Homeಮುಖಪುಟ'ಹತ್ರಾಸ್ ಕಾಲ್ತುಳಿತ ಸಂತ್ರಸ್ತರಿಗೆ ಪರಿಹಾರದ ಮೊತ್ತ ಹೆಚ್ಚಿಸಿ..'; ಸಿಎಂ ಆದಿತ್ಯನಾಥ್‌ಗೆ ರಾಹುಲ್ ಗಾಂಧಿ ಪತ್ರ

‘ಹತ್ರಾಸ್ ಕಾಲ್ತುಳಿತ ಸಂತ್ರಸ್ತರಿಗೆ ಪರಿಹಾರದ ಮೊತ್ತ ಹೆಚ್ಚಿಸಿ..’; ಸಿಎಂ ಆದಿತ್ಯನಾಥ್‌ಗೆ ರಾಹುಲ್ ಗಾಂಧಿ ಪತ್ರ

- Advertisement -
- Advertisement -

ಜುಲೈ 2 ರಂದು ಹತ್ರಾಸ್‌ನಲ್ಲಿ ನಡೆದ ‘ಸತ್ಸಂಗ’ದಲ್ಲಿ ಭಾರೀ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಮತ್ತು ಗಾಯಗೊಂಡವರ ಕುಟುಂಬಗಳಿಗೆ ಪರಿಹಾರ ಮೊತ್ತ ಹೆಚ್ಚಿಸುವಂತೆ ಲೋಕಸಭೆ ವಿರೋಧಪಕ್ಷ ನಾಯಕ ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ.

ಭೋಲೆ ಬಾಬಾ ಆಯೋಜಿಸಿದ್ದ ‘ಸತ್ಸಂಗ’ದ ಸಂದರ್ಭದಲ್ಲಿ ಕಾಲ್ತುಳಿತದಲ್ಲಿ ಕನಿಷ್ಠ 121 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.

ಕಾಲ್ತುಳಿತದ ಸಂತ್ರಸ್ತರ ಕುಟುಂಬಗಳನ್ನು ಇತ್ತೀಚೆಗೆ ಭೇಟಿ ಮಾಡಿದ ರಾಹುಲ್ ಗಾಂಧಿ ಅವರು ಯೋಗಿ ಆದಿತ್ಯನಾಥ್ ಅವರಿಗೆ ಬರೆದ ಪತ್ರದಲ್ಲಿ, ದುರಂತದ ಬಗ್ಗೆ ನ್ಯಾಯಯುತ ಮತ್ತು ಪಾರದರ್ಶಕ ತನಿಖೆಗೆ ಒತ್ತಾಯಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದರು.

ಉತ್ತರ ಪ್ರದೇಶ ಸರ್ಕಾರವು ಪ್ರಸ್ತುತ ಒದಗಿಸಿರುವ ಪರಿಹಾರವು “ಅಸಮರ್ಪಕವಾಗಿದೆ” ಎಂದು ಅವರು ಹೇಳಿದರು. ಯೋಗಿ ಆದಿತ್ಯನಾಥ್ ಅವರು ಪರಿಹಾರ ಮೊತ್ತವನ್ನು ಹೆಚ್ಚಿಸಿ, ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಅಥವಾ ಗಾಯಗೊಂಡವರ ಕುಟುಂಬಗಳಿಗೆ ಶೀಘ್ರವಾಗಿ ನೀಡಬೇಕು ಎಂದು ಒತ್ತಾಯಿಸಿದರು.

ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರ ಪ್ರತ್ಯೇಕವಾಗಿ ಘೋಷಿಸಿವೆ.

ಹತ್ರಾಸ್‌ನಲ್ಲಿ ಕಾಲ್ತುಳಿತ ಸಂತ್ರಸ್ತರನ್ನು ಭೇಟಿಯಾದಾಗ ಮತ್ತು ಅವರ ಕಷ್ಟಗಳನ್ನು ಆಲಿಸಿದಾಗ ಕುಟುಂಬದ ಸದಸ್ಯರ ಮಾತಿಗೆ ಕಂಗಾಲಾಗಿದ್ದೇನೆ, ಕಷ್ಟದ ಸಮಯದಲ್ಲಿ ಅವರನ್ನು ಬೆಂಬಲಿಸುವುದು ಮುಖ್ಯ ಎಂದು ರಾಹುಲ್ ಗಾಂಧಿ ತಮ್ಮ ಪತ್ರದಲ್ಲಿ ಹೇಳಿದ್ದಾರೆ.

ರಾಜ್ಯ ಸರ್ಲಾರವು ಅವರ ಮನವಿಗಳನ್ನು ಪರಿಹರಿಸಿ ಶೀಘ್ರ ಕ್ರಮಕೈಗೊಳ್ಳುವ ಭರವಸೆಯನ್ನು ಅವರು ವ್ಯಕ್ತಪಡಿಸಿದರು.

ತನಿಖೆ ಚುರುಕು

ಕಾಲ್ತುಳಿತ ದುರಂತದ ತನಿಖೆಗಾಗಿ ರಚಿಸಲಾದ ತ್ರಿಸದಸ್ಯ ನ್ಯಾಯಾಂಗ ಆಯೋಗವು ಭಾನುವಾರ ಹತ್ರಾಸ್ ತಲುಪಿದ್ದು, ‘ಸತ್ಸಂಗ’ದಲ್ಲಿ ಭಾಗಿಯಾಗಿರುವ ಅಧಿಕಾರಿಗಳು, ಪೊಲೀಸರು ಮತ್ತು ಇತರರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಿದೆ.

“ನಾವು ಸಂಪೂರ್ಣ ಸ್ಥಳವನ್ನು ನೋಡಿದ್ದೇವೆ. ಎಲ್ಲ ಸದಸ್ಯರು (ಸಮಿತಿಯ) ಇಲ್ಲಿದ್ದಾರೆ. ನಾವು ವಿಚಾರಣೆ ಮಾಡಬೇಕಾದ ಎಲ್ಲರನ್ನು ಪ್ರಶ್ನಿಸುತ್ತೇವೆ. ಹೌದು, ನಾವು ನಮ್ಮ ವರದಿಯನ್ನು ಎರಡು ತಿಂಗಳೊಳಗೆ ಸಲ್ಲಿಸುತ್ತೇವೆ” ಎಂದು ನ್ಯಾಯಮೂರ್ತಿ (ನಿವೃತ್ತ) ಬ್ರಿಜೇಶ್ ಕುಮಾರ್ ಶ್ರೀವಾಸ್ತವ ಹೇಳಿದರು.

ಭೋಲೆ ಬಾಬಾ ವಿರುದ್ಧ ಮೊದಲ ಪ್ರಕರಣ ದಾಖಲಾಗಿತ್ತು ಮತ್ತು ಈ ಹಿಂದೆ ಎಫ್‌ಐಆರ್‌ನಲ್ಲಿ ಆತನ ಹೆಸರಿರಲಿಲ್ಲ, ಅದರಲ್ಲಿ ಪ್ರಮುಖ ಆರೋಪಿ ದೇವಪ್ರಕಾಶ್ ಮಧುಕರ್ ಹೆಸರಿಸಲಾಗಿತ್ತು. ಶುಕ್ರವಾರ ರಾತ್ರಿ ಮಧುಕರ್ ಅವರನ್ನು ಬಂಧಿಸಲಾಗಿದೆ.

ಶನಿವಾರ ಸಂದೇಶದಲ್ಲಿ, ಭೋಲೆ ಬಾಬಾ ಅವರು ಕಾಲ್ತುಳಿತದ ಘಟನೆಯಿಂದ ಖಿನ್ನತೆಗೆ ಒಳಗಾಗಿದ್ದೇನೆ ಎಂದು ಹೇಳಿದ್ದು, ಸಂತ್ರಸ್ತ ಕುಟುಂಬಗಳು ನ್ಯಾಯಾಂಗದಲ್ಲಿ ನಂಬಿಕೆ ಇಡುವಂತೆ ಕೇಳಿಕೊಂಡರು.

ಇದನ್ನೂ ಓದಿ; ‘ನನ್ನ ಮಗ ಖಲಿಸ್ತಾನಿ ಬೆಂಬಲಿಗನಲ್ಲ’ ಎಂಬ ತಾಯಿ ಹೇಳಿಕೆಯನ್ನು ನಿರಾಕರಿಸಿದ ಅಮೃತಪಾಲ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...