Homeಮುಖಪುಟಬೀಫ್ ಕಳ್ಳಸಾಗಣೆದಾರರಿಗೆ ಕೇಂದ್ರ ಸಚಿವ ಪಾಸ್ ನೀಡಿದ ಆರೋಪ: ಸಾಮಾನ್ಯ ಪ್ರಕ್ರಿಯೆ ಎಂದ ಬಿಎಸ್‌ಎಫ್‌

ಬೀಫ್ ಕಳ್ಳಸಾಗಣೆದಾರರಿಗೆ ಕೇಂದ್ರ ಸಚಿವ ಪಾಸ್ ನೀಡಿದ ಆರೋಪ: ಸಾಮಾನ್ಯ ಪ್ರಕ್ರಿಯೆ ಎಂದ ಬಿಎಸ್‌ಎಫ್‌

- Advertisement -
- Advertisement -

ಭಾರತ ಮತ್ತು ಬಾಂಗ್ಲಾದೇಶದ ಗಡಿ ಬಳಿ ಗೋಮಾಂಸ ಕಳ್ಳಸಾಗಣೆದಾರರಿಗೆ ಕೇಂದ್ರ ಸಚಿವ ಶಂತನು ಠಾಕೂರ್ ಪಾಸ್ (ಅಧಿಕೃತ ಸಾಗಣೆ ಪರವಾನಗಿ ಪತ್ರ) ವಿತರಿಸುತ್ತಿದ್ದಾರೆ ಎಂದು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಸೋಮವಾರ ಆರೋಪಿಸಿದ್ದರು. ಆದರೆ, ಇದು ಸಾಮಾನ್ಯ ಪ್ರಕ್ರಿಯೆ ಎಂದು ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ತಿಳಿಸಿದೆ.

ಪಾಸ್‌ನ ಫೋಟೋ ಪೋಸ್ಟ್‌ ಮಾಡಿ ಎಕ್ಸ್‌ನಲ್ಲಿ ಬರೆದುಕೊಂಡಿದ್ದ ಮಹುವಾ ಮೊಯಿತ್ರಾ “ಶಂತನು ಠಾಕೂರ್ ಮೂರು ಕೆಜಿ ಗೋಮಾಂಸ ಕಳ್ಳಸಾಗಣೆ ಮಾಡಲು ಅನುಮತಿ ನೀಡಿದ್ದಾರೆ ಎಂದು ಆರೋಪಿಸಿದ್ದರು. ತನ್ನ ಪೋಸ್ಟ್ ಅನ್ನು ಬಿಎಸ್‌ಎಫ್ ಮತ್ತು ಕೇಂದ್ರ ಗೃಹ ಸಚಿವಾಲಯಕ್ಕೆ ಟ್ಯಾಗ್ ಮಾಡಿದ್ದ ಮಹುವಾ, ಗೋರಕ್ಷಕರು ಮತ್ತು ಗೋದಿ ಮಾಧ್ಯಮಗಳು ಎಲ್ಲಿವೆ” ಎಂದು ತಿವಿದಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ಬಿಎಸ್‌ಎಫ್‌ ಅಧಿಕಾರಿಗಳು “ಇದೊಂದು ಸಾಮಾನ್ಯ ಪ್ರಕ್ರಿಯೆ. ಜನ ಪ್ರತಿನಿಧಿಗಳು ಸ್ಥಳೀಯರಿಗೆ ಅಂತಹ ಪಾಸ್ ನೀಡುವ ಅಧಿಕಾರ ಹೊಂದಿದ್ದಾರೆ. ಅಲ್ಲದೆ ಗೋಮಾಂಸ ಸೇವನೆ ಪಶ್ಚಿಮ ಬಂಗಾಳದಲ್ಲಿ ಅಪರಾಧ ಅಲ್ಲ” ಎಂದು ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

ಭಾರತ-ಬಾಂಗ್ಲಾ ಗಡಿಗೆ ಹೊಂದಿಕೊಂಡಿರುವ ಹಕೀಂಪುರ ಮತ್ತು ತರಲಿ ಪ್ರದೇಶಗಳ ಜನರಿಗೆ ಪಂಚಾಯತ್, ವಾರ್ಡ್‌ ಸದಸ್ಯರು, ಕೌನ್ಸಿಲರ್‌ಗಳು ಸೇರಿದಂತೆ ಜನ ಪ್ರತಿನಿಧಿಗಳು ಪಾಸ್ ಮತ್ತು ವ್ಯವಹಾರ ಪರವಾನಗಿ ನೀಡುವುದು ಸಾಮಾನ್ಯ ಪ್ರಕ್ರಿಯೆ. ಗಡಿಯಲ್ಲಿ ಬಾಂಗ್ಲಾ ದೇಶದಿಂದ ಜಾನುವಾರುಗಳ ಕಳ್ಳಸಾಗಣಿಕೆ ತಡೆಯಲು ನಿಯೋಜಿಸಿರುವ ಬಿಎಸ್‌ಎಫ್‌ ಯೋಧರು ಸ್ಥಳೀಯರನ್ನು ಪರಿಶೀಲನೆ ನಡೆಸಿದರೆ ಪಾಸ್‌, ಪರವಾನಿಗೆಗಳು ಅವರಿಗೆ ಸಹಾಯವಾಗುತ್ತದೆ. ಕಳೆದ ಎರಡು ದಶಕಗಳಿಂದ ಈ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಬಿಎಸ್‌ಎಫ್‌ನ ಹಿರಿಯ ಅಧಿಕಾರಿ ತಿಳಿಸಿದ್ದಾಗಿ ವರದಿ ಹೇಳಿದೆ

ಮಹುವಾ ಮೊಯಿತ್ರಾ ತನ್ನ ಪೋಸ್ಟ್‌ನಲ್ಲಿ ಉಲ್ಲೇಖಿಸಿರುವ ಉತ್ತರ 24 ಪರಗಣ ಜಿಲ್ಲೆಯ ಸ್ವರೂಪ್‌ನಗರ ಪ್ರದೇಶದ ಹಕೀಂಪುರದ 8 ಟಿಎಂಸಿ ಕೌನ್ಸಿಲರ್‌ಗಳು ದಿನವೊಂದಕ್ಕೆ ಸುಮಾರು 80 ಪಾಸ್‌ಗಳನ್ನು ವಿತರಿಸುತ್ತಾರೆ. ಸ್ಥಳೀಯ ನಿವಾಸಿಗಳು ಗೋಮಾಂಸ ಸಾಗಣೆ ಮಾಡಲು ಬಿಎಸ್‌ಎಫ್‌ನಿಂದ ಅನುಮತಿ ಕೋರಿ ಪಾಸ್‌ ನೀಡಲಾಗುತ್ತದೆ. ಹಕೀಂಪುರ ಪ್ರದೇಶ ಸಚಿವ ಶಂತನು ಠಾಕೂರ್‌ ಪ್ರತಿನಿಧಿಸುವ ಬೋಂಗಾವ್ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿದೆ ಎಂದು ವರದಿ ತಿಳಿಸಿದೆ.

ಪಾಸ್ ವಿತರಿಸುವ ವಿಚಾರ ಈ ಹಿಂದೆ ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿತ್ತು. 2013ರಲ್ಲಿ ಕೋರ್ಟ್‌ ಬಿಎಸ್‌ಎಫ್‌ ಪರ ತೀರ್ಪು ನೀಡಿತ್ತು. ಗಡಿ ಭದ್ರತೆಯ ನಿಟ್ಟಿನಲ್ಲಿ ಪಾಸ್ ವಿತರಿಸುವುದು ಅಗತ್ಯ ಎಂದು ಕೋರ್ಟ್ ಹೇಳಿತ್ತು ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಗೆಲುವಿನ ಸಂಭ್ರಮಾಚರಣೆಯಲ್ಲಿ ಸಾರ್ವಜನಿಕವಾಗಿ ‘ಮದ್ಯ’ ಹಂಚಿಕೆ; ಬಿಜೆಪಿ ಎಂಪಿ ಸುಧಾಕರ್ ವಿರುದ್ಧ ಜಾಲತಾಣದಲ್ಲಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...