Homeಫ್ಯಾಕ್ಟ್‌ಚೆಕ್FACT CHECK : ಬುರ್ಖಾಧಾರಿ ಮಹಿಳೆಯರಿಗೆ ಸರಪಳಿ ಬಿಗಿದು ಕರೆದೊಯ್ಯುತ್ತಿರುವ ಫೋಟೋ ಎಡಿಟೆಡ್

FACT CHECK : ಬುರ್ಖಾಧಾರಿ ಮಹಿಳೆಯರಿಗೆ ಸರಪಳಿ ಬಿಗಿದು ಕರೆದೊಯ್ಯುತ್ತಿರುವ ಫೋಟೋ ಎಡಿಟೆಡ್

- Advertisement -
- Advertisement -

ಮೂವರು ಬುರ್ಖಾಧಾರಿ ಮಹಿಳೆಯರ ಕಾಲಿಗೆ ಸರಪಳಿ ಬಿಗಿದು, ಆ ಸರಪಳಿಯ ಒಂದು ತುದಿಯನ್ನು ಹಿಡಿದುಕೊಂಡು ವ್ಯಕ್ತಿಯೊಬ್ಬರು ನಡೆಯುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

“ವ್ಯಕ್ತಿಯೊಬ್ಬ ತನ್ನ ಮೂವರು ಪತ್ನಿಯರನ್ನು ವಾಯು ವಿಹಾರಕ್ಕೆ ಕರೆದೊಯ್ಯುತ್ತಿರುವ ಫೋಟೋ ಇದು” ಎಂದು ಎಕ್ಸ್‌ ಬಳಕೆದಾರ Naughty BuBu(@INaughtyBuBu) ಬರೆದುಕೊಂಡಿದ್ದಾರೆ.

ಈ ಹಿಂದೆಯೂ ಇದೇ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆಗಸ್ಟ್ 20, 2021ರಂದು ಈ ಫೋಟೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದ Rakesh Krishnan Simha(@ByRakeshSimha)ಎಂಬ ಎಕ್ಸ್ ಬಳಕೆದಾರ “ಅರ್ಫಾ, ಸಬಾ ಮತ್ತು ಸ್ವರಾ ಎಂಬವರು ಉತ್ತರ ಕಾಬೂಲ್‌ನಲ್ಲಿ ವಾಯು ವಿಹಾರಕ್ಕೆ ತೆರಳುತ್ತಿರುವ ಫೋಟೋ ಎಂದು ಒಬ್ಬರು ಇದನ್ನು ನನಗೆ ಕಳುಹಿಸಿದ್ದಾರೆ. ಯಾರಾದರು ಇದು ನಿಜವೋ? ಸುಳ್ಳೋ? ಎಂಬುವುದನ್ನು ಖಚಿತಪಡಿಸಿ. ಸುಳ್ಳು ಸುದ್ದಿ ಹಬ್ಬಿದ ಆರೋಪ ಹೊತ್ತುಕೊಳ್ಳಲು ನನಗೆ ಇಷ್ಟವಿಲ್ಲ” ಎಂದು ಬರೆದುಕೊಂಡಿದ್ದರು.

ಆಗಸ್ಟ್ 16, 2021ರಂದು Dr Meena Kandasamy (@meenakandasamy) ಎಂಬ ಎಕ್ಸ್ ಬಳಕೆದಾರರು “ತಾಲಿಬಾನ್ ಅನ್ನು ತ್ವರಿತವಾಗಿ ಅರ್ಥಮಾಡಿಕೊಳ್ಳಲು ಬಯಸುವ ಪ್ರತಿಯೊಬ್ಬರಿಗೂ, ಅವರು ಅಫ್ಘಾನಿಸ್ತಾನದಲ್ಲಿ ಹೆಚ್ಚು ಕಡಿಮೆ ಆರ್‌ಎಸ್‌ಎಸ್ ಸಮಾನರು” ಎಂದು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದರು.

ಇದಕ್ಕೆ ತಿರುಗೇಟು ಕೊಡುವ ವೇಳೆ ನಾವು ಮೇಲ್ಗಡೆ ಉಲ್ಲೇಖಿಸಿದ ವೈರಲ್ ಪೋಟೋವನ್ನು ಹಂಚಿಕೊಂಡಿದ್ದ
TheCorporateLady🇮🇳 (@PallaviJaiswal0)ಎಂಬ ಬಳಕೆದಾರರು ” ತಾಲಿಬಾನ್ ಅನ್ನು ಅರ್ಥಮಾಡಿಕೊಳ್ಳಲು ತ್ವರಿತ ಮಾರ್ಗ! ಅದು ಇಂದಿನ ಆಫ್ಘಾನಿಸ್ತಾನದಲ್ಲಿ. ನೀವೂ ಒಮ್ಮೆ ಅಲ್ಲಿಯೇ ಇರಲು ಪ್ರಯತ್ನಿಸಿ. ಆರ್‌ಎಸ್‌ಎಸ್‌ ಅನ್ನು ಅರ್ಥಮಾಡಿಕೊಳ್ಳಲು ನಿಮಗೆ ಬುದ್ಧಿ ಶಕ್ತಿಯ ಅಗತ್ಯವಿದೆ. ಭಾರತದಲ್ಲಿ ಮಹಿಳೆಯರು ಸುರಕ್ಷಿತವಾಗಿದ್ದಾರೆ ಮತ್ತು ಮುಕ್ತವಾಗಿ ತಿರುಗಾಡುತ್ತಿದ್ದಾರೆ.” ಎಂದು ಬರೆದುಕೊಂಡಿದ್ದರು.

 

ಫ್ಯಾಕ್ಟ್‌ಚೆಕ್ : ನಾವು ಮೇಲ್ಗಡೆ ಉಲ್ಲೇಖಿಸಿದ ವೈರಲ್ ಫೋಟೋದ ಕುರಿತು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಮೊದಲು fakeimagedetector.com ಎಂಬ ವೆಬ್‌ಸೈಟ್‌ನಲ್ಲಿ ಫೋಟೋ ನಿಜವಾದ್ದದ್ದೇ ಅಥವಾ ಎಡಿಟೆಡಾ? ಎಂದು ಪರಿಶೀಲಿಸಿದ್ದೇವೆ. ಈ ವೇಳೆ ಈ ಫೋಟೋ ರಚಿತ ಅಥವಾ ಎಡಿಟೆಡ್ ಎಂದು ತೋರುತ್ತಿದೆ ಎಂಬುವುದಾಗಿ ವೆಬ್‌ಸೈಟ್‌ ತಿಳಿಸಿದೆ.

ಬಳಿಕ ನಾವು ಗೂಗಲ್‌ ರಿವರ್ಸ್ ಇಮೇಜ್‌ನಲ್ಲಿ ಫೋಟೋ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ ನಮಗೆ ಫೋಟೋ ಕುರಿತು ಯಾವುದೇ ಸ್ಪಷ್ಟ ಮಾಹಿತಿ ದೊರೆತಿಲ್ಲ.

ಆದರೆ 29 ಮಾರ್ಚ್‌ 2017 ರಂದು ಈ ವೈರಲ್‌ ಫೋಟೋಗೆ ಹೋಲಿಕೆಯಾಗುವಂತಹ ಒಂದು ಫೋಟೋ ಮಾರ್ಡನ್‌ ಡಿಪ್ಲೋಮೆಸಿ ಎಂಬ ವೆಬ್‌ ಸೈಟ್‌ ಅಂಕಣದಲ್ಲಿ ಬಳಸಿಕೊಂಡಿರುವುದು ಕಂಡು ಬಂದಿದೆ. ಆದರೆ, ವೆಬ್‌ಸೈಟ್‌ನಲ್ಲಿ ಫೋಟೋದಲ್ಲಿ ವೈರಲ್‌ ಫೋಟೋದಲ್ಲಿ ಇದ್ದಂತ ಸರಪಳಿ ಕಂಡು ಬಂದಿಲ್ಲ.

ಇದೇ ರೀತಿಯಾಗಿ 27 ಆಗಸ್ಟ್‌ 2017 ರಂದು ‘ಪತಿಗಿಂತ ಪತ್ನಿ ಒಂದು ಹೆಜ್ಜೆ ಮುಂದೆ ಇಡುತ್ತಿದ್ದ ಕಾರಣ ಪತಿ ಪತ್ನಿಗೆ ವಿಚ್ಚೇದನ ನೀಡಿದ್ದಾರೆ’ ಎಂಬ ವರದಿಯೊಂದಿಗೆ ಎಬಿಪಿ ಬೆಂಗಾಲ್ ಈ ಫೋಟೋ ಹಂಚಿಕೊಳ್ಳಲಾಗಿದೆ. ಆದರೆ, ಈ ವರದಿಯಲ್ಲಿ ಪೋಟೋವನ್ನು ಸಾಂಕೇತಿಕ ಚಿತ್ರ ಎಂದು ಉಲ್ಲೇಖಿಸಲಾಗಿದೆ. ಹಾಗಾಗಿ, ಈ ವರದಿಯಲ್ಲಿ ಕೂಡ ಇದು ಸಾಂಕೇತಿಕ ಚಿತ್ರವಾಗಿ ಬಳಕೆಯಾಗಿದೆ.

ನಾವು ಫೋಟೋ ಕುರಿತು ಇನ್ನಷ್ಟು ಮಾಹಿತಿ ಹುಡುಕಿದಾಗ 2011ರಲ್ಲಿ RabbitMatch.org ಮತ್ತು Wicked Thoughts ಎಂಬ ಎರಡೂ ಬ್ಲಾಗ್‌ಗಳು ಅಫ್ಘಾನಿಸ್ತಾನದಲ್ಲಿನ ಲಿಂಗ ತಾರತಮ್ಯಗಳ ಕುರಿತು ಅಂಕಣ ಬರೆಯಲು ಈ ಚಿತ್ರಗಳನ್ನು ಬಳಸಿಕೊಂಡಿರುವುದು ಕಂಡು ಬಂದಿದೆ. ಆದರೆ, ಅಲ್ಲೂ ಕೂಡ ಈ ಫೋಟೋವನ್ನು ಸಾಂಕೇತಿಕವಾಗಿ ಬಳಸಿಕೊಳ್ಳಲಾಗಿದೆ. ಆದರೆ, ಇಲ್ಲೂ ಕೂಡ ಸರಪಳಿಗಳು ಕಂಡು ಬಂದಿಲ್ಲ. ಹಾಗಾಗಿ, ಇದೊಂದು ಎಡಿಟೆಡ್‌ ಫೋಟೋ ಎಂಬುವುದು ಸ್ಪಷ್ಟವಾಗಿದೆ.

ಲಭ್ಯ ಮೂಲಗಳನ್ನು ಬಳಸಿ ನಾವು ನಡೆಸಿದ ಪರಿಶೀಲನೆಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ತನ್ನ ಮೂವರು ಪತ್ನಿಯರ ಕಾಲಿಗೆ ಸರಪಳಿ ಬಿಗಿದು ವಾಯು ವಿಹಾರಕ್ಕೆ ಕರೆದೊಯ್ಯುತ್ತಿದ್ದಾನೆ ಎಂದು ಹಂಚಿಕೊಳ್ಳಲಾದ ಫೋಟೋ ಎಡಿಟೆಡ್ ಎಂದು ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಕಾಸರಗೋಡಿನಲ್ಲಿ ಮುಸ್ಲಿಂ ಯುವಕರು ಪಾಕಿಸ್ತಾನ ಕ್ರಿಕೆಟ್ ತಂಡದ ಜೆರ್ಸಿ ಧರಿಸಿ ಸಂಭ್ರಮಿಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...