Homeಮುಖಪುಟತೆಲಂಗಾಣದಲ್ಲಿ ಮುಂದುವರಿದ 'ಆಪರೇಷನ್ ಹಸ್ತ'; ಬಿಆರ್‌ಎಸ್‌ನ ಆರು ಎಂಎಲ್‌ಸಿಗಳು ಕಾಂಗ್ರೆಸ್ ಸೇರ್ಪಡೆ

ತೆಲಂಗಾಣದಲ್ಲಿ ಮುಂದುವರಿದ ‘ಆಪರೇಷನ್ ಹಸ್ತ’; ಬಿಆರ್‌ಎಸ್‌ನ ಆರು ಎಂಎಲ್‌ಸಿಗಳು ಕಾಂಗ್ರೆಸ್ ಸೇರ್ಪಡೆ

- Advertisement -
- Advertisement -

ತೆಲಂಗಾಣದಲ್ಲಿ ಪ್ರತಿಪಕ್ಷ ಬಿಆರ್‌ಎಸ್‌ಗೆ ಭಾರಿ ಹಿನ್ನಡೆಯಾಗಿದ್ದು, ಗುರುವಾರ ತಡರಾತ್ರಿ ರಾಜ್ಯದ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಸಮ್ಮುಖದಲ್ಲಿ ಪಕ್ಷದ ಆರು ಜನ ಎಂಎಲ್‌ಸಿಗಳು ಆಡಳಿತಾರೂಢ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.

ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ಭಾರತ್ ರಾಷ್ಟ್ರ ಸಮಿತಿಯು ಆರು ಶಾಸಕರು ಸೇರಿದಂತೆ ಹಲವಾರು ನಾಯಕರು ಪಕ್ಷವನ್ನು ತೊರೆದಿದ್ದು, ಆಪರೇಷನ್ ಹಸ್ತದಿಂದ ಪಕ್ಷದ ನಾಯಕರು ಆಘಾತಕ್ಕೆ ಒಳಗಾಗಿದ್ದಾರೆ.

ಕಾಂಗ್ರೆಸ್‌ಗೆ ಪಕ್ಷಾಂತರಗೊಂಡ ಆರು ಎಂಎಲ್‌ಸಿಗಳೆಂದರೆ, ದಂಡೆ ವಿಠಲ್, ಭಾನು ಪ್ರಸಾದ್ ರಾವ್, ಎಂಎಸ್ ಪ್ರಭಾಕರ್, ಬೊಗ್ಗರಪು ದಯಾನಂದ್, ಯೆಗ್ಗೆ ಮಲ್ಲೇಶಂ ಮತ್ತು ಬಸ್ವರಾಜು ಸರಯ್ಯ ಎಂದು ಮೂಲಗಳು ತಿಳಿಸಿವೆ.

ಟಿಪಿಸಿಸಿ ಅಧ್ಯಕ್ಷರೂ ಆಗಿರುವ ಸಿಎಂ ರೇವಂತ್ ರೆಡ್ಡಿ ಅವರ ನಿವಾಸದಲ್ಲಿ ಬಿಆರ್‌ಎಸ್ ಎಂಎಲ್‌ಸಿಗಳು ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಸಂದರ್ಭದಲ್ಲಿ ತೆಲಂಗಾಣದಲ್ಲಿ ಎಐಸಿಸಿ ಪಕ್ಷದ ವ್ಯವಹಾರಗಳ ಉಸ್ತುವಾರಿ ದೀಪಾ ದಾಸ್ಮುನ್ಸಿ ಮತ್ತು ಇತರ ಮುಖಂಡರು ಉಪಸ್ಥಿತರಿದ್ದರು.

ತೆಲಂಗಾಣ ಲೆಜಿಸ್ಲೇಟ್ ಕೌನ್ಸಿಲ್ ವೆಬ್‌ಸೈಟ್ ಪ್ರಕಾರ, ಬಿಆರ್‌ಎಸ್ 25 ಮತ್ತು ಕಾಂಗ್ರೆಸ್ ನಾಲ್ಕು ಸದಸ್ಯರನ್ನು ಹೊಂದಿದೆ. ನಾಲ್ಕು ನಾಮನಿರ್ದೇಶಿತ ಎಂಎಲ್‌ಸಿಗಳು, ಎಐಎಂಐಎಂನಿಂದ ಇಬ್ಬರು ಸದಸ್ಯರು, ಬಿಜೆಪಿ, ಪಿಆರ್‌ಟಿಯುನಿಂದ ತಲಾ ಒಬ್ಬರು ಮತ್ತು ಸ್ವತಂತ್ರ ಒಬ್ಬರು, 40 ಸದಸ್ಯರ ಸದನದಲ್ಲಿ ಎರಡು ಸ್ಥಾನಗಳು ಖಾಲಿ ಇವೆ.

ರೇವಂತ್ ರೆಡ್ಡಿ ಎರಡು ದಿನಗಳ ಪ್ರವಾಸದಿಂದ ಗುರುವಾರ ರಾತ್ರಿ ರಾಷ್ಟ್ರ ರಾಜಧಾನಿಗೆ ಹಿಂದಿರುಗಿದ ಕೂಡಲೇ ಎಂಎಲ್‌ಸಿಗಳು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ಹೊಸ ಪಕ್ಷಾಂತರದಿಂದ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಬಲ 10ಕ್ಕೆ ಏರಲಿದೆ.

ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯ ನಂತರ ಆರು ಬಿಆರ್‌ಎಸ್ ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಮಂದಿ ಆಡಳಿತ ಪಕ್ಷದತ್ತ ಮುಖ ಮಾಡುತ್ತಾರೆ ಎಂಬ ಊಹಾಪೋಹಗಳು ಹಬ್ಬಿವೆ.

ಕಳೆದ ವರ್ಷ ನಡೆದ ಚುನಾವಣೆಯಲ್ಲಿ ಒಟ್ಟು 119 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಆರ್‌ಎಸ್ 39 ಕ್ಷೇತ್ರಗಳನ್ನು ಗೆದ್ದುಕೊಂಡಿದ್ದರೆ, ಕಾಂಗ್ರೆಸ್ 64 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದಿತ್ತು.

ಆದಾಗ್ಯೂ, ಸಿಕಂದರಾಬಾದ್ ಕಂಟೋನ್ಮೆಂಟ್‌ನ ಬಿಆರ್‌ಎಸ್ ಶಾಸಕಿ ಜಿ ಲಾಸ್ಯ ನಂದಿತಾ ಈ ವರ್ಷದ ಆರಂಭದಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಸಿಕಂದರಾಬಾದ್ ಕಂಟೋನ್ಮೆಂಟ್ ವಿಧಾನಸಭಾ ಕ್ಷೇತ್ರಕ್ಕೆ ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಇದು ಅದರ ಬಲವನ್ನು 65 ಕ್ಕೆ ಹೆಚ್ಚಿಸಲು ಕಾರಣವಾಯಿತು.

‘ಇದು ಯಾವ ರೀತಿಯ ನ್ಯಾಯ ಪತ್ರ..’; ರಾಹುಲ್ ಗಾಂಧಿಯನ್ನು ಪ್ರಶ್ನಿಸಿದ ಕೆಟಿಆರ್

ಸಾಲುಸಾಲು ಬಿಆರ್‌ಎಸ್ ಶಾಸಕರು ಮತ್ತು ನಾಯಕರು ಕಾಂಗ್ರೆಸ್ ಸೇರುತ್ತಿರುವ ಬಗ್ಗೆ ಆಕ್ರೋಶ ಹೊರಹಾಕಿರುವ ಪಕ್ಷದ ಮುಖಂಡ ಕೆಟಿ ರಾಮ್‌ ರಾವ್, ಇದು ಯಾವ ರೀತಿಯ ನ್ಯಾಯ ಪತ್ರ ಎಂದು ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ಬಿಆರ್‌ಎಸ್ ಸಂಸದ ಕೇಶವ ರಾವ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ನಂತರ ರಾಜೀನಾಮೆ ನೀಡಿದ್ದಾರೆ. ಅವರ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಪಕ್ಷಾಂತರ ಮಾಡಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಲೋಕಸಭೆಗೆ ಸ್ಪರ್ಧಿಸಿದ ಬಿಆರ್‌ಎಸ್ ಶಾಸಕರ ಬಗ್ಗೆ ಎನು ಹೇಳುತ್ತೀರಾ? ಕಾಂಗ್ರೆಸ್‌ಗೆ ಪಕ್ಷಾಂತರಗೊಂಡ ಅರ್ಧ ಡಜನ್ ಇತರ ಬಿಆರ್‌ಎಸ್ ಶಾಸಕರ ಬಗ್ಗೆ ಏನು ಹೇಳುತ್ತೀರಾ? ರಾಹುಲ್ ಗಾಂಧಿಯವರೆ, ನೀವು ಸಂವಿಧಾನವನ್ನು ಎತ್ತಿ ಹಿಡಿಯಲು ಹೊರಟಿರುವುದು ಹೀಗೆಯೇ” ಎಂದು ಪ್ರಶ್ನಿಸಿದ್ದಾರೆ.

“ನೀವು ಬಿಆರ್‌ಎಸ್ ಶಾಸಕರನ್ನು ರಾಜೀನಾಮೆ ನೀಡಲು ಸಾಧ್ಯವಾಗದಿದ್ದರೆ, ಕಾಂಗ್ರೆಸ್ ಪ್ರಣಾಳಿಕೆಯಂತೆ 10 ತಿದ್ದುಪಡಿಗಳನ್ನು ನಿಗದಿಪಡಿಸಲು ನೀವು ಬದ್ಧರಾಗಿದ್ದೀರಿ ಎಂದು ರಾಷ್ಟ್ರವು ಹೇಗೆ ನಂಬುತ್ತದೆ? ಯೇ ಕೈಸಾ ನ್ಯಾಯ ಪತ್ರ ಹೈಂ? (ಇದು ಯಾವ ರೀತಿಯ ನ್ಯಾಯ ಪತ್ರ) ” ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ; ಲೋಕಸಭಾ ಸದಸ್ಯರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಅಮೃತಪಾಲ್, ರಶೀದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...