Homeಕರ್ನಾಟಕ'ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಬಿಜೆಪಿ ದೇಶಕ್ಕೆ ಹಾನಿಕರ..'; ಸುಧಾಕರ್ 'ಎಣ್ಣೆ ಪಾರ್ಟಿ'ಗೆ ಕಾಂಗ್ರೆಸ್ ಲೇವಡಿ

‘ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಬಿಜೆಪಿ ದೇಶಕ್ಕೆ ಹಾನಿಕರ..’; ಸುಧಾಕರ್ ‘ಎಣ್ಣೆ ಪಾರ್ಟಿ’ಗೆ ಕಾಂಗ್ರೆಸ್ ಲೇವಡಿ

- Advertisement -
- Advertisement -

ನೂತನ ಬಿಜೆಪಿ ಸಂಸದ ಡಾ. ಕೆ.ಸುಧಾಕರ್ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ ಸಂಭ್ರಮಕ್ಕೆ ಭಾನುವಾರ (ಜು.07)ದಂದು ನೆಲಮಂಗದಲ್ಲಿ ‘ಬಿಜೆಪಿ-ಜೆಡಿಎಸ್’ ಬೆಂಬಲಿಗರಿಗೆ ಏರ್ಪಡಿಸಿದ್ದ ‘ಎಣ್ಣೆ ಪಾರ್ಟಿ’ ಕುರಿತು ಕಾಂಗ್ರೆಸ್ ಲೇವಡಿ ಮಾಡಿದೆ. ‘ಸಾರ್ವಜನಿಕರಿಗೆ ಎಚ್ಚರಿಕೆ! ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಬಿಜೆಪಿ ದೇಶಕ್ಕೆ ಹಾನಿಕರ’ ಎಂದು ಕಾಲೆಳೆದಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್, “ಊಟನೂ ನಮ್ದು ಎಣ್ಣೆನೂ ನಮ್ದು ಎನ್ನುವ ಬಿಜೆಪಿ ಪಕ್ಷ
‘ಬಾರ್ ಜನತಾ ಪಾರ್ಟಿ’ ಎಂದು ಹೆಸರು ಬದಲಿಸಿಕೊಳ್ಳುವುದು ಸೂಕ್ತ! ಜನಸಾಮಾನ್ಯರನ್ನು ಮದ್ಯದ ದಾಸರಾಗಲು ಪ್ರೋತ್ಸಾಹಿಸುವ ಬಿಜೆಪಿಯಿಂದ ಜನರ ಉದ್ದಾರವನ್ನು ಬಯಸುವುದು ಮೂರ್ಖತನವಾಗುತ್ತದೆ. ಧರ್ಮ, ಸಂಸ್ಕೃತಿಗಳ ಬಗ್ಗೆ ಪುಂಖಾನುಪುಂಖವಾಗಿ ಮಾತಾಡುವ ಬಿಜೆಪಿಯ ಅಸಲಿ ಸಂಸ್ಕೃತಿ ಮಹಿಳಾ ಪೀಡನೆ, ಹೆಂಡದ ಸೇವನೆ! ಸಂಸದ ಸುಧಾಕರ್ ಅವರು ಜನರಿಗೆ ಮದ್ಯದ ಬಾಟಲಿಗಳನ್ನು ಹಂಚುವ ಮೂಲಕ ಬಿಜೆಪಿಯ ನೈಜ ಸಂಸ್ಕೃತಿಯನ್ನು ಬಯಲು ಮಾಡಿದ್ದಾರೆ. ಸಾರ್ವಜನಿಕರಿಗೆ ಎಚ್ಚರಿಕೆ, ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಬಿಜೆಪಿ ದೇಶಕ್ಕೆ ಹಾನಿಕರ” ಎಂದು ಹೇಳಿದೆ.

ಸಂಸ್ಕಾರಿ ಪಕ್ಷದ ಬೆಂಬಲಿಗರಿಗೆ ಸಂಸ್ಕಾರಿ ಮದ್ಯ ವಿತರಣೆ

ದೇಶದ ಖ್ಯಾತ ಫ್ಯಾಕ್ಟ್‌-ಚೆಕ್ಕರ್, ‘ಆಲ್ಟ್‌ ನ್ಯೂಸ್’ ಸಂಸ್ಥಾಪಕ ಮಹಮದ್ ಝುಬೇರ್ ಅವರು ಮದ್ಯ ಹಂಚುವ ವಿಡಿಯೊಗಳನ್ನು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ‘ಸಂಸ್ಕಾರಿ ಪಕ್ಷದ ಬೆಂಬಲಿಗರಿಗೆ ಸಂಸ್ಕಾರಿ ಮದ್ಯ ವಿತರಣೆ’ ಎಂದು ಬರೆದುಕೊಂಡಿದ್ದಾರೆ.

ಬಿಜೆಪಿ ಸಂಸದ ಸುಧಾಕರ್ ಅವರನ್ನು ಟ್ಯಾಗ್‌ ಮಾಡಿ ಪೋಸ್ಟ್‌ ಮಾಡಿರುವ ಅವರು, “ಸಂಸ್ಕಾರಿ ಪಕ್ಷದ ಬೆಂಬಲಿಗರಿಗೆ ಸಂಸ್ಕಾರಿ ಮದ್ಯ ವಿತರಣೆ. ಯಾವುದೇ ಸಂಸ್ಕಾರಿ ನ್ಯೂಸ್ ಏಜೆನ್ಸಿ ಅಥವಾ ನ್ಯೂಸ್ ಚಾನೆಲ್ ಈ ಬಗ್ಗೆ ವರದಿ ಮಾಡುವುದಿಲ್ಲ. ಬೆಂಬಲಿಗರಿಗೆ ಮದ್ಯ ಹಂಚುತ್ತಿರುವ ಬಿಜೆಪಿ ಸಂಘಟಕರು. ಇತ್ತೀಚೆಗಷ್ಟೇ ಚಿಕ್ಕಬಳ್ಳಾಪುರದಿಂದ ಬಿಜೆಪಿ ಸಂಸದರಾಗಿ ಚುನಾವಣೆಯಲ್ಲಿ ಗೆದ್ದ ಕರ್ನಾಟಕದ ಮಾಜಿ ಆರೋಗ್ಯ ಸಚಿವರಿಂದ ನೆಲಮಂಗಲದಲ್ಲಿ ನಡೆದ ಕೃತಜ್ಞತಾ ಸಮಾರಂಭದಲ್ಲಿ ಜನರಿಗೆ ಹಂಚಲು ಬಿಜೆಪಿ ಕಾರ್ಯಕ್ರಮಕ್ಕೆ ತಂದಿದ್ದ ಟ್ರಕ್ ಮದ್ಯ, 650 ಬಿಯರ್ ಬಾಕ್ಸ್ ಹಾಗೂ 450 ಮದ್ಯದ ಬಾಕ್ಸ್ ಇತ್ತು” ಎಂದು ಹೇಳಿದ್ದಾರೆ.

“ಸಾಮಾನ್ಯ ವ್ಯಕ್ತಿ ಮತ್ತು ರಾಜಕಾರಣಿಗಳಿಗೆ ವಿಭಿನ್ನ ನಿಯಮಗಳು” ಎಂದು ಆಗ್ಲವಾಹಿನಿ ಪತ್ರಕರ್ತೆ ನಬಿಲಾ ಜಮಾಲ್ ಎಕ್ಸ್‌ನಲ್ಲಿ ಅಸಮಾಧಾನ ಹೊರಹಾಕಿದ್ದಾರೆ.

“ಚಿಕ್ಕಬಳ್ಳಾಪುರದಿಂದ ನೂತನವಾಗಿ ಆಯ್ಕೆಯಾದ ಸಂಸದ ಡಾ.ಕೆ.ಸುಧಾಕರ್ ಅವರ ಚುನಾವಣಾ ಗೆಲುವಿನ ನಂತರ ಕರ್ನಾಟಕದಲ್ಲಿ ಮೈದಾನದಲ್ಲಿ ಕುಡಿತದ ಪಾರ್ಟಿ ಆಯೋಜಿಸಲಾಗಿದೆ. ದೊಡ್ಡ ಟ್ರಕ್‌ಗಳಲ್ಲಿ ತಂದ ಬಾಟಲಿಗಳನ್ನು ಸಂಗ್ರಹಿಸಲು ಜನರು ಉದ್ದನೆಯ ಸರತಿ ಸಾಲಿನಲ್ಲಿ ನಿಂತು ಪೊಲೀಸರ ಮುಂದೆಯೇ ಹಂಚುತ್ತಿದ್ದಾರೆ. ಬಿಜೆಪಿಯ ಅಧಿಕೃತ ಲೆಟರ್‌ಹೆಡ್ ಸಮಾರಂಭದಲ್ಲಿ ಮದ್ಯಪಾನಕ್ಕೆ ಅನುಮತಿ ಕೋರಿದೆ. ಮದ್ಯವನ್ನು ಪೂರೈಸಲು ಅನುಮತಿ ನೀಡಲಾಗಿಲ್ಲ ಎಂದು ಪೊಲೀಸರು ಹೇಳುತ್ತಾರೆ ಮತ್ತು ಪರಿಣಾಮಗಳ ಬಗ್ಗೆ ಅವರಿಗೆ ಎಚ್ಚರಿಕೆ ನೀಡಿದರು. ಆದರೆ, ಅಬಕಾರಿ ಡಿಪಿಟಿಯು ಪೊಲೀಸರ ಒಪ್ಪಿಗೆಯಿಲ್ಲದೆ ಅವರಿಗೆ ಅನುಮೋದನೆ ನೀಡಿದೆ ಎಂದು ಆರೋಪಿಸಲಾಗಿದೆ” ಎಂದು ಅವರು ಬರೆದುಕೊಂಡಿದ್ದಾರೆ.

ಸಂಸದ ಸುಧಾಕರ್ ಸ್ಪಷ್ಟನೆ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಸದ ಡಾ. ಕೆ.ಸುಧಾಕರ್, “20 ವರ್ಷದ ನನ್ನ ರಾಜಕೀಯ ಜೀವನದಲ್ಲಿ ಎಂದಿಗೂ ಮದ್ಯ ಹಂಚಿಕೆ ಮಾಡಿಲ್ಲ; ಆ ರಾಜಕೀಯ ನನಗೆ ಅವಶ್ಯಕತೆ ಇಲ್ಲ. ಈ ರೀತಿ ಮದ್ಯ ಹಂಚಿ ರಾಜಕೀಯ ಮಾಡುವುದು ತಪ್ಪು. ಈ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ” ಎಂದು ​ ಸ್ಪಷ್ಟನೆ ನೀಡಿದ್ದಾರೆ.

“ತಾಲೂಕಿನ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ನನಗೆ ಅಭಿನಂದಿಸಲು, ನನ್ನನ್ನೂ ಮತ್ತು ಪ್ರತಿಪಕ್ಷದ ನಾಯಕ ಆರ್​. ಅಶೋಕ್​ ಅವರನ್ನು ಕರೆದಿದ್ದರು. ಎಲ್ಲ ಆಯೋಜನೆಯನ್ನು ಅವರೇ ಮಾಡಿದ್ದರು. ನಾವು ಅಲ್ಲಿಗೆ ಹೋಗಿ ಕಾರ್ಯಕ್ರಮ ಮುಗಿಸಿ ಬಂದಿದ್ದೇವೆ. ನಾನು ಬಂದ ನಂತರದ ಅಲ್ಲಿ ನಡೆದ ವಿಚಾರದ ಬಗ್ಗೆ ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದೇನೆ. ಅದು ಆಯೋಜಿಸಿದವರು ಮಾಡಿದ್ದಾರಾ? ಅಥವಾ ಅಲ್ಲಿಗೆ ಬಂದವರು ಮದ್ಯ ಸೇವಿಸಿದ್ದರಾ ಎಂಬ ಮಾಹಿತಿ ನನಗಿಲ್ಲ. ನಮ್ಮ ಅಥವಾ ಜೆಡಿಎಸ್ ಪಕ್ಷದ ಯಾರಾದರೂ ಕಾರ್ಯಕರ್ತರು ಹೀಗೆ ಮಾಡಿದ್ದರೆ, ಆಯೋಜನೆ ಮಾಡಿದ್ರೆ ಅದು ತಪ್ಪು” ಎಂದಿದ್ದಾರೆ.

ಇದನ್ನೂ ಓದಿ;  ಗೆಲುವಿನ ಸಂಭ್ರಮಾಚರಣೆಯಲ್ಲಿ ಸಾರ್ವಜನಿಕವಾಗಿ ‘ಮದ್ಯ’ ಹಂಚಿಕೆ; ಬಿಜೆಪಿ ಎಂಪಿ ಸುಧಾಕರ್ ವಿರುದ್ಧ ಜಾಲತಾಣದಲ್ಲಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...