Homeಕರ್ನಾಟಕ'ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಬಿಜೆಪಿ ದೇಶಕ್ಕೆ ಹಾನಿಕರ..'; ಸುಧಾಕರ್ 'ಎಣ್ಣೆ ಪಾರ್ಟಿ'ಗೆ ಕಾಂಗ್ರೆಸ್ ಲೇವಡಿ

‘ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಬಿಜೆಪಿ ದೇಶಕ್ಕೆ ಹಾನಿಕರ..’; ಸುಧಾಕರ್ ‘ಎಣ್ಣೆ ಪಾರ್ಟಿ’ಗೆ ಕಾಂಗ್ರೆಸ್ ಲೇವಡಿ

- Advertisement -
- Advertisement -

ನೂತನ ಬಿಜೆಪಿ ಸಂಸದ ಡಾ. ಕೆ.ಸುಧಾಕರ್ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ ಸಂಭ್ರಮಕ್ಕೆ ಭಾನುವಾರ (ಜು.07)ದಂದು ನೆಲಮಂಗದಲ್ಲಿ ‘ಬಿಜೆಪಿ-ಜೆಡಿಎಸ್’ ಬೆಂಬಲಿಗರಿಗೆ ಏರ್ಪಡಿಸಿದ್ದ ‘ಎಣ್ಣೆ ಪಾರ್ಟಿ’ ಕುರಿತು ಕಾಂಗ್ರೆಸ್ ಲೇವಡಿ ಮಾಡಿದೆ. ‘ಸಾರ್ವಜನಿಕರಿಗೆ ಎಚ್ಚರಿಕೆ! ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಬಿಜೆಪಿ ದೇಶಕ್ಕೆ ಹಾನಿಕರ’ ಎಂದು ಕಾಲೆಳೆದಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್, “ಊಟನೂ ನಮ್ದು ಎಣ್ಣೆನೂ ನಮ್ದು ಎನ್ನುವ ಬಿಜೆಪಿ ಪಕ್ಷ
‘ಬಾರ್ ಜನತಾ ಪಾರ್ಟಿ’ ಎಂದು ಹೆಸರು ಬದಲಿಸಿಕೊಳ್ಳುವುದು ಸೂಕ್ತ! ಜನಸಾಮಾನ್ಯರನ್ನು ಮದ್ಯದ ದಾಸರಾಗಲು ಪ್ರೋತ್ಸಾಹಿಸುವ ಬಿಜೆಪಿಯಿಂದ ಜನರ ಉದ್ದಾರವನ್ನು ಬಯಸುವುದು ಮೂರ್ಖತನವಾಗುತ್ತದೆ. ಧರ್ಮ, ಸಂಸ್ಕೃತಿಗಳ ಬಗ್ಗೆ ಪುಂಖಾನುಪುಂಖವಾಗಿ ಮಾತಾಡುವ ಬಿಜೆಪಿಯ ಅಸಲಿ ಸಂಸ್ಕೃತಿ ಮಹಿಳಾ ಪೀಡನೆ, ಹೆಂಡದ ಸೇವನೆ! ಸಂಸದ ಸುಧಾಕರ್ ಅವರು ಜನರಿಗೆ ಮದ್ಯದ ಬಾಟಲಿಗಳನ್ನು ಹಂಚುವ ಮೂಲಕ ಬಿಜೆಪಿಯ ನೈಜ ಸಂಸ್ಕೃತಿಯನ್ನು ಬಯಲು ಮಾಡಿದ್ದಾರೆ. ಸಾರ್ವಜನಿಕರಿಗೆ ಎಚ್ಚರಿಕೆ, ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಬಿಜೆಪಿ ದೇಶಕ್ಕೆ ಹಾನಿಕರ” ಎಂದು ಹೇಳಿದೆ.

ಸಂಸ್ಕಾರಿ ಪಕ್ಷದ ಬೆಂಬಲಿಗರಿಗೆ ಸಂಸ್ಕಾರಿ ಮದ್ಯ ವಿತರಣೆ

ದೇಶದ ಖ್ಯಾತ ಫ್ಯಾಕ್ಟ್‌-ಚೆಕ್ಕರ್, ‘ಆಲ್ಟ್‌ ನ್ಯೂಸ್’ ಸಂಸ್ಥಾಪಕ ಮಹಮದ್ ಝುಬೇರ್ ಅವರು ಮದ್ಯ ಹಂಚುವ ವಿಡಿಯೊಗಳನ್ನು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ‘ಸಂಸ್ಕಾರಿ ಪಕ್ಷದ ಬೆಂಬಲಿಗರಿಗೆ ಸಂಸ್ಕಾರಿ ಮದ್ಯ ವಿತರಣೆ’ ಎಂದು ಬರೆದುಕೊಂಡಿದ್ದಾರೆ.

ಬಿಜೆಪಿ ಸಂಸದ ಸುಧಾಕರ್ ಅವರನ್ನು ಟ್ಯಾಗ್‌ ಮಾಡಿ ಪೋಸ್ಟ್‌ ಮಾಡಿರುವ ಅವರು, “ಸಂಸ್ಕಾರಿ ಪಕ್ಷದ ಬೆಂಬಲಿಗರಿಗೆ ಸಂಸ್ಕಾರಿ ಮದ್ಯ ವಿತರಣೆ. ಯಾವುದೇ ಸಂಸ್ಕಾರಿ ನ್ಯೂಸ್ ಏಜೆನ್ಸಿ ಅಥವಾ ನ್ಯೂಸ್ ಚಾನೆಲ್ ಈ ಬಗ್ಗೆ ವರದಿ ಮಾಡುವುದಿಲ್ಲ. ಬೆಂಬಲಿಗರಿಗೆ ಮದ್ಯ ಹಂಚುತ್ತಿರುವ ಬಿಜೆಪಿ ಸಂಘಟಕರು. ಇತ್ತೀಚೆಗಷ್ಟೇ ಚಿಕ್ಕಬಳ್ಳಾಪುರದಿಂದ ಬಿಜೆಪಿ ಸಂಸದರಾಗಿ ಚುನಾವಣೆಯಲ್ಲಿ ಗೆದ್ದ ಕರ್ನಾಟಕದ ಮಾಜಿ ಆರೋಗ್ಯ ಸಚಿವರಿಂದ ನೆಲಮಂಗಲದಲ್ಲಿ ನಡೆದ ಕೃತಜ್ಞತಾ ಸಮಾರಂಭದಲ್ಲಿ ಜನರಿಗೆ ಹಂಚಲು ಬಿಜೆಪಿ ಕಾರ್ಯಕ್ರಮಕ್ಕೆ ತಂದಿದ್ದ ಟ್ರಕ್ ಮದ್ಯ, 650 ಬಿಯರ್ ಬಾಕ್ಸ್ ಹಾಗೂ 450 ಮದ್ಯದ ಬಾಕ್ಸ್ ಇತ್ತು” ಎಂದು ಹೇಳಿದ್ದಾರೆ.

“ಸಾಮಾನ್ಯ ವ್ಯಕ್ತಿ ಮತ್ತು ರಾಜಕಾರಣಿಗಳಿಗೆ ವಿಭಿನ್ನ ನಿಯಮಗಳು” ಎಂದು ಆಗ್ಲವಾಹಿನಿ ಪತ್ರಕರ್ತೆ ನಬಿಲಾ ಜಮಾಲ್ ಎಕ್ಸ್‌ನಲ್ಲಿ ಅಸಮಾಧಾನ ಹೊರಹಾಕಿದ್ದಾರೆ.

“ಚಿಕ್ಕಬಳ್ಳಾಪುರದಿಂದ ನೂತನವಾಗಿ ಆಯ್ಕೆಯಾದ ಸಂಸದ ಡಾ.ಕೆ.ಸುಧಾಕರ್ ಅವರ ಚುನಾವಣಾ ಗೆಲುವಿನ ನಂತರ ಕರ್ನಾಟಕದಲ್ಲಿ ಮೈದಾನದಲ್ಲಿ ಕುಡಿತದ ಪಾರ್ಟಿ ಆಯೋಜಿಸಲಾಗಿದೆ. ದೊಡ್ಡ ಟ್ರಕ್‌ಗಳಲ್ಲಿ ತಂದ ಬಾಟಲಿಗಳನ್ನು ಸಂಗ್ರಹಿಸಲು ಜನರು ಉದ್ದನೆಯ ಸರತಿ ಸಾಲಿನಲ್ಲಿ ನಿಂತು ಪೊಲೀಸರ ಮುಂದೆಯೇ ಹಂಚುತ್ತಿದ್ದಾರೆ. ಬಿಜೆಪಿಯ ಅಧಿಕೃತ ಲೆಟರ್‌ಹೆಡ್ ಸಮಾರಂಭದಲ್ಲಿ ಮದ್ಯಪಾನಕ್ಕೆ ಅನುಮತಿ ಕೋರಿದೆ. ಮದ್ಯವನ್ನು ಪೂರೈಸಲು ಅನುಮತಿ ನೀಡಲಾಗಿಲ್ಲ ಎಂದು ಪೊಲೀಸರು ಹೇಳುತ್ತಾರೆ ಮತ್ತು ಪರಿಣಾಮಗಳ ಬಗ್ಗೆ ಅವರಿಗೆ ಎಚ್ಚರಿಕೆ ನೀಡಿದರು. ಆದರೆ, ಅಬಕಾರಿ ಡಿಪಿಟಿಯು ಪೊಲೀಸರ ಒಪ್ಪಿಗೆಯಿಲ್ಲದೆ ಅವರಿಗೆ ಅನುಮೋದನೆ ನೀಡಿದೆ ಎಂದು ಆರೋಪಿಸಲಾಗಿದೆ” ಎಂದು ಅವರು ಬರೆದುಕೊಂಡಿದ್ದಾರೆ.

ಸಂಸದ ಸುಧಾಕರ್ ಸ್ಪಷ್ಟನೆ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಸದ ಡಾ. ಕೆ.ಸುಧಾಕರ್, “20 ವರ್ಷದ ನನ್ನ ರಾಜಕೀಯ ಜೀವನದಲ್ಲಿ ಎಂದಿಗೂ ಮದ್ಯ ಹಂಚಿಕೆ ಮಾಡಿಲ್ಲ; ಆ ರಾಜಕೀಯ ನನಗೆ ಅವಶ್ಯಕತೆ ಇಲ್ಲ. ಈ ರೀತಿ ಮದ್ಯ ಹಂಚಿ ರಾಜಕೀಯ ಮಾಡುವುದು ತಪ್ಪು. ಈ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ” ಎಂದು ​ ಸ್ಪಷ್ಟನೆ ನೀಡಿದ್ದಾರೆ.

“ತಾಲೂಕಿನ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ನನಗೆ ಅಭಿನಂದಿಸಲು, ನನ್ನನ್ನೂ ಮತ್ತು ಪ್ರತಿಪಕ್ಷದ ನಾಯಕ ಆರ್​. ಅಶೋಕ್​ ಅವರನ್ನು ಕರೆದಿದ್ದರು. ಎಲ್ಲ ಆಯೋಜನೆಯನ್ನು ಅವರೇ ಮಾಡಿದ್ದರು. ನಾವು ಅಲ್ಲಿಗೆ ಹೋಗಿ ಕಾರ್ಯಕ್ರಮ ಮುಗಿಸಿ ಬಂದಿದ್ದೇವೆ. ನಾನು ಬಂದ ನಂತರದ ಅಲ್ಲಿ ನಡೆದ ವಿಚಾರದ ಬಗ್ಗೆ ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದೇನೆ. ಅದು ಆಯೋಜಿಸಿದವರು ಮಾಡಿದ್ದಾರಾ? ಅಥವಾ ಅಲ್ಲಿಗೆ ಬಂದವರು ಮದ್ಯ ಸೇವಿಸಿದ್ದರಾ ಎಂಬ ಮಾಹಿತಿ ನನಗಿಲ್ಲ. ನಮ್ಮ ಅಥವಾ ಜೆಡಿಎಸ್ ಪಕ್ಷದ ಯಾರಾದರೂ ಕಾರ್ಯಕರ್ತರು ಹೀಗೆ ಮಾಡಿದ್ದರೆ, ಆಯೋಜನೆ ಮಾಡಿದ್ರೆ ಅದು ತಪ್ಪು” ಎಂದಿದ್ದಾರೆ.

ಇದನ್ನೂ ಓದಿ;  ಗೆಲುವಿನ ಸಂಭ್ರಮಾಚರಣೆಯಲ್ಲಿ ಸಾರ್ವಜನಿಕವಾಗಿ ‘ಮದ್ಯ’ ಹಂಚಿಕೆ; ಬಿಜೆಪಿ ಎಂಪಿ ಸುಧಾಕರ್ ವಿರುದ್ಧ ಜಾಲತಾಣದಲ್ಲಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...