Homeಫ್ಯಾಕ್ಟ್‌ಚೆಕ್FACT CHECK : ಎಡಿಟೆಡ್ ವಿಡಿಯೋ ಮೂಲಕ ಮಲ್ಲಿಕಾರ್ಜುನ ಖರ್ಗೆ ವಿರುದ್ದ ಸುಳ್ಳು ಸುದ್ದಿ ಹರಡಿದ...

FACT CHECK : ಎಡಿಟೆಡ್ ವಿಡಿಯೋ ಮೂಲಕ ಮಲ್ಲಿಕಾರ್ಜುನ ಖರ್ಗೆ ವಿರುದ್ದ ಸುಳ್ಳು ಸುದ್ದಿ ಹರಡಿದ ಟಿವಿ ವಿಕ್ರಮ

- Advertisement -
- Advertisement -

“ನನ್ನನ್ನು ರಾಜ್ಯಸಭೆಗೆ ಕಳುಹಿಸಿದ್ದು ಸೋನಿಯಾ ಗಾಂಧಿ, ಮತ್ಯಾರು ಅಲ್ಲ” ಎಂದು ಹೇಳುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತನ್ನನ್ನು ಹಲವಾರು ಬಾರಿ ಆಯ್ಕೆ ಮಾಡಿ ಸಂಸತ್‌ಗೆ ಕಳುಹಿಸಿರುವ ಕಲಬುರಗಿಯ ಜನತೆಗೆ ಅವಮಾನ ಮಾಡಿದ್ದಾರೆ ಎಂದು ಬಲಪಂಥೀಯ ಯೂಟ್ಯೂಬ್ ಚಾನೆಲ್‌ ಟಿವಿ ವಿಕ್ರಮ ವರದಿ ಮಾಡಿದೆ.

ಜುಲೈ 3, 2024ರಂದು “ಸೋನಿಯಾ ಗಾಂಧಿ ಕಾಲಿಗೆ ಅಡ್ಡಡ್ಡ ಬಿದ್ರು ಖರ್ಗೆ! ಛೀ ಎಂಥಾ ಗುಲಾಮಗಿರಿ ಇದು!” ಎಂಬ ಶೀರ್ಷಿಕೆಯಲ್ಲಿ ಯೂಟ್ಯೂಬ್‌ನಲ್ಲಿ ಟಿವಿ ವಿಕ್ರಮ ವಿಡಿಯೋ ಅಪ್ಲೋಡ್ ಮಾಡಿದೆ. ವಿಡಿಯೋದಲ್ಲಿ ‘ಮಿರ್ಚಿ ಮಂಡಕ್ಕಿ’ ಎಂಬ ವಿಶೇಷ ಕಾರ್ಯಕ್ರಮದ ನಿರೂಪಕಿ ಶ್ವೇತಾ ಅವರು ಈ ಕೆಳಗಿನಂತೆ ಹೇಳಿದ್ದಾರೆ.

“ನನ್ನನ್ನು ರಾಜ್ಯಸಭೆಗೆ ಕಳುಹಿಸಿದ್ದು ಸೋನಿಯಾ ಗಾಂಧಿಯವರು, ಮತ್ಯಾರು ಅಲ್ಲ ಎಂದು ಹೇಳುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತನ್ನನ್ನು ಹಲವಾರು ಬಾರಿ ಆಯ್ಕೆ ಮಾಡಿ ಸಂಸತ್‌ಗೆ ಕಳುಹಿಸಿರುವ ಕಲಬುರಗಿಯ ಜನರನ್ನು ಮರೆತಿದ್ದಾರೆ.”

“ಖರ್ಗೆಯವರೇ ಕಲಬುರಗಿ ಜನರು ನಿಮಗೆ ಮತ ಹಾಕದಿದ್ದಿದ್ರೆ, ಆಶಿರ್ವಾದ ಮಾಡಿಲ್ಲದ್ದಿದ್ರೆ, ಸತತವಾಗಿ ಗೆಲ್ಲಿಸದಿದ್ದಿದ್ರೆ ಸೋನಿಯಾ ಗಾಂಧಿ ಬಿಡಿ, ಅವರ ಮನೆ ನಾಯಿ ಕೂಡ ನಿಮ್ಮನ್ನು ಮೂಸುತ್ತಿರಲಿಲ್ಲ. ಊರ ಮಂದಿಗೆ ಅವಮಾನ ಮಾಡಿ ಬಿಟ್ರಲ್ಲ ನೀವು. ಅದಕ್ಕೆ ಅನ್ಸುತ್ತೆ ನೀವು ಹೋದ ಸಲ ಎಲ್ಲಿ ಸೋತಿದ್ರೋ, ಅಲ್ಲಿ ಈ ಬಾರಿ ಎಲೆಕ್ಷನ್ ಸಹವಾಸಕ್ಕೆ ಬಂದಿಲ್ಲ. ಆದ್ರೂ ಕುಟುಂಬ ರಾಜಕಾರಣ ಬಿಡ್ಲಿಲ್ಲ ನೋಡ್ರಿ. ಅಳಿಯನಿಗೆ ಟಿಕೆಟ್ ಕೊಟ್ರಲ್ಲ. ಈ ಏರಿದ ಏಣಿ ಒದಿಯುವಂತಹ ಕೆಲಸ ಮಾಡಬಾರದು. ಮುಂದೆ ಒಂದು ದಿನ ಅದೇ ಅಪಾಯ ತರುತ್ತದೆ.”

ಮಲ್ಲಿಕಾರ್ಜುನ ಖರ್ಗೆಯವರು ರಾಜ್ಯ ಸಭೆಯಲ್ಲಿ ಮಾತನಾಡುವಾಗ “ನನ್ನನ್ನು ಈ ಸ್ಥಾನಕ್ಕೆ ತಂದವರು ಇಲ್ಲಿ ಕುಳಿತಿದ್ದಾರೆ, ಶ್ರೀಮತಿ ಸೋನಿಯಾ ಗಾಂಧಿಯವರು” ಎಂದು ಪಕ್ಕದಲ್ಲಿ ಕುಳಿತಿದ್ದ ಸೋನಿಯಾ ಗಾಂಧಿಯವರಿಗೆ ಕೈ ತೋರಿಸುವ ವಿಡಿಯೋ ತುಣುಕು ಕೂಡ ಟಿವಿ ವಿಕ್ರಮ ಪ್ರಸಾರ ಮಾಡಿದೆ.

ಫ್ಯಾಕ್ಟ್‌ಚೆಕ್ : ಟಿವಿ ವಿಕ್ರಮ ಹೇಳಿದಂತೆ ಮಲ್ಲಿಕಾರ್ಜುನ ಖರ್ಗೆಯವರು ತನ್ನನ್ನು ಉನ್ನತ ಸ್ಥಾನಕ್ಕೇರಿಸಿದ ಕಲಬುರಗಿಯ ಜನತೆಯನ್ನು ಮರೆತ್ರಾ? ತನ್ನ ಸಾಧನೆಯ ಎಲ್ಲಾ ಕ್ರೆಡಿಟ್ ಸೋನಿಯಾ ಗಾಂಧಿಯವರಿಗೆ ಮಾತ್ರ ಕೊಟ್ರಾ? ಎಂದು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಟಿವಿ ವಿಕ್ರಮ ಅರ್ಧಂಬರ್ಧ ವಿಡಿಯೋ ಪ್ರಸಾರ ಮಾಡಿ ಜನರನ್ನು ದಾರಿ ತಪ್ಪಿಸುವಂತಹ ಸುದ್ದಿ ಪ್ರಸಾರ ಮಾಡಿರುವುದು ಗೊತ್ತಾಗಿದೆ.

ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆ ಗಮನಿಸಲು ನಾವು ಮೊದಲು ಅವರ ಭಾಷಣದ ಪೂರ್ಣ ವಿಡಿಯೋ ಹುಡುಕಿದ್ದೇವೆ. ಈ ವೇಳೆ ಜುಲೈ 2ರಂದು ಇಂಡಿಯಾ ಟುಡೇ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ “Sonia Gandhi Made Me: Mallikarjun Kharge’s Fiery Reply To Jagdeep Dhankhar In Rajya Sabha” ಎಂಬ ಶೀರ್ಷಕೆಯಲ್ಲಿ ಅಪ್ಲೋಡ್ ಮಾಡಿರುವ ವಿಡಿಯೋ ದೊರೆತಿದೆ.

ಈ ವಿಡಿಯೋದಲ್ಲಿ ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಸ್ಪೀಕರ್‌ ಜಗದೀಪ್‌ ಧನ್ಕರ್‌ ಮತ್ತು ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನಡುವೆ ನಡೆದ ವಾಗ್ವಾದವನ್ನು ನೋಡಬಹುದಾಗಿದೆ.

“ನನ್ನನ್ನು ಈ ಸ್ಥಾನಕ್ಕೆ ಬರುವಂತೆ ಮಾಡಿದವರು ಇಲ್ಲೇ ಕುಳಿತಿದ್ದಾರೆ, ಶ್ರೀಮತಿ ಸೋನಿಯಾ ಗಾಂಧಿಯವರು. ಇದಕ್ಕೆ ಜೈರಾಮ್‌ ರಮೇಶ್‌ ಅಥವಾ ನೀವು (ಸ್ಪೀಕರ್‌) ಕಾರಣವಲ್ಲ, ನನ್ನನ್ನು ಜನ ಈ ಸ್ಥಾನಕ್ಕೆ ತಂದಿದ್ದಾರೆ” ಎಂಬ ಅರ್ಥದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಹೇಳಿಕೆ ನೀಡಿದ್ದಾರೆ. ಆದರೆ, ಇದರಲ್ಲಿ “ಜನರು ನನ್ನನ್ನು ಇಲ್ಲಿಗೆ ತಂದಿದ್ದಾರೆ” ಎಂಬ ಕ್ಲಿಪ್‌ ಅನ್ನು ಕಟ್‌ ಮಾಡಿ ಟಿವಿ ವಿಕ್ರಮ ಅರ್ಧಂಬರ್ಧ ವಿಡಿಯೋ ಹಂಚಿಕೊಂಡಿದೆ.

ಆದರೆ, ಇದರ ಅಸಲಿ ವಿಡಿಯೋವನ್ನು ಕಾಂಗ್ರೆಸ್‌ ಬೆಂಬಲಿಗರು ಸೇರಿದಂತೆ ಹಲವರು ತಮ್ಮ ಎಕ್ಸ್‌ ಖಾತೆಯಲ್ಲಿ ಎಡಿಟೆಡ್‌ ವಿಡಿಯೋ ಮತ್ತು ನಿಜವಾದ ವಿಡಿಯೋ ಯಾವುದು ಎಂದು ಹಂಚಿಕೊಂಡಿದ್ದಾರೆ.

ಅರ್ಧಂಬರ್ಧ ವಿಡಿಯೋವನ್ನು ಟಿವಿ ವಿಕ್ರಮ ಮಾತ್ರವಲ್ಲದೆ ಸದಾ ಸುಳ್ಳು ಸುದ್ದಿಗಳನ್ನು ಹರಡುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಕೂಡ ಹಂಚಿಕೊಂಡು ” ಇದು ಕಾಂಗ್ರೆಸ್‌ನ ಮೆಚ್ಚುಗೆಯ ಬ್ರ್ಯಾಂಡ್‌ನಂತೆ ತೋರುತ್ತಿದೆ” ಎಂದು ಬರೆದುಕೊಂಡಿದ್ದಾರೆ.

ಒಟ್ಟಿನಲ್ಲಿ ಮಲ್ಲಿಕಾರ್ಜುನ ಖರ್ಗೆಯವರು “ನನ್ನನ್ನು ಈ ಸ್ಥಾನಕ್ಕೆ ತಂದಿರುವುದು ಸೋನಿಯಾ ಗಾಂಧಿಯವರು ಮತ್ತು ಜನರು” ಎಂದು ಹೇಳಿದ್ದಾರೆ. ಆದರೆ, ಟಿವಿ ವಿಕ್ರಮ ‘ಸೋನಿಯಾ ಗಾಂಧಿಯವರು’ ಎಂದು ಹೇಳುವ ಅರ್ಧ ವಿಡಿಯೋ ಪ್ರಸಾರ ಮಾಡಿ ಜನರನ್ನು ದಾರಿ ತಪ್ಪಿಸುತ್ತಿದೆ.

ಮಹೇಶ್ ವಿಕ್ರಮ್ ಹೆಗ್ಡೆ ನೇತೃತ್ವದ ಟಿವಿ ವಿಕ್ರಮ ಮತ್ತು ಪೋಸ್ಟ್ ಕಾರ್ಡ್‌ ಈ ಹಿಂದೆಯೂ ಹಲವು ಬಾರಿ ಸುಳ್ಳು ಮತ್ತು ದಾರಿ ತಪ್ಪಿಸುವಂತಹ ಸುದ್ದಿಗಳನ್ನು ಪ್ರಸಾರ ಮಾಡಿತ್ತು. ಈ ಕುರಿತು ನಾನುಗೌರಿ ನಡೆಸಿರುವ ಕೆಲವು ಫ್ಯಾಕ್ಟ್‌ಚೆಕ್ ಸುದ್ದಿಗಳ ಲಿಂಕ್‌ಗಳು ಕೆಳಗಿದೆ.

Fact Check: ಪಾಕಿಸ್ತಾನದಿಂದ ಕಾಂಗ್ರೆಸ್‌ ₹10 ಕೋಟಿ ದೇಣಿಗೆ ಪಡೆದಿದೆ ಎಂದು ಸುಳ್ಳು ಸುದ್ದಿ ಹರಡಿದ ಟಿವಿ ವಿಕ್ರಮ

FACT CHEK : ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಎಂದು ರಾಹುಲ್ ಗಾಂಧಿ ಹೇಳಿಲ್ಲ

Fact Check : ಜೆಎನ್‌ಯು ಚುನಾವಣೆಯ ಕುರಿತು ಸುಳ್ಳು ಸುದ್ದಿ ಪ್ರಕಟಿಸಿದ ಸುವರ್ಣ ನ್ಯೂಸ್‌, ಪೋಸ್ಟ್ ಕಾರ್ಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...