Homeಮುಖಪುಟಸನಾತನ ಸಂಸ್ಥೆಯ ಮುಖ್ಯಸ್ಥರ ವಿರುದ್ಧ ತನಿಖೆಗೆ ಕೋರಿ ಎಟಿಎಸ್‌ಗೆ ಪತ್ರ ಬರೆದ ಗೋವಿಂದ್‌ ಪನ್ಸಾರೆ ಕುಟುಂಬ

ಸನಾತನ ಸಂಸ್ಥೆಯ ಮುಖ್ಯಸ್ಥರ ವಿರುದ್ಧ ತನಿಖೆಗೆ ಕೋರಿ ಎಟಿಎಸ್‌ಗೆ ಪತ್ರ ಬರೆದ ಗೋವಿಂದ್‌ ಪನ್ಸಾರೆ ಕುಟುಂಬ

- Advertisement -
- Advertisement -

ವಿಚಾರವಾದಿ ಹಾಗೂ ಎಡಪಂಥೀಯ ನಾಯಕ ಗೋವಿಂದ್‌ ಪನ್ಸಾರೆ ಅವರ ಹತ್ಯೆ ಪ್ರಕರಣದ ಕುರಿತಂತೆ ಬಾಂಬೆ ಹೈಕೋರ್ಟ್‌ ವಿಚಾರಣೆಗೆ ಮುನ್ನ ಅವರ ಕುಟುಂಬವು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್‌) ದ ಪುಣೆ ವಿಭಾಗದ ಎಸ್‌ಪಿ ಜಯಂತ್‌ ಮೀನಾ ಅವರಿಗೆ 68 ಪುಟಗಳ ಪತ್ರ ಬರೆದಿದ್ದು, ಪನ್ಸಾರೆ ಹತ್ಯೆಯಲ್ಲಿ ಸನಾತನ ಸಂಸ್ಥೆಯ ಸ್ಥಾಪಕ ಡಾ. ಜಯಂತ್‌ ಅಠಾವಳೆ ಅವರ ಪಾತ್ರವನ್ನು ಪರಿಶೀಲಿಸಬೇಕು ಎಂದು ಕೋರಿದ್ದಾರೆ ಎಂದು deccanherald.com ವರದಿ ಮಾಡಿದೆ.

ಪನ್ಸಾರೆ ಕುಟುಂಬದ ಸದಸ್ಯರಾದ ಡಾ. ಮೇಘಾ ಪನ್ಸಾರೆ, ಸ್ಮಿತಾ ಪನ್ಸಾರೆ ಹಾಗೂ ವಕೀಲ ಕಬೀರ್‌ ಪನ್ಸಾರೆ ಪತ್ರ ಬರೆದಿದ್ದಾರೆ. ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಬುದ್ಧಿಜೀವಿಗಳನ್ನು ಹತ್ಯೆಗೈಯ್ಯುವ ಸಂಚನ್ನು ಸನಾತನ ಸಂಸ್ಥೆ ಕಾರ್ಯಗತಗೊಳಿಸುತ್ತಿದೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

“ಕಾಮ್ರೇಡ್ ಪನ್ಸಾರೆ ಅವರ ಸಿದ್ಧಾಂತ, ಜಾತ್ಯತೀತತೆ, ವೈಚಾರಿಕತೆ, ಸಮಾನತೆ ಮತ್ತು ‘ಶಿವಾಜಿ ಕೋನ್?’ ನಂತಹ ಪುಸ್ತಕಗಳನ್ನು ರಚಿಸಲು ಜೀವನ ಪರ್ಯಂತ ಕೆಲಸ ಮಾಡಿದಕ್ಕಾಗಿ ಬಲಪಂಥೀಯ ಹಿಂದುತ್ವ ಸಂಘಟನೆಗಳಾದ ಸನಾತನ ಸಂಸ್ಥೆ, ಹಿಂದೂ ಜನಜಾಗೃತಿ ಸಮಿತಿ ಇತ್ಯಾದಿಗಳು ಅವರನ್ನು ಕಟುವಾಗಿ ವಿರೋಧಿಸಿದ್ದವು” ಎಂದು ಪತ್ರದಲ್ಲಿ ಬರೆಯಲಾಗಿದೆ.

ಪನ್ಸಾರೆ ಹತ್ಯೆ ಪ್ರಕರಣದಲ್ಲಿ ಸನಾತನ ಸಂಸ್ಥೆಯ ಸಂಸ್ಥಾಪಕ ಡಾ.ಜಯಂತ್ ಅಠಾವಳೆ, ಮುಖಂಡ ವೀರೇಂದ್ರ ಮರಾಠೆ ಮತ್ತು ಇತರರ ವಿರುದ್ಧ ಅಗತ್ಯ ಕ್ರಮಗಳನ್ನು ತೆಗೆದು ಕೊಳ್ಳಬೇಕು ಎಂದು ಕುಟುಂಬ ಒತ್ತಾಯಿಸಿದೆ.

ಕಾಮ್ರೇಡ್ ಪನ್ಸಾರೆ, ಡಾ. ನರೇಂದ್ರ ದಾಭೋಲ್ಕರ್, ಪ್ರೊ.ಎಂ.ಎಂ ಕಲಬುರ್ಗಿ ಮತ್ತು ಗೌರಿ ಲಂಕೇಶ್ ಅವರ ಹತ್ಯೆಗಳ ನಡುವಿನ ಸಂಬಂಧದ ಸಾಮಿಪ್ಯತೆಯನ್ನು ಪತ್ರವು ಒತ್ತಿ ಹೇಳಿದೆ. “ಕಾಮ್ರೇಡ್ ಪನ್ಸಾರೆ ಪ್ರಕರಣದಲ್ಲಿ ಸಲ್ಲಿಸಲಾದ ಐದು ಆರೋಪ ಪಟ್ಟಿಗಳ ಬಗ್ಗೆ ನಿಮ್ಮ ಗಮನವನ್ನು ಸೆಳೆಯಲು ನಾವು ಬಯಸುತ್ತೇವೆ” ಎಂದಿದೆ.

“ಪನ್ಸಾರೆ ಹತ್ಯೆ ಪ್ರಕರಣದಲ್ಲಿ ಹನ್ನೆರಡು ಜನರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ಈ ಪೈಕಿ ಇಬ್ಬರು ತಲೆಮರೆಸಿಕೊಂಡಿದ್ದಾರೆ ಎಂದು ಘೋಷಿಸಲಾಗಿದೆ. ಎಲ್ಲಾ ಆರೋಪಿಗಳು ಸನಾತನ ಸಂಸ್ಥೆ ಮತ್ತು/ಅಥವಾ ಹಿಂದೂ ಜನಜಾಗೃತಿ ಸಮಿತಿಯ ಸದಸ್ಯರಾಗಿದ್ದಾರೆ. ಕೆಲವು ಆರೋಪಿಗಳು ಡಾ.ನರೇಂದ್ರ ದಾಭೋಲ್ಕರ್, ಪ್ರೊ.ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ್ ಹತ್ಯೆ ಪ್ರಕರಣಗಳಲ್ಲಿ ಹಾಗೂ ನಲಸೋಪರ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪ್ರಕರಣ ಮತ್ತು ಇತರ ಸಂಬಂಧಿತ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದಾರೆ. ಇದು ಎಲ್ಲಾ ಪ್ರಕರಣಗಳ ನಡುವೆ ಒಂದು ಸಾಮಾನ್ಯ ಲಿಂಕ್ ಇರುವುದನ್ನು ಸೂಚಿಸುತ್ತದೆ” ಎಂದು ಪತ್ರದಲ್ಲಿ ಹೇಳಲಾಗಿದೆ.

“ನಾಲ್ಕು ಕೊಲೆಗಳು ಮತ್ತು ಇತರ ಘೋರ ಅಪರಾಧಗಳಲ್ಲಿ ಸನಾತನ ಸಂಸ್ಥೆ ಮತ್ತು ಅದರ ಸದಸ್ಯರ ಪಾತ್ರದ ಬಗ್ಗೆ ಎಟಿಎಸ್, ಸಿಬಿಐ, ಮಹಾರಾಷ್ಟ್ರ ಪೊಲೀಸ್, ಕರ್ನಾಟಕ ಪೊಲೀಸ್ ಮತ್ತು ಗೋವಾ ಪೊಲೀಸರಂತಹ ಇತರ ಏಜೆನ್ಸಿಗಳಿಗೆ ತಿಳಿದಿದೆ” ಎಂದು ಕುಟುಂಬವು ಹೇಳಿಕೊಂಡಿದೆ.

“ಜಯಂತ್ ಅಠಾವಳೆ ಮತ್ತು ವೀರೇಂದ್ರ ಮರಾಠೆ ಅವರ ಮಾರ್ಗದರ್ಶನ ಮತ್ತು ನಿರ್ದೇಶನಗಳ ಅಡಿಯಲ್ಲಿ ಅಪರಾಧಿಗಳ ಸಂಘಟಿತ ಭಯೋತ್ಪಾದಕ ಜಾಲವಾಗಿ ಕಾರ್ಯನಿರ್ವಹಿಸುತ್ತಿರುವ ಸನಾತನ ಸಂಸ್ಥೆ ಮತ್ತು ಅದನ್ನು ಮುನ್ನಡೆಸುತ್ತಿರುವ ಜನರ ಪಾತ್ರವನ್ನು ಪರಿಶೀಲಿಸುವುದು ಅವಶ್ಯಕ. ನಲಸೋಪಾರ ಸ್ಫೋಟಕಗಳನ್ನು ವಶಪಡಿಸಿಕೊಂಡ ಪ್ರಕರಣದಲ್ಲಿ, ಮಹಾರಾಷ್ಟ್ರ ಎಟಿಎಸ್ 2018 ರಲ್ಲಿ ಹೆಚ್ಚಿನ ಸಂಖ್ಯೆಯ ಪಿಸ್ತೂಲ್‌ಗಳು, ಬಾಂಬ್‌ಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡಿದೆ ಮತ್ತು ಸನಾತನ ಸಂಸ್ಥೆ ಮತ್ತು/ಅಥವಾ ಹಿಂದೂ ಜನಜಾಗೃತಿ ಸಮಿತಿಯ ಸದಸ್ಯರಾಗಿರುವ ಹನ್ನೆರಡು ಜನರ ವಿರುದ್ಧ ಫೆಬ್ರವರಿ 18, 2019 ರಂದು ಚಾರ್ಜ್‌ಶೀಟ್ ಸಲ್ಲಿಸಿದೆ” ಎಂದು ಪತ್ರ ಹೇಳಿದೆ.

“ನಲಸೋಪರ ಪ್ರಕರಣದಲ್ಲಿ ಎಟಿಎಸ್ ಸಲ್ಲಿಸಿರುವ ಆರೋಪ ಪಟ್ಟಿಯನ್ನು ಪರಿಶೀಲಿಸಿದಾಗ, ಸನಾತನ ಸಂಸ್ಥೆ ಮತ್ತು ಅದರ ಸದಸ್ಯರ ಉದ್ದೇಶವು ಸಮಾಜವನ್ನು ದೊಡ್ಡ ಪ್ರಮಾಣದಲ್ಲಿ ಭಯಭೀತಗೊಳಿಸುವುದು ಮತ್ತು ಕ್ಷಾತ್ರಧರ್ಮ ಸಾಧನದಿಂದ ಪ್ರೇರೇಪಿಸಲ್ಪಟ್ಟ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುವುದು ಎಂದು ಸ್ಪಷ್ಟವಾಗಿ ದಾಖಲಿಸಲಾಗಿದೆ” ಎಂದು ಪತ್ರದಲ್ಲಿ ಬರೆಯಲಾಗಿದೆ

ಪನ್ಸಾರೆ ಹತ್ಯೆ ಪ್ರಕರಣದಲ್ಲಿ ತನಿಖಾ ಸಂಸ್ಥೆಯು ಸನಾತನ ಸಂಸ್ಥೆಯ ಪದಾಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಬೇಕಿತ್ತು. ಏಕೆಂದರೆ ಅವರು ದೊಡ್ಡ ಪಿತೂರಿಯಲ್ಲಿ ಭಾಗಿಯಾಗಿರುವುದನ್ನು ತಳ್ಳಿ ಹಾಕಲಾಗುವುದಿಲ್ಲ. ಸಂಸ್ಥೆಯು ಒಪ್ಪಿಗೆಯಿಲ್ಲದೆ ತಮ್ಮದೇ ಸದಸ್ಯರ ಮೇಲೆ ಮನೋವೈದ್ಯಕೀಯ ಔಷಧಗಳನ್ನು ಬಳಸುವುದರಿಂದ ಹಿಡಿದು ಕೊಲೆ, ಬಾಂಬ್ ಸ್ಫೋಟಗಳಂತಹ ಕೃತ್ಯಗಳನ್ನು ಯೋಜಿಸಿ ಕಾರ್ಯಗತಗೊಳಿಸುವರೆಗೆ ಅದರ ಪಿತೂರಿಯಿದೆ. ಈ ಪಿತೂರಿಗಳು ಕೇವಲ ಸನಾತನ ಸಂಸ್ಥೆಯ ಸದಸ್ಯರನ್ನು ಒಳಗೊಂಡಂತೆ ಸಾಧ್ಯ ಎಂದು ಹೇಳಲಾಗುವುದಿಲ್ಲ” ಎಂದು ಪತ್ರದಲ್ಲಿ ಹೇಳಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ : ಅಪಘಾತಕ್ಕೆ ಬಲಿಯಾದ ಜಾನುವಾರುಗಳು: ಬಸ್‌ ಚಾಲಕನಿಗೆ ಮಾರಣಾಂತಿಕವಾಗಿ ಥಳಿಸಿದ ಸ್ವಯಂಘೋಷಿತ ಗೋರಕ್ಷಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...