Homeಕರ್ನಾಟಕ'ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಬಿಜೆಪಿ ದೇಶಕ್ಕೆ ಹಾನಿಕರ..'; ಸುಧಾಕರ್ 'ಎಣ್ಣೆ ಪಾರ್ಟಿ'ಗೆ ಕಾಂಗ್ರೆಸ್ ಲೇವಡಿ

‘ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಬಿಜೆಪಿ ದೇಶಕ್ಕೆ ಹಾನಿಕರ..’; ಸುಧಾಕರ್ ‘ಎಣ್ಣೆ ಪಾರ್ಟಿ’ಗೆ ಕಾಂಗ್ರೆಸ್ ಲೇವಡಿ

- Advertisement -
- Advertisement -

ನೂತನ ಬಿಜೆಪಿ ಸಂಸದ ಡಾ. ಕೆ.ಸುಧಾಕರ್ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ ಸಂಭ್ರಮಕ್ಕೆ ಭಾನುವಾರ (ಜು.07)ದಂದು ನೆಲಮಂಗದಲ್ಲಿ ‘ಬಿಜೆಪಿ-ಜೆಡಿಎಸ್’ ಬೆಂಬಲಿಗರಿಗೆ ಏರ್ಪಡಿಸಿದ್ದ ‘ಎಣ್ಣೆ ಪಾರ್ಟಿ’ ಕುರಿತು ಕಾಂಗ್ರೆಸ್ ಲೇವಡಿ ಮಾಡಿದೆ. ‘ಸಾರ್ವಜನಿಕರಿಗೆ ಎಚ್ಚರಿಕೆ! ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಬಿಜೆಪಿ ದೇಶಕ್ಕೆ ಹಾನಿಕರ’ ಎಂದು ಕಾಲೆಳೆದಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್, “ಊಟನೂ ನಮ್ದು ಎಣ್ಣೆನೂ ನಮ್ದು ಎನ್ನುವ ಬಿಜೆಪಿ ಪಕ್ಷ
‘ಬಾರ್ ಜನತಾ ಪಾರ್ಟಿ’ ಎಂದು ಹೆಸರು ಬದಲಿಸಿಕೊಳ್ಳುವುದು ಸೂಕ್ತ! ಜನಸಾಮಾನ್ಯರನ್ನು ಮದ್ಯದ ದಾಸರಾಗಲು ಪ್ರೋತ್ಸಾಹಿಸುವ ಬಿಜೆಪಿಯಿಂದ ಜನರ ಉದ್ದಾರವನ್ನು ಬಯಸುವುದು ಮೂರ್ಖತನವಾಗುತ್ತದೆ. ಧರ್ಮ, ಸಂಸ್ಕೃತಿಗಳ ಬಗ್ಗೆ ಪುಂಖಾನುಪುಂಖವಾಗಿ ಮಾತಾಡುವ ಬಿಜೆಪಿಯ ಅಸಲಿ ಸಂಸ್ಕೃತಿ ಮಹಿಳಾ ಪೀಡನೆ, ಹೆಂಡದ ಸೇವನೆ! ಸಂಸದ ಸುಧಾಕರ್ ಅವರು ಜನರಿಗೆ ಮದ್ಯದ ಬಾಟಲಿಗಳನ್ನು ಹಂಚುವ ಮೂಲಕ ಬಿಜೆಪಿಯ ನೈಜ ಸಂಸ್ಕೃತಿಯನ್ನು ಬಯಲು ಮಾಡಿದ್ದಾರೆ. ಸಾರ್ವಜನಿಕರಿಗೆ ಎಚ್ಚರಿಕೆ, ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಬಿಜೆಪಿ ದೇಶಕ್ಕೆ ಹಾನಿಕರ” ಎಂದು ಹೇಳಿದೆ.

ಸಂಸ್ಕಾರಿ ಪಕ್ಷದ ಬೆಂಬಲಿಗರಿಗೆ ಸಂಸ್ಕಾರಿ ಮದ್ಯ ವಿತರಣೆ

ದೇಶದ ಖ್ಯಾತ ಫ್ಯಾಕ್ಟ್‌-ಚೆಕ್ಕರ್, ‘ಆಲ್ಟ್‌ ನ್ಯೂಸ್’ ಸಂಸ್ಥಾಪಕ ಮಹಮದ್ ಝುಬೇರ್ ಅವರು ಮದ್ಯ ಹಂಚುವ ವಿಡಿಯೊಗಳನ್ನು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ‘ಸಂಸ್ಕಾರಿ ಪಕ್ಷದ ಬೆಂಬಲಿಗರಿಗೆ ಸಂಸ್ಕಾರಿ ಮದ್ಯ ವಿತರಣೆ’ ಎಂದು ಬರೆದುಕೊಂಡಿದ್ದಾರೆ.

ಬಿಜೆಪಿ ಸಂಸದ ಸುಧಾಕರ್ ಅವರನ್ನು ಟ್ಯಾಗ್‌ ಮಾಡಿ ಪೋಸ್ಟ್‌ ಮಾಡಿರುವ ಅವರು, “ಸಂಸ್ಕಾರಿ ಪಕ್ಷದ ಬೆಂಬಲಿಗರಿಗೆ ಸಂಸ್ಕಾರಿ ಮದ್ಯ ವಿತರಣೆ. ಯಾವುದೇ ಸಂಸ್ಕಾರಿ ನ್ಯೂಸ್ ಏಜೆನ್ಸಿ ಅಥವಾ ನ್ಯೂಸ್ ಚಾನೆಲ್ ಈ ಬಗ್ಗೆ ವರದಿ ಮಾಡುವುದಿಲ್ಲ. ಬೆಂಬಲಿಗರಿಗೆ ಮದ್ಯ ಹಂಚುತ್ತಿರುವ ಬಿಜೆಪಿ ಸಂಘಟಕರು. ಇತ್ತೀಚೆಗಷ್ಟೇ ಚಿಕ್ಕಬಳ್ಳಾಪುರದಿಂದ ಬಿಜೆಪಿ ಸಂಸದರಾಗಿ ಚುನಾವಣೆಯಲ್ಲಿ ಗೆದ್ದ ಕರ್ನಾಟಕದ ಮಾಜಿ ಆರೋಗ್ಯ ಸಚಿವರಿಂದ ನೆಲಮಂಗಲದಲ್ಲಿ ನಡೆದ ಕೃತಜ್ಞತಾ ಸಮಾರಂಭದಲ್ಲಿ ಜನರಿಗೆ ಹಂಚಲು ಬಿಜೆಪಿ ಕಾರ್ಯಕ್ರಮಕ್ಕೆ ತಂದಿದ್ದ ಟ್ರಕ್ ಮದ್ಯ, 650 ಬಿಯರ್ ಬಾಕ್ಸ್ ಹಾಗೂ 450 ಮದ್ಯದ ಬಾಕ್ಸ್ ಇತ್ತು” ಎಂದು ಹೇಳಿದ್ದಾರೆ.

“ಸಾಮಾನ್ಯ ವ್ಯಕ್ತಿ ಮತ್ತು ರಾಜಕಾರಣಿಗಳಿಗೆ ವಿಭಿನ್ನ ನಿಯಮಗಳು” ಎಂದು ಆಗ್ಲವಾಹಿನಿ ಪತ್ರಕರ್ತೆ ನಬಿಲಾ ಜಮಾಲ್ ಎಕ್ಸ್‌ನಲ್ಲಿ ಅಸಮಾಧಾನ ಹೊರಹಾಕಿದ್ದಾರೆ.

“ಚಿಕ್ಕಬಳ್ಳಾಪುರದಿಂದ ನೂತನವಾಗಿ ಆಯ್ಕೆಯಾದ ಸಂಸದ ಡಾ.ಕೆ.ಸುಧಾಕರ್ ಅವರ ಚುನಾವಣಾ ಗೆಲುವಿನ ನಂತರ ಕರ್ನಾಟಕದಲ್ಲಿ ಮೈದಾನದಲ್ಲಿ ಕುಡಿತದ ಪಾರ್ಟಿ ಆಯೋಜಿಸಲಾಗಿದೆ. ದೊಡ್ಡ ಟ್ರಕ್‌ಗಳಲ್ಲಿ ತಂದ ಬಾಟಲಿಗಳನ್ನು ಸಂಗ್ರಹಿಸಲು ಜನರು ಉದ್ದನೆಯ ಸರತಿ ಸಾಲಿನಲ್ಲಿ ನಿಂತು ಪೊಲೀಸರ ಮುಂದೆಯೇ ಹಂಚುತ್ತಿದ್ದಾರೆ. ಬಿಜೆಪಿಯ ಅಧಿಕೃತ ಲೆಟರ್‌ಹೆಡ್ ಸಮಾರಂಭದಲ್ಲಿ ಮದ್ಯಪಾನಕ್ಕೆ ಅನುಮತಿ ಕೋರಿದೆ. ಮದ್ಯವನ್ನು ಪೂರೈಸಲು ಅನುಮತಿ ನೀಡಲಾಗಿಲ್ಲ ಎಂದು ಪೊಲೀಸರು ಹೇಳುತ್ತಾರೆ ಮತ್ತು ಪರಿಣಾಮಗಳ ಬಗ್ಗೆ ಅವರಿಗೆ ಎಚ್ಚರಿಕೆ ನೀಡಿದರು. ಆದರೆ, ಅಬಕಾರಿ ಡಿಪಿಟಿಯು ಪೊಲೀಸರ ಒಪ್ಪಿಗೆಯಿಲ್ಲದೆ ಅವರಿಗೆ ಅನುಮೋದನೆ ನೀಡಿದೆ ಎಂದು ಆರೋಪಿಸಲಾಗಿದೆ” ಎಂದು ಅವರು ಬರೆದುಕೊಂಡಿದ್ದಾರೆ.

ಸಂಸದ ಸುಧಾಕರ್ ಸ್ಪಷ್ಟನೆ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಸದ ಡಾ. ಕೆ.ಸುಧಾಕರ್, “20 ವರ್ಷದ ನನ್ನ ರಾಜಕೀಯ ಜೀವನದಲ್ಲಿ ಎಂದಿಗೂ ಮದ್ಯ ಹಂಚಿಕೆ ಮಾಡಿಲ್ಲ; ಆ ರಾಜಕೀಯ ನನಗೆ ಅವಶ್ಯಕತೆ ಇಲ್ಲ. ಈ ರೀತಿ ಮದ್ಯ ಹಂಚಿ ರಾಜಕೀಯ ಮಾಡುವುದು ತಪ್ಪು. ಈ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ” ಎಂದು ​ ಸ್ಪಷ್ಟನೆ ನೀಡಿದ್ದಾರೆ.

“ತಾಲೂಕಿನ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ನನಗೆ ಅಭಿನಂದಿಸಲು, ನನ್ನನ್ನೂ ಮತ್ತು ಪ್ರತಿಪಕ್ಷದ ನಾಯಕ ಆರ್​. ಅಶೋಕ್​ ಅವರನ್ನು ಕರೆದಿದ್ದರು. ಎಲ್ಲ ಆಯೋಜನೆಯನ್ನು ಅವರೇ ಮಾಡಿದ್ದರು. ನಾವು ಅಲ್ಲಿಗೆ ಹೋಗಿ ಕಾರ್ಯಕ್ರಮ ಮುಗಿಸಿ ಬಂದಿದ್ದೇವೆ. ನಾನು ಬಂದ ನಂತರದ ಅಲ್ಲಿ ನಡೆದ ವಿಚಾರದ ಬಗ್ಗೆ ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದೇನೆ. ಅದು ಆಯೋಜಿಸಿದವರು ಮಾಡಿದ್ದಾರಾ? ಅಥವಾ ಅಲ್ಲಿಗೆ ಬಂದವರು ಮದ್ಯ ಸೇವಿಸಿದ್ದರಾ ಎಂಬ ಮಾಹಿತಿ ನನಗಿಲ್ಲ. ನಮ್ಮ ಅಥವಾ ಜೆಡಿಎಸ್ ಪಕ್ಷದ ಯಾರಾದರೂ ಕಾರ್ಯಕರ್ತರು ಹೀಗೆ ಮಾಡಿದ್ದರೆ, ಆಯೋಜನೆ ಮಾಡಿದ್ರೆ ಅದು ತಪ್ಪು” ಎಂದಿದ್ದಾರೆ.

ಇದನ್ನೂ ಓದಿ;  ಗೆಲುವಿನ ಸಂಭ್ರಮಾಚರಣೆಯಲ್ಲಿ ಸಾರ್ವಜನಿಕವಾಗಿ ‘ಮದ್ಯ’ ಹಂಚಿಕೆ; ಬಿಜೆಪಿ ಎಂಪಿ ಸುಧಾಕರ್ ವಿರುದ್ಧ ಜಾಲತಾಣದಲ್ಲಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...