Homeಮುಖಪುಟಮಾಸ್ಕೋಗೆ ತೆರಳುವ ಪ್ರಧಾನಿಗೆ ಮಣಿಪುರ ಭೇಟಿಗೆ ಸಮಯವಿಲ್ಲ: ಕಾಂಗ್ರೆಸ್

ಮಾಸ್ಕೋಗೆ ತೆರಳುವ ಪ್ರಧಾನಿಗೆ ಮಣಿಪುರ ಭೇಟಿಗೆ ಸಮಯವಿಲ್ಲ: ಕಾಂಗ್ರೆಸ್

- Advertisement -
- Advertisement -

ಕಳೆದ ವರ್ಷದ ಮೇ ತಿಂಗಳಿನಲ್ಲಿ ಜನಾಂಗೀಯ ಸಂಘರ್ಷ ಉಂಟಾದ ಬಳಿಕ mnI. ಅಲ್ಲಿಗೆ ಹೋಗುವ ಆಸಕ್ತಿಯನ್ನೂ ಹೊಂದಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಕಾಂಗ್ರೆಸ್ ನಾಯಕ ಜೈರಾಮ್‌ ರಮೇಶ್, “ಇಂದು ಲೋಕಸಭೆಯ ವಿಪಕ್ಷ ನಾಯಕರು ಅಸ್ಸಾಂ ಹಾಗೂ ಮಣಿಪುರಕ್ಕೆ ಭೇಟಿ ಕೊಟ್ಟರೆ, ಜೈವಿಕವಾಗಿ ಜನಿಸಿಲ್ಲ ಎಂದು ಹೇಳಿಕೊಳ್ಳುವ ಪ್ರಧಾನಿ ಮಾಸ್ಕೋಗೆ ತೆರಳಿದ್ದಾರೆ. ಜೈವಿಕವಲ್ಲದ ಪ್ರಧಾನಿಯ ಹೊಗಳುಭಟ್ಟರು ಕೆಲ ಕಾಲ ರಷ್ಯಾ- ಉಕ್ರೇನ್‌ ಯುದ್ಧವನ್ನೇ ನಿಲ್ಲಿಸಿದರೆಂದು ಸಮರ್ಥಿಸಿಕೊಳ್ಳುತ್ತಾರೆ. ಬಹುಶಃ ಈ ಮಾಸ್ಕೋ ಪ್ರವಾಸ ಇನ್ನಷ್ಟು ವಿಲಕ್ಷಣವಾದ ಘಟನೆಗಳಿಗೆ ಕಾರಣವಾಗಬಹುದು” ಎಂದು ಪ್ರಧಾನಿಯನ್ನು ಕುಟುಕಿದ್ದಾರೆ.

ಮಣಿಪುರ ಹೊತ್ತಿ ಉರಿದ 14 ತಿಂಗಳುಗಳಲ್ಲಿ ರಾಹುಲ್‌ ಗಾಂಧಿ ಮೂರು ಬಾರಿ ಭೇಟಿ ನೀಡಿದ್ದಾರೆ. ತಾವು ಜೈವಿಕವಾಗಿ ಜನಿಸಿಲ್ಲ ಎಂದು ಹೇಳಿಕೊಳ್ಳುವ ಪ್ರಧಾನಿ ಗಲಭೆ ಶುರುವಾದ 2023, ಮೇ 3 ರಿಂದ ಮಣಿಪುರಕ್ಕೆ ತೆರಳಲು ಕೆಲವು ಗಂಟೆಗಳ ಕಾಲ ಸಮಯವೂ ಮಾಡಿಕೊಳ್ಳುತ್ತಿಲ್ಲ, ಅಲ್ಲಿಗೆ ಹೋಗುವ ಆಸಕ್ತಿಯನ್ನು ಹೊಂದಿಲ್ಲ. ಅಲ್ಲಿ ಇರುವ ತಮ್ಮ ಸ್ವಂತ ಪಕ್ಷದ ಮುಖ್ಯಮಂತ್ರಿಯನ್ನೇ ಅವರು ಭೇಟಿ ಮಾಡಿಲ್ಲ. ಹಾಗೆಯೇ ಇತರ ಪಕ್ಷದ ಶಾಸಕರು, ಸಂಸದರನ್ನು ಕೂಡ ಭೇಟಿಯಾಗಿಲ್ಲ ಎಂದು ಆಕ್ರೋಶ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರವಾಹ ಪರಿಸ್ಥಿತಿ ಉಂಟಾಗಿರುವ ಅಸ್ಸಾಂ ಹಾಗೂ ಮಣಿಪುರ ರಾಜ್ಯಗಳಿಗೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಇಂದು ಭೇಟಿ ನೀಡಿದ್ದಾರೆ. ಅಸ್ಸಾಂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ನಂತರ ಮಣಿಪುರದ ನಿರಾಶ್ರಿತ ಪ್ರದೇಶಗಳ ಜನರನ್ನು ಭೇಟಿಯಾಗಲಿದ್ದಾರೆ. ಸಂಜೆ ಮಣಿಪುರದ ರಾಜ್ಯಪಾಲರಾದ ಅನುಸೂಯ ಊಯ್ಕೆ ಅವರನ್ನು ಭೇಟಿ ಮಾಡಲಿದ್ದಾರೆ. ರಾಹುಲ್‌ ಅವರು ಉತ್ತರ ಪ್ರದೇಶ ರಾಯ್‌ಬರೇಲಿಯಿಂದ ಸಂಸದರಾಗಿ ಆಯ್ಕೆಯಾದ ನಂತರ ಮಣಿಪುರಕ್ಕೆ ಇದು ಮೊದಲ ಭೇಟಿ ಇದಾಗಿದೆ.

ಎರಡನೇ ಭಾರತ್ ಜೋಡೋ ಯಾತ್ರೆಯನ್ನು ರಾಹುಲ್ ಗಾಂಧಿ ಮಣಿಪುರದಿಂದಲೇ ಪ್ರಾರಂಭಿಸಿದ್ದರು. ಈ ಮೂಲಕ ಸಂಘರ್ಷ ಪೀಡಿತ ರಾಜ್ಯದ ಜನರಿಗೆ ಧೈರ್ಯ ತುಂಬಿ ಅವರ ಸಮಸ್ಯೆ ಆಲಿಸಿದ್ದರು.

ಇದನ್ನೂ ಓದಿ : ‘ಅಸ್ಸಾಂ ಜನರೊಂದಿಗೆ ನಿಲ್ಲುತ್ತೇನೆ, ಸಂಸತ್ತಿನಲ್ಲಿ ನಾನವರ ಸೈನಿಕ..’: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...