Homeಕರ್ನಾಟಕಬಿಜೆಪಿಗರ ಆಂತರ್ಯದೊಳಗೆ ಸ್ವಾಮಿ ವಿವೇಕಾನಂದರ ಬಗ್ಗೆ ಬಹಳ ಅಸಹನೆಯಿದೆ: ಸಿಎಂ ಸಿದ್ದರಾಮಯ್ಯ

ಬಿಜೆಪಿಗರ ಆಂತರ್ಯದೊಳಗೆ ಸ್ವಾಮಿ ವಿವೇಕಾನಂದರ ಬಗ್ಗೆ ಬಹಳ ಅಸಹನೆಯಿದೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

“ಬಿಜೆಪಿ ಮತ್ತು ಸಂಘ ಪರಿವಾರದವರು ತೋರಿಕೆಗಾಗಿ ವಿವೇಕಾನಂದರನ್ನು ಎಷ್ಟೇ ಆರಾಧಿಸಿದರೂ, ಅವರ ಆಂತರ್ಯದೊಳಗೆ ಸ್ವಾಮಿ ವಿವೇಕಾನಂದ ಬಗ್ಗೆ ಎಷ್ಟು ಅಸಹನೆ ಇದೆ ಎಂಬುವುದಕ್ಕೆ ರಾಜ್ಯ ಬಿಜೆಪಿ ಕಾರ್ಯಕಾರಣಿ ವಿಶೇಷ ಸಭೆಯಲ್ಲಿ ನಡೆದಿರುವ ಘಟನೆ ಸಾಕ್ಷಿ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿವೇಕಾನಂದರ ಬಗ್ಗೆ ಎಷ್ಟು ಅಸಹನೆ ಇದೆ ಎಂಬುದಕ್ಕೆ ಇಂದಿನ ಬಿಜೆಪಿ ಕಾರ್ಯಕಾರಣಿ ವಿಶೇಷ ಸಭೆಯಲ್ಲಿ ನಡೆದಿರುವ ಘಟನೆ ಸಾಕ್ಷಿ. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್‌ ದಾಸ್‌ ಅಗರ್ವಾಲ್‌ ಅವರು ವೇದಿಕೆಯ ಮೇಲೆ ಕಾರ್ಯಕ್ರಮದಲ್ಲಿ ವಿವೇಕಾನಂದರ ಭಾವಚಿತ್ರ ಯಾಕಿದೆ? ಎಂದು ಪ್ರಶ್ನಿಸುವ ಮೂಲಕ ಮೂಲಕ ಬಹಿರಂಗವಾಗಿಯೇ ತಮ್ಮ ಅಸಮಧಾನ ಹೊರಹಾಕಿದ್ದಾರೆ. ವಿವೇಕಾನಂದರ ಪುಣ್ಯಸ್ಮರಣೆಯ ದಿನದಂದೇ ಅವರನ್ನು ಅವಮಾನಿಸುವ ಮೂಲಕ ಬಿಜೆಪಿ ಇಡೀ ಹಿಂದೂ ಸಮಾಜಕ್ಕೆ ಅವಮಾನಗೈದಿದೆ ಎಂದಿದ್ದಾರೆ.

ಸಂಘಪರಿವಾರದವರೂ ವಿವೇಕಾನಂದರನ್ನು ಎಷ್ಟೇ ಹೊತ್ತು ಮುದ್ದಾಡಿದರೂ ಅವರು ಇಂದಿಗೂ ಬಿಜೆಪಿಗೆ ಪೂರ್ಣವಾಗಿ ದಕ್ಕಿಲ್ಲ, ಮುಂದೆ ದಕ್ಕುವುದೂ ಇಲ್ಲ. ವಿವೇಕಾನಂದರು ದ್ವೇಷದ ಬದಲಾಗಿ ಸಹೋದರತ್ವವನ್ನು, ಮೌಢ್ಯದ ಬದಲಾಗಿ ವೈಜ್ಞಾನಿಕ ಚಿಂತನೆಯನ್ನು, ಕೋಮುಗಲಭೆಗಳಿಗೆ ಬದಲಾಗಿ ಸರ್ವಧರ್ಮ ಸಹಬಾಳ್ಬೆಯನ್ನು ಹಿಂದೂ ಧರ್ಮದ ನೆಲೆಗಟ್ಟಿನಲ್ಲಿ ಪ್ರಚುಪಡಿಸಿದವರು ಎಂದು ಹೇಳಿದ್ದಾರೆ.

ಜಾಗತಿಕ ಸರ್ವಧರ್ಮ ಸಮ್ಮೇಳನದಲ್ಲಿ ಜಗತ್ತಿನ ನೂರಾರು ದೇಶಗಳಿಂದ ಆಗಮಿಸಿದ್ದ ಹತ್ತು ಹಲವು ಧರ್ಮ, ಸಂಸ್ಕೃತಿ, ಭಾಷೆಯ ಜನರನ್ನು ಮೈ ಡಿಯರ್‌ ಬ್ರದರ್ಸ್‌ ಎಂಡ್‌ ಸಿಸ್ಟರ್ಸ್‌ ( ನನ್ನ ಪ್ರೀತಿಯ ಸಹೋದರ – ಸಹೋದರಿಯರೇ ) ಎಂದು ಸಂಬೋಧಿಸಿದ್ದ ವಿವೇಕಾನಂದರು, ವಿಶ್ವಮಾನವ ಚಿಂತನೆಯೇ ಹಿಂದೂ ಧರ್ಮವೆಂದು ಹೇಳಿದವರು. ಆದರೆ ಬಿಜೆಪಿ ನಾಯಕರು ಬಾಯಿ ತೆರೆದರೆ ಹೊಡಿ, ಬಡಿ, ಕೊಲ್ಲು ಎಂದು ಹಿಂಸೆಗೆ ಪ್ರಚೋದನೆ ನೀಡುತ್ತಾರೆ ಎಂದಿದ್ದಾರೆ.

ಧರ್ಮ ರಕ್ಷಣೆಯ ಹೆಸರಲ್ಲಿ ದ್ವೇಷ ಬಿತ್ತುವ ಬಿಜೆಪಿಗೆ ವಿವೇಕಾನಂದರ ಈ ಚಿಂತನೆಗಳು ರುಚಿಸದು. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯೂ ಹೊರತಾಗಿಲ್ಲ. ಇದೇ ಕಾರಣಕ್ಕೆ ಸಾವಿರಾರು ಜನರು ತುಂಬಿದ್ದ ಸಭೆಯಲ್ಲೇ ವಿವೇಕಾನಂದರ ಫೋಟೊ ಯಾಕಿದೆ? ಎಂದು ಕೇಳುವ ಧೈರ್ಯವನ್ನು ರಾಧಾಮೋಹನ್‌ ದಾಸ್‌ ಅವರು ಮಾಡಿದ್ದಾರೆ ಎಂದ ಟೀಕಿಸಿದ್ದಾರೆ.

ಓರ್ವ ಸಂತನಾಗಿ, ದಾರ್ಶನಿಕರಾಗಿ, ಮಹಾನ್ ಮಾನವತಾವಾದಿಯಾಗಿ ಸರ್ವರಿಂದಲೂ ಗೌರವಿಸಲ್ಪಡುವ, ಅನುಸರಿಸಲ್ಪಡುವ ವಿವೇಕಾನಂದರಿಗೆ ಅವಮಾನ ಮಾಡಿರುವ ಬಿಜೆಪಿ ಪಕ್ಷ ಅದೇ ವೇದಿಕೆಯಲ್ಲೇ ಬಹಿರಂಗ ಕ್ಷಮೆ ಕೇಳಬೇಕು ಎಂದು ಆಗ್ರಹಿಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ : ಗೌರಿ ಲಂಕೇಶ್ ಹತ್ಯೆ ಪ್ರಕರಣ: ವಿಶೇಷ ತನಿಖೆಗೆ ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...