Homeಮುಖಪುಟಸನಾತನ ಸಂಸ್ಥೆಯ ಮುಖ್ಯಸ್ಥರ ವಿರುದ್ಧ ತನಿಖೆಗೆ ಕೋರಿ ಎಟಿಎಸ್‌ಗೆ ಪತ್ರ ಬರೆದ ಗೋವಿಂದ್‌ ಪನ್ಸಾರೆ ಕುಟುಂಬ

ಸನಾತನ ಸಂಸ್ಥೆಯ ಮುಖ್ಯಸ್ಥರ ವಿರುದ್ಧ ತನಿಖೆಗೆ ಕೋರಿ ಎಟಿಎಸ್‌ಗೆ ಪತ್ರ ಬರೆದ ಗೋವಿಂದ್‌ ಪನ್ಸಾರೆ ಕುಟುಂಬ

- Advertisement -
- Advertisement -

ವಿಚಾರವಾದಿ ಹಾಗೂ ಎಡಪಂಥೀಯ ನಾಯಕ ಗೋವಿಂದ್‌ ಪನ್ಸಾರೆ ಅವರ ಹತ್ಯೆ ಪ್ರಕರಣದ ಕುರಿತಂತೆ ಬಾಂಬೆ ಹೈಕೋರ್ಟ್‌ ವಿಚಾರಣೆಗೆ ಮುನ್ನ ಅವರ ಕುಟುಂಬವು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್‌) ದ ಪುಣೆ ವಿಭಾಗದ ಎಸ್‌ಪಿ ಜಯಂತ್‌ ಮೀನಾ ಅವರಿಗೆ 68 ಪುಟಗಳ ಪತ್ರ ಬರೆದಿದ್ದು, ಪನ್ಸಾರೆ ಹತ್ಯೆಯಲ್ಲಿ ಸನಾತನ ಸಂಸ್ಥೆಯ ಸ್ಥಾಪಕ ಡಾ. ಜಯಂತ್‌ ಅಠಾವಳೆ ಅವರ ಪಾತ್ರವನ್ನು ಪರಿಶೀಲಿಸಬೇಕು ಎಂದು ಕೋರಿದ್ದಾರೆ ಎಂದು deccanherald.com ವರದಿ ಮಾಡಿದೆ.

ಪನ್ಸಾರೆ ಕುಟುಂಬದ ಸದಸ್ಯರಾದ ಡಾ. ಮೇಘಾ ಪನ್ಸಾರೆ, ಸ್ಮಿತಾ ಪನ್ಸಾರೆ ಹಾಗೂ ವಕೀಲ ಕಬೀರ್‌ ಪನ್ಸಾರೆ ಪತ್ರ ಬರೆದಿದ್ದಾರೆ. ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಬುದ್ಧಿಜೀವಿಗಳನ್ನು ಹತ್ಯೆಗೈಯ್ಯುವ ಸಂಚನ್ನು ಸನಾತನ ಸಂಸ್ಥೆ ಕಾರ್ಯಗತಗೊಳಿಸುತ್ತಿದೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

“ಕಾಮ್ರೇಡ್ ಪನ್ಸಾರೆ ಅವರ ಸಿದ್ಧಾಂತ, ಜಾತ್ಯತೀತತೆ, ವೈಚಾರಿಕತೆ, ಸಮಾನತೆ ಮತ್ತು ‘ಶಿವಾಜಿ ಕೋನ್?’ ನಂತಹ ಪುಸ್ತಕಗಳನ್ನು ರಚಿಸಲು ಜೀವನ ಪರ್ಯಂತ ಕೆಲಸ ಮಾಡಿದಕ್ಕಾಗಿ ಬಲಪಂಥೀಯ ಹಿಂದುತ್ವ ಸಂಘಟನೆಗಳಾದ ಸನಾತನ ಸಂಸ್ಥೆ, ಹಿಂದೂ ಜನಜಾಗೃತಿ ಸಮಿತಿ ಇತ್ಯಾದಿಗಳು ಅವರನ್ನು ಕಟುವಾಗಿ ವಿರೋಧಿಸಿದ್ದವು” ಎಂದು ಪತ್ರದಲ್ಲಿ ಬರೆಯಲಾಗಿದೆ.

ಪನ್ಸಾರೆ ಹತ್ಯೆ ಪ್ರಕರಣದಲ್ಲಿ ಸನಾತನ ಸಂಸ್ಥೆಯ ಸಂಸ್ಥಾಪಕ ಡಾ.ಜಯಂತ್ ಅಠಾವಳೆ, ಮುಖಂಡ ವೀರೇಂದ್ರ ಮರಾಠೆ ಮತ್ತು ಇತರರ ವಿರುದ್ಧ ಅಗತ್ಯ ಕ್ರಮಗಳನ್ನು ತೆಗೆದು ಕೊಳ್ಳಬೇಕು ಎಂದು ಕುಟುಂಬ ಒತ್ತಾಯಿಸಿದೆ.

ಕಾಮ್ರೇಡ್ ಪನ್ಸಾರೆ, ಡಾ. ನರೇಂದ್ರ ದಾಭೋಲ್ಕರ್, ಪ್ರೊ.ಎಂ.ಎಂ ಕಲಬುರ್ಗಿ ಮತ್ತು ಗೌರಿ ಲಂಕೇಶ್ ಅವರ ಹತ್ಯೆಗಳ ನಡುವಿನ ಸಂಬಂಧದ ಸಾಮಿಪ್ಯತೆಯನ್ನು ಪತ್ರವು ಒತ್ತಿ ಹೇಳಿದೆ. “ಕಾಮ್ರೇಡ್ ಪನ್ಸಾರೆ ಪ್ರಕರಣದಲ್ಲಿ ಸಲ್ಲಿಸಲಾದ ಐದು ಆರೋಪ ಪಟ್ಟಿಗಳ ಬಗ್ಗೆ ನಿಮ್ಮ ಗಮನವನ್ನು ಸೆಳೆಯಲು ನಾವು ಬಯಸುತ್ತೇವೆ” ಎಂದಿದೆ.

“ಪನ್ಸಾರೆ ಹತ್ಯೆ ಪ್ರಕರಣದಲ್ಲಿ ಹನ್ನೆರಡು ಜನರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ಈ ಪೈಕಿ ಇಬ್ಬರು ತಲೆಮರೆಸಿಕೊಂಡಿದ್ದಾರೆ ಎಂದು ಘೋಷಿಸಲಾಗಿದೆ. ಎಲ್ಲಾ ಆರೋಪಿಗಳು ಸನಾತನ ಸಂಸ್ಥೆ ಮತ್ತು/ಅಥವಾ ಹಿಂದೂ ಜನಜಾಗೃತಿ ಸಮಿತಿಯ ಸದಸ್ಯರಾಗಿದ್ದಾರೆ. ಕೆಲವು ಆರೋಪಿಗಳು ಡಾ.ನರೇಂದ್ರ ದಾಭೋಲ್ಕರ್, ಪ್ರೊ.ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ್ ಹತ್ಯೆ ಪ್ರಕರಣಗಳಲ್ಲಿ ಹಾಗೂ ನಲಸೋಪರ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪ್ರಕರಣ ಮತ್ತು ಇತರ ಸಂಬಂಧಿತ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದಾರೆ. ಇದು ಎಲ್ಲಾ ಪ್ರಕರಣಗಳ ನಡುವೆ ಒಂದು ಸಾಮಾನ್ಯ ಲಿಂಕ್ ಇರುವುದನ್ನು ಸೂಚಿಸುತ್ತದೆ” ಎಂದು ಪತ್ರದಲ್ಲಿ ಹೇಳಲಾಗಿದೆ.

“ನಾಲ್ಕು ಕೊಲೆಗಳು ಮತ್ತು ಇತರ ಘೋರ ಅಪರಾಧಗಳಲ್ಲಿ ಸನಾತನ ಸಂಸ್ಥೆ ಮತ್ತು ಅದರ ಸದಸ್ಯರ ಪಾತ್ರದ ಬಗ್ಗೆ ಎಟಿಎಸ್, ಸಿಬಿಐ, ಮಹಾರಾಷ್ಟ್ರ ಪೊಲೀಸ್, ಕರ್ನಾಟಕ ಪೊಲೀಸ್ ಮತ್ತು ಗೋವಾ ಪೊಲೀಸರಂತಹ ಇತರ ಏಜೆನ್ಸಿಗಳಿಗೆ ತಿಳಿದಿದೆ” ಎಂದು ಕುಟುಂಬವು ಹೇಳಿಕೊಂಡಿದೆ.

“ಜಯಂತ್ ಅಠಾವಳೆ ಮತ್ತು ವೀರೇಂದ್ರ ಮರಾಠೆ ಅವರ ಮಾರ್ಗದರ್ಶನ ಮತ್ತು ನಿರ್ದೇಶನಗಳ ಅಡಿಯಲ್ಲಿ ಅಪರಾಧಿಗಳ ಸಂಘಟಿತ ಭಯೋತ್ಪಾದಕ ಜಾಲವಾಗಿ ಕಾರ್ಯನಿರ್ವಹಿಸುತ್ತಿರುವ ಸನಾತನ ಸಂಸ್ಥೆ ಮತ್ತು ಅದನ್ನು ಮುನ್ನಡೆಸುತ್ತಿರುವ ಜನರ ಪಾತ್ರವನ್ನು ಪರಿಶೀಲಿಸುವುದು ಅವಶ್ಯಕ. ನಲಸೋಪಾರ ಸ್ಫೋಟಕಗಳನ್ನು ವಶಪಡಿಸಿಕೊಂಡ ಪ್ರಕರಣದಲ್ಲಿ, ಮಹಾರಾಷ್ಟ್ರ ಎಟಿಎಸ್ 2018 ರಲ್ಲಿ ಹೆಚ್ಚಿನ ಸಂಖ್ಯೆಯ ಪಿಸ್ತೂಲ್‌ಗಳು, ಬಾಂಬ್‌ಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡಿದೆ ಮತ್ತು ಸನಾತನ ಸಂಸ್ಥೆ ಮತ್ತು/ಅಥವಾ ಹಿಂದೂ ಜನಜಾಗೃತಿ ಸಮಿತಿಯ ಸದಸ್ಯರಾಗಿರುವ ಹನ್ನೆರಡು ಜನರ ವಿರುದ್ಧ ಫೆಬ್ರವರಿ 18, 2019 ರಂದು ಚಾರ್ಜ್‌ಶೀಟ್ ಸಲ್ಲಿಸಿದೆ” ಎಂದು ಪತ್ರ ಹೇಳಿದೆ.

“ನಲಸೋಪರ ಪ್ರಕರಣದಲ್ಲಿ ಎಟಿಎಸ್ ಸಲ್ಲಿಸಿರುವ ಆರೋಪ ಪಟ್ಟಿಯನ್ನು ಪರಿಶೀಲಿಸಿದಾಗ, ಸನಾತನ ಸಂಸ್ಥೆ ಮತ್ತು ಅದರ ಸದಸ್ಯರ ಉದ್ದೇಶವು ಸಮಾಜವನ್ನು ದೊಡ್ಡ ಪ್ರಮಾಣದಲ್ಲಿ ಭಯಭೀತಗೊಳಿಸುವುದು ಮತ್ತು ಕ್ಷಾತ್ರಧರ್ಮ ಸಾಧನದಿಂದ ಪ್ರೇರೇಪಿಸಲ್ಪಟ್ಟ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುವುದು ಎಂದು ಸ್ಪಷ್ಟವಾಗಿ ದಾಖಲಿಸಲಾಗಿದೆ” ಎಂದು ಪತ್ರದಲ್ಲಿ ಬರೆಯಲಾಗಿದೆ

ಪನ್ಸಾರೆ ಹತ್ಯೆ ಪ್ರಕರಣದಲ್ಲಿ ತನಿಖಾ ಸಂಸ್ಥೆಯು ಸನಾತನ ಸಂಸ್ಥೆಯ ಪದಾಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಬೇಕಿತ್ತು. ಏಕೆಂದರೆ ಅವರು ದೊಡ್ಡ ಪಿತೂರಿಯಲ್ಲಿ ಭಾಗಿಯಾಗಿರುವುದನ್ನು ತಳ್ಳಿ ಹಾಕಲಾಗುವುದಿಲ್ಲ. ಸಂಸ್ಥೆಯು ಒಪ್ಪಿಗೆಯಿಲ್ಲದೆ ತಮ್ಮದೇ ಸದಸ್ಯರ ಮೇಲೆ ಮನೋವೈದ್ಯಕೀಯ ಔಷಧಗಳನ್ನು ಬಳಸುವುದರಿಂದ ಹಿಡಿದು ಕೊಲೆ, ಬಾಂಬ್ ಸ್ಫೋಟಗಳಂತಹ ಕೃತ್ಯಗಳನ್ನು ಯೋಜಿಸಿ ಕಾರ್ಯಗತಗೊಳಿಸುವರೆಗೆ ಅದರ ಪಿತೂರಿಯಿದೆ. ಈ ಪಿತೂರಿಗಳು ಕೇವಲ ಸನಾತನ ಸಂಸ್ಥೆಯ ಸದಸ್ಯರನ್ನು ಒಳಗೊಂಡಂತೆ ಸಾಧ್ಯ ಎಂದು ಹೇಳಲಾಗುವುದಿಲ್ಲ” ಎಂದು ಪತ್ರದಲ್ಲಿ ಹೇಳಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ : ಅಪಘಾತಕ್ಕೆ ಬಲಿಯಾದ ಜಾನುವಾರುಗಳು: ಬಸ್‌ ಚಾಲಕನಿಗೆ ಮಾರಣಾಂತಿಕವಾಗಿ ಥಳಿಸಿದ ಸ್ವಯಂಘೋಷಿತ ಗೋರಕ್ಷಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...