Homeಕರ್ನಾಟಕ'ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಬಿಜೆಪಿ ದೇಶಕ್ಕೆ ಹಾನಿಕರ..'; ಸುಧಾಕರ್ 'ಎಣ್ಣೆ ಪಾರ್ಟಿ'ಗೆ ಕಾಂಗ್ರೆಸ್ ಲೇವಡಿ

‘ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಬಿಜೆಪಿ ದೇಶಕ್ಕೆ ಹಾನಿಕರ..’; ಸುಧಾಕರ್ ‘ಎಣ್ಣೆ ಪಾರ್ಟಿ’ಗೆ ಕಾಂಗ್ರೆಸ್ ಲೇವಡಿ

- Advertisement -
- Advertisement -

ನೂತನ ಬಿಜೆಪಿ ಸಂಸದ ಡಾ. ಕೆ.ಸುಧಾಕರ್ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ ಸಂಭ್ರಮಕ್ಕೆ ಭಾನುವಾರ (ಜು.07)ದಂದು ನೆಲಮಂಗದಲ್ಲಿ ‘ಬಿಜೆಪಿ-ಜೆಡಿಎಸ್’ ಬೆಂಬಲಿಗರಿಗೆ ಏರ್ಪಡಿಸಿದ್ದ ‘ಎಣ್ಣೆ ಪಾರ್ಟಿ’ ಕುರಿತು ಕಾಂಗ್ರೆಸ್ ಲೇವಡಿ ಮಾಡಿದೆ. ‘ಸಾರ್ವಜನಿಕರಿಗೆ ಎಚ್ಚರಿಕೆ! ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಬಿಜೆಪಿ ದೇಶಕ್ಕೆ ಹಾನಿಕರ’ ಎಂದು ಕಾಲೆಳೆದಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್, “ಊಟನೂ ನಮ್ದು ಎಣ್ಣೆನೂ ನಮ್ದು ಎನ್ನುವ ಬಿಜೆಪಿ ಪಕ್ಷ
‘ಬಾರ್ ಜನತಾ ಪಾರ್ಟಿ’ ಎಂದು ಹೆಸರು ಬದಲಿಸಿಕೊಳ್ಳುವುದು ಸೂಕ್ತ! ಜನಸಾಮಾನ್ಯರನ್ನು ಮದ್ಯದ ದಾಸರಾಗಲು ಪ್ರೋತ್ಸಾಹಿಸುವ ಬಿಜೆಪಿಯಿಂದ ಜನರ ಉದ್ದಾರವನ್ನು ಬಯಸುವುದು ಮೂರ್ಖತನವಾಗುತ್ತದೆ. ಧರ್ಮ, ಸಂಸ್ಕೃತಿಗಳ ಬಗ್ಗೆ ಪುಂಖಾನುಪುಂಖವಾಗಿ ಮಾತಾಡುವ ಬಿಜೆಪಿಯ ಅಸಲಿ ಸಂಸ್ಕೃತಿ ಮಹಿಳಾ ಪೀಡನೆ, ಹೆಂಡದ ಸೇವನೆ! ಸಂಸದ ಸುಧಾಕರ್ ಅವರು ಜನರಿಗೆ ಮದ್ಯದ ಬಾಟಲಿಗಳನ್ನು ಹಂಚುವ ಮೂಲಕ ಬಿಜೆಪಿಯ ನೈಜ ಸಂಸ್ಕೃತಿಯನ್ನು ಬಯಲು ಮಾಡಿದ್ದಾರೆ. ಸಾರ್ವಜನಿಕರಿಗೆ ಎಚ್ಚರಿಕೆ, ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಬಿಜೆಪಿ ದೇಶಕ್ಕೆ ಹಾನಿಕರ” ಎಂದು ಹೇಳಿದೆ.

ಸಂಸ್ಕಾರಿ ಪಕ್ಷದ ಬೆಂಬಲಿಗರಿಗೆ ಸಂಸ್ಕಾರಿ ಮದ್ಯ ವಿತರಣೆ

ದೇಶದ ಖ್ಯಾತ ಫ್ಯಾಕ್ಟ್‌-ಚೆಕ್ಕರ್, ‘ಆಲ್ಟ್‌ ನ್ಯೂಸ್’ ಸಂಸ್ಥಾಪಕ ಮಹಮದ್ ಝುಬೇರ್ ಅವರು ಮದ್ಯ ಹಂಚುವ ವಿಡಿಯೊಗಳನ್ನು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ‘ಸಂಸ್ಕಾರಿ ಪಕ್ಷದ ಬೆಂಬಲಿಗರಿಗೆ ಸಂಸ್ಕಾರಿ ಮದ್ಯ ವಿತರಣೆ’ ಎಂದು ಬರೆದುಕೊಂಡಿದ್ದಾರೆ.

ಬಿಜೆಪಿ ಸಂಸದ ಸುಧಾಕರ್ ಅವರನ್ನು ಟ್ಯಾಗ್‌ ಮಾಡಿ ಪೋಸ್ಟ್‌ ಮಾಡಿರುವ ಅವರು, “ಸಂಸ್ಕಾರಿ ಪಕ್ಷದ ಬೆಂಬಲಿಗರಿಗೆ ಸಂಸ್ಕಾರಿ ಮದ್ಯ ವಿತರಣೆ. ಯಾವುದೇ ಸಂಸ್ಕಾರಿ ನ್ಯೂಸ್ ಏಜೆನ್ಸಿ ಅಥವಾ ನ್ಯೂಸ್ ಚಾನೆಲ್ ಈ ಬಗ್ಗೆ ವರದಿ ಮಾಡುವುದಿಲ್ಲ. ಬೆಂಬಲಿಗರಿಗೆ ಮದ್ಯ ಹಂಚುತ್ತಿರುವ ಬಿಜೆಪಿ ಸಂಘಟಕರು. ಇತ್ತೀಚೆಗಷ್ಟೇ ಚಿಕ್ಕಬಳ್ಳಾಪುರದಿಂದ ಬಿಜೆಪಿ ಸಂಸದರಾಗಿ ಚುನಾವಣೆಯಲ್ಲಿ ಗೆದ್ದ ಕರ್ನಾಟಕದ ಮಾಜಿ ಆರೋಗ್ಯ ಸಚಿವರಿಂದ ನೆಲಮಂಗಲದಲ್ಲಿ ನಡೆದ ಕೃತಜ್ಞತಾ ಸಮಾರಂಭದಲ್ಲಿ ಜನರಿಗೆ ಹಂಚಲು ಬಿಜೆಪಿ ಕಾರ್ಯಕ್ರಮಕ್ಕೆ ತಂದಿದ್ದ ಟ್ರಕ್ ಮದ್ಯ, 650 ಬಿಯರ್ ಬಾಕ್ಸ್ ಹಾಗೂ 450 ಮದ್ಯದ ಬಾಕ್ಸ್ ಇತ್ತು” ಎಂದು ಹೇಳಿದ್ದಾರೆ.

“ಸಾಮಾನ್ಯ ವ್ಯಕ್ತಿ ಮತ್ತು ರಾಜಕಾರಣಿಗಳಿಗೆ ವಿಭಿನ್ನ ನಿಯಮಗಳು” ಎಂದು ಆಗ್ಲವಾಹಿನಿ ಪತ್ರಕರ್ತೆ ನಬಿಲಾ ಜಮಾಲ್ ಎಕ್ಸ್‌ನಲ್ಲಿ ಅಸಮಾಧಾನ ಹೊರಹಾಕಿದ್ದಾರೆ.

“ಚಿಕ್ಕಬಳ್ಳಾಪುರದಿಂದ ನೂತನವಾಗಿ ಆಯ್ಕೆಯಾದ ಸಂಸದ ಡಾ.ಕೆ.ಸುಧಾಕರ್ ಅವರ ಚುನಾವಣಾ ಗೆಲುವಿನ ನಂತರ ಕರ್ನಾಟಕದಲ್ಲಿ ಮೈದಾನದಲ್ಲಿ ಕುಡಿತದ ಪಾರ್ಟಿ ಆಯೋಜಿಸಲಾಗಿದೆ. ದೊಡ್ಡ ಟ್ರಕ್‌ಗಳಲ್ಲಿ ತಂದ ಬಾಟಲಿಗಳನ್ನು ಸಂಗ್ರಹಿಸಲು ಜನರು ಉದ್ದನೆಯ ಸರತಿ ಸಾಲಿನಲ್ಲಿ ನಿಂತು ಪೊಲೀಸರ ಮುಂದೆಯೇ ಹಂಚುತ್ತಿದ್ದಾರೆ. ಬಿಜೆಪಿಯ ಅಧಿಕೃತ ಲೆಟರ್‌ಹೆಡ್ ಸಮಾರಂಭದಲ್ಲಿ ಮದ್ಯಪಾನಕ್ಕೆ ಅನುಮತಿ ಕೋರಿದೆ. ಮದ್ಯವನ್ನು ಪೂರೈಸಲು ಅನುಮತಿ ನೀಡಲಾಗಿಲ್ಲ ಎಂದು ಪೊಲೀಸರು ಹೇಳುತ್ತಾರೆ ಮತ್ತು ಪರಿಣಾಮಗಳ ಬಗ್ಗೆ ಅವರಿಗೆ ಎಚ್ಚರಿಕೆ ನೀಡಿದರು. ಆದರೆ, ಅಬಕಾರಿ ಡಿಪಿಟಿಯು ಪೊಲೀಸರ ಒಪ್ಪಿಗೆಯಿಲ್ಲದೆ ಅವರಿಗೆ ಅನುಮೋದನೆ ನೀಡಿದೆ ಎಂದು ಆರೋಪಿಸಲಾಗಿದೆ” ಎಂದು ಅವರು ಬರೆದುಕೊಂಡಿದ್ದಾರೆ.

ಸಂಸದ ಸುಧಾಕರ್ ಸ್ಪಷ್ಟನೆ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಸದ ಡಾ. ಕೆ.ಸುಧಾಕರ್, “20 ವರ್ಷದ ನನ್ನ ರಾಜಕೀಯ ಜೀವನದಲ್ಲಿ ಎಂದಿಗೂ ಮದ್ಯ ಹಂಚಿಕೆ ಮಾಡಿಲ್ಲ; ಆ ರಾಜಕೀಯ ನನಗೆ ಅವಶ್ಯಕತೆ ಇಲ್ಲ. ಈ ರೀತಿ ಮದ್ಯ ಹಂಚಿ ರಾಜಕೀಯ ಮಾಡುವುದು ತಪ್ಪು. ಈ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ” ಎಂದು ​ ಸ್ಪಷ್ಟನೆ ನೀಡಿದ್ದಾರೆ.

“ತಾಲೂಕಿನ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ನನಗೆ ಅಭಿನಂದಿಸಲು, ನನ್ನನ್ನೂ ಮತ್ತು ಪ್ರತಿಪಕ್ಷದ ನಾಯಕ ಆರ್​. ಅಶೋಕ್​ ಅವರನ್ನು ಕರೆದಿದ್ದರು. ಎಲ್ಲ ಆಯೋಜನೆಯನ್ನು ಅವರೇ ಮಾಡಿದ್ದರು. ನಾವು ಅಲ್ಲಿಗೆ ಹೋಗಿ ಕಾರ್ಯಕ್ರಮ ಮುಗಿಸಿ ಬಂದಿದ್ದೇವೆ. ನಾನು ಬಂದ ನಂತರದ ಅಲ್ಲಿ ನಡೆದ ವಿಚಾರದ ಬಗ್ಗೆ ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದೇನೆ. ಅದು ಆಯೋಜಿಸಿದವರು ಮಾಡಿದ್ದಾರಾ? ಅಥವಾ ಅಲ್ಲಿಗೆ ಬಂದವರು ಮದ್ಯ ಸೇವಿಸಿದ್ದರಾ ಎಂಬ ಮಾಹಿತಿ ನನಗಿಲ್ಲ. ನಮ್ಮ ಅಥವಾ ಜೆಡಿಎಸ್ ಪಕ್ಷದ ಯಾರಾದರೂ ಕಾರ್ಯಕರ್ತರು ಹೀಗೆ ಮಾಡಿದ್ದರೆ, ಆಯೋಜನೆ ಮಾಡಿದ್ರೆ ಅದು ತಪ್ಪು” ಎಂದಿದ್ದಾರೆ.

ಇದನ್ನೂ ಓದಿ;  ಗೆಲುವಿನ ಸಂಭ್ರಮಾಚರಣೆಯಲ್ಲಿ ಸಾರ್ವಜನಿಕವಾಗಿ ‘ಮದ್ಯ’ ಹಂಚಿಕೆ; ಬಿಜೆಪಿ ಎಂಪಿ ಸುಧಾಕರ್ ವಿರುದ್ಧ ಜಾಲತಾಣದಲ್ಲಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...