Homeಮುಖಪುಟತೆಲಂಗಾಣದಲ್ಲಿ ಮುಂದುವರಿದ 'ಆಪರೇಷನ್ ಹಸ್ತ'; ಬಿಆರ್‌ಎಸ್‌ನ ಆರು ಎಂಎಲ್‌ಸಿಗಳು ಕಾಂಗ್ರೆಸ್ ಸೇರ್ಪಡೆ

ತೆಲಂಗಾಣದಲ್ಲಿ ಮುಂದುವರಿದ ‘ಆಪರೇಷನ್ ಹಸ್ತ’; ಬಿಆರ್‌ಎಸ್‌ನ ಆರು ಎಂಎಲ್‌ಸಿಗಳು ಕಾಂಗ್ರೆಸ್ ಸೇರ್ಪಡೆ

- Advertisement -
- Advertisement -

ತೆಲಂಗಾಣದಲ್ಲಿ ಪ್ರತಿಪಕ್ಷ ಬಿಆರ್‌ಎಸ್‌ಗೆ ಭಾರಿ ಹಿನ್ನಡೆಯಾಗಿದ್ದು, ಗುರುವಾರ ತಡರಾತ್ರಿ ರಾಜ್ಯದ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಸಮ್ಮುಖದಲ್ಲಿ ಪಕ್ಷದ ಆರು ಜನ ಎಂಎಲ್‌ಸಿಗಳು ಆಡಳಿತಾರೂಢ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.

ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ಭಾರತ್ ರಾಷ್ಟ್ರ ಸಮಿತಿಯು ಆರು ಶಾಸಕರು ಸೇರಿದಂತೆ ಹಲವಾರು ನಾಯಕರು ಪಕ್ಷವನ್ನು ತೊರೆದಿದ್ದು, ಆಪರೇಷನ್ ಹಸ್ತದಿಂದ ಪಕ್ಷದ ನಾಯಕರು ಆಘಾತಕ್ಕೆ ಒಳಗಾಗಿದ್ದಾರೆ.

ಕಾಂಗ್ರೆಸ್‌ಗೆ ಪಕ್ಷಾಂತರಗೊಂಡ ಆರು ಎಂಎಲ್‌ಸಿಗಳೆಂದರೆ, ದಂಡೆ ವಿಠಲ್, ಭಾನು ಪ್ರಸಾದ್ ರಾವ್, ಎಂಎಸ್ ಪ್ರಭಾಕರ್, ಬೊಗ್ಗರಪು ದಯಾನಂದ್, ಯೆಗ್ಗೆ ಮಲ್ಲೇಶಂ ಮತ್ತು ಬಸ್ವರಾಜು ಸರಯ್ಯ ಎಂದು ಮೂಲಗಳು ತಿಳಿಸಿವೆ.

ಟಿಪಿಸಿಸಿ ಅಧ್ಯಕ್ಷರೂ ಆಗಿರುವ ಸಿಎಂ ರೇವಂತ್ ರೆಡ್ಡಿ ಅವರ ನಿವಾಸದಲ್ಲಿ ಬಿಆರ್‌ಎಸ್ ಎಂಎಲ್‌ಸಿಗಳು ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಸಂದರ್ಭದಲ್ಲಿ ತೆಲಂಗಾಣದಲ್ಲಿ ಎಐಸಿಸಿ ಪಕ್ಷದ ವ್ಯವಹಾರಗಳ ಉಸ್ತುವಾರಿ ದೀಪಾ ದಾಸ್ಮುನ್ಸಿ ಮತ್ತು ಇತರ ಮುಖಂಡರು ಉಪಸ್ಥಿತರಿದ್ದರು.

ತೆಲಂಗಾಣ ಲೆಜಿಸ್ಲೇಟ್ ಕೌನ್ಸಿಲ್ ವೆಬ್‌ಸೈಟ್ ಪ್ರಕಾರ, ಬಿಆರ್‌ಎಸ್ 25 ಮತ್ತು ಕಾಂಗ್ರೆಸ್ ನಾಲ್ಕು ಸದಸ್ಯರನ್ನು ಹೊಂದಿದೆ. ನಾಲ್ಕು ನಾಮನಿರ್ದೇಶಿತ ಎಂಎಲ್‌ಸಿಗಳು, ಎಐಎಂಐಎಂನಿಂದ ಇಬ್ಬರು ಸದಸ್ಯರು, ಬಿಜೆಪಿ, ಪಿಆರ್‌ಟಿಯುನಿಂದ ತಲಾ ಒಬ್ಬರು ಮತ್ತು ಸ್ವತಂತ್ರ ಒಬ್ಬರು, 40 ಸದಸ್ಯರ ಸದನದಲ್ಲಿ ಎರಡು ಸ್ಥಾನಗಳು ಖಾಲಿ ಇವೆ.

ರೇವಂತ್ ರೆಡ್ಡಿ ಎರಡು ದಿನಗಳ ಪ್ರವಾಸದಿಂದ ಗುರುವಾರ ರಾತ್ರಿ ರಾಷ್ಟ್ರ ರಾಜಧಾನಿಗೆ ಹಿಂದಿರುಗಿದ ಕೂಡಲೇ ಎಂಎಲ್‌ಸಿಗಳು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ಹೊಸ ಪಕ್ಷಾಂತರದಿಂದ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಬಲ 10ಕ್ಕೆ ಏರಲಿದೆ.

ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯ ನಂತರ ಆರು ಬಿಆರ್‌ಎಸ್ ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಮಂದಿ ಆಡಳಿತ ಪಕ್ಷದತ್ತ ಮುಖ ಮಾಡುತ್ತಾರೆ ಎಂಬ ಊಹಾಪೋಹಗಳು ಹಬ್ಬಿವೆ.

ಕಳೆದ ವರ್ಷ ನಡೆದ ಚುನಾವಣೆಯಲ್ಲಿ ಒಟ್ಟು 119 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಆರ್‌ಎಸ್ 39 ಕ್ಷೇತ್ರಗಳನ್ನು ಗೆದ್ದುಕೊಂಡಿದ್ದರೆ, ಕಾಂಗ್ರೆಸ್ 64 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದಿತ್ತು.

ಆದಾಗ್ಯೂ, ಸಿಕಂದರಾಬಾದ್ ಕಂಟೋನ್ಮೆಂಟ್‌ನ ಬಿಆರ್‌ಎಸ್ ಶಾಸಕಿ ಜಿ ಲಾಸ್ಯ ನಂದಿತಾ ಈ ವರ್ಷದ ಆರಂಭದಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಸಿಕಂದರಾಬಾದ್ ಕಂಟೋನ್ಮೆಂಟ್ ವಿಧಾನಸಭಾ ಕ್ಷೇತ್ರಕ್ಕೆ ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಇದು ಅದರ ಬಲವನ್ನು 65 ಕ್ಕೆ ಹೆಚ್ಚಿಸಲು ಕಾರಣವಾಯಿತು.

‘ಇದು ಯಾವ ರೀತಿಯ ನ್ಯಾಯ ಪತ್ರ..’; ರಾಹುಲ್ ಗಾಂಧಿಯನ್ನು ಪ್ರಶ್ನಿಸಿದ ಕೆಟಿಆರ್

ಸಾಲುಸಾಲು ಬಿಆರ್‌ಎಸ್ ಶಾಸಕರು ಮತ್ತು ನಾಯಕರು ಕಾಂಗ್ರೆಸ್ ಸೇರುತ್ತಿರುವ ಬಗ್ಗೆ ಆಕ್ರೋಶ ಹೊರಹಾಕಿರುವ ಪಕ್ಷದ ಮುಖಂಡ ಕೆಟಿ ರಾಮ್‌ ರಾವ್, ಇದು ಯಾವ ರೀತಿಯ ನ್ಯಾಯ ಪತ್ರ ಎಂದು ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ಬಿಆರ್‌ಎಸ್ ಸಂಸದ ಕೇಶವ ರಾವ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ನಂತರ ರಾಜೀನಾಮೆ ನೀಡಿದ್ದಾರೆ. ಅವರ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಪಕ್ಷಾಂತರ ಮಾಡಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಲೋಕಸಭೆಗೆ ಸ್ಪರ್ಧಿಸಿದ ಬಿಆರ್‌ಎಸ್ ಶಾಸಕರ ಬಗ್ಗೆ ಎನು ಹೇಳುತ್ತೀರಾ? ಕಾಂಗ್ರೆಸ್‌ಗೆ ಪಕ್ಷಾಂತರಗೊಂಡ ಅರ್ಧ ಡಜನ್ ಇತರ ಬಿಆರ್‌ಎಸ್ ಶಾಸಕರ ಬಗ್ಗೆ ಏನು ಹೇಳುತ್ತೀರಾ? ರಾಹುಲ್ ಗಾಂಧಿಯವರೆ, ನೀವು ಸಂವಿಧಾನವನ್ನು ಎತ್ತಿ ಹಿಡಿಯಲು ಹೊರಟಿರುವುದು ಹೀಗೆಯೇ” ಎಂದು ಪ್ರಶ್ನಿಸಿದ್ದಾರೆ.

“ನೀವು ಬಿಆರ್‌ಎಸ್ ಶಾಸಕರನ್ನು ರಾಜೀನಾಮೆ ನೀಡಲು ಸಾಧ್ಯವಾಗದಿದ್ದರೆ, ಕಾಂಗ್ರೆಸ್ ಪ್ರಣಾಳಿಕೆಯಂತೆ 10 ತಿದ್ದುಪಡಿಗಳನ್ನು ನಿಗದಿಪಡಿಸಲು ನೀವು ಬದ್ಧರಾಗಿದ್ದೀರಿ ಎಂದು ರಾಷ್ಟ್ರವು ಹೇಗೆ ನಂಬುತ್ತದೆ? ಯೇ ಕೈಸಾ ನ್ಯಾಯ ಪತ್ರ ಹೈಂ? (ಇದು ಯಾವ ರೀತಿಯ ನ್ಯಾಯ ಪತ್ರ) ” ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ; ಲೋಕಸಭಾ ಸದಸ್ಯರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಅಮೃತಪಾಲ್, ರಶೀದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...