Homeಮುಖಪುಟಸನಾತನ ಸಂಸ್ಥೆಯ ಮುಖ್ಯಸ್ಥರ ವಿರುದ್ಧ ತನಿಖೆಗೆ ಕೋರಿ ಎಟಿಎಸ್‌ಗೆ ಪತ್ರ ಬರೆದ ಗೋವಿಂದ್‌ ಪನ್ಸಾರೆ ಕುಟುಂಬ

ಸನಾತನ ಸಂಸ್ಥೆಯ ಮುಖ್ಯಸ್ಥರ ವಿರುದ್ಧ ತನಿಖೆಗೆ ಕೋರಿ ಎಟಿಎಸ್‌ಗೆ ಪತ್ರ ಬರೆದ ಗೋವಿಂದ್‌ ಪನ್ಸಾರೆ ಕುಟುಂಬ

- Advertisement -
- Advertisement -

ವಿಚಾರವಾದಿ ಹಾಗೂ ಎಡಪಂಥೀಯ ನಾಯಕ ಗೋವಿಂದ್‌ ಪನ್ಸಾರೆ ಅವರ ಹತ್ಯೆ ಪ್ರಕರಣದ ಕುರಿತಂತೆ ಬಾಂಬೆ ಹೈಕೋರ್ಟ್‌ ವಿಚಾರಣೆಗೆ ಮುನ್ನ ಅವರ ಕುಟುಂಬವು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್‌) ದ ಪುಣೆ ವಿಭಾಗದ ಎಸ್‌ಪಿ ಜಯಂತ್‌ ಮೀನಾ ಅವರಿಗೆ 68 ಪುಟಗಳ ಪತ್ರ ಬರೆದಿದ್ದು, ಪನ್ಸಾರೆ ಹತ್ಯೆಯಲ್ಲಿ ಸನಾತನ ಸಂಸ್ಥೆಯ ಸ್ಥಾಪಕ ಡಾ. ಜಯಂತ್‌ ಅಠಾವಳೆ ಅವರ ಪಾತ್ರವನ್ನು ಪರಿಶೀಲಿಸಬೇಕು ಎಂದು ಕೋರಿದ್ದಾರೆ ಎಂದು deccanherald.com ವರದಿ ಮಾಡಿದೆ.

ಪನ್ಸಾರೆ ಕುಟುಂಬದ ಸದಸ್ಯರಾದ ಡಾ. ಮೇಘಾ ಪನ್ಸಾರೆ, ಸ್ಮಿತಾ ಪನ್ಸಾರೆ ಹಾಗೂ ವಕೀಲ ಕಬೀರ್‌ ಪನ್ಸಾರೆ ಪತ್ರ ಬರೆದಿದ್ದಾರೆ. ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಬುದ್ಧಿಜೀವಿಗಳನ್ನು ಹತ್ಯೆಗೈಯ್ಯುವ ಸಂಚನ್ನು ಸನಾತನ ಸಂಸ್ಥೆ ಕಾರ್ಯಗತಗೊಳಿಸುತ್ತಿದೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

“ಕಾಮ್ರೇಡ್ ಪನ್ಸಾರೆ ಅವರ ಸಿದ್ಧಾಂತ, ಜಾತ್ಯತೀತತೆ, ವೈಚಾರಿಕತೆ, ಸಮಾನತೆ ಮತ್ತು ‘ಶಿವಾಜಿ ಕೋನ್?’ ನಂತಹ ಪುಸ್ತಕಗಳನ್ನು ರಚಿಸಲು ಜೀವನ ಪರ್ಯಂತ ಕೆಲಸ ಮಾಡಿದಕ್ಕಾಗಿ ಬಲಪಂಥೀಯ ಹಿಂದುತ್ವ ಸಂಘಟನೆಗಳಾದ ಸನಾತನ ಸಂಸ್ಥೆ, ಹಿಂದೂ ಜನಜಾಗೃತಿ ಸಮಿತಿ ಇತ್ಯಾದಿಗಳು ಅವರನ್ನು ಕಟುವಾಗಿ ವಿರೋಧಿಸಿದ್ದವು” ಎಂದು ಪತ್ರದಲ್ಲಿ ಬರೆಯಲಾಗಿದೆ.

ಪನ್ಸಾರೆ ಹತ್ಯೆ ಪ್ರಕರಣದಲ್ಲಿ ಸನಾತನ ಸಂಸ್ಥೆಯ ಸಂಸ್ಥಾಪಕ ಡಾ.ಜಯಂತ್ ಅಠಾವಳೆ, ಮುಖಂಡ ವೀರೇಂದ್ರ ಮರಾಠೆ ಮತ್ತು ಇತರರ ವಿರುದ್ಧ ಅಗತ್ಯ ಕ್ರಮಗಳನ್ನು ತೆಗೆದು ಕೊಳ್ಳಬೇಕು ಎಂದು ಕುಟುಂಬ ಒತ್ತಾಯಿಸಿದೆ.

ಕಾಮ್ರೇಡ್ ಪನ್ಸಾರೆ, ಡಾ. ನರೇಂದ್ರ ದಾಭೋಲ್ಕರ್, ಪ್ರೊ.ಎಂ.ಎಂ ಕಲಬುರ್ಗಿ ಮತ್ತು ಗೌರಿ ಲಂಕೇಶ್ ಅವರ ಹತ್ಯೆಗಳ ನಡುವಿನ ಸಂಬಂಧದ ಸಾಮಿಪ್ಯತೆಯನ್ನು ಪತ್ರವು ಒತ್ತಿ ಹೇಳಿದೆ. “ಕಾಮ್ರೇಡ್ ಪನ್ಸಾರೆ ಪ್ರಕರಣದಲ್ಲಿ ಸಲ್ಲಿಸಲಾದ ಐದು ಆರೋಪ ಪಟ್ಟಿಗಳ ಬಗ್ಗೆ ನಿಮ್ಮ ಗಮನವನ್ನು ಸೆಳೆಯಲು ನಾವು ಬಯಸುತ್ತೇವೆ” ಎಂದಿದೆ.

“ಪನ್ಸಾರೆ ಹತ್ಯೆ ಪ್ರಕರಣದಲ್ಲಿ ಹನ್ನೆರಡು ಜನರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ಈ ಪೈಕಿ ಇಬ್ಬರು ತಲೆಮರೆಸಿಕೊಂಡಿದ್ದಾರೆ ಎಂದು ಘೋಷಿಸಲಾಗಿದೆ. ಎಲ್ಲಾ ಆರೋಪಿಗಳು ಸನಾತನ ಸಂಸ್ಥೆ ಮತ್ತು/ಅಥವಾ ಹಿಂದೂ ಜನಜಾಗೃತಿ ಸಮಿತಿಯ ಸದಸ್ಯರಾಗಿದ್ದಾರೆ. ಕೆಲವು ಆರೋಪಿಗಳು ಡಾ.ನರೇಂದ್ರ ದಾಭೋಲ್ಕರ್, ಪ್ರೊ.ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ್ ಹತ್ಯೆ ಪ್ರಕರಣಗಳಲ್ಲಿ ಹಾಗೂ ನಲಸೋಪರ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪ್ರಕರಣ ಮತ್ತು ಇತರ ಸಂಬಂಧಿತ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದಾರೆ. ಇದು ಎಲ್ಲಾ ಪ್ರಕರಣಗಳ ನಡುವೆ ಒಂದು ಸಾಮಾನ್ಯ ಲಿಂಕ್ ಇರುವುದನ್ನು ಸೂಚಿಸುತ್ತದೆ” ಎಂದು ಪತ್ರದಲ್ಲಿ ಹೇಳಲಾಗಿದೆ.

“ನಾಲ್ಕು ಕೊಲೆಗಳು ಮತ್ತು ಇತರ ಘೋರ ಅಪರಾಧಗಳಲ್ಲಿ ಸನಾತನ ಸಂಸ್ಥೆ ಮತ್ತು ಅದರ ಸದಸ್ಯರ ಪಾತ್ರದ ಬಗ್ಗೆ ಎಟಿಎಸ್, ಸಿಬಿಐ, ಮಹಾರಾಷ್ಟ್ರ ಪೊಲೀಸ್, ಕರ್ನಾಟಕ ಪೊಲೀಸ್ ಮತ್ತು ಗೋವಾ ಪೊಲೀಸರಂತಹ ಇತರ ಏಜೆನ್ಸಿಗಳಿಗೆ ತಿಳಿದಿದೆ” ಎಂದು ಕುಟುಂಬವು ಹೇಳಿಕೊಂಡಿದೆ.

“ಜಯಂತ್ ಅಠಾವಳೆ ಮತ್ತು ವೀರೇಂದ್ರ ಮರಾಠೆ ಅವರ ಮಾರ್ಗದರ್ಶನ ಮತ್ತು ನಿರ್ದೇಶನಗಳ ಅಡಿಯಲ್ಲಿ ಅಪರಾಧಿಗಳ ಸಂಘಟಿತ ಭಯೋತ್ಪಾದಕ ಜಾಲವಾಗಿ ಕಾರ್ಯನಿರ್ವಹಿಸುತ್ತಿರುವ ಸನಾತನ ಸಂಸ್ಥೆ ಮತ್ತು ಅದನ್ನು ಮುನ್ನಡೆಸುತ್ತಿರುವ ಜನರ ಪಾತ್ರವನ್ನು ಪರಿಶೀಲಿಸುವುದು ಅವಶ್ಯಕ. ನಲಸೋಪಾರ ಸ್ಫೋಟಕಗಳನ್ನು ವಶಪಡಿಸಿಕೊಂಡ ಪ್ರಕರಣದಲ್ಲಿ, ಮಹಾರಾಷ್ಟ್ರ ಎಟಿಎಸ್ 2018 ರಲ್ಲಿ ಹೆಚ್ಚಿನ ಸಂಖ್ಯೆಯ ಪಿಸ್ತೂಲ್‌ಗಳು, ಬಾಂಬ್‌ಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡಿದೆ ಮತ್ತು ಸನಾತನ ಸಂಸ್ಥೆ ಮತ್ತು/ಅಥವಾ ಹಿಂದೂ ಜನಜಾಗೃತಿ ಸಮಿತಿಯ ಸದಸ್ಯರಾಗಿರುವ ಹನ್ನೆರಡು ಜನರ ವಿರುದ್ಧ ಫೆಬ್ರವರಿ 18, 2019 ರಂದು ಚಾರ್ಜ್‌ಶೀಟ್ ಸಲ್ಲಿಸಿದೆ” ಎಂದು ಪತ್ರ ಹೇಳಿದೆ.

“ನಲಸೋಪರ ಪ್ರಕರಣದಲ್ಲಿ ಎಟಿಎಸ್ ಸಲ್ಲಿಸಿರುವ ಆರೋಪ ಪಟ್ಟಿಯನ್ನು ಪರಿಶೀಲಿಸಿದಾಗ, ಸನಾತನ ಸಂಸ್ಥೆ ಮತ್ತು ಅದರ ಸದಸ್ಯರ ಉದ್ದೇಶವು ಸಮಾಜವನ್ನು ದೊಡ್ಡ ಪ್ರಮಾಣದಲ್ಲಿ ಭಯಭೀತಗೊಳಿಸುವುದು ಮತ್ತು ಕ್ಷಾತ್ರಧರ್ಮ ಸಾಧನದಿಂದ ಪ್ರೇರೇಪಿಸಲ್ಪಟ್ಟ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುವುದು ಎಂದು ಸ್ಪಷ್ಟವಾಗಿ ದಾಖಲಿಸಲಾಗಿದೆ” ಎಂದು ಪತ್ರದಲ್ಲಿ ಬರೆಯಲಾಗಿದೆ

ಪನ್ಸಾರೆ ಹತ್ಯೆ ಪ್ರಕರಣದಲ್ಲಿ ತನಿಖಾ ಸಂಸ್ಥೆಯು ಸನಾತನ ಸಂಸ್ಥೆಯ ಪದಾಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಬೇಕಿತ್ತು. ಏಕೆಂದರೆ ಅವರು ದೊಡ್ಡ ಪಿತೂರಿಯಲ್ಲಿ ಭಾಗಿಯಾಗಿರುವುದನ್ನು ತಳ್ಳಿ ಹಾಕಲಾಗುವುದಿಲ್ಲ. ಸಂಸ್ಥೆಯು ಒಪ್ಪಿಗೆಯಿಲ್ಲದೆ ತಮ್ಮದೇ ಸದಸ್ಯರ ಮೇಲೆ ಮನೋವೈದ್ಯಕೀಯ ಔಷಧಗಳನ್ನು ಬಳಸುವುದರಿಂದ ಹಿಡಿದು ಕೊಲೆ, ಬಾಂಬ್ ಸ್ಫೋಟಗಳಂತಹ ಕೃತ್ಯಗಳನ್ನು ಯೋಜಿಸಿ ಕಾರ್ಯಗತಗೊಳಿಸುವರೆಗೆ ಅದರ ಪಿತೂರಿಯಿದೆ. ಈ ಪಿತೂರಿಗಳು ಕೇವಲ ಸನಾತನ ಸಂಸ್ಥೆಯ ಸದಸ್ಯರನ್ನು ಒಳಗೊಂಡಂತೆ ಸಾಧ್ಯ ಎಂದು ಹೇಳಲಾಗುವುದಿಲ್ಲ” ಎಂದು ಪತ್ರದಲ್ಲಿ ಹೇಳಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ : ಅಪಘಾತಕ್ಕೆ ಬಲಿಯಾದ ಜಾನುವಾರುಗಳು: ಬಸ್‌ ಚಾಲಕನಿಗೆ ಮಾರಣಾಂತಿಕವಾಗಿ ಥಳಿಸಿದ ಸ್ವಯಂಘೋಷಿತ ಗೋರಕ್ಷಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...