Homeಮುಖಪುಟಕೇಜ್ರಿವಾಲ್ ಜಾಮೀನಿಗೆ ತಡೆ ನೀಡಿದ್ದ ನ್ಯಾಯಾಧೀಶರು ಇಡಿ ವಕೀಲರ ಸಹೋದರ: 150 ವಕೀಲರಿಂದ ಸಿಜೆಐಗೆ ಪತ್ರ

ಕೇಜ್ರಿವಾಲ್ ಜಾಮೀನಿಗೆ ತಡೆ ನೀಡಿದ್ದ ನ್ಯಾಯಾಧೀಶರು ಇಡಿ ವಕೀಲರ ಸಹೋದರ: 150 ವಕೀಲರಿಂದ ಸಿಜೆಐಗೆ ಪತ್ರ

- Advertisement -
- Advertisement -

ನ್ಯಾಯಮೂರ್ತಿ ಸುಧೀರ್ ಕುಮಾರ್ ಜೈನ್ ಅವರು ಆದೇಶವನ್ನು ಓದದೇ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನನ್ನು ರದ್ದುಗೊಳಿಸಿದ್ದ ರೀತಿಯ ಕುರಿತು ದೆಹಲಿ ಹೈಕೋರ್ಟ್ ಮತ್ತು ಜಿಲ್ಲಾ ನ್ಯಾಯಾಲಯಗಳ 150 ವಕೀಲರ ನಿಯೋಗವು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರಿಗೆ ಪತ್ರ ಬರೆದಿದೆ.

ದಿ ಹಿಂದೂ ವರದಿಯ ಪ್ರಕಾರ, ಜಾಮೀನು ಆದೇಶಕ್ಕೆ ತಡೆ ನೀಡಿರುವ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸುಧೀರ್ ಕುಮಾರ್ ಜೈನ್ ಅವರ ಸಹೋದರ ಜಾರಿ ನಿರ್ದೇಶನಾಲಯದ ವಕೀಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ವಕೀಲರು ಪತ್ರದಲ್ಲಿ ಹೇಳಿದ್ದಾರೆ.

ಇದು ಆಪಾದಿತ ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ದಾಖಲಿಸಿರುವ ಪ್ರಕರಣವಾಗಿದ್ದು, ಬಂಧನಕ್ಕೊಳಗಾಗಿರುವ ಕೇಜ್ರಿವಾಲ್ ಜಾಮೀನಿಗಾಗಿ ಪ್ರಯತ್ನಿಸುತ್ತಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವ ಆರ್ಥಿಕ ಅಪರಾಧಗಳ ಸಂಸ್ಥೆಯಾದ ಇಡಿ ಕೇಜ್ರಿವಾಲ್ ಅವರನ್ನು ಈ ವರ್ಷದ ಮಾರ್ಚ್‌ನಲ್ಲಿ ಬಂಧಿಸಿತ್ತು. ಕಳೆದ ತಿಂಗಳ ಕೊನೆಯಲ್ಲಿ, ಕೇಜ್ರಿವಾಲ್‌ಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಜಾಮೀನು ನೀಡಿತ್ತು. ಈ ಬೆನ್ನಲ್ಲೇ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ಕೇಜ್ರಿವಾಲ್ ಅವರನ್ನು ಬಂಧಿಸಿದೆ.

ಜೂ.20ರಂದು ಕೇಜ್ರಿವಾಲ್‌ಗೆ ಜಾಮೀನು ಮಂಜೂರು ಮಾಡಿದ್ದ ವಿಚಾರಣಾ ನ್ಯಾಯಾಲಯವು, ಇಡಿ ಕೇಜ್ರಿವಾಲ್ ವಿರುದ್ಧ ಪಕ್ಷಪಾತದಿಂದ ವರ್ತಿಸುತ್ತಿದೆ ಎಂದು ಹೇಳಿತ್ತು. ಇಡಿ ಮುಖ್ಯಮಂತ್ರಿಗಳ ಬಂಧನಕ್ಕೆ ಸಾಕಷ್ಟು ಸಾಕ್ಷ್ಯಾಧಾರಗಳನ್ನು ಒದಗಿಸಿಲ್ಲ ಎಂದು ನ್ಯಾ. ನ್ಯಾಯ ಬಿಂದು ಹೇಳಿದ್ದರು.

ವಕೀಲರ ಪತ್ರವು ಸ್ಪಷ್ಟ ‘ಹಿತಾಸಕ್ತಿ ಸಂಘರ್ಷ’ವನ್ನು ಎತ್ತಿ ತೋರಿಸಿದೆ. ನ್ಯಾ.ಜೈನ್ ಅವರ ಖಾಸಾ ಸೋದರ ಇಡಿ ವಕೀಲರಾಗಿರುವುದರಿಂದ ಅವರು ವಿಚಾರಣೆಯಿಂದ ಹಿಂದಕ್ಕೆ ಸರಿಯಬೇಕಾಗಿತ್ತು. ಈ ಸ್ಪಷ್ಟ ಹಿತಾಸಕ್ತಿ ಸಂಘರ್ಷವನ್ನು ನ್ಯಾ.ಜೈನ್ ಎಂದಿಗೂ ಘೋಷಿಸಿರಲಿಲ್ಲ ಎಂದು ಪತ್ರದಲ್ಲಿ ಹೇಳಲಾಗಿದೆ.

ಅಪರೂಪದ ಬೆಳವಣಿಗೆಯಲ್ಲಿ” ಜಾಮೀನು ಆದೇಶವು ಅಧಿಕೃತವಾಗಿ ಅಪ್ಲೋಡ್ ಆಗುವ ಮುನ್ನವೇ ನ್ಯಾ.ಜೈನ್ ಅವರು ಕೇಜ್ರಿವಾಲ್‌ರ ಜಾಮೀನನ್ನು ಪ್ರಶ್ನಿಸಲು ಇಡಿ ವಕೀಲರಿಗೆ ಅನುಮತಿ ನೀಡಿದ್ದರು ಮತ್ತು ಜಾಮೀನು ಆದೇಶಕ್ಕೆ ತಡೆ ವಿಧಿಸಿದ್ದರು. ಈ ರೀತಿ ಭಾರತೀಯ ನ್ಯಾಯಾಂಗದ ಇತಿಹಾಸದಲ್ಲಿ ಹಿಂದೆಂದೂ ನಡೆದಿರಲಿಲ್ಲ ಎಂದು ವಕೀಲರು ತಮ್ಮ ಪತ್ರದಲ್ಲಿ ಹೇಳಿದ್ದಾರೆ.

ಆಮ್‌ ಆದ್ಮಿ ಪಕ್ಷದ ಮುಖ್ಯ ವಕೀಲ ಸಂಜೀವ ನಸಿಯಾರ್ ಅವರೂ ಭಾಗವಾಗಿರುವ ವಕೀಲರ ನಿಯೋಗವು, ಅಂತಿಮ ಆದೇಶಗಳನ್ನು ಹೊರಡಿಸದಂತೆ ಮತ್ತು ರಜೆಯ ಬಳಿಕ ನಿಯಮಿತ ನ್ಯಾಯಾಲಯಗಳಿಗೆ ನೋಟಿಸ್‌ಗಳನ್ನು ಮಾತ್ರ ನೀಡುವಂತೆ ರೋಸ್ ಅವೆನ್ಯೂ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶರು ಬೇಸಿಗೆ ವಿರಾಮದಲ್ಲಿ ಕಾರ್ಯ ನಿರ್ವಹಿಸುವ ರಜಾಕಾಲದ ನ್ಯಾಯಾಲಯಗಳಿಗೆ ಹೊರಡಿಸಿದ್ದ ಆಂತರಿಕ ಆಡಳಿತಾತ್ಮಕ ಆದೇಶವನ್ನೂ ಎತ್ತಿ ತೋರಿಸಿದೆ.

ಈ ಕ್ರಮವು ರಜಾಕಾಲದ ನ್ಯಾಯಾಲಯಗಳ ಉದ್ದೇಶವನ್ನು ಕಡೆಗಣಿಸಿದೆ ಮತ್ತು ಇಂತಹ ಆದೇಶದ ವಿರುದ್ಧ ಬಲವಾದ ಆಕ್ಷೇಪವನ್ನು ಸಲ್ಲಿಸಲು ಬಯಸಿದ್ದೇವೆ ಎಂದೂ ಪತ್ರದಲ್ಲಿ ಹೇಳಲಾಗಿದೆ.

ಇದನ್ನೂ ಓದಿ : ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್ ಜಾಮೀನು ಅರ್ಜಿಗೆ ಸಿಬಿಐ ಪ್ರತಿಕ್ರಿಯೆ ಕೇಳಿದ ದೆಹಲಿ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...