪಕ್ಕದಲ ಆಸನದಲ್ಲಿ ಕುಳಿತಿದ್ದ ಸೋನಿಯಾ ಗಾಂಧಿಯವರತ್ತ ದೃಷ್ಟಿ ಹಾಯಿಸಿದರು.

ಇದನ್ನು ಕೇಳಿದ ನಂತರ ಕೋಪಗೊಂಡ ಧನಖರ್, ಖರ್ಗೆ ಅವರ ಹೇಳಿಕೆಯನ್ನು “ತಿರುಚಿದ” ಎಂದು ಆರೋಪಿಸಿದರು. ನೀವು ನನ್ನ ಹೇಳಿಕೆ ಎಂದಿಗೂ ಅರ್ಥಮಾಡಿಕೊಂಡಿಲ್ಲ ಎಂದು ಹೇಳಿದರು. ಸಂಸದೀಯ ಪ್ರಜಾಪ್ರಭುತ್ವ ಮತ್ತು ರಾಜ್ಯಸಭೆಯ ಕಲಾಪಗಳ ಇತಿಹಾಸದಲ್ಲಿ ಕುರ್ಚಿಯ ಬಗ್ಗೆ ಇಂತಹ ನಿರ್ಲಕ್ಷ್ಯ ನಡೆದಿರಲಿಲ್ಲ ಎಂದು ಅವರು ಹೇಳಿದರು.

“ಆರ್‌ಎಸ್‌ಎಸ್ ತಮ್ಮ ಸದಸ್ಯರನ್ನು ಉಪಕುಲಪತಿಗಳು ಮತ್ತು ಪ್ರಾಧ್ಯಾಪಕರನ್ನಾಗಿ ನೇಮಿಸುವ ಮೂಲಕ ಶಿಕ್ಷಣ ಸಂಸ್ಥೆಗಳಿಗೆ ನುಸುಳಿದೆ” ಎಂದು ಕಾಂಗ್ರೆಸ್ ಅಧ್ಯಕ್ಷರು ಆರೋಪಿಸಿದ ನಂತರ ಖರ್ಗೆ ಮತ್ತು ಧನಖರ್ ತೀವ್ರ ಮಾತಿನ ಚಕಮಕಿಯಲ್ಲಿ ಸಿಲುಕಿದ ಒಂದು ದಿನದ ನಂತರ ಈ ವಿನಿಮಯವು ನಡೆದಿದೆ.

ಕಟುವಾದ ವಾಗ್ವಾದದ ಹೊರತಾಗಿಯೂ,  ಸಂಸತ್ತಿನ ಜಂಟಿ ಅಧಿವೇಶನಕ್ಕೆ ರಾಷ್ಟ್ರಪತಿಗಳ ಭಾಷಣಕ್ಕೆ ಧನ್ಯವಾದ ನಿರ್ಣಯದ ಮೇಲೆ ತಿವಾರಿ ತಮ್ಮ ಭಾಷಣವನ್ನು ಮುಂದುವರೆಸಿದರು. ನರೇಂದ್ರ ಮೋದಿ ಸರ್ಕಾರ ತನ್ನ 10 ವರ್ಷಗಳ ಆಡಳಿತದಲ್ಲಿ ಜನರಿಗೆ ದ್ರೋಹ ಬಗೆದಿದೆ ಎಂದು ಆರೋಪಿಸಿದರು.

ಚರ್ಚೆಯಲ್ಲಿ ಭಾಗವಹಿಸಿದ ಬಿಜೆಪಿಯ ಅಶೋಕರಾವ್ ಶಂಕರರಾವ್ ಚವ್ಹಾಣ, ಲೋಕಸಭೆ ಚುನಾವಣೆ ವೇಳೆ ಬಿಜೆಪಿ 400 ಸ್ಥಾನಗಳಲ್ಲಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾವಣೆ ಕುರಿತು ಕಾಂಗ್ರೆಸ್ ತಪ್ಪು ಮಾಹಿತಿ ನೀಡುತ್ತಿದೆ ಎಂದು ಆರೋಪಿಸಿದರು.

ಇದನ್ನೂ ಓದಿ; ತನ್ನ ಭಾಷಣದ ಭಾಗಗಳನ್ನು ಕಡತದಿಂದ ತೆಗೆದು ಹಾಕಿದ ಕ್ರಮ ಪ್ರಶ್ನಿಸಿ ಸ್ಪೀಕರ್‌ಗೆ ಪತ್ರ ಬರೆದ ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...