Homeಮುಖಪುಟ45 ಶಾಸಕರ ಬೆಂಬಲ; ಜಾರ್ಖಂಡ್ ವಿಧಾನಸಭೆಯಲ್ಲಿ 'ವಿಶ್ವಾಸಮತ' ಗೆದ್ದ ಹೇಮಂತ್ ಸೊರೇನ್

45 ಶಾಸಕರ ಬೆಂಬಲ; ಜಾರ್ಖಂಡ್ ವಿಧಾನಸಭೆಯಲ್ಲಿ ‘ವಿಶ್ವಾಸಮತ’ ಗೆದ್ದ ಹೇಮಂತ್ ಸೊರೇನ್

- Advertisement -
- Advertisement -

ಜುಲೈ 4 ರಂದು ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು, ಸೋಮವಾರ 81 ಸದಸ್ಯರ ಜಾರ್ಖಂಡ್ ವಿಧಾನಸಭೆಯಲ್ಲಿ ವಿಶ್ವಾಸ ಮತ ಗೆದ್ದರು. ನೂತನ ಮುಖ್ಯಮಂತ್ರಿಯನ್ನು 45 ಶಾಸಕರು ಬೆಂಬಲಿಸಿದ್ದು, ವಿಶ್ವಾಸಮತಕ್ಕೂ ಮುನ್ನ ವಿಪಕ್ಷ ಶಾಸಕರು ಸದನದಿಂದ ಹೊರನಡೆದರು.

ಜಾರ್ಖಂಡ್ ವಿಧಾನಸಭೆಯ ಪ್ರಸ್ತುತ ಸಂಖ್ಯಾಬಲ 76 ಆಗಿದ್ದು, ಜುಲೈ 3 ರಂದು ಹೇಮಂತ್ ಸೊರೇನ್ ಸರ್ಕಾರ ರಚಿಸಲು ಹಕ್ಕು ಮಂಡಿಸಿದಾಗ ಆಡಳಿತಾರೂಢ ಜೆಎಂಎಂ-ಕಾಂಗ್ರೆಸ್-ಆರ್‌ಜೆಡಿ ಮೈತ್ರಿಕೂಟವು 44 ಶಾಸಕರ ಬೆಂಬಲ ಪಟ್ಟಿಯನ್ನು ರಾಜ್ಯಪಾಲರಿಗೆ ಸಲ್ಲಿಸಿತು.

ಜೆಎಂಎಂ, ಕಾಂಗ್ರೆಸ್ ಮತ್ತು ಆರ್‌ಜೆಡಿ ಶಾಸಕರು ಬಹುಮತ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾಗುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದರು. ಆದರೆ, ಇದು ಸುಲಭವಲ್ಲ ಎಂದು ಬಿಜೆಪಿ ವಾದಿಸಿತು.

ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್‌ನ ಹೈಕೋರ್ಟ್ ಜಾಮೀನು ನೀಡಿದ ನಂತರ, ಜೂನ್ 28 ರಂದು ಹೇಮಂತ್ ಸೊರೇನ್ ಜೈಲಿನಿಂದ ಬಿಡುಗಡೆಯಾಗಿದ್ದರು. ಜನವರಿ 31ರಂದು ಜಾರಿ ನಿರ್ದೇಶನಾಲಯದಿಂದ ಬಂಧಿಸುವ ಮುನ್ನವೇ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸುಮಾರು ಐದು ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾಗಿರುವ ಹೇಮಂತ್ ಸೊರೇನ್ ಅವರು ಜಾರ್ಖಂಡ್ ಮುಖ್ಯಮಂತ್ರಿಯಾಗಿ ಜುಲೈ 4 ರಂದು ಮತ್ತೊಮ್ಮೆ ಪ್ರಮಾಣ ವಚನ ಸ್ವೀಕರಿಸಿದರು. ರಾಂಚಿಯ ರಾಜಭವನದಲ್ಲಿ ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಕಾರ್ಯಕಾರಿ ಅಧ್ಯಕ್ಷರಿಗೆ ಪ್ರಮಾಣ ವಚನ ಬೋಧಿಸಿದರು.

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಹೇಮಂತ್ ಸೊರೇನ್ ಅವರ ತಂದೆ ಶಿಬು ಸೊರೇನ್ ಕೂಡ ಉಪಸ್ಥಿತರಿದ್ದರು.

ಚಂಪೈ ಸೊರೇನ್ ರಾಜೀನಾಮೆ

ಹೇಮಂತ್ ಸೊರೇನ್ ಬಂಧನದ ನಂತರ ಫೆಬ್ರವರಿ 2 ರಂದು ಜಾರ್ಖಂಡ್‌ನ 12 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಚಂಪೈ ಸೊರೇನ್ ಅವರು, ಬುಧವಾರ ರಾಜಭವನದಲ್ಲಿ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿ ಜೆಎಂಎಂ ಕಾರ್ಯಾಧ್ಯಕ್ಷರ ಸಮ್ಮುಖದಲ್ಲಿ ರಾಜೀನಾಮೆ ಸಲ್ಲಿಸಿದರು.

“ಜೆಎಂಎಂ ನೇತೃತ್ವದ ಮೈತ್ರಿಕೂಟದ ನಿರ್ಧಾರದಂತೆ ನಾನು ರಾಜೀನಾಮೆ ನೀಡಿದ್ದೇನೆ. ನಮ್ಮ ಮೈತ್ರಿ ಪ್ರಬಲವಾಗಿದೆ” ಎಂದು ರಾಜಭವನದಿಂದ ಹೊರಬಂದ ನಂತರ ಚಂಪೈ ಸೊರೇನ್ ಹೇಳಿದ್ದರು.

“ಹೇಮಂತ್ ಸೊರೇನ್ ಜೊತೆ ಏನಾಯಿತು ಎಂಬುದು ಎಲ್ಲರಿಗೂ ತಿಳಿದಿದೆ.. ನನಗೆ ಸಮ್ಮಿಶ್ರ ಪಾಲುದಾರರು ಜವಾಬ್ದಾರಿಯನ್ನು ನೀಡಿದ್ದಾರೆ. ಈಗ, ಮೈತ್ರಿಕೂಟವು ಹೇಮಂತ್ ಸೊರೇನ್ ಪರವಾಗಿ ನಿರ್ಧರಿಸಿದೆ” ಎಂದು ಅವರು ಹೇಳಿದರು.

ಹೇಮಂತ್ ಸೊರೇನ್ ಈಗ ಜಾರ್ಖಂಡ್‌ನ 13 ನೇ ಮುಖ್ಯಮಂತ್ರಿಯಾಗಿದ್ದಾರೆ, ಇದನ್ನು ನವೆಂಬರ್ 15, 2000 ರಂದು ಬಿಹಾರದಿಂದ ಬೇರ್ಪಡಿಸಲಾಗಿದೆ.

ಇದನ್ನೂ ಓದಿ; ಅಸ್ಸಾಂ: ನಿರಾಶ್ರಿತ ಮಣಿಪುರ ನಿವಾಸಿಗಳನ್ನು ಭೇಟಿಯಾದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...